HomeUncategorizedಚುನಾವಣಾ ಬಾಂಡ್ ವಿಶ್ಲೇಷಣೆಯಿಂದ ಮಹತ್ವದ ಮಾಹಿತಿಗಳು ಬಹಿರಂಗ

ಚುನಾವಣಾ ಬಾಂಡ್ ವಿಶ್ಲೇಷಣೆಯಿಂದ ಮಹತ್ವದ ಮಾಹಿತಿಗಳು ಬಹಿರಂಗ

ಹಲವು ಕಂಪನಿಗಳು ದೇಣಿಗೆ ನೀಡಿದ ಬೆನ್ನಲ್ಲೇ ಲಾಭ ಪಡೆದಿವೆ. ಇನ್ನೂ ಕೆಲವು ಐಟಿ, ಇಡಿ ದಾಳಿಯ ಬಳಿಕ ದೇಣಿಗೆ ನೀಡಿವೆ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಮಹತ್ವದ ವಿಷಯಗಳು ಬಹಿರಂಗಗೊಂಡಿವೆ. ಕೋಟ್ಯಾಂತರ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಕಂಪನಿಗಳು, ಅದಕ್ಕೆ ಪ್ರತಿಯಾಗಿ ಲಾಭ ಪಡೆದಿರುವುದು ಗೊತ್ತಾಗಿದೆ.

ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯಲ್ಲಿ ಯಾವ ಕಂಪನಿ, ಎಷ್ಟು ದೇಣಿಗೆ ನೀಡಿದೆ ಎಂಬ ಅಂಕಿ ಅಂಶಗಳಿವೆ. ಆದರೆ, ಯಾರಿಗೆ ನೀಡಿದ್ದಾರೆ ಎಂಬುವುದು ಸ್ಪಷ್ಟವಾಗಿ ಇಲ್ಲ. ಆದರೂ, ದೇಣಿಗೆ ನೀಡಿದ ಬಳಿಕ ಹೆಚ್ಚಿನ ಕಂಪನಿಗಳು ಕೇಂದ್ರದ ಬಿಜೆಪಿ ಸರ್ಕಾರದ ಕಡೆಯಿಂದ ವಿವಿಧ ಲಾಭಗಳನ್ನು ಪಡೆದಿರುವುದು ಕಂಡು ಬಂದಿದೆ.

ಈ ಕುರಿತು ಕಾಂಗ್ರೆಸ್ ನಾಯಕರ ಜೈರಾಮ್ ರಮೇಶ್ ಕೆಲವೊಂದು ವಿವರಣೆಗಳನ್ನು ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವುಗಳು ಹೀಗಿವೆ..

2019 ರಿಂದ 1,300ಕ್ಕೂ ಹೆಚ್ಚು ಕಂಪನಿಗಳು ಮತ್ತು ವ್ಯಕ್ತಿಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ್ದಾರೆ. ಈ ಮೂಲಕ ಬಿಜೆಪಿ 6,000 ಕೋಟಿ ರೂಪಾಯಿ ದೇಣಿಗೆ ಪಡೆದಿದೆ.

ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ನೀಡಿದ ಕಂಪನಿಗಳು ತಕ್ಷಣವೇ ಸರ್ಕಾರದಿಂದ ಭಾರೀ ಪ್ರಯೋಜನಗಳನ್ನು ಪಡೆದ ಅನೇಕ ಉದಾಹರಣೆಗಳಿವೆ.

  • ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್, ಈ ಕಂಪನಿಯು 966 ಕೋಟಿ ರೂ.ಮೌಲ್ಯದ ಬಾಂಡ್ ಖರೀದಿಸಿದೆ. ಏಪ್ರಿಲ್ 2023ರಲ್ಲಿ ಕಂಪನಿಯು 140 ಕೋಟಿ ರೂ. ದೇಣಿಗೆ ನೀಡಿತ್ತು. ಇದಾಗಿ ಒಂದು ತಿಂಗಳ ಬಳಿಕ ಕಂಪನಿಯು ಕೇಂದ್ರ ಸರ್ಕಾರದಿಂದ 14,400 ಕೋಟಿ ರೂ. ವೆಚ್ಚದ ಥಾಣೆ-ಬೊರಿವಲಿ ಅವಳಿ ಸುರಂಗ ಯೋಜನೆಯನ್ನು ತನ್ನದಾಗಿಸಿಕೊಂಡಿದೆ.
  • ಅಕ್ಟೋಬರ್ 7, 2022ರಂದು ಜಿಂದಾಲ್ ಸ್ಟೀಲ್ & ಪವರ್ ಕಂಪನಿ 25 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿತ್ತು. ಇದಾಗಿ ಕೇವಲ ಮೂರು ದಿನಗಳ ಬಳಿಕ, ಅಂದರೆ 10 ಅಕ್ಟೋಬರ್ 2022 ರಂದು ಕಂಪನಿಯು ಗರೇ ಪಾಲ್ಮಾ IV/6 ಕಲ್ಲಿದ್ದಲು ಗಣಿಯನ್ನು ತನ್ನದಾಗಿಸಿಕೊಂಡಿದೆ.

ಚುನಾವಣಾ ಬಾಂಡ್ ನೀಡಿದ ಟಾಪ್ 30 ದಾನಿಗಳ ಪೈಕಿ 14 ದಾನಿಗಳ ಮೇಲೆ ಇಡಿ, ಸಿಬಿಐ, ಐಟಿ ದಾಳಿ ನಡೆದಿದೆ. ಇದನ್ನು ಹಪ್ತಾ ವಸೂಲಿ ಎಂದು ಬಣ್ಣಿಸಿರುವ ಜೈರಾಮ್ ರಮೇಶ್, “ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ಮೂಲಕ ಕಂಪನಿ ಮತ್ತು ವ್ಯಕ್ತಿಗಳನ್ನು ಬೆದರಿಸಿದ ನಂತರ ಬಿಜೆಪಿಗೆ ದೇಣಿಗೆ ಪಡೆದಿದೆ” ಎಂದು ಆರೋಪಿಸಿದ್ದಾರೆ.

  • ಹೆಟೆರೊ ಫಾರ್ಮಾ ಮತ್ತು ಯಶೋದಾ ಆಸ್ಪತ್ರೆಯಂತಹ ಕಂಪನಿಗಳು ತನಿಖಾ ಸಂಸ್ಥೆಗಳ ದಾಳಿಗೆ ಒಳಗಾದ ಬಳಿಕ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ.
  • ಆದಾಯ ತೆರಿಗೆ (ಐಟಿ) ಇಲಾಖೆಯು ಡಿಸೆಂಬರ್ 2023ರಲ್ಲಿ ಶಿರಡಿ ಸಾಯಿ ಎಲೆಕ್ಟ್ರಿಕಲ್ಸ್ ಮೇಲೆ ದಾಳಿ ನಡೆಸಿತ್ತು. ಇದೇ ಕಂಪನಿ ಜನವರಿ 2024ರಲ್ಲಿ ಚುನಾವಣಾ ಬಾಂಡ್ ಮೂಲಕ 40 ಕೋಟಿ ರೂ. ದೇಣಿಗೆ ನೀಡಿದೆ.
  • ಫ್ಯೂಚರ್ ಗೇಮಿಂಗ್ ಅಂಡ್ ಹೋಟೆಲ್ಸ್ ಲಿಮಿಟೆಡ್, ರೂ. 1,200 ಕೋಟಿ ಮೌಲ್ಯದ ಬಾಂಡ್ ಖರೀದಿಸುವ ಮೂಲಕ ಅತೀ ಹೆಚ್ಚು ದೇಣಿಗೆ ನೀಡಿದ ಕಂಪನಿಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.
  • ಏಪ್ರಿಲ್ 2, 2022 ರಂದು ಈ ಕಂಪನಿ ಮೇಲೆ ಇಡಿ ದಾಳಿ ನಡೆಸಿತ್ತು. ಇದಾಗಿ 5 ದಿನಗಳ ನಂತರ, ಅಂದರೆ ಏಪ್ರಿಲ್ 7ರಂದು ಕಂಪನಿಯು ಚುನಾವಣಾ ಬಾಂಡ್‌ ಮೂಲಕ 100 ಕೋಟಿ ರೂ. ದೇಣಿಗೆ ನೀಡಿದೆ.
  • ಅಕ್ಟೋಬರ್ 2023ರಲ್ಲಿ ಐಟಿ ಇಲಾಖೆಯು ಫ್ಯೂಚರ್ ಕಂಪನಿ ಮೇಲೆ ದಾಳಿ ನಡೆಸಿತ್ತು. ಅದೇ ತಿಂಗಳು ಕಂಪನಿಯು ಚುನಾವಣಾ ಬಾಂಡ್‌ ಮೂಲಕ 65 ಕೋಟಿ ರೂ. ದೇಣಿಗೆ ನೀಡಿದೆ.

ಕೇಂದ್ರ ಸರ್ಕಾರದಿಂದ ಕೆಲ ದಾಖಲೆಗಳನ್ನು ಸ್ವೀಕರಿಸಿದ ಬೆನ್ನಲ್ಲೇ ಕಂಪನಿಗಳು ದೇಣಿಗೆ ನೀಡಿವೆ. ಇದನ್ನು ಜೈರಾಮ್ ರಮೇಶ್ ಕಿಕ್ ಬ್ಯಾಕ್ ಎಂದು ಆರೋಪಿಸಿದ್ದಾರೆ.

  • ವೇದಾಂತ ಕಂಪನಿಯು 3 ಮಾರ್ಚ್ 2021ರಂದು ರಾಧಿಕಪೂರ್ ವೆಸ್ಟ್ ಖಾಸಗಿ ಕಲ್ಲಿದ್ದಲು ಗಣಿಯನ್ನು ತನ್ನದಾಗಿಸಿಕೊಂಡಿತ್ತು. ಇದಾಗಿ ಒಂದು ತಿಂಗಳ ನಂತರ ಏಪ್ರಿಲ್ 2021ರಲ್ಲಿ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ 25 ಕೋಟಿ ರೂ. ದೇಣಿಗೆ ನೀಡಿದೆ.
  • ಮೇಘಾ ಇಂಜಿನಿಯರಿಂಗ್ ಕಂಪನಿಯು ಆಗಸ್ಟ್ 2020ರಲ್ಲಿ 4,500 ಕೋಟಿ ರೂ. ವೆಚ್ಚದ ಜೊಜಿಲಾ ಸುರಂಗ ಯೋಜನೆಯನ್ನು ತನ್ನದಾಗಿಸಿಕೊಂಡಿತ್ತು. ಅಕ್ಟೋಬರ್ 2020ರಲ್ಲಿ ಕಂಪನಿಯು ಚುನಾವಣಾ ಬಾಂಡ್‌ಗಳ ಮೂಲಕ 20 ಕೋಟಿ ರೂ. ದೇಣಿಗೆ ನೀಡಿದೆ.
  • ಮೇಘಾ ಕಂಪನಿಯು ಡಿಸೆಂಬರ್ 2022ರಲ್ಲಿ ಬಿಕೆಸಿ ಬುಲೆಟ್ ರೈಲು ನಿಲ್ದಾಣದ ಗುತ್ತಿಗೆಯನ್ನು ಪಡೆದಿತ್ತು. ಅದೇ ತಿಂಗಳು ಕಂಪನಿ 56 ಕೋಟಿ ರೂ. ದೇಣಿಗೆ ನೀಡಿದೆ.

ಚುನಾವಣಾ ಬಾಂಡ್‌ ಹಣಕಾಸು ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೊಳಿಸಿದ ಯೋಜನೆಯಾಗಿದೆ. ತಿದ್ದುಪಡಿಯ ವೇಳೆ ಯಾವುದೇ ಕಂಪನಿಯ ಲಾಭದ ಒಂದು ಸಣ್ಣ ಶೇಕಡಾವಾರು ಭಾಗವನ್ನು ಮಾತ್ರ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಬಹುದೆಂಬ ನಿರ್ಬಂಧವನ್ನು ತೆಗೆದು ಹಾಕಲಾಗಿದೆ.

ಇದು ಶೆಲ್ ಕಂಪನಿಗಳಿಗೆ ಕಪ್ಪು ಹಣವನ್ನು ದೇಣಿಗೆ ನೀಡಲು ಅನುವು ಮಾಡಿ ಕೊಟ್ಟಿದೆ. ಇಂತಹ ಹಲವು ಅನುಮಾನಾಸ್ಪದ ಪ್ರಕರಣಗಳಿವೆ. ಉದಾಹರಣೆಗೆ ಕ್ವಿಕ್ ಸಪ್ಲೈ ಚೈನ್ ಲಿಮಿಟೆಡ್ ಎಂಬ ಕಂಪನಿಯು ರೂ. 410 ಕೋಟಿ ದೇಣಿಗೆ ನೀಡಿದೆ. ಈ ಕಂಪನಿಯ ಸಂಪೂರ್ಣ ಷೇರು ಬಂಡವಾಳ ಕೇವಲ 130 ಕೋಟಿ ರೂ. ಮಾತ್ರ.

ಎಸ್‌ಬಿಐ ಒದಗಿಸಿದ ಡೇಟಾವು ಏಪ್ರಿಲ್ 2019ರಿಂದ ಮಾರಾಟ ಮಾಡಿದ ಬಾಂಡ್‌ಗಳದ್ದಾಗಿದೆ. ಆದರೆ ಎಸ್‌ಬಿಐ ಮಾರ್ಚ್ 2018 ರಲ್ಲಿ ಮೊದಲ ಬಾಂಡ್‌ಗಳನ್ನು ಮಾರಾಟ ಮಾಡಿದೆ. ಹಾಗಾಗಿ, ಡೇಟಾದಿಂದ 2,500 ಕೋಟಿ ರೂ. ಮೌಲ್ಯದ ಬಾಂಡ್‌ಗಳು ಕಾಣೆಯಾಗಿವೆ. ಮಾರ್ಚ್ 2018 ರಿಂದ ಏಪ್ರಿಲ್ 2019 ರವರೆಗಿನ ಈ ಕಾಣೆಯಾದ ಬಾಂಡ್‌ಗಳ ಡೇಟಾ ಎಲ್ಲಿದೆ? ಉದಾಹರಣೆಗೆ, ಬಾಂಡ್‌ಗಳ ಮೊದಲ ಕಂತಿನಲ್ಲಿ ಬಿಜೆಪಿ ಶೇ. 95 ಹಣವನ್ನು ಪಡೆದುಕೊಂಡಿದೆ. ಬಿಜೆಪಿ ಯಾರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ? ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಚುನಾವಣಾ ಬಾಂಡ್‌ಗಳ ಅಂಕಿ ಅಂಶಗಳ ವಿಶ್ಲೇಷಣೆ ಮುಂದುವರಿದಂತೆ, ಬಿಜೆಪಿಯ ಭ್ರಷ್ಟಾಚಾರದ ಇನ್ನೂ ಅನೇಕ ಪ್ರಕರಣಗಳು ಬಯಲಿಗೆ ಬರಲಿವೆ. ನಾವು ವಿಶಿಷ್ಟ ಬಾಂಡ್‌ಗಳ ಐಡಿ ಸಂಖ್ಯೆ ಅಥವಾ ಸೀರಿಯಲ್ ನಂಬರ್ ಬಹಿರಂಗಗೊಳಿಸುವಂತೆ ಆಗ್ರಹಿಸುತ್ತಿದ್ದೇವೆ. ಇದರಿಂದ ಯಾವ ಪಕ್ಷ, ಯಾರಿಂದ ಎಷ್ಟು ದೇಣಿಗೆ ಪಡೆದಿದೆ ಎಂಬುವುದು ಗೊತ್ತಾಗಲಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ 1,260 ಕಂಪನಿಗಳು ಹಾಗೂ ವ್ಯಕ್ತಿಗಳು 12,769 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್ ಖರೀದಿಸಿದ್ದು, ಇದರಲ್ಲಿ ಅಗ್ರ 20 ಕಂಪನಿಗಳ ಪಾಲು 5,945 ಕೋಟಿ ರೂಪಾಯಿ. ಅಂದರೆ ಒಟ್ಟು ಮೌಲ್ಯದ ಸುಮಾರು ಶೇಕಡ 50ರಷ್ಟು.

ದೇಣಿಗೆ ನೀಡಿದ ಸುಮಾರು 500 ಕಂಪನಿಗಳ ಪೈಕಿ 28 ಕಂಪನಿಗಳು 2019ರ ಏಪ್ರಿಲ್ 12ರ ಬಳಿಕ ಸ್ಥಾಪನೆಯಾದ ಕಂಪನಿಗಳು. 20 ಅಗ್ರ ಖರೀದಿದಾರ ಕಂಪನಿಗಳ ಪೈಕಿ 13 ಕಂಪನಿಗಳ ಹಣಕಾಸು ಫಲಿತಾಂಶ ಲಭ್ಯವಿದ್ದು, ತಮ್ಮ ನಿವ್ವಳ ಲಾಭದ ಪ್ರಮಾಣಾನುಸಾರ ಈ ಕಂಪನಿಗಳು ಬಾಂಡ್ ಖರೀದಿಸಿವೆ.

ಇದನ್ನೂ ಓದಿ : ಚುನಾವಣಾ ಬಾಂಡ್‌: ಎಸ್‌ಬಿಐ ನೀಡಿದ ಮಾಹಿತಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಚು. ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...