Homeಮುಖಪುಟಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಸಭೆ ಪ್ರಾರಂಭವಾಗುವ ಕೇವಲ 8-10 ನಿಮಿಷ ಮೊದಲು ಶಾರ್ಟ್‌ಲಿಸ್ಟ್ ಮಾಡಲಾದ ಅಧಿಕಾರಿಗಳ ಹೆಸರು ನೀಡಲಾಗಿತ್ತು ಎಂದ ಕಾಂಗ್ರೆಸ್ ನಾಯಕ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಗುರುವಾರ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ನೂತನ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ. ಈ ಸಮಿತಿಯ ಸದಸ್ಯರಾಗಿರುವ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅವರು ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

ನೂತನ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮುನ್ನ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರುಗಳನ್ನು ನನಗೆ ಮೊದಲೇ ಕೊಟ್ಟಿರಲಿಲ್ಲ. ಸುದೀರ್ಘ ಪಟ್ಟಿಯಲ್ಲಿ ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಸಮಾನ ಕಾರ್ಯದರ್ಶಿಯಾಗಿ ನಿವೃತ್ತರಾದ 92 ಅಧಿಕಾರಿಗಳು, ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಸಮಾನ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ 93 ಅಧಿಕಾರಿಗಳು, ಕಳೆದ ಒಂದು ವರ್ಷದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಾಗಿ ನಿವೃತ್ತರಾದ 15 ಅಧಿಕಾರಿಗಳು, 28 ಮತ್ತು 8 ಅಧಿಕಾರಿಗಳು ಕ್ರಮವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸುತ್ತಿರುವವರು ಸೇರಿದ್ದರು ಎಂದು ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ಚುನಾವಣಾ ಆಯುಕ್ತರ ಆಯ್ಕೆ ಸಭೆ ಪ್ರಾರಂಭವಾಗುವ ಕೇವಲ 8 ರಿಂದ 10 ನಿಮಿಷ ಮೊದಲು ಆರು ಶಾರ್ಟ್‌ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರನ್ನು ಸರ್ಕಾರ ನನಗೆ ನೀಡಿತ್ತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ 6 ಅಧಿಕಾರಿಗಳ ವಿವರಗಳು, ಅವರು ನಿರ್ವಹಿಸಿದ ಹುದ್ದೆಗಳು, ಅವರ ಆಡಳಿತ ದಾಖಲೆ ಮತ್ತು ಎಲ್ಲದರ ವಿವರಗಳನ್ನು ಆಯ್ಕೆ ಸಮಿತಿಗೆ ತಿಳಿಸಿದರು. ಈ 6 ಅಧಿಕಾರಿಗಳ ಪಟ್ಟಿಯಿಂದ ಸಮಿತಿಯು ಇಬ್ಬರ ಹೆಸರನ್ನು ಆಯ್ಕೆ ಮಾಡಬೇಕಾಗಿತ್ತು ಎಂದು ಚೌಧರಿ ಹೇಳಿದ್ದಾರೆ.

ಚೌಧರಿ ಅವರ ಪ್ರಕಾರ ಆರು ಅಧಿಕಾರಿಗಳ ಹೆಸರುಗಳು ಹೀಗಿವೆ.. ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖಬೀರ್ ಸಿಂಗ್ ಸಂಧು ಮತ್ತು ಸುಧೀರ್ ಕುಮಾರ್ ಗಂಗಾಧರ್ ರಹಾಟೆ.

ಕಾನೂನು ಸಚಿವರು ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದ ಬಳಿಕ, ಅಮಿತ್ ಶಾ ಅವರು ಜ್ಞಾನೇಶ್ ಕುಮಾರ್ ಮತ್ತು ಸುಖಭೀರ್ ಸಿಂಗ್ ಸಂಧು ಅವರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ನಿಮಗೆ ಏನಾದರು ಹೇಳಲಿಕ್ಕೆ ಇದೆಯಾ? ಎಂದು ನನ್ನನ್ನು ಕೇಳಿದರು. ಆಗ ನಾನು, “ಈಗಾಗಲೇ ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಪ್ರೊಪೈಲ್ ನನಗೆ ಕಳಿಸಿ, ಅದನ್ನು ಪರಿಶೀಲಿಸಿದ ಬಳಿಕ ನನಗೆ ಅಭಿಪ್ರಾಯ ತಿಳಿಸಲು ಸಹಾಯವಾಗುತ್ತದೆ ಎಂದೆ” ಎಂದು ಚೌಧರಿ ಹೇಳಿದ್ದಾರೆ.

“ನಾನು ನಿನ್ನೆ ರಾತ್ರಿ ನನ್ನ ಕ್ಷೇತ್ರದಿಂದ ದೆಹಲಿ ತಲುಪಿದ್ದೆ. ರಾತ್ರಿಯಷ್ಟೇ 212 ಅಧಿಕಾರಿಗಳ ಸಂಪೂರ್ಣ ಪಟ್ಟಿಯನ್ನು ನನಗೆ ನೀಡಲಾಗಿತ್ತು. ಕಡಿಮೆ ಸಮಯದಲ್ಲಿ 212 ಅಧಿಕಾರಿಗಳ ವಿವರ, ಅವರ ಸಮಗ್ರತೆ, ಅನುಭವ ಮತ್ತು ಆಡಳಿತ ಸಾಮರ್ಥ್ಯದ ವಿವರಗಳನ್ನು ನಾನು ಹೇಗೆ ಪರಿಶೀಲಿಸುವುದು? ಹಾಗಾಗಿಯೇ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಫ್ರೊಫೈಲ್ ಕೇಳಿದ್ದೇನೆ” ಎಂದು ಎಂದಿದ್ದಾರೆ.

“ಪ್ರಧಾನಿ ಮತ್ತು ಗೃಹ ಸಚಿವರು ನನ್ನ ಅಭಿಪ್ರಾಯ ಕೇಳಿದಾಗ, ನಿಮಗೆ ಬಹುಮತ ಇದೆ. ಏನು ಬೇಕಾದರು ಮಾಡಬಹುದು ಎಂದು ನಾನು ಹೇಳಿದೆ. ಇಲ್ಲದಿದ್ದರೂ ನಾನೇನು ಮಾಡಲು ಸಾಧ್ಯ? ನನಗೆ ಅಧಿಕಾರಿಗಳ ಬಗ್ಗೆ ಯಾವುದೇ ಅಸಮಧಾನ ಇಲ್ಲ. ಅವರು ಸಮರ್ಥರಾಗಿದ್ದರೆ ಆಯ್ಕೆ ಆಗಲಿ. ಶಾರ್ಟ್ ಲಿಸ್ಟ್ ಮಾಡಲಾದ ಯಾವುದೇ ಅಧಿಕಾರಿ ನನಗೆ ಪರಿಚಯಸ್ಥರೂ ಅಲ್ಲ. ಅವರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಪಟ್ಟಿಯಲ್ಲಿ ನನ್ನ ರಾಜ್ಯ ಪಶ್ಚಿಮ ಬಂಗಾಳದ ಇಂದೇವರ್ ಪಾಂಡೆ ಕೂಡ ಇದ್ದರು. ಅವರ ಬಗ್ಗೆ ನನಗೆ ಗೊತ್ತಿದೆ. ಅವರು ಉತ್ತಮ ಸಮರ್ಥ ಅಧಿಕಾರಿ. ಅಧಿಕಾರಿಗಳು ಯಾರು ಬೇಕಾದರು ಆಯ್ಕೆಯಾಗಲಿ. ಆದರೆ, ಆಯ್ಕೆ ಮಾಡಿದ ವಿಧಾನದ ಬಗ್ಗೆ ನನಗೆ ಅಸಮಧಾನವಿದೆ. ಪ್ರತಿಪಕ್ಷ ಸದಸ್ಯರು ಆಯ್ಕೆ ಪ್ರಕ್ರಿಯೆ ಭಾಗವಾಗಬೇಕಾದರೆ, ಅದನ್ನು ಸರಿಯಾಗಿ ಮಾಡಲಿ. ಆಗ ನಾವೇನಾದರು ಸಲಹೆ ನೀಡಲು ಸಾಧ್ಯ” ಎಂದು ಅಧೀರ್ ರಂಜನ್ ಚೌಧರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನೀವು ಔಪಚಾರಿಕವಾಗಿ ನನ್ನನ್ನು ಸಮಿತಿಯಲ್ಲಿ, ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಿದ್ದೀರಿ. ನಾನೂ ಅದೇ ರೀತಿ ಪರಿಗಣಿಸಿದ್ದೇನೆ. ನನ್ನ ಭಿನ್ನಭಿಪ್ರಾಯವನ್ನು ದಾಖಲೆಗೆ ಸೇರಿಸುವಂತೆ ಕೇಳಿಕೊಂಡಿದ್ದೇನೆ. ಇಲ್ಲದಿದ್ದರೆ, ಅವರು ಕೊಟ್ಟ 212 ಅಧಿಕಾರಿಗಳ ಹೆಸರುಗಳನ್ನು ಕಡಿಮೆ ಅವಧಿಯಲ್ಲಿ ಪರಿಶೀಲಿಸಿದ ಅಭಿಪ್ರಾಯ ಹೇಳಲು ನಾನು ಜಾದುಗಾರನಲ್ಲ” ಎಂದು ಚೌಧರಿ ಕಿಡಿಕಾರಿದ್ದಾರೆ.

ಇದನ್ನೂ ಓದಿ : ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...