Homeಮುಖಪುಟಅಣ್ಣಾಮಲೈ, ಪಳನಿಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ಸರ್ಕಾರ

ಅಣ್ಣಾಮಲೈ, ಪಳನಿಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ವ್ಯಾಪಕವಾಗಿರುವ ಮಾದಕ ದ್ರವ್ಯ ದಂಧೆ ಜೊತೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಸಂಬಂಧ ಕಲ್ಪಿಸಿ ಭಾಷಣ ಮಾಡಿದ್ದಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಮತ್ತು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧ ತಮಿಳುನಾಡು ಸರ್ಕಾರ ಚೆನ್ನೈನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಎರಡು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗಳನ್ನು ದಾಖಲಿಸಿದೆ.

ರಾಜ್ಯದಲ್ಲಿ ಮಾದಕ ದ್ರವ್ಯ ದಂಧೆಕೋರರಿಗೆ ನೆರವು ನೀಡುವ ಮೂಲಕ ಮುಖ್ಯಮಂತ್ರಿ ದಂಧೆಯಲ್ಲಿ ಶಾಮಿಲಾಗಿದ್ದಾರೆ ಎಂದು ಅಣ್ಣಾಮಲೈ ಮತ್ತು ಪಳನಿಸ್ವಾಮಿ ಇಬ್ಬರೂ ಆರೋಪಿಸಿದ್ದರು.

ಸಿಆರ್‌ಪಿಸಿಯ ಸೆಕ್ಷನ್ 199(2) ರ ಅಡಿಯಲ್ಲಿ ಸಿಟಿ ಪಬ್ಲಿಕ್ ಪ್ರಾಸಿಕ್ಯೂಟರ್ ಮೂಲಕ ಇಬ್ಬರು ನಾಯಕರ ವಿರುದ್ಧ ದೂರು ದಾಖಲಿಸಲಾಗಿದೆ. ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಮತ್ತು ಮುಖ್ಯಮಂತ್ರಿಯ ಪ್ರತಿಷ್ಠೆಗೆ ಹಾನಿ ಮಾಡುವ ಉದ್ದೇಶದಿಂದ ಹೇಳಿಕೆಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಮಾದಕ ವ್ಯಸನ ಮುಕ್ತ ರಾಜ್ಯ ಮಾಡಲು ಮುಖ್ಯಮಂತ್ರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನಡುವೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ರಾಜ್ಯದ ಮಾದಕ ದ್ರವ್ಯ ವಿತರಣೆ ಜೊತೆ ಸಿಎಂಗೆ ಸಂಬಂಧ ಕಲ್ಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾಧಕ ದ್ಯವ್ಯ ದಂಧೆ ಮಟ್ಟ ಹಾಕಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ದೂರಿನಲ್ಲಿ ಎತ್ತಿ ತೋರಿಸಲಾಗಿದೆ. ಸರ್ಕಾರ ಗಾಂಜಾ ಶೂನ್ಯ ಕೃಷಿ ಸ್ಥಿತಿ ಕಾಯ್ದುಕೊಂಡಿದೆ. ಅಂತಾರಾಜ್ಯ ಡ್ರಗ್ ಕಾರ್ಟೆಲ್‌ಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತಿದೆ. ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಯುವ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ತಿಳಿಸಲಾಗಿದೆ.

ಡ್ರಗ್ಸ್ ದಂಧೆ-ನಿರ್ಮಾಪಕ, ಮಾಜಿ ಡಿಎಂಕೆ ನಾಯಕನ ಬಂಧನ

ಬರೋಬ್ಬರಿ 2000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮಾದಕ ವಸ್ತುಗಳನ್ನು ವಿದೇಶಕ್ಕೆ ಸಾಗಿಸಿದ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಸಿನಿಮಾ ನಿರ್ಮಾಪಕ ಮತ್ತು ಮಾಜಿ ಡಿಎಂಕೆ ನಾಯಕ ಜಾಫರ್ ಸಾದಿಕ್ ಅವರನ್ನು ಬಂಧಿಸಿದೆ.

ನಾಲ್ಕು ತಿಂಗಳಿನಿಂದ ಜಾಫರ್‌ಗಾಗಿ ಎನ್‌ಸಿಬಿ ಹುಡುಕಾಟ ನಡೆಸುತ್ತಿತ್ತು. ಭಾರತ-ಆಸ್ಟ್ರೇಲಿಯಾ-ನ್ಯೂಜಿಲೆಂಡ್ ಡ್ರಗ್ಸ್ ಕಳ್ಳಸಾಗಣೆ ಜಾಲದ ಕಿಂಗ್‌ಪಿನ್ ಸಾದಿಕ್ ಎಂದು ಎನ್‌ಸಿಬಿ ಬಣ್ಣಿಸಿದೆ. ಇವರು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ 2,000 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಎನ್‌ಸಿಬಿ ಪ್ರಕಾರ, ಜಾಫರ್ ಸಾದಿಕ್ 3,500 ಕೆಜಿ ಸೂಡೊಫೆಡ್ರಿನ್ ಅನ್ನು ವಿದೇಶಕ್ಕೆ 45 ಕ್ಕೂ ಹೆಚ್ಚು ಬಾರಿ ಕಳುಹಿಸಿದ್ದಾರೆ. ಫೆಬ್ರವರಿ 29 ರಂದು ಮಧುರೈನಲ್ಲಿ 36 ಕೆಜಿ ಡ್ರಗ್ಸ್ ಕಳ್ಳಸಾಗಣೆಗಾಗಿ ಒಂದೆರಡು ರೈಲು ಪ್ರಯಾಣಿಕರನ್ನು ಅಧಿಕಾರಿಗಳು ಬಂಧಿಸಿದ್ದರು. ಅವರು ನೀಡಿದ ಮಾಹಿತಿ ಆಧರಿಸಿ ಚೆನ್ನೈನ ಕೊಡುಂಗೈಯೂರ್ ಡಂಪಿಂಗ್ ಯಾರ್ಡ್ ನಿಂದ 180 ಕೋಟಿ ರೂಪಾಯಿ ಮೌಲ್ಯದ ಮೆಥಾಂಫೆಟಮೈನ್ ವಶಪಡಿಸಿಕೊಳ್ಳಲಾಗಿದೆ. ಈ ಮಾದಕ ದ್ರವ್ಯಗಳನ್ನು ಶ್ರೀಲಂಕಾಕ್ಕೆ ಕಳ್ಳಸಾಗಣೆ ಮಾಡಲು ಸಿದ್ದತೆ ನಡೆಸಲಾಗಿತ್ತು.

ಸಾದಿಕ್ ಚಿತ್ರರಂಗದ ಜೊತೆಗೆ ರಿಯಲ್ ಎಸ್ಟೇಟ್ ಉದ್ಯಮಿಯೂ ಆಗಿದ್ದಾರೆ. ಅವರು ಇದುವರೆಗೆ ನಾಲ್ಕು ಸಿನಿಮಾ ಮಾಡಿದ್ದಾರೆ. ಇರೈವನ್ ಮಿಗ ಪೆರಿಯವನ್, ಮಾಯಾವಲೈ ಮತ್ತು ಮಂಗೈ ಈ ಮೂರು ಚಿತ್ರಗಳು ಬಿಡುಗಡೆಯಾಗಿವೆ. ಅವರ ನಾಲ್ಕನೇ ಚಿತ್ರ VR07 ಈ ತಿಂಗಳು ಬಿಡುಗಡೆಯಾಗುವ ನಿರೀಕ್ಷೆಯಿದೆ.

ಜಾಫರ್ ಸಾದಿಕ್ ಯಾರು?

ನಿರ್ಮಾಪಕ ಜಾಫರ್ ಸಾದಿಕ್ 2010ರಲ್ಲಿ ರಾಜಕೀಯ ಪ್ರವೇಶಿಸಿದ್ದರು. ಅವರು ಡಿಎಂಕೆಯ ಎನ್‌ಆರ್‌ಐ ವಿಭಾಗದ ಚೆನ್ನೈ ವೆಸ್ಟ್ ಉಪ ಸಂಘಟಕರಾಗಿದ್ದರು. ಮಾದಕವಸ್ತು ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಾದಿಕ್ ಅವರನ್ನು ಕಳೆದ ತಿಂಗಳು ಡಿಎಂಕೆಯಿಂದ ಉಚ್ಛಾಟಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಕೆ ಅಣ್ಣಾಮಲೈ ಅವರು ಜಾಫರ್ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ರಾಜ್ಯ ಸಚಿವ ಉದಯನಿಧಿ ಸ್ಟಾಲಿನ್ ಸೇರಿದಂತೆ ಹಲವು ರಾಜಕಾರಣಿಗಳೊಂದಿಗೆ ಜಾಫರ್ ಅವರ ಫೋಟೋಗಳನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ : ಶರದ್ ಪವಾರ್ ಹೆಸರು, ಫೋಟೋ ದುರ್ಬಳಕೆ ಆರೋಪ: ಅಜಿತ್‌ ಪವಾರ್‌ ಬಣದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...