Homeಮುಖಪುಟಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಅಲ್ ಅಕ್ಸಾ ಪ್ರವೇಶಕ್ಕೆ ಇಸ್ರೇಲ್ ಪಡೆಗಳಿಂದ ತಡೆ ಆರೋಪ, 30 ಸಾವಿರ ದಾಟಿದ ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ

- Advertisement -
- Advertisement -

ಅಮಾಯಕ ಪ್ಯಾಲೆಸ್ತೀನ್ ನಾಗರಿಕರ ಮೇಲಿನ ಇಸ್ರೇಲ್ ಆಕ್ರಮಣ ಮುಂದುವರೆದಿದೆ. ಕಳೆದ ಗುರುವಾರ ಅಗತ್ಯ ಸಾಮಗ್ರಿಗಳಿಗಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 21 ಜನರು ಮೃತಪಟ್ಟಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಬುಧವಾರ ದಾಳಿ ನಡೆಸಿದ ಅದೇ ಜಾಗದಲ್ಲಿ ಗುರುವಾರ ಮತ್ತೆ ದಾಳಿ ನಡೆಸಲಾಗಿದೆ. ಗಾಝಾದ ಆರೋಗ್ಯ ಸಚಿವಾಲಯವು ಗುರುವಾರದ ದಾಳಿಯನ್ನು “ಹೊಸ, ಪೂರ್ವಯೋಜಿತ ಹತ್ಯಾಕಾಂಡ” ಎಂದು ಬಣ್ಣಿಸಿದ್ದು, ಘಟನೆಯಲ್ಲಿ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಬುಧವಾರ ಗಾಝಾದ ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿದ್ದವು. ಇದರಲ್ಲಿ ಆರು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುವ ಜನರ ಮೇಲೆ ಇಸ್ರೇಲಿ ಪಡೆಗಳು ನಿರಂತರವಾಗಿ ದಾಳಿ ನಡೆಸುತ್ತಿವೆ. ಇದುವರೆಗೆ 400 ಜನರನ್ನು ಇಸ್ರೇಲಿ ಸೈನಿಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಆಹಾರಕ್ಕಾಗಿ ಕಾಯುತ್ತಿರುವ ಜನರನ್ನು ಗುರಿಯಾಗಿಸಿ ದಾಳಿ ಮಾಡಲು ಇಸ್ರೇಲಿ ಪಡೆಗಳು ಹೆಲಿಕಾಪ್ಟರ್‌, ಟ್ಯಾಂಕ್‌ ಮತ್ತು ಡ್ರೋನ್‌ಗಳನ್ನು ಬಳಸುತ್ತಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳು ಆಹಾರಕ್ಕಾಗಿ ಕಾಯುತ್ತಿರುವ ಜನರ ಮೇಲೆ ದಾಳಿ ಮಾಡಿರುವ ಆರೋಪವನ್ನು ಅಲ್ಲಗಳೆದಿವೆ. ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಸಾವಿಗೆ ಕಾರಣ ಎಂದು ಹೇಳಿದೆ.

ಗುರುವಾರ ಗಾಝಾ ನಗರದಲ್ಲಿ ನಾಗರಿಕರು ಆಹಾರಕ್ಕಾಗಿ ಕಾಯುತ್ತಿರುವಾಗ ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಗುಂಪಿನ ಮೇಲೆ ದಾಳಿ ಮಾಡಿ ಟ್ರಕ್‌ಗಳಿಂದ ಆಹಾರ ಲೂಟಿ ಮಾಡಿದ್ದಾರೆ ಎಂದು ಇಸ್ರೇಲ್ ಆರೋಪಿಸಿದೆ.

ಆಹಾರ ಟ್ರಕ್‌ಗಳು ಬಂದಾಗ ಜನರು ಅವುಗಳ ಹಿಂದೆ ಓಡುವುದು, ನೂಕು ನುಗ್ಗಲು ನಡೆಸುವುದರಿಂದ ಸಾವುಗಳು ಸಂಭವಿಸುತ್ತಿವೆ. ನಾವು ಹೆಲಿಕಾಫ್ಟರ್, ಟ್ಯಾಂಕರ್, ಡ್ರೋನ್ ಬಳಸಿ ದಾಳಿ ನಡೆಸಿಲ್ಲ ಎಂದು ಹೇಳಿದೆ.

ಅಲ್‌ ಅಕ್ಸಾ ಪ್ರವೇಶಕ್ಕೆ ನಿರಾಕರಣೆ:

ಇಸ್ರೇಲ್‌ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಜೆರುಸಲೇಂನ ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ ನಿರ್ವಹಿಸಲು ಪ್ಯಾಲೆಸ್ತೀನ್ ಮುಸ್ಲಿಮರಿಗೆ ಇಸ್ರೇಲ್‌ ಸೈನಿಕರು ತಡೆಯೊಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮುಸ್ಲಿಮರ ಪವಿತ್ರ ತಿಂಗಳು ರಂಝಾನ್ ಹಿನ್ನೆಲೆ ಸಾವಿರಾರು ಪ್ಯಾಲೆಸ್ತೀನಿರು ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ಗೆ ತೆರಳಿದ್ದರು. ಈ ವೇಳೆ ಇಸ್ರೇಲಿ ಪಡೆ ಅವರನ್ನು ತಡೆದಿದೆ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳ ನಿರ್ಬಂಧದ ಹೊರತಾಗಿಯೂ ಮುಸ್ಲಿಮರ ಮೂರನೇ ಅತೀ ಪವಿತ್ರ ಮಸೀದಿಯಾದ ಅಲ್‌ ಅಕ್ಸಾದಲ್ಲಿ ರಂಝಾನಿನ ಮೊದಲ ಶುಕ್ರವಾರ ಬರೋಬ್ಬರಿ 80 ಸಾವಿರ ಜನರು ಜುಮಾ ನಮಾಝ್ ನಿರ್ವಹಿಸಿದ್ದಾರೆ ಎಂದು ಮಸೀದಿಯನ್ನು ನಿಯಂತ್ರಿಸುವ ಇಸ್ಲಾಮಿಕ್ ವಕ್ಫ್ ಸಂಸ್ಥೆಯನ್ನು ಉಲ್ಲೇಖಿಸಿ ಕುದ್ಸ್ ನ್ಯೂಸ್ ನೆಟ್‌ವರ್ಕ್ ವರದಿ ಮಾಡಿದೆ.

30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವು:

ಅಕ್ಟೋಬರ್ 7 ರಂದು ಪ್ರಾರಂಭಗೊಂಡ ಇಸ್ರೇಲ್‌-ಹಮಾಸ್ ನಡುವಿನ ಸಂಘರ್ಷದಲ್ಲಿ ಇದುವರೆಗೆ 30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. 72 ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Photo Courtesy : Al Jazeera

ಇದನ್ನೂ ಓದಿ : ಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...