Homeಮುಖಪುಟಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

ಭ್ರಷ್ಟಾಚಾರ ಶಂಕೆ: ಅದಾನಿ ಗ್ರೂಪ್‌ ವಿರುದ್ಧ ಯುಎಸ್‌ನಲ್ಲಿ ತನಿಖೆ

- Advertisement -
- Advertisement -

ಅದಾನಿ ಉದ್ಯಮ ಸಮೂಹ ಲಂಚ ನೀಡಿಕೆಯಲ್ಲಿ ತೊಡಗಿಸಿಕೊಂಡಿದೆಯೇ? ಎಂಬ ಬಗ್ಗೆ ತನಿಖೆಯನ್ನು ಮತ್ತಷ್ಟು ವಿಸ್ತೃತಗೊಳಿಸಲು ಅಮೆರಿಕ ನಿರ್ಧರಿಸಿದೆ. ಜೊತೆಗೆ ಕಂಪನಿಯ ಕೋಟ್ಯಧಿಪತಿ ಸಂಸ್ಥಾಪಕರ ನಡತೆ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲೆಯಲ್ಲಿರುವ ಯುಎಸ್‌ನ ಅಟಾರ್ನಿ ಕಛೇರಿ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ವಂಚನೆ ತಡೆ ಘಟಕದ ನೇತೃತ್ವದ ತನಿಖೆ ನಡೆಯುತ್ತಿದೆ.

ಅದಾನಿ ಕಂಪನಿ ಅಥವಾ ಅದರೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಗಳು ವಿದ್ಯುತ್ ಯೋಜನೆಗಳಿಗೆ ಸಂಬಂಧಿಸಿದಂತೆ ತಮ್ಮ ಪರವಾದ ನಿರ್ಧಾರ ಕೈಗೊಳ್ಳಲು ಭಾರತದ ಅಧಿಕಾರಿಗಳಿಗೆ ಲಂಚ ನೀಡುವುದರಲ್ಲಿ ನಿರತರಾಗಿದ್ದಾರೆಯೇ? ಎಂಬ ಬಗ್ಗೆ ಮಾಹಿತಿಗಳನ್ನು ಶೋಧಿಸಲಾಗುತ್ತಿದೆ. ಈ ತನಿಖೆಯು ಭಾರತದ ನವೀಕರಿಸಬಹುದಾದ ಇಂಧನ ಕಂಪನಿ ಅಝೂರ್‌ ಪವರ್ ಗ್ಲೋಬಲ್ ಲಿಮಿಟೆಡ್‌ಗೆ ಸಂಬಂಧಿಸಿದೆ ಎಂದು ವರದಿಗಳು ತಿಳಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಅದಾನಿ ಸಮೂಹ, “ನಮ್ಮ ಅಧ್ಯಕ್ಷರ ವಿರುದ್ಧ ತನಿಖೆ ನಡೆಯುತ್ತಿದೆ ಎಂಬುವುದರ ಬಗ್ಗೆ ನಮಗೆ ಮಾಹಿತಿಯಿಲ್ಲ. ನಮ್ಮದು ಅತ್ಯುನ್ನತ ಗುಣಮಟ್ಟದೊಂದಿಗೆ ಕಾರ್ಯನಿರ್ವಹಿಸುವ ವ್ಯಾಪಾರ ಸಮೂಹವಾಗಿದೆ. ನಾವು ಭಾರತ ಮತ್ತು ಇತರ ದೇಶಗಳಲ್ಲಿ ಭ್ರಷ್ಟಾಚಾರ ವಿರೋಧಿ ಮತ್ತು ಲಂಚ ವಿರೋಧಿ ಕಾನೂನುಗಳನ್ನು ಸಂಪೂರ್ಣವಾಗಿ ಅನುಸರಿಸುವವರಾಗಿದ್ದೇವೆ” ಎಂದಿದೆ.

ಬ್ರೂಕ್ಲಿನ್ ಮತ್ತು ವಾಷಿಂಗ್ಟನ್‌ನಲ್ಲಿರುವ ನ್ಯಾಯಾಂಗ ಇಲಾಖೆಯ ಪ್ರತಿನಿಧಿಗಳು ಅದಾನಿ ಸಮೂಹದ ತನಿಖೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ತನಿಖೆಯಲ್ಲಿ ಹೆಸರು ಕೇಳಿ ಬಂದಿರುವ ಅಝೂರ್ ಪವರ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ತನಿಖೆಯು ಅದಾನಿ ಸಮೂಹದ ವಿರುದ್ದದ ಷೇರು ಬೆಲೆ ದುರ್ಬಳಕೆ ಆರೋಪಗಳ ಕುರಿತ ಹಿಂಡೆನ್‌ಬರ್ಗ್‌ ವರದಿಗೆ ಸಂಬಂಧಿಸಿದೆ. ಈ ಕುರಿತು ಭಾರತದಲ್ಲಿ ತನಿಖೆ ನಡೆಯುತ್ತಿದೆ.

ಹಿಂಡೆನ್‌ಬರ್ಗ್‌ ವರದಿಯಲ್ಲಿ ಉಲ್ಲೇಖಿಸಲಾದ ಆರೋಪಗಳ ಹೊರತಾಗಿಯೂ ಯುಎಸ್ ಅದಾನಿ ಸಮೂಹದ ಜೊತೆ ವ್ಯವಹಾರ ಮುಂದುವರೆಸಿದೆ. ಕಳೆದ ವರ್ಷ, ಯುಎಸ್‌ ಇಂಟರ್‌ನ್ಯಾಶನಲ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಷನ್ ಶ್ರೀಲಂಕಾದ ರಾಜಧಾನಿಯಲ್ಲಿ ಬಂದರು ನಿರ್ಮಾಣಕ್ಕಾಗಿ ಅದಾನಿ ಘಟಕಕ್ಕೆ 553 ಮಿಲಿಯನ್ ಡಾಲರ್ ಹಣಕಾಸಿನ ನೆರವು ಒದಗಿಸಿದೆ. ಈ ಪ್ರದೇಶದಲ್ಲಿ ಚೀನಾದ ಪ್ರಭಾವವನ್ನು ಎದುರಿಸುವ ಗುರಿಯನ್ನು ಯುಎಸ್ ಹೊಂದಿದೆ.

ಅದಾನಿ ವಿರುದ್ಧ ಯುಎಸ್‌ನಲ್ಲಿ ನಡೆಯುತ್ತಿರುವ ತನಿಖೆ ಮುಂದುವರಿದ ಹಂತದಲ್ಲಿದೆ. ನ್ಯಾಯಾಂಗ ಇಲಾಖೆಯು ಅದಾನಿ ಮತ್ತು ಅಝೂರ್ ಕಂಪನಿಗಳಿಗೆ ತಿಳಿಸದೆ ತನಿಖೆ ಮುಂದುವರೆಸಬಹುದು. ನ್ಯಾಯಾಂಗ ಇಲಾಖೆಯು ಅದಾನಿ ವಿರುದ್ದ ಪ್ರಸ್ತುತ ತಪ್ಪು ಆರೋಪ ಹೊರಿಸಿಲ್ಲ. ತನಿಖೆ ನಡೆದರೂ ಎಲ್ಲಾ ಪ್ರಕರಣಗಳಲ್ಲಿ ತಪ್ಪು ಆರೋಪ ಹೊರಿಸುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಬ್ಲೂಮ್‌ಬರ್ಗ್ ವರದಿ ಹೇಳಿದೆ.

ವಿದೇಶಿ ಭ್ರಷ್ಟಾಚಾರ ತಡೆ ಕಾಯ್ದೆ (ಎಫ್‌ಸಿಪಿಎ) ಅಡಿ ಅದಾನಿ ಸಮೂಹದ ವಿರುದ್ದ ಯುಎಸ್‌ನಲ್ಲಿ ತನಿಖೆ ನಡೆಯುತ್ತಿದೆ. ಅದಾನಿ ಸಮೂಹ ಯುಎಸ್‌ನಲ್ಲಿ ವ್ಯವಹಾರ ಹೊಂದಿಲ್ಲ. ಆದರೆ, ಅಮೆರಿಕನ್ ಹೂಡಿಕೆದಾರರನ್ನು ಹೊಂದಿದೆ.

ಇದನ್ನೂ ಓದಿ : ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ತೀನಿಯರ ಮೇಲೆ ಇಸ್ರೇಲ್ ದಾಳಿ: 21 ಜನರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...