Homeಕರ್ನಾಟಕಮುಟ್ಟಿನ ಬೆಳಕು : ಸತ್ಯಾ ಎಸ್

ಮುಟ್ಟಿನ ಬೆಳಕು : ಸತ್ಯಾ ಎಸ್

- Advertisement -
- Advertisement -

‘ಮುಟ್ಟಿನಿಂದ ಹುಟ್ಟು’ ಎನ್ನುವ ಸರಳ ಸತ್ಯ ಎಲ್ಲರಿಗೂ ಬೆಳಕಿನಷ್ಟು ನಿಚ್ಚಳವಾಗಿದ್ದರೂ, ಮುಟ್ಟನ್ನು ಮೈಲಿಗೆ ಎನ್ನುವಷ್ಟು ದ್ರಾಷ್ಟ್ಯ ಮನುಷ್ಯ ಕುಲವನ್ನು ಕಾಡುತ್ತಿರುವುದು ಗಂಭೀರವಾದ ವಿಷಯ. ತನ್ನ ಹುಟ್ಟಿಗೆ ಕಾರಣವಾದ, ನೈಸರ್ಗಿಕವಾದ, ವೈಜ್ಞಾನಿಕವಾದ ಕ್ರಿಯೆಯನ್ನೇ ಮನುಷ್ಯ ತನ್ನ ಅಹಂಕಾರ, ಅಧಿಕಾರ ಲಾಲಸೆ, ದೊಡ್ಡಸ್ತಿಕೆಯ ಅಸ್ತ್ರವಾಗಿ ಬಳಸುತ್ತಿರುವುದು ಮನುಷ್ಯ ಕುಲ ಇನ್ನೂ ಎಷ್ಟೊಂದು ಅವೈಜ್ಞಾನಿಕವಾಗಿ, ಅವೈಚಾರಿಕಾಗಿ ಹಾಗೂ ಅನೈಸರ್ಗಿಕವಾಗಿ ಆಲೋಚಿಸುತ್ತಿದೆ, ನಡೆದುಕೊಳ್ಳುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಅಪ್ರಜಾಸತ್ತಾತ್ಮಕವಾದ ದಸರಾ ಆಚರಣೆಯನ್ನು ಉದ್ಘಾಟಿಸಿದ ಪುರೋಗಾಮಿ ಚಿಂತನೆಯ ಲೇಖಕ ಎಸ್ ಎಲ್ ಬೈರಪ್ಪನವರು ಮುಟ್ಟಾಗುವ ಹೆಂಗಸರು ದೇವಸ್ಥಾನಕ್ಕೆ ಹೋಗುವಂತಿಲ್ಲ, ಆಫೀಸಿಗೆ ಹೋಗಬಹುದು ಎನ್ನುವ ಮೂಲಕ ಬಹುಪಾಲು ಮನುಷ್ಯರ ಹಿಮ್ಮುಖದ ಚಲನೆಯನ್ನು ಮತ್ತೆ ಪ್ರದರ್ಶಿಸಿದ್ದಾರೆ. ಹೆಣ್ಣನ್ನು ನಿಯಂತ್ರಿಸುವ ಮತ್ತು ಬಳಸಿಕೊಳ್ಳುವ ಪಿತೃಪ್ರಧಾನ ಹಾಗೂ ಪಾಳೇಗಾರಿ ಮನೋಭಾವವನ್ನು ಯಾವ ಹಿಂಜರಿಕೆ, ಸಂಕೋಚವಿಲ್ಲದೆ ವ್ಯಕ್ತಪಡಿಸಿದ್ದಾರೆ.

ಅಸ್ಸಾಂನ ನೀಲಾಂಚಲದಲ್ಲಿರುವ, ಫಲವಂತಿಕೆಯ ಸ್ವರೂಪ ಎಂದು ಹೆಸರಾದ ದೇವಸ್ಥಾನ, ಕಾಮಾಕ್ಯ ದೇವಿಯ ದೇವಸ್ಥಾನ. ಗರ್ಭಾಶಯ ಆಕೃತಿಯ ಗರ್ಭಗೃಹ, ಯೋನಿ ರೂಪದ ದೇವತೆ ಮತ್ತು ನಸುಗೆಂಪು ಬಣ್ಣದ ಯೋನಿಯಿಂದ ಸ್ರವಿಸುವ ನೀರು- ಇವು ಆ ದೇವಾಲಯದ ಮುಖ್ಯಾಂಶಗಳು. ತಮ್ಮ ಒಂದೊಂದು ಕಾದಂಬರಿಗೂ ವರ್ಷಾನುಗಟ್ಟಲೆ ಸಂಶೋಧನೆ ಮಾಡಿ ಅಪಾರ ಖಚಿತತೆಯಿಂದ ಸಾಹಿತ್ಯ ಕೃತಿಗಳನ್ನು ರಚಿಸುವ ಬೈರಪ್ಪನವರು, ಈ ಕಾಮಾಕ್ಯ ದೇವಸ್ಥಾನಕ್ಕೂ ಹೋಗಿಬಂದಿದ್ದಾರೆ. ಹಾಗಿದ್ದ ಮೇಲೆ, ಮುಟ್ಟಿನ ಕುರಿತು ಇವರು ಯಾವ ರೀತಿಯ ಅನುಸಂಧಾನ ನಡೆಸಿದ್ದಾರೆ? ಎಂದು ಅಚ್ಚರಿಯಾಗುತ್ತದೆ.

ಎಪ್ಪತ್ತರ ದಶಕದ ಎರಡನೇ ಭಾಗದಲ್ಲಿ ಸ್ಯಾನಿಟರಿ ಪ್ಯಾಡ್‍ಗಳು ಚಲಾವಣೆಗೆ ಬಂದಾಗ ಮಹಿಳೆಯರ ನಡುವೆ ಮುಟ್ಟು ಮೌನ ಮುರಿದು ‘ಗುಸುಗುಸು’ ಮಾತಿನ ಅಂಗಳಕ್ಕೆ ಬಂದು ನಿಂತಿತ್ತು. ಸ್ಯಾನಿಟರಿ ಪ್ಯಾಡ್‍ಗಳ ಜಾಹಿರಾತು ಟಿವಿ ಪರದೆಯಲ್ಲಿ ಮೂಡತೊಡಗಿದಾಗ ಗಂಡಸರೂ ಈ ಕುರಿತು ಗುಸುಗುಸು ಮಾಡತೊಡಗಿದರು. ಸ್ಯಾನಿಟರಿ ಪ್ಯಾಡ್ ಕಂಪೆನಿಗಳು ತಮ್ಮ ಮಾರುಕಟ್ಟೆಯ ವಿಸ್ತರಣೆಗಾಗಿ ಹದಿವಯಸ್ಸಿನ ಹೆಣ್ಣುಮಕ್ಕಳಿಗೆ ಶಾಲೆಗಳಲ್ಲಿ ಋತುಸ್ರಾವ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳು ಆರಂಭಿಸಿದವು. ಹೀಗೆ ಮಾರುಕಟ್ಟೆಯ ಕಾರಣ ಮುಟ್ಟಿನ ಮಾತು ಕೌಟುಂಬಿಕ ಮತ್ತು ಸಾಮಾಜಿಕ ಸ್ಥಳಗಳಲ್ಲಿ ವಿಸ್ತರಣೆಯಾಯಿತು. ಆದರೆ ಸಾಂಸ್ಕøತಿಕವಾಗಿ ಮುಟ್ಟು ಯಾವತ್ತಿಗೂ ಮುಕ್ತವಾಗಿ ಹಾಗೂ ಗುಪ್ತವಾಗಿ ಮಾತಿನಲ್ಲಿ, ಚರ್ಚೆಯಲ್ಲಿ, ಆಚರಣೆಯಲ್ಲಿ ಹಾಗೂ ವಿಜೃಂಭಣೆಯಲ್ಲಿ ವಸ್ತುವಾಗಿದ್ದುಕೊಂಡೇ ಇದೆ.

ಇತ್ತೀಚೆಗೆ ಶಬರಿಮಲೆ ನಿಮಿತ್ತ ಮುಟ್ಟು ಸಾರ್ವಜನಿಕ ಚರ್ಚೆಗೆ ಹೆಚ್ಚೆಚ್ಚು ತೆರೆದುಕೊಂಡು, ಮುಟ್ಟನ್ನು ಗಲೀಜು ಎಂದು ಜರೆಯುವವರ ಮನಸ್ಸಿನ ಕೊಳಕನ್ನೆಲ್ಲ ಹೊರಗೆ ಚೆಲ್ಲುತ್ತಿದೆ. 2015ರ ನವೆಂಬರ್‌ನಲ್ಲಿ ಶಬರಿಮಲೆ ದೇವಸ್ಥಾನದ ಮುಖ್ಯಸ್ಥ ಗೋಪಾಲಕೃಷ್ಣನ್, ದೇವಸ್ಥಾನಕ್ಕೆ ಬರುವ ಮಹಿಳೆಯರನ್ನು ಸ್ಕ್ಯಾನ್ ಮಾಡುವ ಯಂತ್ರ ಸ್ಥಾಪಿಸುವ ಕುರಿತು ಮಾತನಾಡಿದಾಗ, ಸಿಟ್ಟಿಗೆದ್ದ ಪಂಜಾಬ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ನಿಕಿತಾ ಅರೋರಾ ‘ಹ್ಯಾಪಿ ಟು ಬ್ಲೀಡ್’ ಎಂಬ ಆಂದೋಲನವನ್ನೇ ಹುಟ್ಟು ಹಾಕಿದರು. ಸ್ಯಾನಿಟರಿ ಪ್ಯಾಡ್‍ಗಳನ್ನು ಹಿಡಿದುಕೊಂಡ ಯುವತಿಯರು ತಮ್ಮ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿ, ಮುಟ್ಟಿಗೆ ಸಂಬಂಧಿಸಿದ ಮೂಢ ಆಚರಣೆಗಳು ಹಾಗೂ ವಿಧಿ ನಿಷೇಧಗಳನ್ನು ವಿರೋಧಿಸಿದರು.

2017ರಲ್ಲಿ ಸ್ಯಾನಿಟರಿ ಪ್ಯಾಡ್‍ಗಳ ಮೇಲೆ ಶೇ.12ರಷ್ಟು ತೆರಿಗೆ ಹೇರುವ ಕೇಂದ್ರ ಸರ್ಕಾರದ ಮೂರ್ಖ ಕ್ರಮವು ‘ರಕ್ತಕ್ಕೆ ತೆರಿಗೆ’ ಎಂಬ ತೆರಿಗೆ ವಿರೋಧಿ ಚಳವಳಿಯನ್ನು ಹುಟ್ಟುಹಾಕಿತು; 2018ರಲ್ಲಿ ತೆರಿಗೆ ರದ್ಧತಿಗೆ ಕಾರಣವಾಯಿತು. 2018ರ ಸೆಪ್ಟೆಂಬರ್‍ನಲ್ಲಿ ಶಬರಿಮಲೆ ದೇವಸ್ಥಾನ ಪ್ರವೇಶಕ್ಕೆ ಎಲ್ಲ ಮಹಿಳೆಯರಿಗೂ ಮುಕ್ತ ಅವಕಾಶ ಕೊಡಬೇಕು ಎನ್ನುವ ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೆಣ್ಣನ್ನು ಕುರಿತಾಗಿ ಈ ದೇಶಕ್ಕೆ ಇರುವ ಕೊಳಕು ನಿಲುವುಗಳನ್ನೆಲ್ಲ ಬೀದಿಗೆ ಚೆಲ್ಲಿತು. ಹೆಣ್ಣಿನಿಂದಲೇ ಹುಟ್ಟಿದ ದೇವರು ಹೆಣ್ಣಿನಿಂದಲೇ ಅಪವಿತ್ರನಾಗುತ್ತಾನೆ ಎನ್ನುವ ಭಕ್ತ ಗಣದ ಕುರುಡುತನವು ಭಾರತದಲ್ಲಿ ಮಹಿಳೆಯರ ಸ್ಥಿತಿಗತಿಯನ್ನೂ ಅನಾವರಣಗೊಳಿಸಿತು.

ಆದರೆ, ಈ ಕಾರಣಗಳು ಮುಟ್ಟಿನ ಕುರಿತಾದ ಚರ್ಚೆಯನ್ನು ಹೆಚ್ಚಿಸಿವೆ. ಜನರಲ್ಲಿ ಈ ಕುರಿತ ತಿಳಿವಳಿಕೆಯು ಹೆಚ್ಚಾಗುತ್ತಾ ಬಂದಿದೆ. ಮುಟ್ಟಿನ ಸಂದರ್ಭದ ಅಗತ್ಯಗಳ ಕುರಿತು, ಆರೋಗ್ಯದ ಕುರಿತು ಸಾಕಷ್ಟು ಧನಾತ್ಮಕ ಚಿಂತನೆಗಳು, ಬೆಳವಣಿಗೆಗಳು ನಡೆದಿವೆ. ಬರಹಗಾರರು, ಕಾರ್ಯಕರ್ತರು, ಸಂಘಟನೆಗಳು ಮುಟ್ಟಿನ ಕುರಿತು ಆರೋಗ್ಯಕರವಾಗಿ ಸ್ಪಂದಿಸಿದ್ದಾರೆ. ಸ್ವತಂತ್ರ ಯುಟ್ಯೂಬ್ ಚಾನೆಲ್‍ಗಳು ‘ಮುಟ್ಟು ಎಂದರೇನು’ ಎಂಬ ಸಾರ್ವಜನಿಕ ಪ್ರಶ್ನೋತ್ತರ ಕಾರ್ಯಕ್ರಮಗಳನ್ನು ನಡೆಸಿವೆ. ಮಂಗಳೂರಿನ ಶ್ರೀನಿವಾಸ ಕಾರ್ಕಳ ಅವರು ದಶಕಕ್ಕೂ ಹಿಂದೆಯೇ ‘ಮುಟ್ಟು ಮುಟ್ಟೇಂದೇಕೆ ಹೀಯಾಳಿಸುವಿರಿ?/ಮುಟ್ಟಿನಿಂದಲ್ಲವೇ ನಮ್ಮೆಲ್ಲ ಹುಟ್ಟು/ ಮುಟ್ಟಲ್ಲವೇ ನಮ್ಮ ಸೃಷ್ಟಿಯ ಗುಟ್ಟು..’ ಎಂದು ಬರೆದ ಹಾಡು ಅಸಂಖ್ಯಾತ ಮಹಿಳಾ ತರಬೇತಿಗಳಲ್ಲಿ, ಕಾರ್ಯಕ್ರಮಗಳಲ್ಲಿ ಮುಟ್ಟಿನ ಕುರಿತಾದ ಮುಜುಗರವನ್ನು ಹೊಡೆದೋಡಿಸಿದೆ.

ಬೆಂಗಳೂರಿನಲ್ಲಿ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡಿದ್ದ ಯುವ ಜೋಡಿಯೊಂದು ಮುಟ್ಟಿನ ಕುರಿತು ತಿಳಿವಳಿಕೆ ಹೆಚ್ಚಿಸಲು ತಮ್ಮ ಕೆಲಸಕ್ಕೆ ತಿಲಾಂಜಲಿ ಕೊಟ್ಟು ಸಖೀಭವ ಎಂಬ ಸಂಸ್ಥೆಯೊಂದನ್ನು ಸ್ಥಾಪಿಸಿ, ‘ಸುಸ್ಥಿರ ಮುಟ್ಟಿನ ಆರೋಗ್ಯ’ ಕುರಿತು ಆಂದೋಲನವನ್ನೇ ನಡೆಸಿದೆ. ಈ ಸಂಸ್ಥೆಯೊಂದಿಗೆ ಕೆಲಸ ಮಾಡುತ್ತಿರುವ ಜ್ಯೋತಿ ಇಟ್ನಾಳ್ ಮುಟ್ಟಿನ ಆಚರಣೆಗಳು ಹಾಗೂ ವಿಧಿ ನಿಷೇಧಗಳ ಕುರಿತಾಗಿಯೇ ಪಿಎಚ್‍ಡಿ ಸಂಶೋಧನೆಗೆ ಕೈಹಾಕಿದ್ದಾರೆ.

ಕಳೆದ ವರ್ಷ ಭೀಕರ ಪ್ರವಾಹ ಮತ್ತು ಭೂಕುಸಿತಕ್ಕೆ ತುತ್ತಾಗಿದ್ದ ಕೇರಳದಲ್ಲಿ ಮುಟ್ಟಾದ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್‍ನ ಬದಲಿಗೆ ಮುಟ್ಟಿನ ಬಟ್ಟಲುಗಳನ್ನು ಒದಗಿಸುವ ಕ್ರಾಂತಿಕಾರಿ ಕ್ರಮವನ್ನು ಅನುಸರಿಸಲಾಯಿತು. ಇದೇ ಮಾರ್ಗವನ್ನು ಅನುಸರಿಸಿ ಕಳೆದ ತಿಂಗಳು ಕರ್ನಾಟಕದ ಪ್ರವಾಹದ ಸಂದರ್ಭದಲ್ಲಿ ಶಿವಲೀಲಾ, ಸಂಜ್ಯೋತಿ, ದೀಪಾ ಮತ್ತು ಜ್ಯೋತಿಯವರ ಮುಂದಾಳತ್ವದಲ್ಲಿ ಸಾವಿರಾರು ಮುಟ್ಟಿನ ಬಟ್ಟಲುಗಳು ಪ್ರವಾಹಸಂತ್ರಸ್ತ ಮಹಿಳೆಯರಿಗೆ ಉಚಿತವಾಗಿ ವಿತರಿಸಿ, ಅದರ ಬಳಕೆಯ ಕುರಿತು ತಿಳಿಸಿಕೊಡಲಾಗಿದೆ. ಮುಟ್ಟಿನ ಕುರಿತು ವೈಜ್ಞಾನಿಕ ಮಾಹಿತಿ, ಆಚರಣೆಗಳು ಇತ್ಯಾದಿಗಳ ಜೊತೆಗೆ, ಗಂಡಸರು ಮುಟ್ಟನ್ನು ಎದುರುಗೊಂಡ ಬಗೆಯೂ ಸಾರ್ವಜನಿಕ ಚರ್ಚೆಯ ವಲಯ ಪ್ರವೇಶಿಸಿರುವದು ಅತ್ಯಂತ ಆರೋಗ್ಯಕರ ಬೆಳವಣಿಗೆಯಾಗಿದೆ.

ಹೀಗೆ ಒಂದು ಕಡೆ ಮುಟ್ಟಿನ ಕುರಿತಾದ ಸಂಕುಚಿತತೆಯ ನೆರಳಿನಲ್ಲೇ ಮುಟ್ಟಿನ ಕುರಿತಾದ ಅರಿವು ಹೆಚ್ಚಿಸುವ ಬೆಳಕು ಮೂಡುತ್ತಿರುವುದು ಗಮನಾರ್ಹ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದ್ಭುತವಾದ ಲೇಖನ. ಈ ಲೇಖನವನ್ನು “ಡಾಬಸ್ ಪೇಟೆ ವಾಯ್ಸ್” ಕನ್ನಡ ಮಾಸಪತ್ರಿಕೆಯ ನವೆಂಬರ್ ಸಂಚಿಕೆಯಲ್ಲಿ ಪ್ರಕಟಿಸಲು ಅನುಮತಿ ನೀಡಬೇಕಾಗಿ ವಿನಂತಿ.

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...