Homeಫ್ಯಾಕ್ಟ್‌ಚೆಕ್Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ...

Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ‘ಚುನಾವಣಾ ಬಾಂಡ್‌ ಯೋಜನೆ’ಯನ್ನು ‘ಅಸಂವಿಧಾನಿಕ’ ಎಂದಿರುವ ಸುಪ್ರೀಂ ಕೋರ್ಟ್ ಫೆಬ್ರವರಿ 15,2024ರಂದು ರದ್ದುಗೊಳಿಸಿತ್ತು. ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಗೆ ಸೂಚಿಸಿತ್ತು. ಆರಂಭದಲ್ಲಿ ಸಮಯ ವಿಸ್ತರಣೆ ಕೋರಿದ್ದ ಎಸ್‌ಬಿಐ. ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬಳಿಕ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದೆ. ಆ ಮಾಹಿತಿಯನ್ನು ಚುನಾವಣಾ ಆಯೋಗ ಮಾರ್ಚ್ 14 ರಂದು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಚುನಾವಣಾ ಆಯೋಗದ ವೆಬ್ ಸೈಟ್‌ನಲ್ಲಿ ಬಾಂಡ್‌ಗಳ ಕುರಿತು ಎರಡು ಪಟ್ಟಿಗಳನ್ನು ಪ್ರಕಟಿಸಲಾಗಿದೆ. 337 ಪುಟಗಳ ಮೊದಲ ಪಟ್ಟಿಯಲ್ಲಿ ಬಾಂಡ್‌ಗಳ ಮುಖಬೆಲೆ ಮತ್ತು ದಿನಾಂಕಗಳೊಂದಿಗೆ ಅವುಗಳನ್ನು ಖರೀದಿಸಿದ ಕಂಪನಿಗಳನ್ನು ಒಳಗೊಂಡಿವೆ. 426 ಪುಟಗಳ ಎರಡನೇ ಪಟ್ಟಿಯಲ್ಲಿ ರಾಜಕೀಯ ಪಕ್ಷಗಳ ಹೆಸರು, ಬಾಂಡ್‌ಗಳ ಮುಖಬೆಲೆ ಮತ್ತು ಅವುಗಳನ್ನು ನಗದೀಕರಿಸಿದ ದಿನಾಂಕಗಳು ಒಳಗೊಂಡಿವೆ. ಬಾಂಡ್‌ಗಳ ಸೀರಿಯಲ್ ನಂಬರ್ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿಲ್ಲ. ಹಾಗಾಗಿ, ಎರಡು ಪಟ್ಟಿಗಳನ್ನು ಪರಸ್ಪರ ಸಂಬಂಧಿಸಲು ಮತ್ತು ಯಾವ ಕಂಪನಿ, ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಿದೆ ಎಂದು ತಿಳಿದುಕೊಳ್ಳಲು ಸಾಧ್ಯವಿಲ್ಲ.

ಈ ಕುರಿತ ಸುದ್ದಿ ಇಲ್ಲಿದೆ 

ಬಾಂಡ್‌ಗಳ ಸೀರಿಯಲ್ ನಂಬರ್‌ ಮಾಹಿತಿಯನ್ನೂ ಒದಗಿಸುವಂತೆ ಮಾರ್ಚ್ 15ರಂದು ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ಗೆ ಸೂಚಿಸಿದೆ. ಈ ಮೂಲಕ ಯಾವ ಪಕ್ಷಗಳಿಗೆ ದೇಣಿಗೆ ನೀಡಲಾಗಿದೆ ಎಂಬ ಮಾಹಿತಿ ಪಡೆಯಲು ಸಾಧ್ಯವಾಗಬಹುದು.

ಚುನಾವಣಾ ಬಾಂಡ್‌ ಮಾಹಿತಿ ಬಿಡುಗಡೆಯಾದ ಬಳಿಕ ಬಲಪಂಥೀಯ ಯೂಟ್ಯೂಬ್‌ ಚಾನೆಲ್ ‘ಟಿವಿ ವಿಕ್ರಮ’ ‘ಪಾಕಿಸ್ತಾನದಿಂದ 10 ಕೋಟಿ ದೇಣಿಗೆ ಪಡೆದ ಕಾಂಗ್ರೆಸ್ ಸ್ಪೋಟಕ ಮಾಹಿತಿ ಕೊಟ್ಟ ಎಸ್‌ಬಿಐ’ ಎಂಬ ಶೀರ್ಷಿಕೆಯಲ್ಲಿ ವಿಡಿಯೋವೊಂದನ್ನು ಅಪ್ಲೋಡ್‌ ಮಾಡಿದೆ.

ಯೂಟ್ಯೂಬ್ ವಿಡಿಯೋ ಲಿಂಕ್ ಇಲ್ಲಿದೆ 

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್- ಚಂಡೀಗಢ ಕೂಡ ಇದೇ ಆರೋಪವನ್ನು ಬಿಜೆಪಿಯ ಮೇಲೆ ಮಾಡಿದೆ. “ಶಾಕಿಂಗ್, ಪಾಕಿಸ್ತಾನ ಮೂಲದ ಹಬ್ ಪವರ್ ಕಂಪನಿ ಪುಲ್ವಾಮಾ ದಾಳಿ ನಡೆದ ವಾರಗಳ ನಂತರ ಚುನಾವಣಾ ಬಾಂಡ್‌ಗಳನ್ನು ದೇಣಿಗೆ ನೀಡಿದೆ. ನಮ್ಮ 40 ವೀರ ಯೋಧರ ಸಾವಿನಿಂದ ಇಡೀ ದೇಶ ನೋವಿನಲ್ಲಿದ್ದ ಸಮಯ ಕೆಲವರು ಪಾಕಿಸ್ತಾನದಿಂದ ದೇಣಿಗೆ ಪಡೆದು ಖುಷಿ ಪಟ್ಟಿದ್ದರು. ಈಗ ಹೇಳಿ, ಪುಲ್ವಾಮ ದಾಳಿಯ ಬಗ್ಗೆ ಯಾಕೆ ಯಾವುದೇ ತನಿಖೆ ನಡೆದಿಲ್ಲ ಮತ್ತು ಯಾರಿಗೂ ಶಿಕ್ಷೆಯಾಗಿಲ್ಲ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಫ್ಯಾಕ್ಟ್‌ಚೆಕ್‌: ಟಿವಿ ವಿಕ್ರಮದ ನಿರೂಪಕಿ ಮುಮ್ತಾಝ್ ಹೇಳಿರುವಂತೆ ಕಾಂಗ್ರೆಸ್ ಮತ್ತು ಚಂಡೀಗಢ ಕಾಂಗ್ರೆಸ್ ಹೇಳಿರುವಂತೆ ಬಿಜೆಪಿ ಪಾಕಿಸ್ತಾನದಿಂದ 10 ಕೋಟಿ ರೂ. ದೇಣಿಗೆ ಪಡೆದಿದೆಯಾ? ಎಂದು ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ಮೊದಲು ನಾವು ಹಬ್ ಪವರ್ ಕಂಪನಿಯ ಮೂಲವನ್ನು ಹುಡುಕಾಡಿದ್ದೇವೆ. ಆ ಕಂಪನಿ ಭಾರತದ್ದಾ? ಇಲ್ಲಾ ಪಾಕಿಸ್ತಾನದ್ದಾ ಎಂಬ ಮಾಹಿತಿಯನ್ನು ಹುಡುಕಿದ್ದೇವೆ. ಈ ವೇಳೆ ಹಬ್ ಪವರ್ ಕಂಪನಿಯು ಭಾರತದ ಜಿಎಸ್‌ಟಿ ಪೋರ್ಟಲ್‌ನಲ್ಲಿ ನೋಂದಾಯಿಸಲ್ಪಟ್ಟಿರುವುದು ಕಂಡು ಬಂದಿದೆ. 07BWNPM0985J1ZX ಇದು ಆ ಕಂಪನಿಯ ಜಿಎಸ್‌ಟಿ ನಂಬರ್ ಆಗಿದೆ. ಅದರಲ್ಲಿ ಕಂಪನಿಯ ಮೂಲ ಭಾರತವಾಗಿದ್ದು, ಅದರ ಕೇಂದ್ರ ಕಚೇರಿ ದೆಹಲಿಯಲ್ಲಿದೆ ಎಂದು ಉಲ್ಲೇಖಿಸಲಾಗಿದೆ.

ಹಬ್ ಪವರ್ ಕಂಪನಿಯು ರವಿ ಮೆಹ್ರಾ ಎಂಬ ವ್ಯಕ್ತಿಯ ಒಡೆತನದಲ್ಲಿದೆ. ಇದನ್ನು ನವೆಂಬರ್ 12, 2018 ರಂದು ನೋಂದಾಯಿಸಲಾಗಿದೆ. ಇದರ ಪ್ರಮುಖ ವ್ಯಾಪಾರ ಸ್ಥಳವು ನವದೆಹಲಿಯ ಗೀತಾ ಕಾಲೋನಿಯಲ್ಲಿರುವ ವಿಳಾಸವಾಗಿದೆ.

ಮೇಲ್ಗಡೆ ನಾವು ಉಲ್ಲೇಖಿಸಿದ ಮಾಹಿತಿ ಪ್ರಕಾರ ಕಂಪನಿ ಭಾರತದ್ದಾಗಿರುವುದರಿಂದ ಇಲ್ಲಿ ಯಾವುದೇ ರಾಜಕೀಯ ಪಕ್ಷ ದೇಣಿಗೆ ಪಡೆದಿದ್ದರೂ, ಅದು ಪಾಕಿಸ್ತಾನದ್ದು ಎಂದು ಎನಿಸುವುದಿಲ್ಲ. ಆದ್ದರಿಂದ ಮೊದಲನೆಯದಾಗಿ ಪಾಕಿಸ್ತಾನದಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು.

ಹಾಗಾದರೆ, ಹಬ್ ಪವರ್ ಕಂಪನಿ ಪಾಕಿಸ್ತಾನದ್ದು ಎಂಬ ಸುದ್ದಿ ಹೇಗೆ ಹಬ್ಬಿತು ಎಂಬುವುದರ ಬಗ್ಗೆ ನಾವು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಪಾಕಿಸ್ತಾನದ ‘ಹಬ್ಕೋ’ ಎಂಬ ಕಂಪನಿಯ ಹೆಸರು ನಮಗೆ ಸಿಕ್ಕಿದೆ. ಅದರ ಸಾಮಾಜಿಕ ಜಾಲತಾಣ ಎಕ್ಸ್‌ ಪರಿಶೀಲಿಸಿದಾಗ ಅಲ್ಲೊಂದು ಮಾಧ್ಯಮ ಪ್ರಕಟನೆ ನಮಗೆ ಲಭ್ಯವಾಗಿದೆ.

ಮಾರ್ಚ್ 15, 2024ರಂದು ಪೋಸ್ಟ್ ಮಾಡಲಾದ ಮಾಧ್ಯಮ ಪ್ರಕಟನೆಯಲ್ಲಿ, “ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನಮ್ಮ ಹಬ್ಕೋ ಕಂಪನಿಯ ಹೆಸರನ್ನು ತಪ್ಪಾಗಿ ಬಳಸಿಕೊಳ್ಳಲಾಗ್ತಿದೆ. ಭಾರತದ ಹಬ್‌ ಪವರ್ ಎಂಬ ಕಂಪನಿಯೆಂದು ನಮ್ಮ ಕಂಪನಿಯ ಹೆಸರನ್ನು ಚುನಾವಣಾ ಬಾಂಡ್‌ಗೆ ತಳುಕು ಹಾಕಲಾಗಿದೆ. ನಮ್ಮ ಕಂಪನಿಯು ಪಾಕಿಸ್ತಾನದಲ್ಲಿ ನೋಂದಾಯಿತ ಕಂಪನಿಯಾಗಿದೆ. ಭಾರತದಲ್ಲಿ ನಾವು ಯಾವುದೇ ವ್ಯವಹಾರ ಹೊಂದಿಲ್ಲ. ಅಲ್ಲದೆ, ಭಾರತದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಮಾಡಿರುವ ಪಾವತಿಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ನಾವು ಪಾಕಿಸ್ತಾನದಿಂದ ಹೊರಗೆ ಯಾವುದಾದರೂ ಪಾವತಿ ಮಾಡುವುದಿದ್ದರೆ, ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಅನುಮತಿ ಪಡೆದೇ ಮಾಡುತ್ತೇವೆ. ತಪ್ಪು ಮಾಹಿತಿಯನ್ನು ಹರಡಲು ಕಾರಣವಾಗುವ ಯಾವುದೇ ವಿಷಯವನ್ನು ಪ್ರಕಟಿಸುವ ಮೊದಲು ಸತ್ಯವನ್ನು ಪರಿಶೀಲಿಸಲು ನಾವು ಎಲ್ಲರನ್ನು ಒತ್ತಾಯಿಸುತ್ತೇವೆ. ಯಾವುದೇ ಹೆಚ್ಚಿನ ವಿಚಾರಣೆಗಳು ಅಥವಾ ಸ್ಪಷ್ಟೀಕರಣಗಳಿಗಾಗಿ, ನಮ್ಮ ಅಧಿಕೃತ ವೆಬ್‌ಸೈಟ್ www.hubpower.com ನಲ್ಲಿನ ವಿವರಗಳ ಪ್ರಕಾರ ನಮ್ಮನ್ನು ಸಂಪರ್ಕಿಸಬಹುದು” ಎಂದು ಹೇಳಿದೆ.

ಈ ಮಾಧ್ಯಮ ಪ್ರಕಟಣೆ ಮತ್ತು ಮೇಲ್ಗಡೆ ನಾವು ಉಲ್ಲೇಖಿಸಿರುವ ಜಿಎಸ್‌ಟಿ ನೋಂದಣಿಯ ಪ್ರಕಾರ, ಹಬ್‌ಪವರ್ ಮತ್ತು ಹಬ್ಕೋ ಎರಡು ಬೇರೆ ಕಂಪನಿಗಳಾಗಿದೆ. ಹಬ್‌ಪವರ್‌ ಭಾರತದ್ದು ಮತ್ತು ಹಬ್ಕೋ ಪಾಕಿಸ್ತಾನದ ಕಂಪನಿಯಾಗಿದೆ. ಹಾಗಾಗಿ, ಪಾಕಿಸ್ತಾನದ ಕಂಪನಿಯಿಂದ ದೇಣಿಗೆ ಪಡೆಯಲಾಗಿದೆ ಎಂಬುವುದು ಸುಳ್ಳು. ಇಲ್ಲಿ ಹಬ್ಕೋ ಕಂಪನಿಗೆ ‘ಹಬ್‌ಪವರ್’ ಎಂದೂ ಹೆಸರಿದೆ. ಹಾಗಾಗಿ ಜನರು ಗೊಂದಲ ಮಾಡಿಕೊಂಡಿರುವ ಸಾಧ್ಯತೆ ಇದೆ.

ಮತ್ತೊಂದು ಮಹತ್ವದ ಮಾಹಿತಿಯೆಂದರೆ, ಚುನಾವಣಾ ಆಯೋಗ ಪ್ರಕಟಿಸಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯಲ್ಲಿ ಯಾವ ಕಂಪನಿ ದೇಣಿಗೆ ನೀಡಿದೆ ಎಂಬುವುದು ಇದೆಯೇ ಹೊರತು, ಸ್ಪಷ್ಟವಾಗಿ ಇದೇ ರಾಜಕೀಯ ಪಕ್ಷಕ್ಕೆ ನೀಡಿದೆ ಎಂದಿಲ್ಲ. ಹಾಗಾಗಿ, ಹಬ್‌ಪವರ್ ಕಾಂಗ್ರೆಸ್‌ಗೇ 10 ಕೋಟಿ ನೀಡಿದೆ ಎಂಬುವುದು ಖಚಿತವಾಗಿ ಹೇಳಲು ಸಾಧ್ಯವಿಲ್ಲ.

ಇದನ್ನೂ ಓದಿ : Fact Check: ಗುಜರಾತ್‌ನಲ್ಲಿ ಮುಸ್ಲಿಮರಿಂದ ಹಿಂದೂ ದೇವಾಲಯ ತೆರವುಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...