Homeಮುಖಪುಟ'ಮಿಥ್ ವರ್ಸಸ್ ರಿಯಾಲಿಟಿ..'; ಸುಳ್ಳು ಸುದ್ದಿಗಳ ಪತ್ತೆಗೆ ಚುನಾವಣಾ ಆಯೋಗದಿಂದ ಹೊಸ ಯೋಜನೆ

‘ಮಿಥ್ ವರ್ಸಸ್ ರಿಯಾಲಿಟಿ..’; ಸುಳ್ಳು ಸುದ್ದಿಗಳ ಪತ್ತೆಗೆ ಚುನಾವಣಾ ಆಯೋಗದಿಂದ ಹೊಸ ಯೋಜನೆ

- Advertisement -
- Advertisement -

2024ರ ಲೋಕಸಭಾ ಚುನಾವಣೆಯ ದಿನಾಂಕಗಳ ಘೋಷಣೆಗೆ ಮುಂಚಿತವಾಗಿ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ತಪ್ಪು ಮಾಹಿತಿ ಹರಡುವುದರ ವಿರುದ್ಧ ಎಚ್ಚರಿಕೆ ನೀಡಿದರು. ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿಗಳ ಪತ್ತೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಶೀಘ್ರದಲ್ಲೇ “ಮಿಥ್ ವರ್ಸಸ್ ರಿಯಾಲಿಟಿ” ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಹೇಳಿದರು.

‘ಮಿಥ್ ವರ್ಸಸ್ ರಿಯಾಲಿಟಿ’ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ನಕಲಿ ಸುದ್ದಿ ಮತ್ತು ನಿರೂಪಣೆಗಳನ್ನು ಹೇಗೆ ಗುರುತಿಸುವುದು ಎಂಬುದರ ಕುರಿತು ವಿವರಗಳನ್ನು ಒದಗಿಸಲಿದೆ. ಸಾಮಾಜಿಕ ಮಾಧ್ಯಮದ ಜವಾಬ್ದಾರಿಯುತ ನಡವಳಿಕೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣಾ ಆಯೋಗವು ರಾಜಕೀಯ ಪಕ್ಷಗಳಿಗೆ ಸಲಹೆ ನೀಡಿದದ್ದು,ಸುಳ್ಳು ಸುದ್ದಿಗಳನ್ನು ಹುಟ್ಟುಹಾಕುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದೆ.

ಮಿಥ್ ವರ್ಸಸ್ ರಿಯಾಲಿಟಿಯು ಜವಾಬ್ದಾರಿಯುತ ಸಾಮಾಜಿಕ ಮಾಧ್ಯಮ ನಡವಳಿಕೆಯನ್ನು ಖಚಿತಪಡಿಸಿಕೊಳ್ಳಲು ರಾಜಕೀಯ ಪಕ್ಷಗಳಿಗೆ ಸಲಹೆ ನೀಡಲಾಗಿದೆ. ನಕಲಿ ಸುದ್ದಿಗಳ ಹುಟ್ಟುದಾರರನ್ನು ಅಸ್ತಿತ್ವದಲ್ಲಿರುವ ಕಾನೂನುಗಳ ಪ್ರಕಾರ ಕಠಿಣವಾಗಿ ಶಿಕ್ಷಿಸಲಾಗುತ್ತದೆ. ಐಟಿ ಕಾಯಿದೆಯ ವಿಭಾಗ 79 (3)(B) ಕಾನೂನುಬಾಹಿರ ವಿಷಯವನ್ನು ತೆಗೆದುಹಾಕಲು ಪ್ರತಿ ರಾಜ್ಯದಲ್ಲಿ ನೋಡಲ್ ಅಧಿಕಾರಿಗಳಿಗೆ ಅಧಿಕಾರ ನೀಡುತ್ತದೆ.

ಸುದ್ದಿಗಳ ನಕಲಿ ನಿರೂಪಣೆಗಳಿಗೆ ಕಡಿವಾಣ ಹಾಕುವ ಜತೆಗೆ ನಕಲಿ ಸುದ್ದಿಗಳ ವಿರುದ್ಧ ತ್ವರಿತ ಪ್ರತಿಕ್ರಿಯೆಗಾಗಿ ಎಸ್‌ಒಪಿ ಜಾರಿ. ಚುನಾವಣಾ ಆಯೋಗದ ವೆಬ್‌ಸೈಟಿನಲ್ಲಿ ನಕಲಿಗಳ ಬಗ್ಗೆ ಪೂರ್ವಭಾವಿ ಸಂವಹನವನ್ನು ಮಿಥ್ ವರ್ಸಸ್ ರಿಯಾಲಿಟಿ ಮಾಡಲಿದೆ.

ರಾಜಕೀಯ ಪಕ್ಷಗಳಿಗೆ ಆಯೋಗದಿಂದ ಸಲಹೆ:

ಮುಂಬರುವ ಲೋಕಸಭೆ ಚುನಾವಣೆ 2024ಕ್ಕೆ ರಾಜಕೀಯ ಪಕ್ಷಗಳಿಗೆ ಭಾರತೀಯ ಚುನಾವಣಾ ಆಯೋಗವು (ಇಸಿಐ) ಸಲಹೆಯನ್ನು ಬಿಡುಗಡೆ ಮಾಡಿತು. ವಿಭಜಿಸುವ ಬದಲು ಪ್ರೇರೇಪಿಸುವ ರಾಜಕೀಯ ಭಾಷಣವನ್ನು ಪೋಷಿಸಬೇಕು ಎಂದು ಹೇಳಿದರು. ಸಿಇಸಿ ರಾಜೀವ್ ಕುಮಾರ್ ಅವರು ಪಕ್ಷಗಳು ಸಮಸ್ಯೆ ಆಧಾರಿತ ಪ್ರಚಾರದಲ್ಲಿ ತೊಡಗಬೇಕು ಮತ್ತು ದ್ವೇಷದ ಭಾಷಣಗಳನ್ನು ತಪ್ಪಿಸಬೇಕು ಎಂದು ಒತ್ತಿ ಹೇಳಿದರು.

ಆಯೋಗದ ಸಲಹೆಯಲ್ಲಿರುವ ಇತರ ಅಂಶಗಳು

ಯಾವುದೇ ಜಾತಿ ಅಥವಾ ಧಾರ್ಮಿಕ ಪ್ರಚೋಧನೆ ಇರಬಾರದು. ಖಾಸಗಿ ಜೀವನದ ಯಾವುದೇ ಅಂಶದ ಬಗ್ಗೆ ಯಾವುದೇ ಟೀಕೆಗಳನ್ನು ಮಾಡುವಂತಿಲ್ಲ. ಪರಿಶೀಲಿಸದ ಮತ್ತು ತಪ್ಪುದಾರಿಗೆಳೆಯುವ ಜಾಹೀರಾತುಗಳಿಂದ ದೂರವಿರುವುದು; ಜಾಹೀರಾತುಗಳನ್ನು ಸುದ್ದಿಯಾಗಿ ಮರೆಮಾಚುವಂತಿಲ್ಲ. ಪ್ರತಿಸ್ಪರ್ಧಿಗಳನ್ನು ನಿಂದಿಸುವ/ಅವಮಾನಿಸುವ ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳ ಮೇಲೆ ಸಂಯಮ ಇರಬೇಕು.

ಇದನ್ನೂ ಓದಿ; ‘ಪ್ರಚಾರದ ವೇಳೆ ಕೆಂಪು ಗೆರೆ ದಾಟಬೇಡಿ..’; ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...