Homeಕರ್ನಾಟಕಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

ಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

- Advertisement -
- Advertisement -

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲವೂ ಸರಿಯಿಲ್ಲ ಎನ್ನುವುದು ಕಂಡು ಬರುತ್ತಿದೆ. ಕರ್ನಾಟಕದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿರುವ ಬಿಜೆಪಿಗೆ ಸ್ವಪಕ್ಷದೊಳಗಿನ ಬಂಡಾಯದ ಬಿಸಿಯ ಜೊತೆಗೆ ಮೈತ್ರಿ ಪಕ್ಷ ಜೆಡಿಎಸ್‌ನ್ನು ಸಮಾಧಾನಗೊಳಿಸುವ ಸವಾಲು ಎದುರಾಗಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್‌ ಹಂಚಿಕೆ ಬಳಿಕ ಬಿಜೆಪಿಯೊಳಗೆ ಭಾರೀ ಬಂಡಾಯ ಭುಗಿಲೆದ್ದಿತ್ತು, ಲೋಕಸಭೆ ಚುನಾವಣೆಗೆ ಟಿಕೆಟ್‌ ಘೋಷಣೆ ಬಳಿಕವೂ ಇದೇ ರೀತಿಯ ಅಸಮಾಧಾನದ ಜ್ವಾಲೆ ಭುಗಿಲೆದ್ದಿದ್ದು, ರಾಜ್ಯ ಬಿಜೆಪಿಗೆ ಬಂಡಾಯ ಶಮನ ದೊಡ್ಡ ಸವಾಲಾಗಿದೆ. ಈ ಬಾರಿ 9 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿದ್ದು, ಕೆಲ ಸಂಸದರು ಸಾರ್ವಜನಿಕವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಇನ್ನು ಪುತ್ರನಿಗೆ ಟಿಕೆಟ್‌ ಸಿಗದ ಹಿನ್ನೆಲೆ  ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ವಿರುದ್ಧ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ತಿಪ್ಪೇಸ್ವಾಮಿ ಶ್ರೀರಾಮುಲು ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಸಿಟಿ ರವಿ, ರೇಣುಕಾಚಾರ್ಯ, ಸದಾನಂದ ಗೌಡ, ಪ್ರತಾಪ್‌ ಸಿಂಹ, ನಳಿನ್‌ ಕುಮಾರ್‌ ಕಟೀಲ್‌ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದು, ಬಿಜೆಪಿಗೆ ಬಂಡಾಯ ಶಮನ ಸವಾಲಾಗಿದೆ.

ಇನ್ನು 21 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸುವಾಗ ಸೌಜನ್ಯಕ್ಕಾದರೂ ತಮ್ಮ ಜೊತೆ ಮಾತುಕತೆ ನಡೆಸಿಲ್ಲ ಎಂದು ರಾಜ್ಯದಲ್ಲಿ ಎನ್‌ಡಿಎ ಪಾಲುದಾರ ಜೆಡಿಎಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಮಾತುಕತೆ ನಡೆದು 6 ತಿಂಗಳು ಕಳೆದರೂ ಈವರೆಗೆ ಸೀಟು ಹಂಚಿಕೆ ಅಂತಿಮಗೊಂಡಿಲ್ಲ. ಇದಲ್ಲದೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವಾಗ ಜೆಡಿಎಸ್‌ ನಾಯಕರ ಜೊತೆಗೆ ಸಮಾಲೋಚನೆಯೇ ನಡೆಸಿಲ್ಲ ಎನ್ನಲಾಗಿದೆ. ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ವರಿಷ್ಠರು ಈ ಹಿಂದೆ ಸಹಮತ ವ್ಯಕ್ತಪಡಿಸಿದ್ದರು. ಬೆಂಗಳೂರು ಗ್ರಾಮಾಂತರ, ತುಮಕೂರು ಕ್ಷೇತ್ರಕ್ಕೆ ಕುಮಾರಸ್ವಾಮಿ ಪ್ರಸ್ತಾಪ ಮುಂದಿಟ್ಟಿದ್ದರು. ಇದೀಗ ಬೆಂಗಳೂರು ಗ್ರಾಮಾಂತರಕ್ಕೆ ದೇವೇಗೌಡರ ಕುಟುಂಬದ ಡಾ.ಸಿ.ಎನ್‌.ಮಂಜುನಾಥ್ ಅವರಿಗೆ ಬಿಜೆಪಿಯಿಂದ ಟಿಕೆಟ್‌ ನೀಡಲಾಗಿದೆ. ತುಮಕೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಲಾಗಿದೆ,  ಕೋಲಾರ ಕ್ಷೇತ್ರದಲ್ಲಿ ಬಿಜೆಪಿಯ ಸಂಸದರಿದ್ದು, ಆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಬಿಜೆಪಿ ಒಲವು ಹೊಂದಿಲ್ಲ. ಮಂಡ್ಯ ಕ್ಷೇತ್ರದಲ್ಲೂ ನಿಖಿಲ್‌ ಬದಲು ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕುಮಾರಸ್ವಾಮಿಗೆ  ಶಾ ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ಬಿಜೆಪಿ-ಜೆಡಿಎಸ್‌ ಟಿಕೆಟ್‌ ಹಂಚಿಕೆ ಪ್ರಕ್ರಿಯೆ ಕಗ್ಗಂಟಾಗಿ ಉಳಿದಿದೆ.

ಇನ್ನೊಂದು ಕಡೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಗೆ ಎರಡು ಪಕ್ಷಗಳಲ್ಲಿ ವಿರೋಧ ವ್ಯಕ್ತವಾಗಿತ್ತು.  ಪ್ರೀತಂ ಗೌಡ, ಶರಣುಗೌಡ ಕುಂದಕೂರು, ಕರೆಮ್ಮ ನಾಯಕ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದರು.  ಇನ್ನು ಸಂಘ ಪರಿವಾರದ ನಾಯಕರು, ಕೆಳ ಹಂತದ ಮುಖಂಡರು, ಕಾರ್ಯಕರ್ತರಿಗೆ ಈ ಮೈತ್ರಿ ಬಗ್ಗೆ ಒಮ್ಮತ ಇಲ್ಲ ಎನ್ನಲಾಗಿದೆ. ಮೇಲ್ಮಟ್ಟದಲ್ಲಿ ಏನೇ ಮೈತ್ರಿಯಾದರೂ ಕೆಳ ಹಂತದಲ್ಲಿ ಅದು ಕಾರ್ಯರೂಪಕ್ಕೆ ಬರುವ ಸಾಧ್ಯತೆಗಳು ತೀರಾ ಕಡಿಮೆ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಗೆ ಎರಡೂ ಪಕ್ಷಗಳ ನಡುವೆ ಮೈತ್ರಿ ನಿರ್ಧಾರವಾಗಿದೆಯಾದರೂ ನಿರೀಕ್ಷಿತ ಚುನಾವಣಾ ಫಲಿತಾಂಶ ಕಷ್ಟ ಎಂದು ಹೇಳಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...