Homeಮುಖಪುಟಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

ಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

- Advertisement -
- Advertisement -

2017-18ರಲ್ಲಿ ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದಾಗಿನಿಂದ, ಬಿಜೆಪಿಯು ಚುನಾವಣಾ ಬಾಂಡ್‌ಗಳ ಮೂಲಕ ಒಟ್ಟು ನಿಧಿಯ ಸುಮಾರು 50% ಸ್ವೀಕರಿಸಿದ್ದು, ಅದು ಬರೊಬ್ಬರಿ 7,700ಕೋಟಿ ರೂ. ಆಗಿದೆ ಎಂದು ಎಡಿಆರ್‌ ವರದಿಯು ಬಹಿರಂಗಪಡಿಸಿದೆ.

ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್‌(ಎಡಿಆರ್‌) ಮಾಹಿತಿ ಪ್ರಕಾರ, 2017-18 ಮತ್ತು 2018-19ರ ಎರಡು ವರ್ಷಗಳಲ್ಲಿ ಬಿಜೆಪಿ ಕ್ರಮವಾಗಿ 1,450.9 ಕೋಟಿ ಮತ್ತು 210 ಕೋಟಿ ರೂಪಾಯಿಗಳನ್ನು ದೇಣಿಗೆ ಪಡೆದಿದೆ ಮತ್ತು ಏಪ್ರಿಲ್ 12, 2019 ರಿಂದ ಜನವರಿ 24, 2024 ರಲ್ಲಿ 6,060.5 ಕೋಟಿ ರೂ.ಮೌಲ್ಯದ  ಬಾಂಡ್‌ ಪಡೆದಿದೆ. ಇದರ ಒಟ್ಟು ಮೌಲ್ಯ 7,721.4 ಕೋಟಿ ರೂ.ಆಗಿದ್ದು, ಇದು ಇಲ್ಲಿಯವರೆಗಿನ ಒಟ್ಟು ಮೊತ್ತ ಅಂದರೆ 15,529 ಕೋಟಿ ಸುಮಾರು 50%ರಷ್ಟಾಗಿರುತ್ತದೆ.

ಕಾಂಗ್ರೆಸ್ ಎರಡು ವರ್ಷಗಳಲ್ಲಿ 383.3 ಕೋಟಿ ಮತ್ತು 5 ಕೋಟಿ ಪಡೆದಿದೆ ಮತ್ತು ಒಟ್ಟು ಇಲ್ಲಿಯವರೆಗೆ 1,810 ಕೋಟಿ ರೂ.ಚುನಾವಣಾ ಬಾಂಡ್‌ ಕಾಂಗ್ರೆಸ್‌ ಪಡೆದುಕೊಂಡಿದೆ. ಎರಡು ವರ್ಷಗಳಲ್ಲಿ ಟಿಎಂಸಿ 97.3 ಕೋಟಿ ದೇಣಿಗೆಯನ್ನು ಮೊದಲು ಪಡೆದಿದ್ದು, ಪಕ್ಷ ಒಟ್ಟು 1706.8 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ಎಸ್ ಬಿಐ ನೀಡಿರುವ ಅಂಕಿ ಅಂಶಗಳಿಂದ ತಿಳಿದು ಬರುತ್ತದೆ.

2018-19ರಲ್ಲಿ ಬಿಜೆಡಿ 213.5 ಕೋಟಿ ರೂಪಾಯಿ ದೇಣಿಗೆ ಪಡೆದಿದ್ದು, 2017-18ರಲ್ಲಿ ಯಾವುದೇ ದೇಣಿಗೆ ಸ್ವೀಕರಿಸಿಲ್ಲ. ಗುರುವಾರದ ಅಂಕಿ ಅಂಶ ಬಹಿರಂಗಗೊಂಡಾಗ ಬಿಜೆಡಿ ಸಂಗ್ರಹಿಸಿದ ಒಟ್ಟು ದೇಣಿಗೆ ಮೊತ್ತ 989 ಕೋಟಿ ಎನ್ನುವುದು ತಿಳಿದು ಬಂದಿದೆ. 2019ರ ಏಪ್ರಿಲ್ 1ರಿಂದ 2019ರ ಏಪ್ರಿಲ್ 11ರವರೆಗಿನ ಅಂಕಿ ಅಂಶಗಳು ಇದರಲ್ಲಿ ಸೇರಿಲ್ಲ. ಈ ಅವಧಿಯ ಕೇವಲ 11 ದಿನಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ನಿರತವಾಗಿದ್ದು ದೊಡ್ಡ ಪ್ರಮಾಣದ ನಗದು ಹರಿದಿರುವ ಸಾಧ್ಯತೆ ಇದೆ.

2017ರಲ್ಲಿ ಚುನಾವಣಾ ಬಾಂಡ್‌ ಪ್ರಾರಂಭವಾದ ದಿನಗಳಿಂದ ಈ ವರ್ಷದ ಆರಂಭದಲ್ಲಿ ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ನಿಷೇಧಿಸುವವರೆಗೆ ಯಾವ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಎಷ್ಟು ಹಣವನ್ನು ಪಡೆದಿದೆ ಎಂಬ ಸಂಪೂರ್ಣ ವಿವರಗಳು ಲಭ್ಯವಾಗಿಲ್ಲ. ಈ ಬಗ್ಗೆ ಎಸ್‌ಬಿಐ ಸಂಪೂರ್ಣ ಮಾಹಿತಿ ನೀಡಿದರೆ ಇದರ ಒಟ್ಟು ಮೊತ್ತ ಬಹಿರಂಗವಾಗಲಿದೆ.

ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿತ್ತು. ಈ ಕುರಿತ ಮಾಹಿತಿ ನಿನ್ನೆ ಬಿಡುಗಡೆಯಾಗಿದ್ದು, ರಾಜಕೀಯ ಪಕ್ಷಗಳಿಗೆ ಚುನಾವಣಾ ಬಾಂಡ್‌ ಮೂಲಕ ಹರಿದು ಬಂದ ಮೊತ್ತದ ಮಾಹಿತಿ ಲಭ್ಯವಾಗಿದೆ. ಆದರೆ ಎಸ್‌ಬಿಐ  ಈ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ನೀಡಿಲ್ಲ ಎನ್ನುವುದು ಆ ಬಳಿಕ ಬಹಿರಂಗವಾಗಿದೆ.

ಆರ್‌ಟಿಐ ಮಾಹಿತಿ ಪ್ರಕಾರ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 2018ರಿಂದ 16,518 ಕೋಟಿ ಮೌಲ್ಯದ 28,030 ಚುನಾವಣಾ ಬಾಂಡ್‌ಗಳನ್ನು ಮಾರಾಟ ಮಾಡಿದೆ, ಆದರೆ ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ಇದ್ದು, ಅದರ ಮೌಲ್ಯ 12,516 ಕೋಟಿ ರೂ.ಆಗಿದೆ. ಇನ್ನುಳಿದವುಗಳ ಬಗ್ಗೆ ಮಾಹಿತಿ ನೀಡಿಲ್ಲ ಎಂದು ತಿಳಿದು ಬಂದಿದೆ.

ಇದನ್ನು ಓದಿ: 4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...