Homeಕರ್ನಾಟಕಏಳನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು

ಏಳನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು

- Advertisement -
- Advertisement -

ಸುಧಾಕರ ರಾವ್ ನೇತೃತ್ವದ 7ನೇ ವೇತನ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತನ್ನ ವರದಿಯನ್ನು ಸಲ್ಲಿಸಿದ್ದು, ಮೂಲ ವೇತನದ ಶೇ.27.5ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ.

ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಆಯೋಗದ ಸದಸ್ಯರಾದ ಪಿ.ಬಿ.ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ ಸೇರಿದಂತೆ ಇನ್ನಿತರರು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಾ.ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು.

ವರದಿಯನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವರದಿಯನ್ನು ಪರಿಶೀಲಿಸಿ ಸರಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ವೇತನ ಆಯೋಗದ ಅವಧಿಯನ್ನು 3 ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾ.15ರಂದು ಮುಕ್ತಾಯಗೊಂಡ ಹಿನ್ನೆಲೆ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲ ವೇತನವನ್ನು 17,000ರೂ.ಗಳಿಂದ 27 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದಲ್ಲದೆ ಇನ್ನೂ ಅನೇಕ ಶಿಫಾರಸ್ಸುಗಳಿದ್ದು, ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಅಧ್ಯಯನ ಮಾಡಿದ ಬಳಿಕ ನೀಡುವ ಸಲಹೆಗಳ ಆಧಾರದಲ್ಲಿ ಸರಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ನೇತೃತ್ವದಲ್ಲಿ7ನೇ ವೇತನ ಆಯೋಗವನ್ನು ರಚಿಸಲಾಗಿತ್ತು. ಸುಧಾಕರ್ ರಾವ್ ನೇತೃತ್ವದಲ್ಲಿ 2022ರ ನವೆಂಬರ್ 19ರಂದು ರಾಜ್ಯ ಸರ್ಕಾರ ಆಯೋಗವನ್ನು ರಚಿಸಿ ಆರು ತಿಂಗಳಲ್ಲಿ ವರದಿ ನೀಡುವಂತೆ ಆದೇಶ ನೀಡಿತ್ತು. 2023ರ ಮೇ 15ರಂದು ಮತ್ತೆ ಆರು ತಿಂಗಳ ಅವಧಿಗೆ ಆಯೋಗದ ಅವಧಿಯನ್ನು ವಿಸ್ತರಣೆ ಮಾಡಿತ್ತು. 2023ರ ನವೆಂಬರ್ 6ರಂದು ಆಯೋಗದ ಅವಧಿಯನ್ನು ಮಾರ್ಚ್ 15, 2024ರವರೆಗೆ ವಿಸ್ತರಣೆ ಮಾಡಲಾಗಿತ್ತು.

ಇದನ್ನು ಓದಿ:IT ದಾಳಿ ಬೆನ್ನಲ್ಲಿ 55 ಕೋಟಿ ಮೌಲ್ಯದ ಬಾಂಡ್‌ ಖರೀದಿಸಿದ್ದ ನವಯುಗ ಕಂಪೆನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...