Homeಮುಖಪುಟಮಮತಾ ಬ್ಯಾನರ್ಜಿ ಗಾಯಗೊಂಡಿರುವುದೇಗೆ? ಊಹಾಪೋಹಗಳ ಬೆನ್ನಲ್ಲಿ ಸ್ಪಷ್ಟನೆ ನೀಡಿದ ಟಿಎಂಸಿ

ಮಮತಾ ಬ್ಯಾನರ್ಜಿ ಗಾಯಗೊಂಡಿರುವುದೇಗೆ? ಊಹಾಪೋಹಗಳ ಬೆನ್ನಲ್ಲಿ ಸ್ಪಷ್ಟನೆ ನೀಡಿದ ಟಿಎಂಸಿ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಣೆಗೆ ಗಾಯಗೊಂಡ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ದಿಢೀರ್ ಆಗಿ ಗಾಯಗೊಂಡ ಸ್ಥಿತಿಯಲ್ಲಿ ಕಾಣಿಸಿಕೊಂಡ ದೀದಿಗೆ ಏನು ಆಗಿದ್ದು ಎಂದು ಎಲ್ಲರಲ್ಲೂ ಪ್ರಶ್ನೆ ಮೂಡಿತ್ತು. ಈ ಮಧ್ಯೆ ಮಮತಾ ಬ್ಯಾನರ್ಜಿಯನ್ನು ಯಾರೋ ಹಿಂದಿನಿಂದ ತಳ್ಳಿದ ಕಾರಣ ಬಿದ್ದು ಗಾಯಗೊಂಡಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ತನಿಖೆಗೆ ಬಿಜೆಪಿ ಕೂಡ ಆಗ್ರಹಿಸಿತ್ತು. ಈ ಕುರಿತ ಎಲ್ಲಾ ಊಹಾಪೋಹಗಳಿಗೆ ಇದೀಗ ಟಿಎಂಸಿ ಸ್ಪಷ್ಟನೆಯನ್ನು ನೀಡಿದ್ದು, ಅವರನ್ನು ಹಿಂದಿನಿಂದ ತಳ್ಳಲಾಗಿದೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ, ಟಿಎಂಸಿ ನಾಯಕ ಮತ್ತು ರಾಜ್ಯ ಸಚಿವ ಶಶಿ ಪಂಜ ಅವರು ಈ ಕುರಿತು ಮಾಹಿತಿಯನ್ನು ನೀಡಿದ್ದು, ಮಮತಾ ಬ್ಯಾನರ್ಜಿ ತಲೆ ಸುತ್ತಿನಿಂದು ಕುಸಿದು ಬಿದ್ದಿದ್ದಾರೆ, ಯಾರೂ ಅವರನ್ನು ಹಿಂದಿನಿಂದ ತಳ್ಳಲಿಲ್ಲ, ಬಿದ್ದ ನಂತರ ಅವರು ಗಾಯಗೊಂಡಿದ್ದರು, ವೈದ್ಯರು ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದ್ದಾರೆ.  ಎಲ್ಲದರ ಬಗ್ಗೆ ವಿವರಗಳು ಶೀಘ್ರದಲ್ಲೇ ಹೊರಬರಲಿದೆ. ಎಲ್ಲರೂ ಮಮತಾ ಬ್ಯಾನರ್ಜಿಯವರ ಯೋಗಕ್ಷೇಮವನ್ನು ಬಯಸುತ್ತಾರೆ, ಆದರೆ ಈ ಬಗ್ಗೆ ತಪ್ಪು ಅರ್ಥವನ್ನು ಕಲ್ಪಿಸುವುದು ಸರಿಯಲ್ಲ, ಮಮತಾ ಬ್ಯಾನರ್ಜಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

69 ವರ್ಷದ ಬ್ಯಾನರ್ಜಿ ಅವರು ಗುರುವಾರ ಸಂಜೆ ಕೋಲ್ಕತ್ತಾದ ಕಾಳಿಘಾಟ್ ನಿವಾಸದಲ್ಲಿ ಬಿದ್ದ ನಂತರ ಅವರ ಹಣೆಯ ಮತ್ತು ಮೂಗಿಗೆ ಗಾಯಗಳಾಗಿತ್ತು. ಅವರ ಹಣೆಯ ಮೇಲೆ ಮೂರು ಹೊಲಿಗೆಗಳನ್ನು ಮತ್ತು ಅವರ ಮೂಗಿನ ಮೇಲೆ ಒಂದು ಹೊಲಿಗೆ ಹಾಕಲಾಗಿದ್ದು, ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗಳ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಅವರನ್ನು ಹಿಂದಿನಿಂದ ತಳ್ಳಿದ ಕಾರಣಕ್ಕೆ ಅವರು ಬಿದ್ದಿರಬಹುದು ಎಂದು ಮಮತಾ ಅವರಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಹೆಳಿದ್ದರು, ಆದರೆ ಆ ಬಳಿಕ ಪ್ರತಿಕ್ರಿಯಿಸಿದ ವೈದ್ಯರು ತನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ಎಸ್‌ಎಸ್‌ಕೆಎಂ ಆಸ್ಪತ್ರೆಯ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಮಣಿಮೊಯ್ ಬಂಡೋಪಾಧ್ಯಾಯ ಈ ಕುರಿತು ಪ್ರತಿಕ್ರಿಯಿಸಿದ್ದು, ಬಹುಶಃ ನಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

ಮಮತಾ ಅವರ ಹಣೆಗೆ ಗಂಭೀರ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟಿಎಂಸಿ ಮೊದಲು ಅಧಿಕೃತ ಎಕ್ಸ್ ಖಾತೆಯಲ್ಲಿ ಫೋಟೋ ಹಂಚಿಕೊಂಡಿತ್ತು. ಈ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಪಕ್ಷಗಳ ನಾಯಕರು ಮಮತಾ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದರು. ಘಟನೆ ನಡೆದಾಗ ಮಮತಾ ಅವರ ಸೋದರಳಿಯ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಮನೆಯಲ್ಲಿದ್ದರು, ಅವರೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಟಿಎಂಸಿ ನಾಯಕ ರಾಜೀಬ್ ಬ್ಯಾನರ್ಜಿ ಹೇಳಿದ್ದರು.

ಇದನ್ನು ಓದಿ: ಏಳನೇ ವೇತನ ಆಯೋಗದ ವರದಿ ಸಲ್ಲಿಕೆ: ಶೇ.27.5ರಷ್ಟು ವೇತನ ಹೆಚ್ಚಳಕ್ಕೆ ಶಿಫಾರಸ್ಸು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...