Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್‌ ನಾಯಕಿಯನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು

ದೆಹಲಿ ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್‌ ನಾಯಕಿಯನ್ನು ವಶಕ್ಕೆ ಪಡೆದ ಇಡಿ ಅಧಿಕಾರಿಗಳು

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರನ್ನು ಶುಕ್ರವಾರ ವಶಕ್ಕೆ ಪಡೆದಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕವಿತಾ ಅವರ ಹೈದರಾಬಾದ್ ನಿವಾಸದ ಮೇಲೆ ದಾಳಿ ನಡೆದ ಗಂಟೆಗಳ ನಂತರ ದೆಹಲಿ ಅಬಕಾರಿ ನೀತಿ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ವಶಕ್ಕೆ ತೆಗೆದುಕೊಂಡಿದೆ. ಕವಿತಾ ಅವರನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆತರಲಾಗುವುದು ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇಡಿ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಕವಿತಾ ಅವರ ಹೈದರಾಬಾದ್ ನಿವಾಸದಲ್ಲಿ ಬಿಆರ್‌ಎಸ್ ಬೆಂಬಲಿಗರಿಂದ ಪ್ರತಿಭಟನೆ ಎದುರಿಸಬೇಕಾಯಿತು. ಬಿಆರ್‌ಎಸ್‌ ನಾಯಕಿಯನ್ನು ಇಡಿ ಅಧಿಕಾರಿಗಳು ಕಸ್ಟಡಿಗೆ ತೆಗೆದುಕೊಂಡಿದ್ದಾರೆ ಎಂದು ವರದಿಯಾದ ನಂತರ ಆಕೆಯ ಸಹೋದರ ಮತ್ತು ತೆಲಂಗಾಣ ಮಾಜಿ ಸಚಿವ ಕೆಟಿ ರಾಮರಾವ್ ಅವರು ಕವಿತಾ ಅವರ ನಿವಾಸಕ್ಕೆ ಆಗಮಿಸಿದರು. ಆದಾಗ್ಯೂ ಕವಿತಾ ಅವರನ್ನು ಬಂಧಿಸಲಾಗಿದೆಯೇ ಎಂಬ ಬಗ್ಗೆ ಯಾವುದೇ ದೃಢೀಕರಣವಿಲ್ಲ. ಆದರೆ, ಇಡಿ ಮೂಲಗಳು ಕವಿತಾಳನ್ನು ದೆಹಲಿಗೆ ಕರೆದೊಯ್ಯುವುದಾಗಿ ಖಚಿತಪಡಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿವೆ.

‘ನಿಮ್ಮನ್ನು (ಕವಿತಾ) ರಾತ್ರಿ 8.45 ರ ವಿಮಾನದಲ್ಲಿ ದೆಹಲಿಗೆ ಕರೆದುಕೊಂಡು ಹೋಗುತ್ತೇವೆ ಎಂದು ಅವರು ಮನೆಯಲ್ಲಿ ನಮಗೆ ತಿಳಿಸಿದ್ದರು. ಅವರು ಇಲ್ಲಿಗೆ ಬರುವ ಮುನ್ನವೇ ಆಕೆಯನ್ನು ಕಸ್ಟಡಿಗೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಕವಿತಾಗೆ ವಿಮಾನ ಟಿಕೆಟ್ ಅನ್ನು ಸಹ ಬುಕ್ ಮಾಡಿದ್ದಾರೆ ಎಂದು ತೋರುತ್ತದೆ’ ಎಂದು ಬಿಆರ್‌ಎಸ್‌ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಪ್ರಶಾಂತ್‌ ರೆಡ್ಡಿ ಬಿಆರ್‌ಎಸ್‌ ಎಂಎಲ್‌ಸಿ ನಿವಾಸದಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ದೆಹಲಿ ಮದ್ಯ ನೀತಿ ಪ್ರಕರಣಕ್ಕೂ ಕೆ ಕವಿತಾಗೂ ಸಂಬಂಧವೇನು?

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲಿನಲ್ಲಿರುವ ಪ್ರಕರಣವೂ ಇದೇ ಆಗಿದೆ. ಆರೋಪಗಳ ಪ್ರಕಾರ, ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ‘ಸೌತ್ ಕಾರ್ಟೆಲ್’ ಭಾಗಿಯಾಗಿತ್ತು. ಇದರಲ್ಲಿ ಕೆ ಕವಿತಾ ಪ್ರಮುಖ ಪಾತ್ರ ವಹಿಸಿದ್ದರು. ಈ ಕಾರ್ಟೆಲ್‌ನಲ್ಲಿರುವ ಇತರರು ಹೈದರಾಬಾದ್ ಉದ್ಯಮಿ ಶರತ್ ರೆಡ್ಡಿ, ವೈಎಸ್‌ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸಲು ರೆಡ್ಡಿ, ಅವರ ಮಗ ರಾಘವ್ ಮಾಗುಂಟ ರೆಡ್ಡಿ. ಈ ಸೌತ್ ಕಾರ್ಟೆಲ್ ಅನ್ನು ಉದ್ಯಮಿ ಅರುಣ್ ಪಿಳ್ಳೈ ಮತ್ತು ಅಭಿಷೇಕ್ ಬೋಯಿನ್ಪಲ್ಲಿ ಮತ್ತು ಚಾರ್ಟರ್ಡ್ ಅಕೌಂಟೆಂಟ್ ಬುಚ್ಚಿಬಾಬು ಇದ್ದಾರೆ ಎಂಬ ಆರೋಪವಿದೆ.

ಕವಿತಾ ಅವರನ್ನು ವಿಚಾರಣೆಗಾಗಿ ಹಲವು ಬಾರಿ ಕರೆಸಲಾಯಿತು ಮತ್ತು ಅವರು ಇತ್ತೀಚಿನ ಎರಡು ಸಮನ್ಸ್‌ಗಳನ್ನು ತಪ್ಪಿಸಿದ್ದರು. ಕಳೆದ ವರ್ಷ ಈ ಪ್ರಕರಣದಲ್ಲಿ ಆಕೆಯನ್ನು ಮೂರು ಬಾರಿ ವಿಚಾರಣೆಗೊಳಪಡಿಸಲಾಗಿತ್ತು ಮತ್ತು ಕೇಂದ್ರ ಸಂಸ್ಥೆಯು ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

ಪ್ರಕರಣದಲ್ಲಿ ಎಎಪಿ-ಸಂಬಂಧಿತ ಆರೋಪಿ ವಿಜಯ್ ನಾಯರ್, ಈ ದಕ್ಷಿಣ ಕಾರ್ಟೆಲ್‌ಗೆ ದೆಹಲಿ ಮದ್ಯ ವ್ಯವಹಾರದಲ್ಲಿ ಪಾಲನ್ನು ನೀಡುವುದಾಗಿ ಭರವಸೆ ನೀಡಿದರು. ಈಗ ರದ್ದಾದ ದೆಹಲಿ ಮದ್ಯ ನೀತಿಯಲ್ಲಿ ಹೆಚ್ಚಿನ ಪರವಾನಗಿಗಳನ್ನು ಹೊಂದಲು ಅನುಮತಿಸಲಾಗಿದೆ.

ಕೆ. ಕವಿತಾ ಮತ್ತು ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿಯ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ನಡುವೆ ರಾಜಕೀಯ ಪಾಲುದಾರಿಕೆ ಇತ್ತು. ಆ ಪ್ರಕ್ರಿಯೆಯಲ್ಲಿ, ಕೆ ಕವಿತಾ ಅವರು 2021 ರ ಮಾರ್ಚ್ 19-20 ರಂದು ವಿಜಯ್ ನಾಯರ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ಬುಚ್ಚಿಬಾಬು ತಮ್ಮ ಹೇಳಿಕೆಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಇಡಿ-ಐಟಿ ಬಾಗಿಲು ತಟ್ಟಿದ ನಂತರ ಚುನಾವಣಾ ಬಾಂಡ್‌ ಖರೀದಿಸಿದ್ದ 3 ಮಂದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...