Homeಮುಖಪುಟಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

ಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಕುರಿತು ರಾಜಕೀಯ ಪಕ್ಷಗಳಿಂದ ಪಡೆದ ಅಂಕಿ-ಅಂಶಗಳನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ಈ ಅಂಕಿ-ಅಂಶಗಳ ಪ್ರಕಾರ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಚುನಾವಣಾ ಬಾಂಡ್‌ ಮೂಲಕ ಅತ್ಯಧಿಕ ದೇಣಿಗೆಯನ್ನು ಪಡೆದುಕೊಂಡಿದೆ ಎನ್ನುವುದು ಬಯಲಾಗಿದೆ.

ಈ ವಿವರಗಳು ಏಪ್ರಿಲ್ 12, 2019ರ ಹಿಂದಿನ ಅವಧಿಯದ್ದು ಎಂದು ಹೇಳಲಾಗಿದ್ದು, ಈ ದಿನಾಂಕದ ನಂತರದ ಚುನಾವಣಾ ಬಾಂಡ್ ವಿವರಗಳನ್ನು ಚುನಾವಣಾ ಆಯೋಗ ಕಳೆದ ವಾರ ಸಾರ್ವಜನಿಕಗೊಳಿಸಿದೆ.

ಸುಪ್ರೀಂಕೋರ್ಟ್‌ನ ಆದೇಶದ  ಪ್ರಕಾರ, ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ಭೌತಿಕ ಪ್ರತಿಗಳು, ಡಿಜಿಟಲೀಕರಣಗೊಂಡ ದಾಖಲೆಯನ್ನು ಪೆನ್ ಡ್ರೈವ್‌ ಮೂಲಕ ಹಿಂದಿರುಗಿಸಿದ್ದಾರೆ. ಅದರನ್ವಯ, ಡಿಜಿಟಲೀಕರಣಗೊಂಡ ಅಂಕಿ ಅಂಶವನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಘೋಷಿಸಿದ ಒಂದು ದಿನದ ನಂತರ ಚುನಾವಣಾ ಆಯೋಗ ಈ ಮಹತ್ವದ ಮಾಹಿತಿಯನ್ನು  ಬಿಡುಗಡೆ ಮಾಡಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ದಾಖಲೆಗಳು ಬಾಂಡ್‌ಗಳ ದಿನಾಂಕ, ಮುಖಬೆಲೆಗಳು, ಬಾಂಡ್‌ಗಳ ಸಂಖ್ಯೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆ, ರಶೀದಿಯ ದಿನಾಂಕ ಮತ್ತು ಕ್ರೆಡಿಟ್ ದಿನಾಂಕದ ಮಾತ್ರ ಉಲ್ಲೇಖಿತವಾಗಿದೆ.

ಈ ಹೊಸ ಅಂಕಿ ಅಂಶಗಳ ಪ್ರಕಾರ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ಅತಿ ಹೆಚ್ಚು ಎಂದರೆ 6,986.5 ಕೋಟಿ ಪಡೆದುಕೊಂಡಿದೆ. 2019–20ರ ಅವಧಿಯಲ್ಲಿ ಅತ್ಯಧಿಕ 2,555 ಕೋಟಿ ಪಡೆದುಕೊಂಡಿದೆ ಎಂದು ಚುನಾವಣಾ ಅಯೋಗದ ಅಂಕಿ ಅಂಶದಿಂದ ತಿಳಿದುಬಂದಿದೆ. ತೃಣಮೂಲ ಕಾಂಗ್ರೆಸ್ ಪಕ್ಷವು 2ನೇ ಸ್ಥಾನದಲ್ಲಿದ್ದು, ಚುನಾವಣಾ ಬಾಂಡ್ ಮೂಲಕ 1,397 ಕೋಟಿ ಪಡೆದುಕೊಂಡಿದೆ. ಕಾಂಗ್ರೆಸ್ 1,334.35 ಕೋಟಿ ಪಡೆದಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆಯು ಲಾಟರಿ ಕಿಂಗ್ ಸ್ಯಾಂಟಿಯಾಗೊ ಮಾರ್ಟಿನ್ ಅವರ ಫ್ಯೂಚರ್ ಗೇಮಿಂಗ್‌ನಿಂದ 509 ಕೋಟಿ ಸೇರಿದಂತೆ ಚುನಾವಣಾ ಬಾಂಡ್‌ಗಳ ಮೂಲಕ  656.5 ಕೋಟಿಗಳನ್ನು ಸ್ವೀಕರಿಸಿದೆ ಎಂದು ಚುನಾವಣಾ ಆಯೋಗದ ಮಾಹಿತಿಯು ತೋರಿಸುತ್ತದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಬಿಜೆಡಿಗೆ 944.5 ಕೋಟಿ, ವೈಎಸ್‌ಆರ್ ಕಾಂಗ್ರೆಸ್‌ಗೆ 442.8 ಕೋಟಿ, ಟಿಡಿಪಿಗೆ 181.35 ಕೋಟಿ ಚುನಾವಣಾ ಬಾಂಡ್‌ ಮೂಲಕ ದೇಣಿಗೆ ಬಂದಿದೆ ಎಂದು ಇತ್ತೀಚಿನ ಮಾಹಿತಿಯು ತಿಳಿಸಿದೆ. 6 ಕೋಟಿ ಪಡೆದಿರುವ ಎಐಎಡಿಎಂಕೆಗೆ ಐಪಿಎಲ್‌ನ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದಲೂ ದೇಣಿಗೆ ಪಡೆದುಕೊಂಡಿದೆ ಎನ್ನುವುದು ಮಾಹಿತಿಯಲ್ಲಿ ಬಯಲಾಗಿದೆ.

ಬಿಜೆಪಿಯು ಚುನಾವಣಾ ಬಾಂಡ್‌ ಮೂಲಕ ಅತಿಹೆಚ್ಚು ದೇಣಿಗೆ ಪಡೆದ ಪಕ್ಷವಾಗಿದೆ. 2019–20ರ ಅವಧಿಯಲ್ಲಿ ಪಕ್ಷಕ್ಕೆ ದೇಣಿಗೆ ರೂಪದಲ್ಲಿ 2,555 ಕೋಟಿ ಹರಿದು ಬಂದಿದೆ. 2023ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಬಿಜೆಪಿಗೆ 421.27 ಕೋಟಿ ದೇಣಿಗೆ ದೊರೆತಿದೆ.

ಇತ್ತೀಚೆಗೆ ಎಡಿಆರ್‌(ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌) ಈ ಕುರಿತು ವರದಿಯನ್ನು ಬಿಡುಗಡೆ ಮಾಡಿತ್ತು ಅದರಲ್ಲಿ ಬಿಜೆಪಿ ಚುನಾವಣಾ ಬಾಂಡ್‌ ಯೋಜನೆ ಜಾರಿಯಲ್ಲಿದ್ದ ಮಾರ್ಚ್‌ 2018ರಿಂದ ಜನವರಿ 2024ರವೆರೆಗೆ ಒಟ್ಟು 7,800 ಕೋಟಿ ದೇಣಿಗೆ ಪಡೆದಿದೆ ಎಂದು ಉಲ್ಲೇಖಿಸಿತ್ತು.

ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ದೇಣಿಗೆ ಪಡೆದಿಲ್ಲ ಎಂದು ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಹೇಳಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಅಥವಾ ಸಿಪಿಐ(ಎಂ), ತಾನು ಕೂಡ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಪಡೆದಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿತ್ತು. ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ನೀಡಲಾಗಿತ್ತು.

ಇದನ್ನು ಓದಿ: ಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ ‘ಸಾಹಿತ್ಯ ಉತ್ಸವ’ಕ್ಕೆ ಬಹಿಷ್ಕಾರ ಹಾಕಿದ ಖ್ಯಾತ ಸಾಹಿತಿಗಳು

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...