Homeಮುಖಪುಟಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

ಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

- Advertisement -
- Advertisement -

ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ಗೆ ನುಗ್ಗಿದ ಗುಂಪೊಂದು ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.  ಭಾರತದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಯುತ್ತಿದೆ ಎಂದು ಹಲವು ಭಾರಿ ಅಂತರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿದ್ದವು, ಹಲವು ರಾಷ್ಟ್ರಗಳು ಈ ಬಗ್ಗೆ ಧ್ವನಿಯನ್ನು ಎತ್ತಿದ್ದವು, ಇದೀಗ ವಿದೇಶಿ ವಿದ್ಯಾರ್ಥಿಗಳ ಮೇಲಿನ ದಾಳಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆದಿದೆ.

ಹಾಸ್ಟೆಲ್‌ನಲ್ಲಿದ್ದ ಆಫ್ರಿಕಾ, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನದ ವಿದ್ಯಾರ್ಥಿಗಳ ಮೇಲೆ ದಾಳಿ ಮಾಡಲಾಗಿದೆ.  ಕ್ಯಾಂಪಸ್‌ನಲ್ಲಿ ಮಸೀದಿ ಇಲ್ಲ, ಆದ್ದರಿಂದ ರಂಜಾನ್ ಸಮಯದಲ್ಲಿ ರಾತ್ರಿ ಮಾಡಲಾಗುವ ತರಾವೀಹ್  ನಮಾಜ್ ಮಾಡಲು ಹಾಸ್ಟೆಲ್‌ನೊಳಗೆ ಸೇರಿದ್ದೆವು. ಸ್ವಲ್ಪ ಸಮಯದ ನಂತರ, ದೊಣ್ಣೆಗಳು ಮತ್ತು ಚಾಕುಗಳೊಂದಿಗೆ ಶಸ್ತ್ರಸಜ್ಜಿತವಾದ ಗುಂಪೊಂದು ಹಾಸ್ಟೆಲ್‌ಗೆ ನುಗ್ಗಿ ದಾಳಿ ಮಾಡಿ ಕೊಠಡಿಗಳನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ಹಾಸ್ಟೆಲ್‌ನ ಸೆಕ್ಯುರಿಟಿ ಗಾರ್ಡ್ ಗುಂಪನ್ನು ತಡೆಯಲು ಪ್ರಯತ್ನಿಸಿದರೂ ವಿಫಲರಾಗಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಗುಂಪಿನಲ್ಲಿದ್ದವರು ಘೋಷಣೆಗಳನ್ನು ಕೂಗುತ್ತಿದ್ದರು ಮತ್ತು ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡಲು ಯಾರು ಅನುಮತಿಸಿದರು ಎಂದು ಅವರು ಪ್ರಶ್ನಿಸಿದ್ದಾರೆ ಎಂದು ಆಫ್ಘಾನಿಸ್ತಾನದ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ. ಅವರು ಕೊಠಡಿಗೆ ನುಗ್ಗಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ಲ್ಯಾಪ್‌ಟಾಪ್‌ಗಳು, ಫೋನ್‌ಗಳನ್ನು ಒಡೆದು ಹಾಕಿದ್ದು, ಬೈಕ್‌ಗಳನ್ನು ಹಾನಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

ಗಾಯಗೊಂಡ ಐವರು ವಿದ್ಯಾರ್ಥಿಗಳಲ್ಲಿ ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ತುರ್ಕಮೆನಿಸ್ತಾನ್‌ನ ತಲಾ ಓರ್ವರು ಮತ್ತು ಆಫ್ರಿಕನ್ ದೇಶದ ಇಬ್ಬರು ಸೇರಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಘಟನೆ ನಡೆದು ಅರ್ಧ ಗಂಟೆಯ ನಂತರ ಪೊಲೀಸರು ಸ್ಥಳಕ್ಕೆ ಬಂದಿದ್ದು, ಈ ವೇಳೆ ಗುಂಪು ಅಲ್ಲಿಂದ ಪಲಾಯನ ಮಾಡಿತ್ತು. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಯಭಾರ ಕಚೇರಿಗಳಿಗೆ ಮಾಹಿತಿ ನೀಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹಾನಿಗೊಳಗಾದ ಬೈಕ್‌ಗಳು, ಒಡೆದ ಲ್ಯಾಪ್‌ಟಾಪ್‌ಗಳು ಮತ್ತು ಧ್ವಂಸಗೊಂಡ ಕೊಠಡಿಗಳು ಕಂಡು ಬಂದಿದೆ. ಕೆಲವು ದೃಶ್ಯಗಳಲ್ಲಿ, ಗುಂಪು ಹಾಸ್ಟೆಲ್‌ಗೆ ಕಲ್ಲು ಎಸೆಯುತ್ತಿರುವುದು, ವಿದ್ಯಾರ್ಥಿಗಳ ಮೇಲೆ ನಿಂದನೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಒಂದು ವೀಡಿಯೊದಲ್ಲಿ, ಗುಂಪಿನಲ್ಲಿದ್ದ ಯುವಕನೊಬ್ಬ ಸೆಕ್ಯುರಿಟಿ ಗಾರ್ಡ್‌ನಲ್ಲಿ “ಅವರು ಏಕೆ ನಮಾಜ್ ಮಾಡುತ್ತಿದ್ದಾರೆ, ಇದು ಸ್ಥಳವೇ?” ಎಂದು ಕೇಳುವುದು ಕೇಳಿಸುತ್ತದೆ. ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸುವುದು ಕಂಡು ಬಂದಿದೆ. ಘಟನೆಯ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಸಾಮಾಜಿಕ ಮಾದ್ಯಮ ಬಳಕೆದಾರರು ಗುಂಪು ಹಿಂಸೆಯನ್ನು ಖಂಡಿಸಿದ್ದಾರೆ.

ಹೈದರಾಬಾದ್ ಸಂಸದ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಘಟನೆ ಬಗ್ಗೆ ಖಂಡನೆ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಎಂತಹ ನಾಚಿಕೆಗೇಡಿನ ಸಂಗತಿ, ಮುಸ್ಲಿಮರು ಶಾಂತಿಯುತವಾಗಿ ಅವರ ಧರ್ಮವನ್ನು ಆಚರಿಸಿದಾಗ ಮಾತ್ರ ನಿಮ್ಮ ಭಕ್ತಿ ಮತ್ತು ಧಾರ್ಮಿಕ ಘೋಷಣೆಗಳು ಕೇಳಿಸುತ್ತದೆ. ಮುಸ್ಲಿಮರನ್ನು ಕಂಡ ಮಾತ್ರಕ್ಕೆ ನಿಮಗೆ ಯಾಕಿಷ್ಟು ಕೋಪ? ಇದು ಅಮಿತ್‌ ಶಾ ಮತ್ತು ಮೋದಿಯ ತವರು ರಾಜ್ಯವಾಗಿದೆ. ಅವರು ಈ ಬಗ್ಗೆ ಬಲವಾದ ಸಂದೇಶವನ್ನು ಕಳುಹಿಸಲು ಮಧ್ಯಪ್ರವೇಶಿಸುತ್ತಾರಾ? ಎಂದು ಅವರು ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಗುಜರಾತ್‌ನ ಗೃಹ ಸಚಿವ ಹರ್ಷ ಸಾಂಘವಿ, ಈ ಬಗ್ಗೆ ಗುಜರಾತ್‌ನ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಮತ್ತು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲು ಮತ್ತು ನ್ಯಾಯಯುತ ತನಿಖೆಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಲೋಕಸಭೆ ಚುನಾವಣೆ: ಕಾಂಗ್ರೆಸ್‌ನ ಪಂಚ ಗ್ಯಾರೆಂಟಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...