Homeಕರ್ನಾಟಕಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಬಿ‌ಎಸ್‌ವೈ ವಿರುದ್ಧ ಎಫ್ಐಆರ್ ದಾಖಲು

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಆರೋಪ; ಮಾಜಿ ಸಿಎಂ ಬಿ‌ಎಸ್‌ವೈ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ನಂತರ, ರಾಜ್ಯದ ಮತ್ತೋರ್ವ ಪ್ರಭಾವಿ ವ್ಯಕ್ತಿಯ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗುರುವಾರ ತಡರಾತ್ರಿ, ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ಬಿಎಸ್‌ವೈ ಬಾಲಕಿಗೆ ದೌರ್ಜನ್ಯ ನೀಡಿದ್ದಾರೆ ಎನ್ನಲಾಗಿದ್ದು, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ಥೆ ತಾಯಿ ದೂರು ನೀಡಿದ್ದಾರೆ.

ಪೋಕ್ಸೋ ಹಾಗೂ 354(A) ಅಡಿಯಲ್ಲಿ ದೂರು ದಾಖಲಾಗಿದ್ದು, ಅಪ್ರಾಪ್ತೆಯ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರದ ಬಗ್ಗೆ ಸಹಾಯಯಾಚಿಸಲು ತೆರಳಿದ್ದಾಗ ಘಟನೆ ನಡೆದಿದೆ. 9 ನಿಮಿಷಗಳ ಕಾಲ ಬಾಲಕಿ ಜತೆಗೆ ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ, ಆ ನಂತರ ಅಪ್ರಾಪ್ತೆಯನ್ನ ಕೋಣೆ ಒಳಗೆ ಕರೆದು ಹೋಗಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಆರೋಪಿಯು ಅಪ್ರಾಪ್ತೆಯ ಖಾಸಗಿ ಅಂಗಾಗಳನ್ನ ಮುಟ್ಟಿರುವ ಬಗ್ಗೆ ದೂರು ದಾಖಲಿಸಲಾಗಿದೆ. ಕೊಠಡಿಯಿಂದ ಹೊರಬಂದ ಯಡಿಯೂರಪ್ಪ ಅವರು ತಾಯಿಯ ಬಳಿ ಕ್ಷಮೆಯಾಚಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ರಾಜ್ಯದ ಪ್ರಭಾವಿ ರಾಜಕಾರಣಿ, ನಾಲ್ಕು ಸಲ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ನಡೆಸಿರುವ ಬಿ.ಎಸ್.ಯಡಿಯೂರಪ್ಪನವರ ವಿರುದ್ಧ ಇದೀಗ ‘ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಅಡಿಯಲ್ಲಿ ಗುರುವಾರ ತಡರಾತ್ರಿ ಎಫ್‌ಐಆರ್‌ ದಾಖಲಾಗಿದೆ.

ಗುರುವಾರ ಸಂಜೆ 6 ಗಂಟೆಯ ವೇಳೆಗೆ ಸಂತ್ರಸ್ತ ತಾಯಿ ಮತ್ತು ಮಗಳು ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಲು ಯತ್ನಿಸಿದ್ದಾರೆ. ಆದರೆ, ಮಹಿಳೆ ಈ ಹಿಂದೆ ಕೂಡ ಹಕವರ ವಿರುದ್ಧ ದೂರು ದಾಖಲಿಸಿದ್ದರು ಎನ್ನುವ ಕಾರಣ ನೀಡಿ, ಪೊಲೀಸರು ತಕ್ಷಣವೇ ದೂರು ಸ್ವೀಕರಿಸಲು ನಿರಾಕರಿಸಿದ್ದಾರೆ. ತಾಯಿ ಮತ್ತು ಮಗಳು ತಮಗಾದ ಅನ್ಯಾಯಕ್ಕೆ ನ್ಯಾಯ ಸಿಗಬೇಕು ಎಂದು ಪಟ್ಟು ಹಿಡಿದಿದ್ದರಿಂದ, ಮಹಿಳಾಪರ ಹೋರಾಟಗಾರರು ಒತ್ತಡ ಹೇರಿದ ನಂತರ ರಾತ್ರಿ 12 ಗಂಟೆಯ ವೇಳೆಗೆ ಎಫ್‌ಐಆರ್‌ ದಾಖಲಿಸಲಾಗಿದೆ.

ಪೋಕ್ಸೋ ಕಾನೂನಿನ ಸೆಕ್ಷನ್ 8 ಮತ್ತು ಐಪಿಸಿ ಸೆಕ್ಷನ್‌ 354 (ಎ) ಅಡಿಯಲ್ಲಿ ಯಡಿಯೂರಪ್ಪ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೋಕ್ಸೋ ಕಾಯ್ದೆಯ ಸೆಕ್ಷನ್‌ 8ರ ಪ್ರಕಾರ ಆರೋಪ ಸಾಭೀತಾದಲ್ಲಿ ಕನಿಷ್ಠ ಮೂರು ವರ್ಷ, ಕೆಲವೊಮ್ಮೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಆಗಬಹುದು. ಜೊತೆಗೆ ದಂಡವನ್ನೂ ವಿಧಿಸಬಹುದು.

ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳಕ್ಕೆ ಶಿಕ್ಷೆಯನ್ನು ವಿಧಿಸುತ್ತದೆ. ಇಷ್ಟವಿಲ್ಲದಿದ್ದರೂ ಲೈಂಗಿಕ ಅಭಿವ್ಯಕ್ತಿಯನ್ನು ಮಾಡುವುದು, ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆ ಅಥವಾ ವಿನಂತಿಯನ್ನು ಮಾಡುವುದು, ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲವಾದದ್ದನ್ನು ತೋರಿಸುವುದು ಶಿಕ್ಷಾರ್ಹ ಅಪರಾಧವೆಂದು ಈ ಸೆಕ್ಷನ್ ಹೇಳುತ್ತದೆ.

ದೂರಿನಲ್ಲಿ ಏನಿದೆ?

ಅಪ್ರಾಪ್ತ ಮಗಳ ಮೇಲೆ ಈ ಹಿಂದೆ ಆಗಿದ್ದ ಅತ್ಯಾಚಾರ ಸಂಬಂಧ ನ್ಯಾಯ ಒದಗಿಸುವಂತೆ ಕೋರಿ, ಎಸ್‌ಐಟಿ ತನಿಖೆಗೆ ವಹಿಸುವಂತೆ ಮನವಿ ಮಾಡಲು 2024ರ ಫೆಬ್ರುವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಬಾಲಕಿ ಹಾಗೂ ತಾಯಿ ಹೋಗಿದ್ದರು. ಆ ವೇಳೆ 9 ನಿಮಿಷಗಳ ಕಾಲ ಯಡಿಯೂರಪ್ಪ ಇವರೊಂದಿಗೆ ಮಾತನಾಡಿದ್ದರು. ಇಬ್ಬರಿಗೂ ಟೀ ಕುಡಿಸಿದ್ದರು. ಬಾಲಕಿಯು ಯಡಿಯೂರಪ್ಪನವರನ್ನು ತಾತಾ ಎಂದು ಕರೆಯುತ್ತಿದ್ದರು. ಯಡಿಯೂರಪ್ಪ ಬಾಲಕಿಯ ಕೈ ಹಿಡಿದುಕೊಂಡೇ ಮಾತನಾಡುತ್ತಿದ್ದರು. ಬಾಲಕಿಯ ತಾಯಿ ಮಾಜಿ ಮುಖ್ಯಮಂತ್ರಿಯನ್ನು ಅಪ್ಪಾಜಿ ಎಂದು ಸಂಬೋಧಿಸುತ್ತಿದ್ದರು. ಆ ವೇಳೆ ಬಾಲಕಿಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿದ್ದ ಯಡಿಯೂರಪ್ಪ, ಸುಮಾರು 5 ನಿಮಿಷಗಳ ಕಾಲ ಬಾಗಿಲು ಹಾಕಿಕೊಂಡು ಇದ್ದರು. ಬಾಲಕಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಯಡಿಯೂರಪ್ಪ ಹೊರಗೆ ಬಿಟ್ಟಿಲ್ಲ. ಆ ವೇಳೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ. ಬಾಲಕಿಯು ರೂಮಿನಿಂದ ಓಡಿಬಂದು ತಾಯಿಗೆ ವಿಷಯವನ್ನು ತಿಳಿಸಿದ್ದಾರೆ. ‘ಹೀಗೇಕೆ ಮಾಡಿದಿರಿ?’ ಎಂದು ತಾಯಿ ಪ್ರಶ್ನಿಸಿದ್ದಾರೆ. “ರೇಪ್‌ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಹಾಗೆ ಮಾಡಿದೆ” ಎಂದಿದ್ದಾರೆ. ತಕ್ಷಣವೇ ಯಡಿಯೂರಪ್ಪ ಕ್ಷಮೆ ಯಾಚಿಸುತ್ತಾ, “ಈ ವಿಚಾರವನ್ನು ಹೊರಗಡೆ ಎಲ್ಲಿಯೂ ಹೇಳಬಾರದು” ಎಂದು ತಡೆಯಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಆಗಿರುವ ಅನ್ಯಾಯಕ್ಕೆ ನ್ಯಾಯ ಕೇಳಲು ಹೋದಾಗ ಲೈಂಗಿಕ ಕಿರುಕುಳ ನೀಡಿರುವ ಯಡಿಯೂರಪ್ಪನವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ತಾಯಿ ದೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿ ಪ್ರಸಾರವಾಗದಂತೆ ಬಿಎಸ್‌ವೈ ಬೆಂಬಲಿಗರ ಯತ್ನ:

ಯಡಿಯೂರಪ್ಪನವರ ವಿರುದ್ಧ ಸಂತ್ರಸ್ತ ಬಾಲಕಿ ಮತ್ತು ತಾಯಿ ಪೊಲೀಸ್ ಠಾಣೆಯ ಮೆಟ್ಟಿಲೇರಿರುವುದನ್ನು ತಿಳಿದ ಅನೇಕ ಮಾಧ್ಯಮ ಸಂಸ್ಥೆಗಳ ಪತ್ರಕರ್ತರು ತಡರಾತ್ರಿಯೇ ಪೊಲೀಸ್ ಠಾಣೆಗೆ ಧಾವಿಸಿದ್ದರು. ಆದರೆ, ‘ಈದಿನ.ಕಾಂ’ ಸೇರಿದಂತೆ ಕೆಲ ಜನಪರ ಇಂಗ್ಲಿಷ್ ಮಾಧ್ಯಮಗಳು ಮಾತ್ರ ಸಂಪೂರ್ಣವಾಗಿ ವರದಿ ಮಾಡಿದ್ದು, ರಾಜ್ಯದ ಪ್ರಮುಖ ಮುಖ್ಯವಾಹಿನಿ ಮಾಧ್ಯಮಗಳು ಈ ಸುದ್ದಿಯನ್ನು ಬೇಕಂತಲೇ ನಿರ್ಲಕ್ಷ್ಯ ಮಾಡಿವೆ; ಎಫ್‌ಐಆರ್‌ ದಾಖಲಾಗುತ್ತಿದ್ದಂತೆ ಅನಿವಾರ್ಯವಾಗಿ ಕೆಲ ಮಾಧ್ಯಮಗಳು ಸುದ್ದಿ ಮಾಡಿವೆ.

ಪೊಲೀಸ್ ಠಾಣೆಯ ಎದುರು ಜನ ಜಮಾಯಿಸದಂತೆ ರಸ್ತೆ ಬದಿಯಲ್ಲಿ ನಿಂತಿದ್ದ ಮಾಧ್ಯಮಗಳ ವಾಹನಗಳನ್ನು ಮತ್ತು ಪತ್ರಕರ್ತರನ್ನು ತೆರವು ಮಾಡಿಸಲಾಯಿತು. ಜೊತೆಗೆ ಬಿಎಸ್‌ವೈ ಬೆಂಬಲಿಗರು ಮಾಧ್ಯಮಗಳಲ್ಲಿ ವರದಿಯಾಗುವುದನ್ನು ತಡೆಯಲು ಠಾಣೆಯ ಬಳಿ ದೌಡಾಯಿಸಿದ್ದರು. ಬಿ.ಎಸ್.ಯಡಿಯೂರಪ್ಪನವರ ಬೆಂಬಲಿಗರು, ಮಾಧ್ಯಮದ ಪಿಆರ್‌ಒ ತಂಡ ಸ್ಥಳದಲ್ಲೇ ಮೊಕ್ಕಾಂ ಹೂಡಿ, “ಇದು ಸುಳ್ಳು ಪ್ರಕರಣ ದಾಖಲಿಸಲು ಬಂದಿದ್ದಾರೆ, ಯಾವುದೇ ಕಾರಣಕ್ಕೂ ವರದಿ ಮಾಡಬಾರದು” ಎಂದು ತಾಕೀತು ಮಾಡುತ್ತಿದ್ದ ದೃಶ್ಯಗಳು ಕಂಡು ಬಂದವು.

ಬಿಜೆಪಿ ಮುಖಂಡರಾದ ರುದ್ರೇಶ್ ಸೋಂಪುರ ಅವರು ಪತ್ರಕರ್ತರಿಗೆ ಬೆದರಿಕೆ ಹಾಕುತ್ತಿದ್ದ ದೃಶ್ಯಗಳು ಕಂಡುಬಂದವು; ಸ್ಥಳದಲ್ಲಿ ಅವರು ಕೂಗಾಟ ಜೋರಾಗಿತ್ತು. ಲೈಂಗಿಕ ಕಿರುಕುಳ ಘಟನೆಯ ನಂತರದಲ್ಲಿ ಬಿಜೆಪಿಯ ವರಿಷ್ಠರಿಗೆ ಸಂತ್ರಸ್ತರು ದೂರು ನೀಡುವ ಪ್ರಯತ್ನವನ್ನೂ ಮಾಡಿದ್ದರೆಂದು ತಿಳಿದುಬಂದಿದೆ. ಆದರೆ ಯಾವುದೇ ಕ್ರಮ ಜರುಗಿಸದೆ ಇದ್ದರಿಂದ ಅಂತಿಮವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...