HomeಮುಖಪುಟIT ದಾಳಿ ಬೆನ್ನಲ್ಲಿ 55 ಕೋಟಿ ಮೌಲ್ಯದ ಬಾಂಡ್‌ ಖರೀದಿಸಿದ್ದ ನವಯುಗ ಕಂಪೆನಿ

IT ದಾಳಿ ಬೆನ್ನಲ್ಲಿ 55 ಕೋಟಿ ಮೌಲ್ಯದ ಬಾಂಡ್‌ ಖರೀದಿಸಿದ್ದ ನವಯುಗ ಕಂಪೆನಿ

- Advertisement -
- Advertisement -

ಚುನಾವಣಾ ಆಯೋಗಕ್ಕೆ ಎಸ್‌ಬಿಐ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ಬಿಡುಗಡೆ ಮಾಡಿದೆ. ಈ ಮಾಹಿತಿ ಪ್ರಕಾರ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದ 6 ತಿಂಗಳ ನಂತರ 30 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಕಳೆದ ವರ್ಷ ನವೆಂಬರ್‌ನಲ್ಲಿ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಸುದ್ದಿಯಲ್ಲಿತ್ತು.  ಉತ್ತರಾಖಂಡದ ಸಿಲ್ಕ್ಯಾರಾ-ಬರ್ಕೋಟ್ ಸುರಂಗದೊಳಗೆ 41 ಕಾರ್ಮಿಕರು 17 ದಿನಗಳ ಕಾಲ ಸಿಕ್ಕಿಬಿದ್ದಿದ್ದರು. ಈ ಸುರಂಗದ ಕಾಮಗಾರಿಯನ್ನು ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ವಹಿಸಿಕೊಂಡಿತ್ತು.

ಒಟ್ಟಾರೆಯಾಗಿ, ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ ಮೂರು ವರ್ಷಗಳ ಅವಧಿಯಲ್ಲಿ 55 ಕೋಟಿ ರೂ.ವರೆಗಿನ ಬಾಂಡ್‌ಗಳನ್ನು ಖರೀದಿಸಿದೆ ಎಂದು ಮಾರ್ಚ್ 14ರಂದು ಭಾರತೀಯ ಚುನಾವಣಾ ಆಯೋಗವು ಬಿಡುಗಡೆ ಮಾಡಿದ ದಾಖಲೆಗಳಲ್ಲಿ ಬಹಿರಂಗವಾಗಿದೆ. ನವಯುಗ ಇಂಜಿನಿಯರಿಂಗ್ ಕಂಪೆನಿ ಲಿಮಿಟೆಡ್ ವಿಶಾಖಪಟ್ಟಣಂನಲ್ಲಿ ಸ್ಥಾಪನೆಯಾಗಿದ್ದು, ಹೈದರಾಬಾದ್‌ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿದೆ. ನವಯುಗವು ಐಟಿ ಇಲಾಖೆ ತನ್ನ ಕಚೇರಿಗಳ ಮೇಲೆ ದಾಳಿ ನಡೆಸಿದ ಆರು ತಿಂಗಳ ನಂತರ, ಏಪ್ರಿಲ್ 18, 2019ರಂದು ತಲಾ ರೂ 1 ಕೋಟಿ ಮುಖಬೆಲೆಯ 30 ಬಾಂಡ್‌ಗಳನ್ನು ಖರೀದಿಸಿದೆ.

ತೆರಿಗೆ ಉಲ್ಲಂಘನೆ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ 2018ರ ಅಕ್ಟೋಬರ್‌ನಲ್ಲಿ ಹೈದರಾಬಾದ್ ಮತ್ತು ವಿಶಾಖಪಟ್ಟಣಂನಲ್ಲಿರುವ ನವಯುಗ ಕಚೇರಿಗಳ ಮೇಲೆ ಐಟಿ ಇಲಾಖೆ ದಾಳಿ ನಡೆಸಿತ್ತು. 2012ರಲ್ಲೂ ಕಂಪನಿ ಮೇಲೆ ದಾಳಿ ನಡೆಸಲಾಗಿತ್ತು. ಜುಲೈ 2018ರಲ್ಲಿ ‘ಕಂಪನಿಗಳ ರಿಜಿಸ್ಟ್ರಾರ್ ಅಧಿಕಾರಿಗಳು’ ಹೈದರಾಬಾದ್‌ನ ನವಯುಗದ ಕಚೇರಿಯಲ್ಲಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಸುಮಾರು 47 ಸಂಸ್ಥೆಗಳು ಒಂದೇ ವಿಳಾಸದಲ್ಲಿ ನೋಂದಾಯಿಸಲ್ಪಟ್ಟಿರುವುದು ಬಯಲಾಗಿತ್ತು.

ನವಯುಗ ಅಕ್ಟೋಬರ್ 10, 2022ರಂದು ತಲಾ 1 ಕೋಟಿ ಮೌಲ್ಯದ 25 ಬಾಂಡ್‌ಗಳನ್ನು ಖರೀದಿಸಿದೆ. ತೆಲಂಗಾಣದ ಕಾಳೇಶ್ವರಂ ಲಿಫ್ಟ್ ನೀರಾವರಿ ಯೋಜನೆ ಮತ್ತು ಪೋಲಾವರಂ ಯೋಜನೆಯಲ್ಲಿ ಬ್ಯಾರೇಜ್ ನಿರ್ಮಾಣ ಸೇರಿದಂತೆ ದೇಶದಾದ್ಯಂತ ಕಂಪನಿಯು ಹಲವು ಸರ್ಕಾರಿ ಗುತ್ತಿಗೆಗಳನ್ನು ಪಡೆದುಕೊಂಡಿದೆ. ಸೆಪ್ಟೆಂಬರ್ 2019ರಲ್ಲಿ ಜಗನ್ ಮೋಹನ್ ರೆಡ್ಡಿ ಸರ್ಕಾರವು ನವಯುಗಕ್ಕೆ ನೀಡಿದ್ದ 3,200 ಕೋಟಿ ರೂಪಾಯಿಗಳ ಪೋಲವರಂ ಗುತ್ತಿಗೆಯನ್ನು ರದ್ದುಗೊಳಿಸಿದೆ. ನವಯುಗವು ಅಸ್ಸಾಂನಲ್ಲಿ ಬ್ರಹ್ಮಪುತ್ರಕ್ಕೆ ಅಡ್ಡಲಾಗಿ ಧೋಲಾ-ಸಾಡಿಯಾ ಸೇತುವೆಯನ್ನು ನಿರ್ಮಿಸುತ್ತಿದೆ, ಇದು ಭಾರತದ ಅತಿ ಉದ್ದದ ನದಿ ಸೇತುವೆ ಎಂದು ಹೇಳಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೇ 2017ರಲ್ಲಿ ಸೇತುವೆಯನ್ನು ಉದ್ಘಾಟಿಸಿದ್ದರು.

ಚುನಾವಣಾ ಬಾಂಡ್‌ಗಳ ಕುರಿತ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳುತ್ತಿದ್ದಂತೆ ಮಹತ್ವದ ವಿಷಯಗಳು ಬಹಿರಂಗಗೊಂಡಿತ್ತು. ಕೋಟ್ಯಾಂತರ ರೂಪಾಯಿಯ ಬಾಂಡ್‌ಗಳನ್ನು ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದ ಕಂಪೆನಿಗಳು, ಅದಕ್ಕೆ ಪ್ರತಿಯಾಗಿ ಲಾಭ ಪಡೆದಿರುವುದು ಬಯಲಾಗಿತ್ತು.

ಇದನ್ನು ಓದಿ: 4,002 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಮಾಹಿತಿ ಇನ್ನೂ ಬಹಿರಂಗಗೊಂಡಿಲ್ಲ: ಯಾಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...