Homeಮುಖಪುಟಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ಅಲ್ ಅಕ್ಸಾ ಪ್ರವೇಶಕ್ಕೆ ಇಸ್ರೇಲ್ ಪಡೆಗಳಿಂದ ತಡೆ ಆರೋಪ, 30 ಸಾವಿರ ದಾಟಿದ ಪ್ಯಾಲೆಸ್ತೀನಿಯರ ಸಾವಿನ ಸಂಖ್ಯೆ

- Advertisement -
- Advertisement -

ಅಮಾಯಕ ಪ್ಯಾಲೆಸ್ತೀನ್ ನಾಗರಿಕರ ಮೇಲಿನ ಇಸ್ರೇಲ್ ಆಕ್ರಮಣ ಮುಂದುವರೆದಿದೆ. ಕಳೆದ ಗುರುವಾರ ಅಗತ್ಯ ಸಾಮಗ್ರಿಗಳಿಗಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 21 ಜನರು ಮೃತಪಟ್ಟಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ಬುಧವಾರ ದಾಳಿ ನಡೆಸಿದ ಅದೇ ಜಾಗದಲ್ಲಿ ಗುರುವಾರ ಮತ್ತೆ ದಾಳಿ ನಡೆಸಲಾಗಿದೆ. ಗಾಝಾದ ಆರೋಗ್ಯ ಸಚಿವಾಲಯವು ಗುರುವಾರದ ದಾಳಿಯನ್ನು “ಹೊಸ, ಪೂರ್ವಯೋಜಿತ ಹತ್ಯಾಕಾಂಡ” ಎಂದು ಬಣ್ಣಿಸಿದ್ದು, ಘಟನೆಯಲ್ಲಿ 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ಬುಧವಾರ ಗಾಝಾದ ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುತ್ತಿದ್ದ ಜನರ ಗುಂಪಿನ ಮೇಲೆ ಇಸ್ರೇಲಿ ಪಡೆಗಳು ದಾಳಿ ನಡೆಸಿದ್ದವು. ಇದರಲ್ಲಿ ಆರು ಪ್ಯಾಲೆಸ್ತೀನಿಯರು ಮೃತಪಟ್ಟಿದ್ದಾರೆ. ಕುವೈತ್ ರೌಂಡ್‌ಬೌಟ್‌ನಲ್ಲಿ ಆಹಾರಕ್ಕಾಗಿ ಕಾಯುವ ಜನರ ಮೇಲೆ ಇಸ್ರೇಲಿ ಪಡೆಗಳು ನಿರಂತರವಾಗಿ ದಾಳಿ ನಡೆಸುತ್ತಿವೆ. ಇದುವರೆಗೆ 400 ಜನರನ್ನು ಇಸ್ರೇಲಿ ಸೈನಿಕರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಆಹಾರಕ್ಕಾಗಿ ಕಾಯುತ್ತಿರುವ ಜನರನ್ನು ಗುರಿಯಾಗಿಸಿ ದಾಳಿ ಮಾಡಲು ಇಸ್ರೇಲಿ ಪಡೆಗಳು ಹೆಲಿಕಾಪ್ಟರ್‌, ಟ್ಯಾಂಕ್‌ ಮತ್ತು ಡ್ರೋನ್‌ಗಳನ್ನು ಬಳಸುತ್ತಿವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳು ಆಹಾರಕ್ಕಾಗಿ ಕಾಯುತ್ತಿರುವ ಜನರ ಮೇಲೆ ದಾಳಿ ಮಾಡಿರುವ ಆರೋಪವನ್ನು ಅಲ್ಲಗಳೆದಿವೆ. ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಸಾವಿಗೆ ಕಾರಣ ಎಂದು ಹೇಳಿದೆ.

ಗುರುವಾರ ಗಾಝಾ ನಗರದಲ್ಲಿ ನಾಗರಿಕರು ಆಹಾರಕ್ಕಾಗಿ ಕಾಯುತ್ತಿರುವಾಗ ಶಸ್ತ್ರ ಸಜ್ಜಿತ ಪ್ಯಾಲೆಸ್ತೀನಿಯರು ಜನರ ಗುಂಪಿನ ಮೇಲೆ ದಾಳಿ ಮಾಡಿ ಟ್ರಕ್‌ಗಳಿಂದ ಆಹಾರ ಲೂಟಿ ಮಾಡಿದ್ದಾರೆ ಎಂದು ಇಸ್ರೇಲ್ ಆರೋಪಿಸಿದೆ.

ಆಹಾರ ಟ್ರಕ್‌ಗಳು ಬಂದಾಗ ಜನರು ಅವುಗಳ ಹಿಂದೆ ಓಡುವುದು, ನೂಕು ನುಗ್ಗಲು ನಡೆಸುವುದರಿಂದ ಸಾವುಗಳು ಸಂಭವಿಸುತ್ತಿವೆ. ನಾವು ಹೆಲಿಕಾಫ್ಟರ್, ಟ್ಯಾಂಕರ್, ಡ್ರೋನ್ ಬಳಸಿ ದಾಳಿ ನಡೆಸಿಲ್ಲ ಎಂದು ಹೇಳಿದೆ.

ಅಲ್‌ ಅಕ್ಸಾ ಪ್ರವೇಶಕ್ಕೆ ನಿರಾಕರಣೆ:

ಇಸ್ರೇಲ್‌ ಆಕ್ರಮಿತ ಪಶ್ಚಿಮ ದಂಡೆಯಲ್ಲಿರುವ ಜೆರುಸಲೇಂನ ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ ನಿರ್ವಹಿಸಲು ಪ್ಯಾಲೆಸ್ತೀನ್ ಮುಸ್ಲಿಮರಿಗೆ ಇಸ್ರೇಲ್‌ ಸೈನಿಕರು ತಡೆಯೊಡ್ಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮುಸ್ಲಿಮರ ಪವಿತ್ರ ತಿಂಗಳು ರಂಝಾನ್ ಹಿನ್ನೆಲೆ ಸಾವಿರಾರು ಪ್ಯಾಲೆಸ್ತೀನಿರು ಅಲ್‌ ಅಕ್ಸಾ ಮಸೀದಿಯಲ್ಲಿ ನಮಾಝ್‌ಗೆ ತೆರಳಿದ್ದರು. ಈ ವೇಳೆ ಇಸ್ರೇಲಿ ಪಡೆ ಅವರನ್ನು ತಡೆದಿದೆ ಎಂದು ಅಲ್‌ ಜಝೀರಾ ವರದಿ ಮಾಡಿದೆ.

ಇಸ್ರೇಲಿ ಪಡೆಗಳ ನಿರ್ಬಂಧದ ಹೊರತಾಗಿಯೂ ಮುಸ್ಲಿಮರ ಮೂರನೇ ಅತೀ ಪವಿತ್ರ ಮಸೀದಿಯಾದ ಅಲ್‌ ಅಕ್ಸಾದಲ್ಲಿ ರಂಝಾನಿನ ಮೊದಲ ಶುಕ್ರವಾರ ಬರೋಬ್ಬರಿ 80 ಸಾವಿರ ಜನರು ಜುಮಾ ನಮಾಝ್ ನಿರ್ವಹಿಸಿದ್ದಾರೆ ಎಂದು ಮಸೀದಿಯನ್ನು ನಿಯಂತ್ರಿಸುವ ಇಸ್ಲಾಮಿಕ್ ವಕ್ಫ್ ಸಂಸ್ಥೆಯನ್ನು ಉಲ್ಲೇಖಿಸಿ ಕುದ್ಸ್ ನ್ಯೂಸ್ ನೆಟ್‌ವರ್ಕ್ ವರದಿ ಮಾಡಿದೆ.

30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವು:

ಅಕ್ಟೋಬರ್ 7 ರಂದು ಪ್ರಾರಂಭಗೊಂಡ ಇಸ್ರೇಲ್‌-ಹಮಾಸ್ ನಡುವಿನ ಸಂಘರ್ಷದಲ್ಲಿ ಇದುವರೆಗೆ 30 ಸಾವಿರಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. 72 ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Photo Courtesy : Al Jazeera

ಇದನ್ನೂ ಓದಿ : ಚುನಾವಣಾ ಬಾಂಡ್‌: ಒಟ್ಟು ನಿಧಿಯ 50% ಸ್ವೀಕರಿಸಿದ್ದು ಬಿಜೆಪಿ: ಅಂಕಿಅಂಶ ಬಯಲು ಮಾಡಿದ ADR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...