Homeಮುಖಪುಟಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟ: ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ಮತದಾನ, ಜೂ.4ರಂದು ಫಲಿತಾಂಶ ಪ್ರಕಟ

ಲೋಕಸಭೆ ಚುನಾವಣೆಗೆ ದಿನಾಂಕ ಪ್ರಕಟ: ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ಮತದಾನ, ಜೂ.4ರಂದು ಫಲಿತಾಂಶ ಪ್ರಕಟ

- Advertisement -
- Advertisement -

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ, 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜೂನ್‌ 4ರಂದು ಒಟ್ಟಾಗಿ ಫಲಿತಾಂಶ ಪ್ರಕಟವಾಗಲಿದೆ.

ಕರ್ನಾಟಕದಲ್ಲಿ  ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, 14 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತ್ತು ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ.

ಗುಜರಾತ್‌, ಹರಿಯಾಣ,, ಝಾರ್ಖಾಂಡ್, ಮಹರಾಷ್ಟ್ರ, ಕರ್ನಾಟಕ, ತಮಿಳುನಾಡು, ಪ.ಬಂಗಾಳ ರಾಜ್ಯಗಳ 26 ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಸಿಕ್ಕಿಂ, ಒಡಿಸ್ಸಾ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ ನಾಲ್ಕು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ ವೇಳೆ ಚುನಾವಣೆ ನಡೆಯಲಿದೆ.

ಲೋಕಸಭೆ ಚುನಾವಣೆ: 543 ಕ್ಷೇತ್ರಗಳ ಚುನಾವಣೆ, 84 ಎಸ್ಸಿ ಮೀಸಲಾತಿ ಕ್ಷೇತ್ರಗಳಿದೆ. 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಮೊದಲ ಹಂತ:

ಏಪ್ರೀಲ್‌19ರಂದು ಮೊದಲ ಹಂತದ ಚುನಾವಣೆ

ತಮಿಳುನಾಡು, ರಾಜಸ್ಥಾನ, ಛತ್ತೀಸ್‌ಗಢ, ಜಮ್ಮು-ಕಾಶ್ಮೀರ,

ಫಲಿತಾಂಶ:4

ಎರಡನೇ ಹಂತ:

ಮತದಾನ ಏಪ್ರೀಲ್‌:26

ಮತಎಣಿಕೆ: ಜೂನ್‌-  4

ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ

ಮೂರನೇ ಹಂತ:

ಮತದಾನ: ಮೇ-7

ಮತ ಎಣಿಕೆ: ಜೂನ್‌-4

4ನೇ ಹಂತ:

ಮತದಾನ: ಮೇ -13

ಮತ ಎಣಿಕೆ: ಜೂನ್‌- 4

5ನೇ ಹಂತ;

ಮತದಾನ: ಮೇ-20

6ನೇ ಹಂತ

ಮತದಾನ: ಮೇ-25

7ನೇ ಹಂತ

ಮತದಾನ: ಜೂನ್-1

ಮತ ಎಣಿಕೆ: ಜೂನ್‌-4

ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ಪತ್ರಿಕಾಗೋಷ್ಟಿಯನ್ನು ನಡೆಸಿದ್ದು, ಪತ್ರಿಕಾಗೋಷ್ಟಿಯಲ್ಲಿ ಚುನಾವಣಾ ಆಯುಕ್ತರಾದ ಜ್ಞಾನೇಶ್‌ ಕುಮಾರ್‌ ಮತ್ತು ಸುಖಬೀರ್‌ ಸಂಧು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌, ಪ್ರತಿಯೊಂದು ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನ್ಯಾಯ ಸಮ್ಮತ, ಮುಕ್ತ ಪಾರದರ್ರಶಕ ಚುನಾವಣೆ ನಮ್ಮ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ನಾವು ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ಬದ್ಧರಾಗಿದ್ದೇವೆ. 17ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಯ ಅವಧಿ ಕೂಡ ಜೂನ್ 2024 ರಲ್ಲಿ ಅವಧಿ ಮುಗಿಯಲಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

10 ಲಕ್ಷದ 5 ಸಾವಿರ ಮತಗಟ್ಟೆಗಳ ರ್ಸತಾಪನೆ ಮಾಡಲಾಗಿದೆ. ದೇಶದಲ್ಲಿ 97 ಕೋಟಿ ಮತದಾರರಿದ್ದಾರೆ. ಮತದಾನಕ್ಕೆ 55 ಲಕ್ಷ ಇವಿಎಂಗಳ ವ್ಯವಸ್ಥೆ ಮಾಡಲಾಗಿದೆ. 1.5ಕೋಟಿ ಅಧಿಕಾರಿಗಳು ಭದ್ರತಾ ಸಿಬ್ಬಂದಿಗಳ ನಿಯೋಜನೆ ಮಾಡಲಾಗುವುದು. 49.7ಕೋಟಿ ಪುರುಷ ಮತದಾರರಿದ್ದಾರೆ. 1.8 ಕೋಟಿ ಮತದಾರರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 47.1ಕೋಟಿ ಮಹಿಳಾ ಮತದಾರರಿದ್ದಾರೆ.  85 ವರ್ಷಕ್ಕಿಂತ ಮೇಲ್ಪಟ್ಟ 82 ಲಕ್ಷ  ಮತದಾರರಿದ್ದಾರೆ. 19.74 ಯುವ ಮತದಾರರಿದ್ದಾರೆ. 12 ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಳವಾಗಿದೆ. 2.18 ಲಕ್ಷ ಶತಾಯುಷಿಗಳು ಮತ ಚಲಾಯಿಸಲಿದ್ದಾರೆ. 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಪುರುಷ ಮತದಾರರಿಗಿಂತ ಹೆಚ್ಚಿನ ಮಹಿಳೆಯರನ್ನು ಹೊಂದಿವೆ ಎಂದು ಹೇಳಿದ್ದಾರೆ.

ಮತಗಟ್ಟೆಗಳಲ್ಲಿ ವ್ಜೀಲ್ ಚೇರ್‌, ಹೆಲ್ಪ್‌ ಡೆಸ್ಕ್‌ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು,  40%ಕ್ಕೂ ಅಧಿಕ ವಿಕಲಚೇತನ ಮತದಾರರು ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು. ಅಭ್ಯರ್ಥಿಗಳ ಕ್ರಿಮಿನಲ್ ಕೇಸ್‌ಗಳ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿದೆ. ಅಕ್ರಮವಾಗಿ ಹಣ ಸಾಗಿಸಿದರೆ, ಮತದಾರರಿಗೆ ಹಣ ಹಂಚಿಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಪೊಲೀಸರಿಂದ ಚೆಕ್‌ ಪೋಸ್ಟ್‌ಗಳಲ್ಲಿ ಪರಿಶೀಲನೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಸಿ-ವಿಜಿಲ್ ಆ್ಯಪ್‌ನಲ್ಲಿ ನಾಗರಿಕರು ಯಾವುದೇ ಮತದಾನ ಸಂಬಂಧಿತ ದೂರುಗಳನ್ನು ನೋಂದಾಯಿಸಿಕೊಳ್ಳಬಹುದು. ಪರಿಸ್ಥಿತಿಯನ್ನು ಅವಲೋಕಿಸಲು 100 ನಿಮಿಷಗಳಲ್ಲಿ ಚುನಾವಣಾ ಆಯೋಗ ತಂಡವನ್ನು ಕಳುಹಿಸಲಿದೆ. ಚುನಾವಣಾ ಸಮಯದಲ್ಲಿ ಯಾವುದೇ ಹಿಂಸಾಚಾರ ಸಂಭವಿಸದಂತೆ ಚುನಾವಣಾ ಆಯೋಗವು ಕಾರ್ಯನಿರ್ವಹಿಸುತ್ತಿದೆ, ಪಕ್ಷಗಳು ನೀತಿ ಸಂಹಿತೆಯನ್ನು ಪಾಲಿಸಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಸೂರ್ಯಾಸ್ತದ ಬಳಿಕ ಎಟಿಎಂ ವಾಹನ ಸಂಚಾರಕ್ಕೆ ಅನುಮತಿ ಇಲ್ಲ,  ಸುಳ್ಳು ಮಾಹಿತಿಯನ್ನು ರವಾನೆ ಮಾಡುವಂತಿಲ್ಲ, 24 ಗಂಟೆ ಪೊಲೀಸ್‌ ಕಂಟ್ರೋಲ್‌ ರೂಂ ಕಾರ್ಯಾಚರಣೆ ಇರಲಿದೆ, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡಲಿದ್ದೇವೆ, ಜನರನ್ನು ಪ್ರಚೋದನೆ, ಇಬ್ಬಾಗ ಮಾಡುವಂತಿಲ್ಲ, ದ್ವೇಷ ಭಾಷಣ ಮಾಡುವಂತಿಲ್ಲ, ಸುಳ್ಳು ಜಾಹೀರಾತನ್ನು ಪ್ರಸಾರ ಮಾಡುವಂತಿಲ್ಲ, ವೈಯಕ್ತಿಕ ಟೀಕೆ ಮಾಡುವಂತಿಲ್ಲ ಎಂದು ಹೇಳಿದ್ದಾರೆ.

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...