Homeಫ್ಯಾಕ್ಟ್‌ಚೆಕ್Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ...

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್‌ ಯೋಜನೆ’ಯನ್ನು ‘ಅಸಂವಿಧಾನಿಕ’ ಎಂದಿರುವ ಸುಪ್ರೀಂ ಕೋರ್ಟ್ ಫೆಬ್ರವರಿ 15,2024ರಂದು ರದ್ದುಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗೆ ಸೂಚಿಸಿತ್ತು. ಆರಂಭದಲ್ಲಿ ಸಮಯ ವಿಸ್ತರಣೆ ಕೋರಿದ್ದ ಎಸ್‌ಬಿಐ. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ. ಆ ಮಾಹಿತಿಯನ್ನು ಚುನಾವಣಾ ಆಯೋಗ ಮಾರ್ಚ್ 14 ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ. 426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಈ ಕುರಿತ ಸುದ್ದಿ ಇಲ್ಲಿದೆ 

ಬಾಂಡ್‌ಗಳ ಸೀರಿಯಲ್ ನಂಬರ್‌ ಮಾಹಿತಿಯನ್ನೂ ಒದಗಿಸುವಂತೆ ಮಾರ್ಚ್ 15ರಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ಗೆ ಸೂಚಿಸಿದೆ. ಈ ಮೂಲಕ ಯಾವ ಪಕ್ಷಗಳಿಗೆ ದೇಣಿಗೆ ನೀಡಲಾಗಿದೆ ಎಂಬ ಮಾಹಿತಿ ಪಡೆಯಲು ಸಾಧ್ಯವಾಗಬಹುದು.

ಚುನಾವಣಾ ಬಾಂಡ್‌ ಮಾಹಿತಿ ಬಿಡುಗಡೆಯಾದ ಬಳಿಕ ಬಲಪಂಥೀಯ ಯೂಟ್ಯೂಬ್‌ ಚಾನೆಲ್ ‘ಟಿವಿ ವಿಕ್ರಮ’ ‘ಪಾಕಿಸ್ತಾನದಿಂದ 10 ಕೋಟಿ ದೇಣಿಗೆ ಪಡೆದ ಕಾಂಗ್ರೆಸ್ ಸ್ಪೋಟಕ ಮಾಹಿತಿ ಕೊಟ್ಟ ಎಸ್‌ಬಿಐ’ ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಅಪ್ಲೋಡ್‌ ಮಾಡಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್- ಚಂಡೀಗಢ ಕೂಡ ಇದೇ ಆರೋಪವನ್ನು ಬಿಜೆಪಿಯ ಮೇಲೆ ಮಾಡಿದೆ. “ಶಾಕಿಂಗ್, ಪಾಕಿಸ್ತಾನ ಮೂಲದ ಹಬ್ ಪವರ್ ಕಂಪನಿ ಪುಲ್ವಾಮಾ ದಾಳಿ ನಡೆದ ವಾರಗಳ ನಂತರ ಚುನಾವಣಾ ಬಾಂಡ್‌ಗಳನ್ನು ದೇಣಿಗೆ ನೀಡಿದೆ. ನಮ್ಮ 40 ವೀರ ಯೋಧರ ಸಾವಿನಿಂದ ಇಡೀ ದೇಶ ನೋವಿನಲ್ಲಿದ್ದ ಸಮಯ ಕೆಲವರು ಪಾಕಿಸ್ತಾನದಿಂದ ದೇಣಿಗೆ ಪಡೆದು ಖುಷಿ ಪಟ್ಟಿದ್ದರು. ಈಗ ಹೇಳಿ, ಪುಲ್ವಾಮ ದಾಳಿಯ ಬಗ್ಗೆ ಯಾಕೆ ಯಾವುದೇ ತನಿಖೆ ನಡೆದಿಲ್ಲ ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಫ್ಯಾಕ್ಟ್‌ಚೆಕ್‌: ಟಿವಿ ವಿಕ್ರಮದ ನಿರೂಪಕಿ ಮುಮ್ತಾಝ್ ಹೇಳಿರುವಂತೆ ಕಾಂಗ್ರೆಸ್ ಮತ್ತು ಚಂಡೀಗಢ ಕಾಂಗ್ರೆಸ್ ಹೇಳಿರುವಂತೆ ಬಿಜೆಪಿ ಪಾಕಿಸ್ತಾನದಿಂದ 10 ಕೋಟಿ ರೂ. ದೇಣಿಗೆ ಪಡೆದಿದೆಯಾ? ಎಂದು ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ಮೊದಲು ನಾವು ಹಬ್ ಪವರ್ ಕಂಪನಿಯ ಮೂಲವನ್ನು ಹುಡುಕಾಡಿದ್ದೇವೆ. ಆ ಕಂಪನಿ ಭಾರತದ್ದಾ? ಇಲ್ಲಾ ಪಾಕಿಸ್ತಾನದ್ದಾ ಎಂಬ ಮಾಹಿತಿಯನ್ನು ಹುಡುಕಿದ್ದೇವೆ. ಈ ವೇಳೆ ಹಬ್ ಪವರ್ ಕಂಪನಿಯು ಭಾರತದ ಜಿಎಸ್‌ಟಿ ಪೋರ್ಟಲ್‌ನಲ್ಲಿ ನೋಂದಾಯಿಸಲ್ಪಟ್ಟಿರುವುದು ಕಂಡು ಬಂದಿದೆ. 07BWNPM0985J1ZX ಇದು ಆ ಕಂಪನಿಯ ಜಿಎಸ್‌ಟಿ ನಂಬರ್ ಆಗಿದೆ. ಅದರಲ್ಲಿ ಕಂಪನಿಯ ಮೂಲ ಭಾರತವಾಗಿದ್ದು, ಅದರ ಕೇಂದ್ರ ಕಚೇರಿ ದೆಹಲಿಯಲ್ಲಿದೆ ಎಂದು ಉಲ್ಲೇಖಿಸಲಾಗಿದೆ.

ಹಬ್ ಪವರ್ ಕಂಪನಿಯು ರವಿ ಮೆಹ್ರಾ ಎಂಬ ವ್ಯಕ್ತಿಯ ಒಡೆತನದಲ್ಲಿದೆ. ಇದನ್ನು ನವೆಂಬರ್ 12, 2018 ರಂದು ನೋಂದಾಯಿಸಲಾಗಿದೆ. ಇದರ ಪ್ರಮುಖ ವ್ಯಾಪಾರ ಸ್ಥಳವು ನವದೆಹಲಿಯ ಗೀತಾ ಕಾಲೋನಿಯಲ್ಲಿರುವ ವಿಳಾಸವಾಗಿದೆ.

ಮೇಲ್ಗಡೆ ನಾವು ಉಲ್ಲೇಖಿಸಿದ ಮಾಹಿತಿ ಪ್ರಕಾರ ಕಂಪನಿ ಭಾರತದ್ದಾಗಿರುವುದರಿಂದ ಇಲ್ಲಿ ಯಾವುದೇ ರಾಜಕೀಯ ಪಕ್ಷ ದೇಣಿಗೆ ಪಡೆದಿದ್ದರೂ, ಅದು ಪಾಕಿಸ್ತಾನದ್ದು ಎಂದು ಎನಿಸುವುದಿಲ್ಲ. ಆದ್ದರಿಂದ ಮೊದಲನೆಯದಾಗಿ ಪಾಕಿಸ್ತಾನದಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು.

ಹಾಗಾದರೆ, ಹಬ್ ಪವರ್ ಕಂಪನಿ ಪಾಕಿಸ್ತಾನದ್ದು ಎಂಬ ಸುದ್ದಿ ಹೇಗೆ ಹಬ್ಬಿತು ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಪಾಕಿಸ್ತಾನದ ‘ಹಬ್ಕೋ’ ಎಂಬ ಕಂಪನಿಯ ಹೆಸರು ನಮಗೆ ಸಿಕ್ಕಿದೆ. ಅದರ ಸಾಮಾಜಿಕ ಜಾಲತಾಣ ಎಕ್ಸ್‌ ಪರಿಶೀಲಿಸಿದಾಗ ಅಲ್ಲೊಂದು ಮಾಧ್ಯಮ ಪ್ರಕಟನೆ ನಮಗೆ ಲಭ್ಯವಾಗಿದೆ.

ಮಾರ್ಚ್ 15, 2024ರಂದು ಪೋಸ್ಟ್ ಮಾಡಲಾದ ಮಾಧ್ಯಮ ಪ್ರಕಟನೆಯಲ್ಲಿ, “ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನಮ್ಮ ಹಬ್ಕೋ ಕಂಪನಿಯ ಹೆಸರನ್ನು ತಪ್ಪಾಗಿ ಬಳಸಿಕೊಳ್ಳಲಾಗ್ತಿದೆ. ಭಾರತದ ಹಬ್‌ ಪವರ್ ಎಂಬ ಕಂಪನಿಯೆಂದು ನಮ್ಮ ಕಂಪನಿಯ ಹೆಸರನ್ನು ಚುನಾವಣಾ ಬಾಂಡ್‌ಗೆ ತಳುಕು ಹಾಕಲಾಗಿದೆ. ನಮ್ಮ ಕಂಪನಿಯು ಪಾಕಿಸ್ತಾನದಲ್ಲಿ ನೋಂದಾಯಿತ ಕಂಪನಿಯಾಗಿದೆ. ಭಾರತದಲ್ಲಿ ನಾವು ಯಾವುದೇ ವ್ಯವಹಾರ ಹೊಂದಿಲ್ಲ. ಅಲ್ಲದೆ, ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಮಾಡಿರುವ ಪಾವತಿಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ಪಾಕಿಸ್ತಾನದಿಂದ ಹೊರಗೆ ಯಾವುದಾದರೂ ಪಾವತಿ ಮಾಡುವುದಿದ್ದರೆ, ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಅನುಮತಿ ಪಡೆದೇ ಮಾಡುತ್ತೇವೆ. ತಪ್ಪು ಮಾಹಿತಿಯನ್ನು ಹರಡಲು ಕಾರಣವಾಗುವ ಯಾವುದೇ ವಿಷಯವನ್ನು ಪ್ರಕಟಿಸುವ ಮೊದಲು ಸತ್ಯವನ್ನು ಪರಿಶೀಲಿಸಲು ನಾವು ಎಲ್ಲರನ್ನು ಒತ್ತಾಯಿಸುತ್ತೇವೆ. ಯಾವುದೇ ಹೆಚ್ಚಿನ ವಿಚಾರಣೆಗಳು ಅಥವಾ ಸ್ಪಷ್ಟೀಕರಣಗಳಿಗಾಗಿ, ನಮ್ಮ ಅಧಿಕೃತ ವೆಬ್‌ಸೈಟ್ www.hubpower.com ನಲ್ಲಿನ ವಿವರಗಳ ಪ್ರಕಾರ ನಮ್ಮನ್ನು ಸಂಪರ್ಕಿಸಬಹುದು” ಎಂದು ಹೇಳಿದೆ.

ಈ ಮಾಧ್ಯಮ ಪ್ರಕಟಣೆ ಮತ್ತು ಮೇಲ್ಗಡೆ ನಾವು ಉಲ್ಲೇಖಿಸಿರುವ ಜಿಎಸ್‌ಟಿ ನೋಂದಣಿಯ ಪ್ರಕಾರ, ಹಬ್‌ಪವರ್ ಮತ್ತು ಹಬ್ಕೋ ಎರಡು ಬೇರೆ ಕಂಪನಿಗಳಾಗಿದೆ. ಹಬ್‌ಪವರ್‌ ಭಾರತದ್ದು ಮತ್ತು ಹಬ್ಕೋ ಪಾಕಿಸ್ತಾನದ ಕಂಪನಿಯಾಗಿದೆ. ಹಾಗಾಗಿ, ಪಾಕಿಸ್ತಾನದ ಕಂಪನಿಯಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು. ಇಲ್ಲಿ ಹಬ್ಕೋ ಕಂಪನಿಗೆ ‘ಹಬ್‌ಪವರ್’ ಎಂದೂ ಹೆಸರಿದೆ. ಹಾಗಾಗಿ ಜನರು ಗೊಂದಲ ಮಾಡಿಕೊಂಡಿರುವ ಸಾಧ್ಯತೆ ಇದೆ.

ಮತ್ತೊಂದು ಮಹತ್ವದ ಮಾಹಿತಿಯೆಂದರೆ, ಚುನಾವಣಾ ಆಯೋಗ ಪ್ರಕಟಿಸಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯಲ್ಲಿ ಯಾವ ಕಂಪನಿ ದೇಣಿಗೆ ನೀಡಿದೆ ಎಂಬುವುದು ಇದೆಯೇ ಹೊರತು, ಸ್ಪಷ್ಟವಾಗಿ ಇದೇ ರಾಜಕೀಯ ಪಕ್ಷಕ್ಕೆ ನೀಡಿದೆ ಎಂದಿಲ್ಲ. ಹಾಗಾಗಿ, ಹಬ್‌ಪವರ್ ಕಾಂಗ್ರೆಸ್‌ಗೇ 10 ಕೋಟಿ ನೀಡಿದೆ ಎಂಬುವುದು ಖಚಿತವಾಗಿ ಹೇಳಲು ಸಾಧ್ಯವಿಲ್ಲ.

ಇದನ್ನೂ ಓದಿ : Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...