Homeಕರ್ನಾಟಕಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯ: ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ

ಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯ: ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ

- Advertisement -
- Advertisement -

ಲೋಕಸಭೆ ಚನಾವಣೆಯಲ್ಲಿಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿರುವ ಹಿನ್ನೆಲೆ ಆಕ್ರೋಶಗೊಂಡಿದ್ದ ಬಿಜೆಪಿಯ ಹಿರಿಯ ನಾಯಕ ಕೆಎಸ್‌ ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಶಿವಮೊಗ್ಗ ಕ್ಷೇತ್ರಕ್ಕೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದೀಗ ಯಡಿಯೂರಪ್ಪ ಪುತ್ರನ ವಿರುದ್ಧ ತಾನು ಸ್ಪರ್ಧಿಸುವುದಾಗಿ ಈಶ್ವರಪ್ಪ ಘೋಷಿಸಿದ್ದಾರೆ.

ನಿನ್ನೆ ಶಿವಮೊಗ್ಗದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದು ಉದ್ವೇಗದ ತೀರ್ಮಾನ ಅಲ್ಲ. ಕಾಂಗ್ರೆಸ್‌ ಪಕ್ಷದ ಕುಟುಂಬ ರಾಜಕಾರಣವನ್ನು ವಿರೋಧಿಸಿಕೊಂಡು ಬಂದಿದ್ದೆವು. ಯಡಿಯೂರಪ್ಪ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ, ಅದಕ್ಕೆ ಮನ್ನಣೆ ನೀಡುವುದು ಸರಿಯಾ? ಪಕ್ಷವನ್ನು ಕುಟುಂಬ ರಾಜಕಾರಣದ ಹಿಡಿತದಿಂದ ಬಿಡಿಸಲು ಹೋರಾಟ ಆರಂಭಿಸಿದ್ದೇನೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿಯ ಬಿ.ವೈ.ರಾಘವೇಂದ್ರ, ಕಾಂಗ್ರೆಸ್‌ನ ಗೀತಾ ಶಿವರಾಜಕುಮಾರ್ ಅವರಿಗಿಂತ ನಾನು ಪ್ರಬಲನಾಗಿದ್ದೇನೆ. ಪ್ರಧಾನಿ ನರೆಂದ್ರ ಮೋದಿ ಅವರ ಪರವಾಗಿ ಚುನಾವಣೆಗೆ ನಿಲ್ಲುತ್ತಿದ್ದೇನೆ. ಬಿಜೆಪಿ ಮತ್ತೊಂದು ಕಾಂಗ್ರೆಸ್ ಪಕ್ಷ ಆಗಬಾರದೆಂದು ತಡೆಯಲು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಬುಧವಾರ ಸಂಜೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಿತ್ತು. ಲೋಕಸಭೆ ಚುನಾವಣೆಗೆ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಸಿಡಿದೆದ್ದಿದ್ದರು. ನನ್ನ ಮಗನಿಗೆ ಟಿಕೆಟ್ ತಪ್ಪಿಸಿದ್ದು ಯಡಿಯೂರಪ್ಪ ಎಂದು ಹೇಳಿದ್ದರು.

ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿಗೆ ಪಟ್ಟು ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಆದರೆ, ನನ್ನ ಮಗ ಕಾಂತೇಶ್‌ಗೆ ಅನ್ಯಾಯ ಮಾಡಿದ್ರು, ರಾಜ್ಯದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿದೆ. ಕುಟುಂಬದ ಕೈಯಿಂದ ಪಕ್ಷ ರಕ್ಷಿಸಬೇಕಿದೆ. ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಬಿಟ್ಟು ಬೇರೆ ಲಿಂಗಾಯತ ನಾಯಕರು ರಾಜ್ಯದಲ್ಲಿ ಇಲ್ವಾ? ಪಕ್ಷದ ಚುನಾವಣಾ ಸಮಿತಿಯ ಸಭೆಯಲ್ಲಿ ಹಾವೇರಿ ಟಿಕೆಟ್ ಕಾಂತೇಶ್‌ಗೆ ಕೊಡಿ ಎಂದು ಸ್ವತಃ ಬೊಮ್ಮಾಯಿ ಅವರೇ ಹೇಳಿದ್ದರು. ಆದರೂ, ಯಡಿಯೂರಪ್ಪ ಹಠ ಹಿಡಿದು ಅವರಿಗೆ ಯಾಕೆ ಟಿಕೆಟ್ ಕೊಡಿಸಿದ್ದು ಯಾಕೆ? ಎಂದು ಈಶ್ವರಪ್ಪ ಪ್ರಶ್ನಿಸಿದ್ದರು.

ನಾನು 40 ವರ್ಷಗಳಿಂದ ಈ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ನನಗೆ ಮಾತ್ರವಲ್ಲದೆ, ಪ್ರತಾಪ್ ಸಿಂಹ, ಸಿ.ಟಿ ರವಿ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡರಂತಹ ಪಕ್ಷದ ನಾಯಕರಿಗೆ ಅನ್ಯಾಯವಾಗಿದೆ. ಬಿಎಸ್‌ವೈ ಪಕ್ಷದ ಕತ್ತು ಹಿಸುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಲೋಕಸಭೆ ಚುನಾವಣೆಗೆ 72 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿಯಲ್ಲಿ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈ ಬಾರಿ 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಈ ಪೈಕಿ ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡ ಸೇರಿದಂತೆ ಪ್ರಮುಖರು ಇದ್ದಾರೆ. ಇನ್ನು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಸಿ.ಟಿ ರವಿ ಮತ್ತು ಹಾವೇರಿ-ಗದಗ ಕ್ಷೇತ್ರದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ನಿರಾಸೆಯಾಗಿದೆ.

ಗಮನಾರ್ಹವಾಗಿ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಬದಲಿಗೆ ಮೈಸೂರು ರಾಜ ಕುಟುಂಬದ ಉತ್ತರಾಧಿಕಾರಿ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರದಿಂದ ಕಣಕ್ಕಿಳಿಸಲಾಗಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌| ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...