HomeUncategorizedರಕ್ಷಣಾ ಇಲಾಖೆ ಯಾವಾಗಲೂ ಅಲರ್ಟ್ ಆಗಿರಬೇಕು: ಬದೌರಿಯಾ

ರಕ್ಷಣಾ ಇಲಾಖೆ ಯಾವಾಗಲೂ ಅಲರ್ಟ್ ಆಗಿರಬೇಕು: ಬದೌರಿಯಾ

- Advertisement -
- Advertisement -

ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ದಾಳಿಯು ಭಾರತೀಯ ಸೇನೆ ಗಡಿಯಲ್ಲಿ ಎಲ್ಲಾ ಸಮಯದಲ್ಲೂ ಕಟ್ಟೆಚ್ಚರ ವಹಿಸಬೇಕು ಎಂಬುದನ್ನು ನೆನಪಿಸುತ್ತದೆ. ರಕ್ಷಣಾ ಇಲಾಖೆ ಎಲ್ಲಾ ಸಮಯದಲ್ಲೂ ಅಲರ್ಟ್ ಆಗಿರಬೇಕು ಎಂದು ವಾಯುಸೇನೆ ಮುಖ್ಯಸ್ಥ ಬದೌರಿಯಾ ಹೇಳಿದ್ದಾರೆ.

ನವದೆಹಲಿಯ ಹಿಂಡನ್ ವಾಯುಸೇನೆ ನೆಲೆಯಲ್ಲಿ ನಡೆದ ಭಾರತೀಯ ವಾಯುಸೇನೆಯ 87ನೇ  ಸಂಭ್ರಮಾಚರಣೆಯಲ್ಲಿ ಮಾತನಾಡಿದ ಬದೌರಿಯಾ, ಪ್ರಸ್ತುತ ದೇಶದ ಭದ್ರತೆಗೆ ಸಂಬಂಧಪಟ್ಟಂತೆ, ನೆರೆಹೊರೆಯ ರಾಷ್ಟ್ರಗಳ ಗಡಿಯಲ್ಲಿ ವಾತಾವರಣವು ಕಳವಳಕಾರಿಯಾಗಿದೆ. ದೇಶದ ಗಡಿಯಲ್ಲಿ ಯೋಧರು ಎಲ್ಲಾ ಸಮಯದಲ್ಲೂ ಅಲರ್ಟ್ ಆಗಿರಬೇಕು ಎಂಬುದನ್ನು ಪುಲ್ವಾಮಾ ದಾಳಿ ಮತ್ತೆ ಮತ್ತೆ ನೆನಪಿಸುತ್ತದೆ ಎಂದಿದ್ದಾರೆ. ಫೆಬ್ರವರಿಯಲ್ಲಿ ನಡೆದ ಪುಲ್ವಾಮಾ ದಾಳಿಯಲ್ಲಿ ಸಿಆರ್‍ಪಿಎಫ್‍ನ 40ಕ್ಕೂ ಹೆಚ್ಚು ಯೋಧರು ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾಗಿದ್ದರು.

 

ಬಾಲಾಕೋಟ್‍ನ ಜೈಷೇ ಮೊಹಮ್ಮದ್ ಉಗ್ರರ ಕ್ಯಾಂಪ್‍ಗಳ ಮೇಲೆ ಭಾರತೀಯ ಸೇನೆ ನಡೆಸಿದ ಏರ್‍ಸ್ಟ್ರೈಕ್ಸ್ ಹಲವು ಬದಲಾವಣೆಗಳಿಗೆ ಕಾರಣವಾಗಿದೆ. ಬಾಲಾಕೋಟ್ ಮೇಲೆ ನಡೆಸಿದ ವೈಮಾನಿಕ ದಾಳಿ, ಭಯೋತ್ಪಾದಕರನ್ನು ಶಿಕ್ಷಿಸಲು ಮಾಡಿರುವ ರಾಜಕೀಯ ಸಂಕಲ್ಪವಾಗಿದೆ. ಭಯೋತ್ಪಾದಕರ ದಾಳಿಯನ್ನು ತಡೆಯಲು ಮತ್ತು ನಿರ್ವಹಿಸಲು ಸರ್ಕಾರದ ವಿಧಾನದಲ್ಲಿ ಪ್ರಮುಖ ಬದಲಾವಣೆಗಳನ್ನು ತರಲಾಗಿದೆ ಎಂದು ಹೇಳಿದರು.

 

ವಾಯುಪಡೆಯ ದಿನಾಚರಣೆಯ ಪ್ರಯುಕ್ತ ಆಕಾಶ್ ಗಂಗಾ ತಂಡದ ಸ್ಕೈಡೈವರ್ ಗಳು  ಧ್ವಜದೊಂದಿಗೆ ವರ್ಣರಂಜಿತ ಕ್ಯಾನೊಪಿಗಳಲ್ಲಿ ಎಎನ್ -32 ವಿಮಾನದಿಂದ ಕೆಳಗಿಳಿಯುವ ಮೂಲಕ ವಾಯು ಪ್ರದರ್ಶನಕ್ಕೆ ಚಾಲನೆ ನೀಡಿದರು. ಐಎಎಫ್ ತನ್ನ ಚಿನೂಕ್ ಹೆವಿ-ಲಿಫ್ಟ್ ಟ್ವಿನ್-ರೋಟರ್ ಟ್ರಾನ್ಸ್‌ಪೋರ್ಟ್ ಹೆಲಿಕಾಪ್ಟರ್ ಮತ್ತು ಅಪಾಚೆ ಅಟ್ಯಾಕ್ ಹೆಲಿಕಾಪ್ಟರ್‌ಗಳನ್ನು ಮೊದಲ ಬಾರಿಗೆ ಪ್ರದರ್ಶಿಸಿತು.

ಇನ್ನು ಹಿಂಡನ್ ವಾಯು ನೆಲೆಯಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಮಿಗ್ 21 ಬಿಸೋನ್ ಏರಿ ಪರೇಡ್ ನಡೆಸಿದರು. 3 ಮಿರಾಜ್ 2000 ವಿಮಾನ ಮತ್ತು 2 ಸು -30 ಎಂಕೆಐ ಯುದ್ಧ ವಿಮಾನಗಳು ಅವೆಂಜರ್ ರಚನೆಯಲ್ಲಿ ಹಾರಾಡಿದವು. ಬಾಲಾಕೋಟ್ ವೈಮಾನಿಕ ದಾಳಿಯಲ್ಲಿ ಭಾಗಿಯಾಗಿದ್ದ ಪೈಲಟ್ ಗಳು ವಿಮಾನದಲ್ಲಿ ಹಾರಾಟ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...