Homeಮುಖಪುಟ4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

- Advertisement -
- Advertisement -

ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿದೆ. ಆದರೆ ಎಸ್‌ಬಿಐ ಈ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿಲ್ಲ ಎನ್ನವುದು ಆ ಬಳಿಕ ಬಹಿರಂಗವಾಗಿದೆ.

ಆರ್‌ಟಿಐ ಮಾಹಿತಿ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 2018ರಿಂದ 16,518 ಕೋಟಿ ಮೌಲ್ಯದ 28,030 ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಿದೆ, ಆದರೆ ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ಇದ್ದು, ಅದರ ಮೌಲ್ಯ 12,516 ಕೋಟಿ ರೂ.ಆಗಿದೆ. ಇನ್ನುಳಿದವುಗಳ ಬಗ್ಗೆ ಮಾಹಿತಿ ನೀಡಲಾಗಿಲ್ಲ.

4,002 ಕೋಟಿ ಮೌಲ್ಯದ 9,159 ಬಾಂಡ್‌ಗಳ ಮಾಹಿತಿಯನ್ನು ಏಕೆ ಬಹಿರಂಗಪಡಿಸಿಲ್ಲ?

ಈ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಲೆಕ್ಕಾಚಾರದಲ್ಲಿ “ಮೇಲ್ವಿಚಾರಣೆ” ಮಾಡಿಡುತ್ತಿದೆ ಎಂದು ಹೇಳಿದೆ. ಉತ್ತರದ ಇನ್ನೊಂದು ಭಾಗವು ಇನ್ನೂ ಸಾರ್ವಜನಿಕಗೊಳಿಸದ “ಸೀಲ್‌ ಮಾಡಿದ ಕವರ್” ನಲ್ಲಿದೆ.

ಫೆಬ್ರವರಿ 15ರಂದು, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿತ್ತು. ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ಬಾಂಡ್‌ಗಳಿಗೆ ಸಂಬಂಧಿಸಿದ ವಿವರವಾದ ಮಾಹಿತಿಯನ್ನು ಬಹಿರಂಗಪಡಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸುಪ್ರೀಂಕೋರ್ಟ್‌ ನಿರ್ದೇಶಿಸಿತ್ತು.

ಮಾರ್ಚ್ 1, 2018ರಿಂದ, ಬ್ಯಾಂಕ್ 30 ಹಂತಗಳಲ್ಲಿ ಬಾಂಡ್‌ಗಳನ್ನು ಮಾರಾಟ ಮಾಡಿದೆ. ಆದರೆ ಮಾರ್ಚ್ 4 ರಂದು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲು ಅವಧಿ ವಿಸ್ತರಣೆಯನ್ನು ಕೋರಿ ನ್ಯಾಯಾಲಯದ ಮುಂದೆ ಸಲ್ಲಿಸಿದ ಮನವಿಯಲ್ಲಿ,  ಏಪ್ರಿಲ್ 2019ರಿಂದ 22 ಹಂತಗಳಲ್ಲಿ ಮಾರಾಟವಾದ ಬಾಂಡ್‌ಗಳನ್ನು ಮಾತ್ರ ಲೆಕ್ಕ ಹೇಳಿದೆ. ಅದರಲ್ಲಿ ಏಪ್ರಿಲ್ 12, 2019 ರಿಂದ ಫೆಬ್ರವರಿ 15, 2024ರ ನಡುವೆ ವಿವಿಧ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಲು ಇಪ್ಪತ್ತೆರಡು ಸಾವಿರದ ಇನ್ನೂರ ಹದಿನೇಳು (22,217) ಚುನಾವಣಾ ಬಾಂಡ್‌ಗಳನ್ನು ಬಳಸಲಾಗಿದೆ ಎಂದು ಬ್ಯಾಂಕ್‌ ಹೇಳಿದೆ.

ಮಾರ್ಚ್ 12ರಂದು ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಏಪ್ರಿಲ್ 12, 2019 ಮತ್ತು ಫೆಬ್ರವರಿ 15, 2024 ರ ನಡುವೆ ವಾಸ್ತವವಾಗಿ ಕೇವಲ 18,871 ಬಾಂಡ್‌ಗಳನ್ನು ಮಾರಾಟ ಮಾಡಿದೆ ಎಂದು ಬ್ಯಾಂಕ್ ಹೇಳಿಕೊಂಡಿದೆ. ಉಳಿದ 3,346 ಬಾಂಡ್‌ಗಳನ್ನು ಏಪ್ರಿಲ್ 1, 2019 ರಿಂದ ಏಪ್ರಿಲ್ 11, 2019ರ ನಡುವೆ  ಮಾರಾಟ ಮಾಡಲಾಗಿದೆ.

3,346 ಬಾಂಡ್‌ಗಳ ಬಗ್ಗೆ ಮಾಹಿತಿ ಏಕೆ ಬಿಡುಗಡೆ ಮಾಡಲಿಲ್ಲ?

ಅಫಿಡವಿಟ್‌ನಲ್ಲಿ, ಸುಪ್ರೀಂಕೋರ್ಟ್‌ನ ಫೆಬ್ರವರಿ 2024ರ ತೀರ್ಪನ್ನು ಉಲ್ಲೇಖಿಸಲಾಗಿದೆ. ಅದರಲ್ಲಿ  ನ್ಯಾಯಾಲಯ 12 ಏಪ್ರಿಲ್ 2019ರ ಮಧ್ಯಂತರ ಆದೇಶದಿಂದ ಇಲ್ಲಿಯವರೆಗೆ ECIಗೆ ಖರೀದಿಸಿದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಲ್ಲಿಸಲು ಕೇಳಿದೆ.

2019ರ ಏಪ್ರಿಲ್ 12ರಂದು ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೊಯ್, ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರಿದ್ದ ತ್ರಿಸದಸ್ಯ ಪೀಠವು ಮಧ್ಯಂತರ ಆದೇಶವನ್ನು ನೀಡಿದೆ.  ಚುನಾವಣಾ ಬಾಂಡ್‌ಗಳಿಗೆ  ಸಂಬಂಧಿಸಿದ ವಿವರವಾದ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ಮೇ 15ರ ಒಳಗೆ ಸಲ್ಲಿಸಲು  ಬ್ಯಾಂಕ್‌ಗೆ ತಿಳಿಸಲಾಗಿತ್ತು.

ಆದರೆ ಈಗಿನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಈಗಾಗಲೇ ಮುಚ್ಚಿದ ಕವರ್‌ನಲ್ಲಿ ಸಲ್ಲಿಸಿರುವ ಡೇಟಾವನ್ನು ಹೊರತುಪಡಿಸಿ ಇತರ ಡೇಟಾವನ್ನು ಬಿಡುಗಡೆ ಮಾಡುವಂತೆ ಎಸ್‌ಬಿಐಗೆ ನಿರ್ದೇಶಿಸಿದೆ. ಆದರೆ ಎಸ್‌ಬಿಐ ಇದನ್ನು ಏಪ್ರಿಲ್ 12, 2019ರಿಂದ ಫೆಬ್ರವರಿ 15, 2024ರ ನಡುವೆ ನೀಡಲಾದ ಬಾಂಡ್‌ಗಳ ಮಾಹಿತಿ ನೀಡುವ ಕುರಿತ ನಿರ್ದೇಶನ ಎಂದು ವ್ಯಾಖ್ಯಾನಿಸಿದೆ.

ಮುಚ್ಚಿದ ಲಕೋಟೆಯಲ್ಲಿ ನೀಡಿದ ಡೇಟಾದ ಒಂದು ಭಾಗವು ಸಾರ್ವಜನಿಕಗೊಳಿಸಲಾಗಿದೆ, ಆದರೆ ಉಳಿದವು ಬಹಿರಂಗಗೊಳಿಸಲಾಗಿಲ್ಲ. ಚುನಾವಣಾ ಬಾಂಡ್‌ಗಳ ಸಂಪೂರ್ಣ ಡೇಟಾವನ್ನು ಹಂಚಿಕೊಳ್ಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ಸುಪ್ರೀಂಕೋರ್ಟ್ ನಿನ್ನೆ ತರಾಟೆಗೆ ತೆಗೆದುಕೊಂಡಿತ್ತು. ಚುನಾವಣಾ ಆಯೋಗದ ಅರ್ಜಿಯನ್ನು ಆಲಿಸಿದ ಸುಪ್ರೀಂಕೋರ್ಟ್, ಎಸ್‌ಬಿಐ ನೀಡಿರುವ ಅಂಕಿ ಅಂಶಗಳು ಅಪೂರ್ಣ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠ, ಎಸ್‌ಬಿಐ ಈಗಾಗಲೇ ಹಂಚಿಕೊಂಡಿರುವ ವಿವರಗಳ ಜೊತೆಗೆ ಚುನಾವಣಾ ಬಾಂಡ್ ಸಂಖ್ಯೆಯನ್ನು ಬಹಿರಂಗಪಡಿಸುವಂತೆ ಸೂಚಿಸಿತ್ತು.

ಇದನ್ನು ಓದಿ: ಬಿಜೆಪಿ ವಿರುದ್ಧ ಈಶ್ವರಪ್ಪ ಬಂಡಾಯ: ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...