Homeಮುಖಪುಟಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಅಲ್ ಅಕ್ಸಾ ಪ್ರವೇಶಕ್ಕೆ ಇಸ್ರೇಲ್ ಪಡೆಗಳಿಂದ ತಡೆ ಆರೋಪ, 30 ಸಾವಿರ ದಾಟಿದ ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ

- Advertisement -
- Advertisement -

ಅಮಾಯಕ ಪ್ಯಾಲೆಸ್ತೀನ್ ನಾಗರಿಕರ ಮೇಲಿನ ಇಸ್ರೇಲ್ ಆಕ್ರಮಣ ಮುಂದುವರೆದಿದೆ. ಕಳೆದ ಗುರುವಾರ ಅಗತ್ಯ ಸಾಮಗ್ರಿಗಳಿಗಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 21 ಜನರು ಮೃತಪಟ್ಟಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಬುಧವಾರ ದಾಳಿ ನಡೆಸಿದ ಅದೇ ಜಾಗದಲ್ಲಿ ಗುರುವಾರ ಮತ್ತೆ ದಾಳಿ ನಡೆಸಲಾಗಿದೆ. ಗಾಝಾದ ಆರೋಗ್ಯ ಸಚಿವಾಲಯವು ಗುರುವಾರದ ದಾಳಿಯನ್ನು “ಹೊಸ, ಪೂರ್ವಯೋಜಿತ ಹತ್ಯಾಕಾಂಡ” ಎಂದು ಬಣ್ಣಿಸಿದ್ದು, ಘಟನೆಯಲ್ಲಿ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಬುಧವಾರ ಗಾಝಾದ ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿದ್ದವು. ಇದರಲ್ಲಿ ಆರು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುವ ಜನರ ಮೇಲೆ ಇಸ್ರೇಲಿ ಪಡೆಗಳು ನಿರಂತರವಾಗಿ ದಾಳಿ ನಡೆಸುತ್ತಿವೆ. ಇದುವರೆಗೆ 400 ಜನರನ್ನು ಇಸ್ರೇಲಿ ಸೈನಿಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಆಹಾರಕ್ಕಾಗಿ ಕಾಯುತ್ತಿರುವ ಜನರನ್ನು ಗುರಿಯಾಗಿಸಿ ದಾಳಿ ಮಾಡಲು ಇಸ್ರೇಲಿ ಪಡೆಗಳು ಹೆಲಿಕಾಪ್ಟರ್‌, ಟ್ಯಾಂಕ್‌ ಮತ್ತು ಡ್ರೋನ್‌ಗಳನ್ನು ಬಳಸುತ್ತಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳು ಆಹಾರಕ್ಕಾಗಿ ಕಾಯುತ್ತಿರುವ ಜನರ ಮೇಲೆ ದಾಳಿ ಮಾಡಿರುವ ಆರೋಪವನ್ನು ಅಲ್ಲಗಳೆದಿವೆ. ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಸಾವಿಗೆ ಕಾರಣ ಎಂದು ಹೇಳಿದೆ.

ಗುರುವಾರ ಗಾಝಾ ನಗರದಲ್ಲಿ ನಾಗರಿಕರು ಆಹಾರಕ್ಕಾಗಿ ಕಾಯುತ್ತಿರುವಾಗ ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಗುಂಪಿನ ಮೇಲೆ ದಾಳಿ ಮಾಡಿ ಟ್ರಕ್‌ಗಳಿಂದ ಆಹಾರ ಲೂಟಿ ಮಾಡಿದ್ದಾರೆ ಎಂದು ಇಸ್ರೇಲ್ ಆರೋಪಿಸಿದೆ.

ಆಹಾರ ಟ್ರಕ್‌ಗಳು ಬಂದಾಗ ಜನರು ಅವುಗಳ ಹಿಂದೆ ಓಡುವುದು, ನೂಕು ನುಗ್ಗಲು ನಡೆಸುವುದರಿಂದ ಸಾವುಗಳು ಸಂಭವಿಸುತ್ತಿವೆ. ನಾವು ಹೆಲಿಕಾಫ್ಟರ್, ಟ್ಯಾಂಕರ್, ಡ್ರೋನ್ ಬಳಸಿ ದಾಳಿ ನಡೆಸಿಲ್ಲ ಎಂದು ಹೇಳಿದೆ.

ಅಲ್‌ ಅಕ್ಸಾ ಪ್ರವೇಶಕ್ಕೆ ನಿರಾಕರಣೆ:

ಇಸ್ರೇಲ್‌ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಜೆರುಸಲೇಂನ ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ ನಿರ್ವಹಿಸಲು ಪ್ಯಾಲೆಸ್ತೀನ್ ಮುಸ್ಲಿಮರಿಗೆ ಇಸ್ರೇಲ್‌ ಸೈನಿಕರು ತಡೆಯೊಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮುಸ್ಲಿಮರ ಪವಿತ್ರ ತಿಂಗಳು ರಂಝಾನ್ ಹಿನ್ನೆಲೆ ಸಾವಿರಾರು ಪ್ಯಾಲೆಸ್ತೀನಿರು ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ಗೆ ತೆರಳಿದ್ದರು. ಈ ವೇಳೆ ಇಸ್ರೇಲಿ ಪಡೆ ಅವರನ್ನು ತಡೆದಿದೆ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳ ನಿರ್ಬಂಧದ ಹೊರತಾಗಿಯೂ ಮುಸ್ಲಿಮರ ಮೂರನೇ ಅತೀ ಪವಿತ್ರ ಮಸೀದಿಯಾದ ಅಲ್‌ ಅಕ್ಸಾದಲ್ಲಿ ರಂಝಾನಿನ ಮೊದಲ ಶುಕ್ರವಾರ ಬರೋಬ್ಬರಿ 80 ಸಾವಿರ ಜನರು ಜುಮಾ ನಮಾಝ್ ನಿರ್ವಹಿಸಿದ್ದಾರೆ ಎಂದು ಮಸೀದಿಯನ್ನು ನಿಯಂತ್ರಿಸುವ ಇಸ್ಲಾಮಿಕ್ ವಕ್ಫ್ ಸಂಸ್ಥೆಯನ್ನು ಉಲ್ಲೇಖಿಸಿ ಕುದ್ಸ್ ನ್ಯೂಸ್ ನೆಟ್‌ವರ್ಕ್ ವರದಿ ಮಾಡಿದೆ.

30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವು:

ಅಕ್ಟೋಬರ್ 7 ರಂದು ಪ್ರಾರಂಭಗೊಂಡ ಇಸ್ರೇಲ್‌-ಹಮಾಸ್ ನಡುವಿನ ಸಂಘರ್ಷದಲ್ಲಿ ಇದುವರೆಗೆ 30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. 72 ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Photo Courtesy : Al Jazeera

ಇದನ್ನೂ ಓದಿ : ಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...