Homeಮುಖಪುಟಅರುಣ್ ಗೋಯೆಲ್ ರಾಜೀನಾಮೆ; 'ಖಾಸಗಿತನ' ಮುಖ್ಯ ಎಂದ ಮುಖ್ಯ ಚುನಾವಣಾ ಆಯುಕ್ತರು!

ಅರುಣ್ ಗೋಯೆಲ್ ರಾಜೀನಾಮೆ; ‘ಖಾಸಗಿತನ’ ಮುಖ್ಯ ಎಂದ ಮುಖ್ಯ ಚುನಾವಣಾ ಆಯುಕ್ತರು!

- Advertisement -
- Advertisement -

ಮಾಜಿ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ಅವರ ಅನಿರೀಕ್ಷಿತ ರಾಜೀನಾಮೆ ಮತ್ತು ಚುನಾವಣಾ ಬಾಂಡ್‌ ಕುರಿತ ಪಾರದರ್ಶಕತೆಯ ಕುರಿತು ಕೇಳಿದಾಗ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ವಿಷಯಗಳಲ್ಲಿ ಖಾಸಗಿತನವನ್ನು ಗೌರವಿಸಬೇಕು ಎಂದು ಹೇಳಿದ್ದಾರೆ.

ಗೋಯೆಲ್ ಅವರ ರಾಜೀನಾಮೆ ಕುರಿತ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿ ರಾಜೀವ್‌ ಕುಮಾರ್, ಈ ವಿಷಯ ವೈಯಕ್ತಿಕ. ಅರುಣ್ ಅವರು ನಮ್ಮ ತಂಡದ ಅತ್ಯಂತ ಗೌರವಾನ್ವಿತ ಸದಸ್ಯರಾಗಿದ್ದರು ಮತ್ತು ನಾನು ಅವರೊಂದಿಗೆ  ಕೆಲಸ ಮಾಡುವುದನ್ನು ಸಂಪೂರ್ಣವಾಗಿ ಆನಂದಿಸಿದ್ದೇನೆ. ಆದರೆ ಪ್ರತಿ ಸಂಸ್ಥೆಯಲ್ಲಿ ಯಾರಿಗಾದರೂ ವೈಯಕ್ತಿಕ ಸ್ಥಳವನ್ನು ನೀಡಬೇಕಾಗುತ್ತದೆ ಮತ್ತು ವೈಯಕ್ತಿಕ ಪ್ರಶ್ನೆಗಳನ್ನು ಕೇಳುವುದು ಸಂವೇದನಾಶೀಲವಲ್ಲ. ವೈಯಕ್ತಿಕ ಕಾರಣದಿಂದ ಅವರು ರಾಜೀನಾಮೆ ನೀಡಿದ್ದರೆ ಅದನ್ನು ನಾವು ಗೌರವಿಸಬೇಕು ಎಂದು ಹೇಳಿದ್ದಾರೆ.

ನಮ್ಮಲ್ಲಿ ಒಂದು ಉತ್ತಮ ಪದ್ದತಿಯಿದೆ. ಆಯೋಗದೊಳಗಿನ ಭಿನ್ನಾಭಿಪ್ರಾಯವನ್ನು ನಾವು ಉತ್ತೇಜಿಸುತ್ತೇವೆ, ಇದು ಕಠಿಣ ಕೆಲಸವಾದ್ದರಿಂದ ಒಬ್ಬರಿಗಿಂತ ಮೂರು ಮನಸ್ಸುಗಳು ಉತ್ತಮ, ನಾವು ವಿಚಾರ ಮಂಥನ ಮಾಡುತ್ತೇವೆ, ನಾವು ವಿಶ್ಲೇಷಿಸುತ್ತೇವೆ ಎಂದು ಹೇಳಿದ್ದಾರೆ.

ಇದಲ್ಲದೆ ಚುನಾವಣಾ ಬಾಂಡ್‌ ಕುರಿತು ಮಾನಾಡಿದ ರಾಜೀವ್‌ ಕುಮಾರ್‌, ಭಾರತದ ಚುನಾವಣಾ ಆಯೋಗವು  ದಾನಿಗಳ ಖಾಸಗಿತನವನ್ನು ಗೌರವಿಸುತ್ತದೆ ಎಂದು ಹೇಳಿದ್ದಾರೆ. ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ, ಆಯೋಗವು ಯಾವಾಗಲೂ ಪಾರದರ್ಶಕತೆಯ ಪರವಾಗಿಯೇ ಇದೆ. ಪ್ರಜಾಪ್ರಭುತ್ವದಲ್ಲಿ ವಿಷಯಗಳನ್ನು ಮರೆಮಾಚಲು ಅವಕಾಶವಿಲ್ಲ. ಚುನಾವಣೆಯಲ್ಲಿ ಬಳಕೆಯಾಗುತ್ತಿರುವ ಲೆಕ್ಕಕ್ಕೆ ಸಿಗದ ಹಣಗಳ ಬಗ್ಗೆ ನಾವು ನಿಗಾ ವಹಿಸುತ್ತೇವೆ, ಲೆಕ್ಕಕ್ಕೆ ಸಿಗದ ರೂಪದಲ್ಲಿ ದೇಣಿಗೆಯನ್ನು ನಾವು ಹೇಗೆ ನಿಯಂತ್ರಿಸಬೇಕು ಎಂಬವುದರ ಬಗ್ಗೆ ಒಗ್ಗಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

2024ರ ಲೋಕಸಭೆ ಚುನಾವಣೆ ಮತ್ತು ಗುಜರಾತ್‌, ಹರಿಯಾಣ,, ಝಾರ್ಖಾಂಡ್, ಮಹರಾಷ್ಟ್ರ, ಕರ್ನಾಟಕ, ತಮಿಳುನಾಡು, ಪ.ಬಂಗಾಳ ರಾಜ್ಯಗಳ 26 ಕ್ಷೇತ್ರಗಳಿಗೆ ಉಪ ಚುನಾವಣೆ ಹಾಗೂ ಸಿಕ್ಕಿಂ, ಒಡಿಸ್ಸಾ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ ನಾಲ್ಕು ರಾಜ್ಯಗಳಿಗೆ ವಿಧಾನಸಭಾ ಚುನಾವಣೆ  ದಿನಾಂಕವನ್ನು ನಿನ್ನೆ ಕೇಂದ್ರ ಚುನಾವಣಾ ಆಯೋಗದ ಪತ್ರಿಕಾಗೋಷ್ಟಿಯಲ್ಲಿ ಪ್ರಕಟಿಸಲಾಗಿದೆ. ಎಪ್ರಿಲ್‌ 19ರಿಂದ 7 ಹಂತಗಳಲ್ಲಿ ದೇಶದಾದ್ಯಂತ ಮತದಾನ ನಡೆಯಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ರಾಜೀವ್‌ ಕುಮಾರ್‌, ಪ್ರತಿಯೊಂದು ಚುನಾವಣೆ ನಮಗೆ ಪರೀಕ್ಷೆ ಇದ್ದಂತೆ, ನ್ಯಾಯ ಸಮ್ಮತ, ಮುಕ್ತ ಪಾರದರ್ಶಕ ಚುನಾವಣೆ ನಮ್ಮ ಉದ್ದೇಶವಾಗಿದೆ. ನಾವು ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ಬದ್ಧರಾಗಿದ್ದೇವೆ. 17ನೇ ಲೋಕಸಭೆಯ ಅವಧಿಯು 16 ಜೂನ್ 2024ರಂದು ಮುಕ್ತಾಯಗೊಳ್ಳಲಿದೆ. ಆಂಧ್ರ ಪ್ರದೇಶ, ಒಡಿಶಾ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ವಿಧಾನಸಭೆಯ ಅವಧಿ ಕೂಡ ಜೂನ್ 2024ರಲ್ಲಿ ಅವಧಿ ಮುಗಿಯಲಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದು ಹೇಳಿದ್ದರು.

ಇದನ್ನು ಓದಿ:  ಗುಜರಾತ್ ಹಾಸ್ಟೆಲ್‌ನಲ್ಲಿ ನಮಾಝ್‌ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ ಗುಂಪು ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...