Homeಕರ್ನಾಟಕಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

ಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲವೂ ಸರಿಯಿಲ್ಲ ಎನ್ನುವುದು ಕಂಡು ಬರುತ್ತಿದೆ. ಕರ್ನಾಟಕದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿರುವ ಬಿಜೆಪಿಗೆ ಸ್ವಪಕ್ಷದೊಳಗಿನ ಬಂಡಾಯದ ಬಿಸಿಯ ಜೊತೆಗೆ ಮೈತ್ರಿ ಪಕ್ಷ ಜೆಡಿಎಸ್‌ನ್ನು ಸಮಾಧಾನಗೊಳಿಸುವ ಸವಾಲು ಎದುರಾಗಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್‌ ಹಂಚಿಕೆ ಬಳಿಕ ಬಿಜೆಪಿಯೊಳಗೆ ಭಾರೀ ಬಂಡಾಯ ಭುಗಿಲೆದ್ದಿತ್ತು, ಲೋಕಸಭೆ ಚುನಾವಣೆಗೆ ಟಿಕೆಟ್‌ ಘೋಷಣೆ ಬಳಿಕವೂ ಇದೇ ರೀತಿಯ ಅಸಮಾಧಾನದ ಜ್ವಾಲೆ ಭುಗಿಲೆದ್ದಿದ್ದು, ರಾಜ್ಯ ಬಿಜೆಪಿಗೆ ಬಂಡಾಯ ಶಮನ ದೊಡ್ಡ ಸವಾಲಾಗಿದೆ. ಈ ಬಾರಿ 9 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿದ್ದು, ಕೆಲ ಸಂಸದರು ಸಾರ್ವಜನಿಕವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಪುತ್ರನಿಗೆ ಟಿಕೆಟ್‌ ಸಿಗದ ಹಿನ್ನೆಲೆ  ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ವಿರುದ್ಧ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ತಿಪ್ಪೇಸ್ವಾಮಿ ಶ್ರೀರಾಮುಲು ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಸಿಟಿ ರವಿ, ರೇಣುಕಾಚಾರ್ಯ, ಸದಾನಂದ ಗೌಡ, ಪ್ರತಾಪ್‌ ಸಿಂಹ, ನಳಿನ್‌ ಕುಮಾರ್‌ ಕಟೀಲ್‌ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದು, ಬಿಜೆಪಿಗೆ ಬಂಡಾಯ ಶಮನ ಸವಾಲಾಗಿದೆ.

ಇನ್ನು 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸುವಾಗ ಸೌಜನ್ಯಕ್ಕಾದರೂ ತಮ್ಮ ಜೊತೆ ಮಾತುಕತೆ ನಡೆಸಿಲ್ಲ ಎಂದು ರಾಜ್ಯದಲ್ಲಿ ಎನ್‌ಡಿಎ ಪಾಲುದಾರ ಜೆಡಿಎಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಮಾತುಕತೆ ನಡೆದು 6 ತಿಂಗಳು ಕಳೆದರೂ ಈವರೆಗೆ ಸೀಟು ಹಂಚಿಕೆ ಅಂತಿಮಗೊಂಡಿಲ್ಲ. ಇದಲ್ಲದೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವಾಗ ಜೆಡಿಎಸ್‌ ನಾಯಕರ ಜೊತೆಗೆ ಸಮಾಲೋಚನೆಯೇ ನಡೆಸಿಲ್ಲ ಎನ್ನಲಾಗಿದೆ. ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಈ ಹಿಂದೆ ಸಹಮತ ವ್ಯಕ್ತಪಡಿಸಿದ್ದರು. ಬೆಂಗಳೂರು ಗ್ರಾಮಾಂತರ, ತುಮಕೂರು ಕ್ಷೇತ್ರಕ್ಕೆ ಕುಮಾರಸ್ವಾಮಿ ಪ್ರಸ್ತಾಪ ಮುಂದಿಟ್ಟಿದ್ದರು. ಇದೀಗ ಬೆಂಗಳೂರು ಗ್ರಾಮಾಂತರಕ್ಕೆ ದೇವೇಗೌಡರ ಕುಟುಂಬದ ಡಾ.ಸಿ.ಎನ್‌.ಮಂಜುನಾಥ್ ಅವರಿಗೆ ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ತುಮಕೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಲಾಗಿದೆ,  ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯ ಸಂಸದರಿದ್ದು, ಆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಒಲವು ಹೊಂದಿಲ್ಲ. ಮಂಡ್ಯ ಕ್ಷೇತ್ರದಲ್ಲೂ ನಿಖಿಲ್‌ ಬದಲು ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕುಮಾರಸ್ವಾಮಿಗೆ  ಶಾ ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ಬಿಜೆಪಿ-ಜೆಡಿಎಸ್‌ ಟಿಕೆಟ್‌ ಹಂಚಿಕೆ ಪ್ರಕ್ರಿಯೆ ಕಗ್ಗಂಟಾಗಿ ಉಳಿದಿದೆ.

ಇನ್ನೊಂದು ಕಡೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಎರಡು ಪಕ್ಷಗಳಲ್ಲಿ ವಿರೋಧ ವ್ಯಕ್ತವಾಗಿತ್ತು.  ಪ್ರೀತಂ ಗೌಡ, ಶರಣುಗೌಡ ಕುಂದಕೂರು, ಕರೆಮ್ಮ ನಾಯಕ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದರು.  ಇನ್ನು ಸಂಘ ಪರಿವಾರದ ನಾಯಕರು, ಕೆಳ ಹಂತದ ಮುಖಂಡರು, ಕಾರ್ಯಕರ್ತರಿಗೆ ಈ ಮೈತ್ರಿ ಬಗ್ಗೆ ಒಮ್ಮತ ಇಲ್ಲ ಎನ್ನಲಾಗಿದೆ. ಮೇಲ್ಮಟ್ಟದಲ್ಲಿ ಏನೇ ಮೈತ್ರಿಯಾದರೂ ಕೆಳ ಹಂತದಲ್ಲಿ ಅದು ಕಾರ್ಯರೂಪಕ್ಕೆ ಬರುವ ಸಾಧ್ಯತೆಗಳು ತೀರಾ ಕಡಿಮೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳ ನಡುವೆ ಮೈತ್ರಿ ನಿರ್ಧಾರವಾಗಿದೆಯಾದರೂ ನಿರೀಕ್ಷಿತ ಚುನಾವಣಾ ಫಲಿತಾಂಶ ಕಷ್ಟ ಎಂದು ಹೇಳಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...