Homeಕರ್ನಾಟಕಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯ: ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ

ಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯ: ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ

- Advertisement -
- Advertisement -

ಲೋಕಸಭೆ ಚನಾವಣೆಯಲ್ಲಿಗೆ ಬಿಜೆಪಿ ಟಿಕೆಟ್‌ ಕೈ ತಪ್ಪಿರುವ ಹಿನ್ನೆಲೆ ಆಕ್ರೋಶಗೊಂಡಿದ್ದ ಬಿಜೆಪಿಯ ಹಿರಿಯ ನಾಯಕ ಕೆಎಸ್‌ ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಶಿವಮೊಗ್ಗ ಕ್ಷೇತ್ರಕ್ಕೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಟಿಕೆಟ್‌ ನೀಡಲಾಗಿದೆ. ಇದೀಗ ಯಡಿಯೂರಪ್ಪ ಪುತ್ರನ ವಿರುದ್ಧ ತಾನು ಸ್ಪರ್ಧಿಸುವುದಾಗಿ ಈಶ್ವರಪ್ಪ ಘೋಷಿಸಿದ್ದಾರೆ.

ನಿನ್ನೆ ಶಿವಮೊಗ್ಗದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣಾ ಸಭೆಯಲ್ಲಿ ಈಶ್ವರಪ್ಪ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದು ಉದ್ವೇಗದ ತೀರ್ಮಾನ ಅಲ್ಲ. ಕಾಂಗ್ರೆಸ್‌ ಪಕ್ಷದ ಕುಟುಂಬ ರಾಜಕಾರಣವನ್ನು ವಿರೋಧಿಸಿಕೊಂಡು ಬಂದಿದ್ದೆವು. ಯಡಿಯೂರಪ್ಪ ಕುಟುಂಬ ರಾಜಕಾರಣ ಮಾಡುತ್ತಿದ್ದಾರೆ, ಅದಕ್ಕೆ ಮನ್ನಣೆ ನೀಡುವುದು ಸರಿಯಾ? ಪಕ್ಷವನ್ನು ಕುಟುಂಬ ರಾಜಕಾರಣದ ಹಿಡಿತದಿಂದ ಬಿಡಿಸಲು ಹೋರಾಟ ಆರಂಭಿಸಿದ್ದೇನೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿಯ ಬಿ.ವೈ.ರಾಘವೇಂದ್ರ, ಕಾಂಗ್ರೆಸ್‌ನ ಗೀತಾ ಶಿವರಾಜಕುಮಾರ್ ಅವರಿಗಿಂತ ನಾನು ಪ್ರಬಲನಾಗಿದ್ದೇನೆ. ಪ್ರಧಾನಿ ನರೆಂದ್ರ ಮೋದಿ ಅವರ ಪರವಾಗಿ ಚುನಾವಣೆಗೆ ನಿಲ್ಲುತ್ತಿದ್ದೇನೆ. ಬಿಜೆಪಿ ಮತ್ತೊಂದು ಕಾಂಗ್ರೆಸ್ ಪಕ್ಷ ಆಗಬಾರದೆಂದು ತಡೆಯಲು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಬುಧವಾರ ಸಂಜೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಯಾಗಿತ್ತು. ಲೋಕಸಭೆ ಚುನಾವಣೆಗೆ ಪುತ್ರ ಕಾಂತೇಶ್‌ಗೆ ಟಿಕೆಟ್ ಕೈ ತಪ್ಪುತ್ತಿದ್ದಂತೆ ಬಿಜೆಪಿ ನಾಯಕ ಕೆ.ಎಸ್‌ ಈಶ್ವರಪ್ಪ ಸಿಡಿದೆದ್ದಿದ್ದರು. ನನ್ನ ಮಗನಿಗೆ ಟಿಕೆಟ್ ತಪ್ಪಿಸಿದ್ದು ಯಡಿಯೂರಪ್ಪ ಎಂದು ಹೇಳಿದ್ದರು.

ಯಡಿಯೂರಪ್ಪ ಅವರು ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿಗೆ ಪಟ್ಟು ಹಿಡಿದು ಟಿಕೆಟ್ ಕೊಡಿಸಿದ್ದಾರೆ. ಆದರೆ, ನನ್ನ ಮಗ ಕಾಂತೇಶ್‌ಗೆ ಅನ್ಯಾಯ ಮಾಡಿದ್ರು, ರಾಜ್ಯದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಲುಕಿದೆ. ಕುಟುಂಬದ ಕೈಯಿಂದ ಪಕ್ಷ ರಕ್ಷಿಸಬೇಕಿದೆ. ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಬಿಟ್ಟು ಬೇರೆ ಲಿಂಗಾಯತ ನಾಯಕರು ರಾಜ್ಯದಲ್ಲಿ ಇಲ್ವಾ? ಪಕ್ಷದ ಚುನಾವಣಾ ಸಮಿತಿಯ ಸಭೆಯಲ್ಲಿ ಹಾವೇರಿ ಟಿಕೆಟ್ ಕಾಂತೇಶ್‌ಗೆ ಕೊಡಿ ಎಂದು ಸ್ವತಃ ಬೊಮ್ಮಾಯಿ ಅವರೇ ಹೇಳಿದ್ದರು. ಆದರೂ, ಯಡಿಯೂರಪ್ಪ ಹಠ ಹಿಡಿದು ಅವರಿಗೆ ಯಾಕೆ ಟಿಕೆಟ್ ಕೊಡಿಸಿದ್ದು ಯಾಕೆ? ಎಂದು ಈಶ್ವರಪ್ಪ ಪ್ರಶ್ನಿಸಿದ್ದರು.

ನಾನು 40 ವರ್ಷಗಳಿಂದ ಈ ಪಕ್ಷಕ್ಕೆ ಕೆಲಸ ಮಾಡಿದ್ದೇನೆ. ನನಗೆ ಮಾತ್ರವಲ್ಲದೆ, ಪ್ರತಾಪ್ ಸಿಂಹ, ಸಿ.ಟಿ ರವಿ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡರಂತಹ ಪಕ್ಷದ ನಾಯಕರಿಗೆ ಅನ್ಯಾಯವಾಗಿದೆ. ಬಿಎಸ್‌ವೈ ಪಕ್ಷದ ಕತ್ತು ಹಿಸುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಲೋಕಸಭೆ ಚುನಾವಣೆಗೆ 72 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿಯಲ್ಲಿ ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಈ ಬಾರಿ 9 ಹಾಲಿ ಸಂಸದರಿಗೆ ಟಿಕೆಟ್ ಕೈ ತಪ್ಪಿದೆ. ಈ ಪೈಕಿ ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್, ಸದಾನಂದಗೌಡ ಸೇರಿದಂತೆ ಪ್ರಮುಖರು ಇದ್ದಾರೆ. ಇನ್ನು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಸಿ.ಟಿ ರವಿ ಮತ್ತು ಹಾವೇರಿ-ಗದಗ ಕ್ಷೇತ್ರದ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ನಿರಾಸೆಯಾಗಿದೆ.

ಗಮನಾರ್ಹವಾಗಿ, ಮೈಸೂರು-ಕೊಡಗು ಕ್ಷೇತ್ರದಲ್ಲಿ ಹಾಲಿ ಸಂಸದ ಪ್ರತಾಪ್ ಸಿಂಹ ಬದಲಿಗೆ ಮೈಸೂರು ರಾಜ ಕುಟುಂಬದ ಉತ್ತರಾಧಿಕಾರಿ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆ ಶೋಭಾ ಕರಂದ್ಲಾಜೆ ಅವರನ್ನು ಬೆಂಗಳೂರು ಉತ್ತರದಿಂದ ಕಣಕ್ಕಿಳಿಸಲಾಗಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌| ಬಿಜೆಪಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿ, ವಿಶೇಷ ತನಿಖೆ ನಡೆಸಿ: ಖರ್ಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...