Homeಮುಖಪುಟಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

ಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಕುರಿತು ರಾಜಕೀಯ ಪಕ್ಷಗಳಿಂದ ಪಡೆದ ಅಂಕಿ-ಅಂಶಗಳನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು, ಈ ಅಂಕಿ-ಅಂಶಗಳ ಪ್ರಕಾರ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಚುನಾವಣಾ ಬಾಂಡ್‌ ಮೂಲಕ ಅತ್ಯಧಿಕ ದೇಣಿಗೆಯನ್ನು ಪಡೆದುಕೊಂಡಿದೆ ಎನ್ನುವುದು ಬಯಲಾಗಿದೆ.

ಈ ವಿವರಗಳು ಏಪ್ರಿಲ್ 12, 2019ರ ಹಿಂದಿನ ಅವಧಿಯದ್ದು ಎಂದು ಹೇಳಲಾಗಿದ್ದು, ಈ ದಿನಾಂಕದ ನಂತರದ ಚುನಾವಣಾ ಬಾಂಡ್ ವಿವರಗಳನ್ನು ಚುನಾವಣಾ ಆಯೋಗ ಕಳೆದ ವಾರ ಸಾರ್ವಜನಿಕಗೊಳಿಸಿದೆ.

ಸುಪ್ರೀಂಕೋರ್ಟ್‌ನ ಆದೇಶದ  ಪ್ರಕಾರ, ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ಭೌತಿಕ ಪ್ರತಿಗಳು, ಡಿಜಿಟಲೀಕರಣಗೊಂಡ ದಾಖಲೆಯನ್ನು ಪೆನ್ ಡ್ರೈವ್‌ ಮೂಲಕ ಹಿಂದಿರುಗಿಸಿದ್ದಾರೆ. ಅದರನ್ವಯ, ಡಿಜಿಟಲೀಕರಣಗೊಂಡ ಅಂಕಿ ಅಂಶವನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಏಪ್ರಿಲ್ 19ರಿಂದ ಜೂನ್ 1ರವರೆಗೆ 7 ಹಂತಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ದಿನಾಂಕಗಳನ್ನು ಘೋಷಿಸಿದ ಒಂದು ದಿನದ ನಂತರ ಚುನಾವಣಾ ಆಯೋಗ ಈ ಮಹತ್ವದ ಮಾಹಿತಿಯನ್ನು  ಬಿಡುಗಡೆ ಮಾಡಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ದಾಖಲೆಗಳು ಬಾಂಡ್‌ಗಳ ದಿನಾಂಕ, ಮುಖಬೆಲೆಗಳು, ಬಾಂಡ್‌ಗಳ ಸಂಖ್ಯೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆ, ರಶೀದಿಯ ದಿನಾಂಕ ಮತ್ತು ಕ್ರೆಡಿಟ್ ದಿನಾಂಕದ ಮಾತ್ರ ಉಲ್ಲೇಖಿತವಾಗಿದೆ.

ಈ ಹೊಸ ಅಂಕಿ ಅಂಶಗಳ ಪ್ರಕಾರ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ಅತಿ ಹೆಚ್ಚು ಎಂದರೆ 6,986.5 ಕೋಟಿ ಪಡೆದುಕೊಂಡಿದೆ. 2019–20ರ ಅವಧಿಯಲ್ಲಿ ಅತ್ಯಧಿಕ 2,555 ಕೋಟಿ ಪಡೆದುಕೊಂಡಿದೆ ಎಂದು ಚುನಾವಣಾ ಅಯೋಗದ ಅಂಕಿ ಅಂಶದಿಂದ ತಿಳಿದುಬಂದಿದೆ. ತೃಣಮೂಲ ಕಾಂಗ್ರೆಸ್ ಪಕ್ಷವು 2ನೇ ಸ್ಥಾನದಲ್ಲಿದ್ದು, ಚುನಾವಣಾ ಬಾಂಡ್ ಮೂಲಕ 1,397 ಕೋಟಿ ಪಡೆದುಕೊಂಡಿದೆ. ಕಾಂಗ್ರೆಸ್ 1,334.35 ಕೋಟಿ ಪಡೆದಿದೆ.

ತಮಿಳುನಾಡಿನ ಆಡಳಿತಾರೂಢ ಡಿಎಂಕೆಯು ಲಾಟರಿ ಕಿಂಗ್ ಸ್ಯಾಂಟಿಯಾಗೊ ಮಾರ್ಟಿನ್ ಅವರ ಫ್ಯೂಚರ್ ಗೇಮಿಂಗ್‌ನಿಂದ 509 ಕೋಟಿ ಸೇರಿದಂತೆ ಚುನಾವಣಾ ಬಾಂಡ್‌ಗಳ ಮೂಲಕ  656.5 ಕೋಟಿಗಳನ್ನು ಸ್ವೀಕರಿಸಿದೆ ಎಂದು ಚುನಾವಣಾ ಆಯೋಗದ ಮಾಹಿತಿಯು ತೋರಿಸುತ್ತದೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.

ಬಿಜೆಡಿಗೆ 944.5 ಕೋಟಿ, ವೈಎಸ್‌ಆರ್ ಕಾಂಗ್ರೆಸ್‌ಗೆ 442.8 ಕೋಟಿ, ಟಿಡಿಪಿಗೆ 181.35 ಕೋಟಿ ಚುನಾವಣಾ ಬಾಂಡ್‌ ಮೂಲಕ ದೇಣಿಗೆ ಬಂದಿದೆ ಎಂದು ಇತ್ತೀಚಿನ ಮಾಹಿತಿಯು ತಿಳಿಸಿದೆ. 6 ಕೋಟಿ ಪಡೆದಿರುವ ಎಐಎಡಿಎಂಕೆಗೆ ಐಪಿಎಲ್‌ನ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದಿಂದಲೂ ದೇಣಿಗೆ ಪಡೆದುಕೊಂಡಿದೆ ಎನ್ನುವುದು ಮಾಹಿತಿಯಲ್ಲಿ ಬಯಲಾಗಿದೆ.

ಬಿಜೆಪಿಯು ಚುನಾವಣಾ ಬಾಂಡ್‌ ಮೂಲಕ ಅತಿಹೆಚ್ಚು ದೇಣಿಗೆ ಪಡೆದ ಪಕ್ಷವಾಗಿದೆ. 2019–20ರ ಅವಧಿಯಲ್ಲಿ ಪಕ್ಷಕ್ಕೆ ದೇಣಿಗೆ ರೂಪದಲ್ಲಿ 2,555 ಕೋಟಿ ಹರಿದು ಬಂದಿದೆ. 2023ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ಬಿಜೆಪಿಗೆ 421.27 ಕೋಟಿ ದೇಣಿಗೆ ದೊರೆತಿದೆ.

ಇತ್ತೀಚೆಗೆ ಎಡಿಆರ್‌(ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌) ಈ ಕುರಿತು ವರದಿಯನ್ನು ಬಿಡುಗಡೆ ಮಾಡಿತ್ತು ಅದರಲ್ಲಿ ಬಿಜೆಪಿ ಚುನಾವಣಾ ಬಾಂಡ್‌ ಯೋಜನೆ ಜಾರಿಯಲ್ಲಿದ್ದ ಮಾರ್ಚ್‌ 2018ರಿಂದ ಜನವರಿ 2024ರವೆರೆಗೆ ಒಟ್ಟು 7,800 ಕೋಟಿ ದೇಣಿಗೆ ಪಡೆದಿದೆ ಎಂದು ಉಲ್ಲೇಖಿಸಿತ್ತು.

ಚುನಾವಣಾ ಬಾಂಡ್‌ಗಳ ಮೂಲಕ ಯಾವುದೇ ದೇಣಿಗೆ ಪಡೆದಿಲ್ಲ ಎಂದು ಮಾಯಾವತಿಯವರ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಹೇಳಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ), ಅಥವಾ ಸಿಪಿಐ(ಎಂ), ತಾನು ಕೂಡ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆ ಪಡೆದಿಲ್ಲ ಎಂದು ಹೇಳಿದೆ.

ಸುಪ್ರೀಂಕೋರ್ಟ್‌ ಖಡಕ್ ನಿರ್ದೇಶನದ ಬಳಿಕ ಎಸ್‌ಬಿಐ ಕೇಂದ್ರ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ ಕುರಿತು ಮಾಹಿತಿಯನ್ನು ನೀಡಿತ್ತು. ಗುರುವಾರ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಖರೀದಿದಾರರ ಪಟ್ಟಿಯಲ್ಲಿ ಕೇವಲ 18,871 ಬಾಂಡ್‌ಗಳ ಮಾರಾಟ ಮಾಡಿರುವ ಬಗ್ಗೆ ಮಾತ್ರ ಮಾಹಿತಿ ನೀಡಲಾಗಿತ್ತು.

ಇದನ್ನು ಓದಿ: ಗಾಝಾ ಹತ್ಯಾಕಾಂಡದ ಬಗ್ಗೆ ಮೌನ: ಅಮೆರಿಕದಲ್ಲಿ ನಡೆಯುವ ವಿಶ್ವದ ಪ್ರತಿಷ್ಠಿತ ‘ಸಾಹಿತ್ಯ ಉತ್ಸವ’ಕ್ಕೆ ಬಹಿಷ್ಕಾರ ಹಾಕಿದ ಖ್ಯಾತ ಸಾಹಿತಿಗಳು

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...