Homeಮುಖಪುಟಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅಧೀರ್ ರಂಜನ್ ಚೌಧರಿ

ಸಭೆ ಪ್ರಾರಂಭವಾಗುವ ಕೇವಲ 8-10 ನಿಮಿಷ ಮೊದಲು ಶಾರ್ಟ್‌ಲಿಸ್ಟ್ ಮಾಡಲಾದ ಅಧಿಕಾರಿಗಳ ಹೆಸರು ನೀಡಲಾಗಿತ್ತು ಎಂದ ಕಾಂಗ್ರೆಸ್ ನಾಯಕ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿಯು ಗುರುವಾರ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರನ್ನು ನೂತನ ಚುನಾವಣಾ ಆಯುಕ್ತರನ್ನಾಗಿ ಆಯ್ಕೆ ಮಾಡಿದೆ. ಈ ಸಮಿತಿಯ ಸದಸ್ಯರಾಗಿರುವ ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ಅವರು ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ.

ನೂತನ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮುನ್ನ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರುಗಳನ್ನು ನನಗೆ ಮೊದಲೇ ಕೊಟ್ಟಿರಲಿಲ್ಲ. ಸುದೀರ್ಘ ಪಟ್ಟಿಯಲ್ಲಿ ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಸಮಾನ ಕಾರ್ಯದರ್ಶಿಯಾಗಿ ನಿವೃತ್ತರಾದ 92 ಅಧಿಕಾರಿಗಳು, ಭಾರತ ಸರ್ಕಾರದಲ್ಲಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಸಮಾನ ಅಧಿಕಾರಿಗಳಾಗಿ ಸೇವೆ ಸಲ್ಲಿಸುತ್ತಿರುವ 93 ಅಧಿಕಾರಿಗಳು, ಕಳೆದ ಒಂದು ವರ್ಷದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಾಗಿ ನಿವೃತ್ತರಾದ 15 ಅಧಿಕಾರಿಗಳು, 28 ಮತ್ತು 8 ಅಧಿಕಾರಿಗಳು ಕ್ರಮವಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸುತ್ತಿರುವವರು ಸೇರಿದ್ದರು ಎಂದು ಅಧೀರ್ ರಂಜನ್ ಚೌಧರಿ ತಿಳಿಸಿದ್ದಾರೆ.

ಚುನಾವಣಾ ಆಯುಕ್ತರ ಆಯ್ಕೆ ಸಭೆ ಪ್ರಾರಂಭವಾಗುವ ಕೇವಲ 8 ರಿಂದ 10 ನಿಮಿಷ ಮೊದಲು ಆರು ಶಾರ್ಟ್‌ಲಿಸ್ಟ್ ಮಾಡಿದ ಅಧಿಕಾರಿಗಳ ಹೆಸರನ್ನು ಸರ್ಕಾರ ನನಗೆ ನೀಡಿತ್ತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ 6 ಅಧಿಕಾರಿಗಳ ವಿವರಗಳು, ಅವರು ನಿರ್ವಹಿಸಿದ ಹುದ್ದೆಗಳು, ಅವರ ಆಡಳಿತ ದಾಖಲೆ ಮತ್ತು ಎಲ್ಲದರ ವಿವರಗಳನ್ನು ಆಯ್ಕೆ ಸಮಿತಿಗೆ ತಿಳಿಸಿದರು. ಈ 6 ಅಧಿಕಾರಿಗಳ ಪಟ್ಟಿಯಿಂದ ಸಮಿತಿಯು ಇಬ್ಬರ ಹೆಸರನ್ನು ಆಯ್ಕೆ ಮಾಡಬೇಕಾಗಿತ್ತು ಎಂದು ಚೌಧರಿ ಹೇಳಿದ್ದಾರೆ.

ಚೌಧರಿ ಅವರ ಪ್ರಕಾರ ಆರು ಅಧಿಕಾರಿಗಳ ಹೆಸರುಗಳು ಹೀಗಿವೆ.. ಉತ್ಪಲ್ ಕುಮಾರ್ ಸಿಂಗ್, ಪ್ರದೀಪ್ ಕುಮಾರ್ ತ್ರಿಪಾಠಿ, ಜ್ಞಾನೇಶ್ ಕುಮಾರ್, ಇಂದೇವರ್ ಪಾಂಡೆ, ಸುಖಬೀರ್ ಸಿಂಗ್ ಸಂಧು ಮತ್ತು ಸುಧೀರ್ ಕುಮಾರ್ ಗಂಗಾಧರ್ ರಹಾಟೆ.

ಕಾನೂನು ಸಚಿವರು ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಬಗ್ಗೆ ಮಾಹಿತಿ ನೀಡಿದ ಬಳಿಕ, ಅಮಿತ್ ಶಾ ಅವರು ಜ್ಞಾನೇಶ್ ಕುಮಾರ್ ಮತ್ತು ಸುಖಭೀರ್ ಸಿಂಗ್ ಸಂಧು ಅವರ ಹೆಸರುಗಳನ್ನು ಪ್ರಸ್ತಾಪಿಸಿದರು. ಬಳಿಕ ನಿಮಗೆ ಏನಾದರು ಹೇಳಲಿಕ್ಕೆ ಇದೆಯಾ? ಎಂದು ನನ್ನನ್ನು ಕೇಳಿದರು. ಆಗ ನಾನು, “ಈಗಾಗಲೇ ಶಾರ್ಟ್ ಲಿಸ್ಟ್ ಮಾಡಲಾದ ಅಧಿಕಾರಿಗಳ ಪ್ರೊಪೈಲ್ ನನಗೆ ಕಳಿಸಿ, ಅದನ್ನು ಪರಿಶೀಲಿಸಿದ ಬಳಿಕ ನನಗೆ ಅಭಿಪ್ರಾಯ ತಿಳಿಸಲು ಸಹಾಯವಾಗುತ್ತದೆ ಎಂದೆ” ಎಂದು ಚೌಧರಿ ಹೇಳಿದ್ದಾರೆ.

“ನಾನು ನಿನ್ನೆ ರಾತ್ರಿ ನನ್ನ ಕ್ಷೇತ್ರದಿಂದ ದೆಹಲಿ ತಲುಪಿದ್ದೆ. ರಾತ್ರಿಯಷ್ಟೇ 212 ಅಧಿಕಾರಿಗಳ ಸಂಪೂರ್ಣ ಪಟ್ಟಿಯನ್ನು ನನಗೆ ನೀಡಲಾಗಿತ್ತು. ಕಡಿಮೆ ಸಮಯದಲ್ಲಿ 212 ಅಧಿಕಾರಿಗಳ ವಿವರ, ಅವರ ಸಮಗ್ರತೆ, ಅನುಭವ ಮತ್ತು ಆಡಳಿತ ಸಾಮರ್ಥ್ಯದ ವಿವರಗಳನ್ನು ನಾನು ಹೇಗೆ ಪರಿಶೀಲಿಸುವುದು? ಹಾಗಾಗಿಯೇ ಶಾರ್ಟ್ ಲಿಸ್ಟ್ ಮಾಡಿದ ಅಧಿಕಾರಿಗಳ ಫ್ರೊಫೈಲ್ ಕೇಳಿದ್ದೇನೆ” ಎಂದು ಎಂದಿದ್ದಾರೆ.

“ಪ್ರಧಾನಿ ಮತ್ತು ಗೃಹ ಸಚಿವರು ನನ್ನ ಅಭಿಪ್ರಾಯ ಕೇಳಿದಾಗ, ನಿಮಗೆ ಬಹುಮತ ಇದೆ. ಏನು ಬೇಕಾದರು ಮಾಡಬಹುದು ಎಂದು ನಾನು ಹೇಳಿದೆ. ಇಲ್ಲದಿದ್ದರೂ ನಾನೇನು ಮಾಡಲು ಸಾಧ್ಯ? ನನಗೆ ಅಧಿಕಾರಿಗಳ ಬಗ್ಗೆ ಯಾವುದೇ ಅಸಮಧಾನ ಇಲ್ಲ. ಅವರು ಸಮರ್ಥರಾಗಿದ್ದರೆ ಆಯ್ಕೆ ಆಗಲಿ. ಶಾರ್ಟ್ ಲಿಸ್ಟ್ ಮಾಡಲಾದ ಯಾವುದೇ ಅಧಿಕಾರಿ ನನಗೆ ಪರಿಚಯಸ್ಥರೂ ಅಲ್ಲ. ಅವರ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಪಟ್ಟಿಯಲ್ಲಿ ನನ್ನ ರಾಜ್ಯ ಪಶ್ಚಿಮ ಬಂಗಾಳದ ಇಂದೇವರ್ ಪಾಂಡೆ ಕೂಡ ಇದ್ದರು. ಅವರ ಬಗ್ಗೆ ನನಗೆ ಗೊತ್ತಿದೆ. ಅವರು ಉತ್ತಮ ಸಮರ್ಥ ಅಧಿಕಾರಿ. ಅಧಿಕಾರಿಗಳು ಯಾರು ಬೇಕಾದರು ಆಯ್ಕೆಯಾಗಲಿ. ಆದರೆ, ಆಯ್ಕೆ ಮಾಡಿದ ವಿಧಾನದ ಬಗ್ಗೆ ನನಗೆ ಅಸಮಧಾನವಿದೆ. ಪ್ರತಿಪಕ್ಷ ಸದಸ್ಯರು ಆಯ್ಕೆ ಪ್ರಕ್ರಿಯೆ ಭಾಗವಾಗಬೇಕಾದರೆ, ಅದನ್ನು ಸರಿಯಾಗಿ ಮಾಡಲಿ. ಆಗ ನಾವೇನಾದರು ಸಲಹೆ ನೀಡಲು ಸಾಧ್ಯ” ಎಂದು ಅಧೀರ್ ರಂಜನ್ ಚೌಧರಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ನೀವು ಔಪಚಾರಿಕವಾಗಿ ನನ್ನನ್ನು ಸಮಿತಿಯಲ್ಲಿ, ಆಯ್ಕೆ ಪ್ರಕ್ರಿಯೆಯಲ್ಲಿ ಪರಿಗಣಿಸಿದ್ದೀರಿ. ನಾನೂ ಅದೇ ರೀತಿ ಪರಿಗಣಿಸಿದ್ದೇನೆ. ನನ್ನ ಭಿನ್ನಭಿಪ್ರಾಯವನ್ನು ದಾಖಲೆಗೆ ಸೇರಿಸುವಂತೆ ಕೇಳಿಕೊಂಡಿದ್ದೇನೆ. ಇಲ್ಲದಿದ್ದರೆ, ಅವರು ಕೊಟ್ಟ 212 ಅಧಿಕಾರಿಗಳ ಹೆಸರುಗಳನ್ನು ಕಡಿಮೆ ಅವಧಿಯಲ್ಲಿ ಪರಿಶೀಲಿಸಿದ ಅಭಿಪ್ರಾಯ ಹೇಳಲು ನಾನು ಜಾದುಗಾರನಲ್ಲ” ಎಂದು ಚೌಧರಿ ಕಿಡಿಕಾರಿದ್ದಾರೆ.

ಇದನ್ನೂ ಓದಿ : ಕೇಂದ್ರ ಚುನಾವಣಾ ಆಯುಕ್ತರಾಗಿ ಜ್ಞಾನೇಶ್‌ ಕುಮಾರ್‌, ಸುಖಬೀರ್‌ ಸಂಧು ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...