Homeಮುಖಪುಟಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: 'ಹೈ ರಿಸ್ಕ್‌' ಟು 'ಸೇಫ್‌'-19 ಕಂಪೆನಿಗಳ...

ಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: ‘ಹೈ ರಿಸ್ಕ್‌’ ಟು ‘ಸೇಫ್‌’-19 ಕಂಪೆನಿಗಳ ಡಿಟೇಲ್ಸ್‌… ‘

- Advertisement -
- Advertisement -

ರಾಜಕೀಯ ಪಕ್ಷಗಳಿಗೆ ಧನಸಹಾಯ ನೀಡಲು ಚುನಾವಣಾ ಬಾಂಡ್‌ಗಳನ್ನು ಖರೀದಿಸಿರುವ ಕಂಪನಿಗಳ ಪಟ್ಟಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದಾಗ, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಹಣಕಾಸು ಸಚಿವಾಲಯದಿಂದ ಕಾನೂನು ಕ್ರಮ ಎದುರಿಸುತ್ತಿರುವ ಕನಿಷ್ಠ 19 ಕಂಪನಿಗಳು ಎಲೆಕ್ಟ್ರಾಲ್‌ ಬಾಂಡ್‌ ಖರೀದಿ ಮಾಡಿರುವುದು ಕಂಡು ಬರುತ್ತಿದೆ. ಈ 19 ಕಂಪನಿಗಳು ಒಟ್ಟಾಗಿ 2,717 ಕೋಟಿ ರೂಪಾಯಿಗೆ ಚುನಾವಣಾ ಬಾಂಡ್‌ಗಳನ್ನು ಖರೀದಿಸಿವೆ. ಇವುಗಳಲ್ಲಿ 16 ಕಂಪೆನಿಗಳು ಕೋಲ್ಕತ್ತಾದಲ್ಲಿ ನೋಂದಣಿಯಾಗಿರುವುದು ಕಂಡುಬಂದಿದೆ.

ಹಣಕಾಸು ಸಚಿವಾಲಯದ ಹಣಕಾಸು ಗುಪ್ತಚರ ಘಟಕ (ಎಫ್‌ಐಯು) 2018ರಲ್ಲಿ ಮೊದಲ ಬಾರಿಗೆ 9,491 “ಹೆಚ್ಚಿನ ಅಪಾಯದ ಹಣಕಾಸು ಸಂಸ್ಥೆಗಳ” ಪಟ್ಟಿಯನ್ನು ಬಿಡುಗಡೆ ಮಾಡಿದೆ.  ಪಟ್ಟಿಯು, ಈ ಸಂಸ್ಥೆಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯ ಉಲ್ಲಂಘನೆ ಮಾಡುತ್ತಿದೆ ಎಂದು ಕೂಡ ಜಾರಿ ನಿರ್ದೇಶನಾಲಯಕ್ಕೆ ಸುಳಿವು ನೀಡಿತ್ತು.

ಎಫ್‌ಐಯು ಮೂಲಗಳನ್ನು ಉಲ್ಲೇಖಿಸಿ, ಬ್ಯುಸಿನೆಸ್ ಸ್ಟ್ಯಾಂಡರ್ಡ್ ವರದಿಯನ್ನು ಮಾಡಿದ್ದು, ವರದಿಯಲ್ಲಿ ಈ ಸಂಸ್ಥೆಗಳ ಚಟುವಟಿಕೆಗಳ ಮೇಲೆ ನವೆಂಬರ್ 2016ರಲ್ಲಿ ನೋಟುಗಳ ಅಮಾನ್ಯೀಕರಣದ ನಂತರ ಎಫ್‌ಐಯು ನಿಗಾ ಇಟ್ಟಿತ್ತು. ಎಫ್‌ಐಯು ‘ಹೆಚ್ಚಿನ ಅಪಾಯದ ಸಂಸ್ಥೆಗಳು’ ಎಂದು ಗುರುತಿಸಿದ ಎಲ್ಲಾ 19 ಕಂಪನಿಗಳು  ಚುನಾವಣಾ ಬಾಂಡ್‌ ಕುರಿತ 2018ರ ಪಟ್ಟಿಯಲ್ಲಿ ಸೇರಿದೆ ಎಂದು ಹೇಳಲಾಗಿದೆ. ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಈ 19 ಕಂಪನಿಗಳಲ್ಲಿ 18 ಕಂಪನಿಗಳು ಕಾಕತಾಳೀಯವಾಗಿ ಎಫ್‌ಐಯುನ ನಂತರದ ‘ಹೆಚ್ಚಿನ ಅಪಾಯದ’ ವಾರ್ಷಿಕ ಪಟ್ಟಿಗಳಲ್ಲಿ ಕಾಣಿಸಿಕೊಂಡಿಲ್ಲ. ಹಾಗಾಗಿ ಬಾಂಡ್‌ಗಳನ್ನು ಖರೀದಿಸಿರುವುದು ಕಂಡುಬಂದಿರುವ ‘ಹೈ ರಿಸ್ಕ್’ ಕಂಪನಿಗಳಲ್ಲಿ ಕೇವಲ ಒಂದು ಮಾತ್ರ ಕಂಡು ಬಂದಿದೆ ಎಂದು ಅವಲೋಕನದ ವೇಳೆ ಬಯಲಾಗಿದ್ದು, ಉಳಿದ ಕಂಪೆನಿಗಳು ಸೇಫ್‌ ಆಗಿದೆ ಎನ್ನಲಾಗಿದೆ.

2018ರ ಪಟ್ಟಿಯನ್ನು FIU ಹೊರತಂದ ವಾರಗಳ ನಂತರ, ಹಣಕಾಸು ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿದ PTI ವರದಿಯು, 2018ರ ‘ಹೈ ರಿಸ್ಕ್’ ಪಟ್ಟಿಯಲ್ಲಿ ಹೆಸರಿಸಲಾದ 9,491 ಕಂಪನಿಗಳಲ್ಲಿ 1200ಕ್ಕೂ ಹೆಚ್ಚು ಕಂಪೆನಿಗಳು ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಿದೆ ಎಂದು ಹೇಳಿದೆ.

ರೇಣುಕಾ ಇನ್ವೆಸ್ಟ್ಮೆಂಟ್ ಫೈನಾನ್ಸ್ ಲಿಮಿಟೆಡ್

‘ಹೆಚ್ಚಿನ ಅಪಾಯದ’ ಕಂಪೆನಿಗಳ ಪಟ್ಟಿಗಳಲ್ಲಿ ಕಂಪನಿಯು ರೇಣುಕಾ ಇನ್ವೆಸ್ಟ್‌ಮೆಂಟ್ ಫೈನಾನ್ಸ್ ಲಿಮಿಟೆಡ್ ಕಂಡು ಬಂದಿದೆ. ಉತ್ತರ ಪ್ರದೇಶದ ಸೋನ್‌ಭದ್ರದಲ್ಲಿ ನೋಂದಾಯಿತ ರೇಣುಕಾ ಇನ್ವೆಸ್ಟ್‌ಮೆಂಟ್ ಫೈನಾನ್ಸ್ ಲಿಮಿಟೆಡ್ 2018, 2019, 2021, ಮತ್ತು 2022 ರಲ್ಲಿ FIU ನ ವಾರ್ಷಿಕ ‘ಹೈ-ರಿಸ್ಕ್’ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ.

ಏಪ್ರಿಲ್ 12, 2019ರಂದು ಕಂಪನಿಯು ರೂ 5 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. SBI ಇನ್ನೂ ಖರೀದಿಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಒದಗಿಸದಿರುವುದರಿಂದ, ಯಾವ ರಾಜಕೀಯ ಪಕ್ಷವು ಈ ಹಣವನ್ನು ಪಡೆದುಕೊಂಡಿದೆ ಎಂಬುದು ಸ್ಪಷ್ಟವಾಗಿಲ್ಲ.

2018ರ ಹೆಚ್ಚಿನ ಅಪಾಯದ ಪಟ್ಟಿಯಲ್ಲಿದ್ದ ಇತರ ಕಂಪೆನಿಗಳು

ಪಿಎಂಎಲ್‌ಎ ಕಾಯ್ದೆಯನ್ನು ಉಲ್ಲಂಘಿಸಿದ ಕಾರಣಕ್ಕೆ 2018ರ ಎಫ್‌ಐಯುನ ‘ಹೈ ರಿಸ್ಕ್’ ಪಟ್ಟಿಯಲ್ಲಿದ್ದ ಇತರ ಕಂಪೆನಿಗಳು:

ಕಾಮ್ನಾ ಕ್ರೆಡಿಟ್ಸ್ ಮತ್ತು ಪ್ರಮೋಟರ್ಸ್ ಪ್ರೈ. ಲಿ.

2018ರ ಪಟ್ಟಿಯಲ್ಲಿ FIU ಕಾಮ್ನಾ ಕ್ರೆಡಿಟ್ಸ್ ಮತ್ತು ಪ್ರಮೋಟರ್ಸ್ ಪ್ರೈವೇಟ್ ಲಿಮಿಟೆಡ್ PMLA ಮತ್ತು PML ನಿಯಮಗಳನ್ನು ಪಾಲಿಸಿಲ್ಲ ಎಂದು ಕಂಡು ಹಿಡಿದಿತ್ತು. ಕೋಲ್ಕತ್ತಾ ಮೂಲದ ಈ ಕಂಪೆನಿ, ಇದು ಜನವರಿ 4, 2022ರಂದು 5 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಚುನಾವಣಾ ಆಯೋಗ ಉತ್ತರ ಪ್ರದೇಶ, ಮಣಿಪುರ, ಪಂಜಾಬ್, ಉತ್ತರಾಖಂಡ ಮತ್ತು ಗೋವಾದಲ್ಲಿ ವಿಧಾನಸಭಾ ಚುನಾವಣೆ ಘೋಷಿಸಿದ 4 ದಿನಗಳ ಬಳಿಕ ಈ ಬೆಳವಣಿಗೆ ನಡೆದಿತ್ತು.

ಇನ್ನೋಸೆಂಟ್ ಮರ್ಚಂಡೈಸ್ ಪ್ರೈ. ಲಿ.

PMLA ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 2018ರಲ್ಲಿ ಇನೋಸೆಂಟ್ ಮರ್ಚಂಡೈಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯನ್ನು ‘ಹೈ-ರಿಸ್ಕ್’ ಕಂಪನಿಯ ಪಟ್ಟಿಯಲ್ಲಿ ಉಲ್ಲೇಖಿಸಲಾಗಿತ್ತು. ಕೋಲ್ಕತ್ತಾ ಮೂಲದ ಈ ಕಂಪೆನಿಯು ಏಪ್ರಿಲ್ 12, 2019 ರಂದು 25 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

2019ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದ ನಂತರ ಒಂದು ದಿನದ ನಂತರ ಈ ಬಾಂಡ್‌ಗಳನ್ನು ಖರೀದಿಸಲಾಗಿದೆ. ಆದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸರಿಯಾಗಿ ಮಾಹಿತಿ ನೀಡದ ಕಾರಣ ಯಾವ ಪಕ್ಷಕ್ಕೆ ನೀಡಲಾಗಿದೆ ಎಂಬುವುದು ಅಸ್ಪಷ್ಟವಾಗಿದೆ.

ಆಲ್ಮೈಟಿ ಫೈನಾನ್ಸ್ ಅಂಡ್ ಇನ್ವೆಸ್ಟ್‌ಮೆಂಟ್ ಪ್ರೈ. ಲಿಮಿಟೆಡ್

ಕೋಲ್ಕತ್ತಾ ಮೂಲದ ಆಲ್ಮೈಟಿ ಫೈನಾನ್ಸ್ ಅಂಡ್ ಇನ್ವೆಸ್ಟ್‌ಮೆಂಟ್ ಪ್ರೈ. ಲಿಮಿಟೆಡ್ ಜುಲೈ 5, 2019ರಂದು  20 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಈ ದೇಣಿಗೆ ಯಾವ ಪಕ್ಷಕ್ಕೆ  ಹೋಗಿದೆ ಎಂಬುದು ತಿಳಿದಿಲ್ಲವಾದರೂ, ಈ ವೇಳೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ಮತ್ತು ಉಪ ಚುನಾವಣೆಗಳು ನಡೆದಿವೆ.

ಅರಿಹಂತ್ ಎಂಟರ್‌ಪ್ರೈಸಸ್ ಲಿ.

ಅರಿಹಂತ್ ಎಂಟರ್‌ಪ್ರೈಸಸ್ ಲಿಮಿಟೆಡ್ ಕೂಡ ಕೋಲ್ಕತ್ತಾ ಮೂಲದ ಕಂಪನಿಯಾಗಿದೆ. 2019 ರ ಸಾರ್ವತ್ರಿಕ ಚುನಾವಣೆಯ ಮೊದಲ ಹಂತ ಪೂರ್ಣಗೊಂಡ ಒಂದು ದಿನದ ನಂತರ, ಏಪ್ರಿಲ್ 12, 2019ರಂದು 40 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಈ ಕಂಪೆನಿ ಖರೀದಿಸಿತ್ತು. ಇದಲ್ಲದೆ ಜುಲೈ 2019ರಲ್ಲಿ ಮತ್ತೆ 10 ಕೋಟಿ ರೂ. ಬಾಂಡ್‌ಗಳನ್ನು ಖರೀದಿಸಿತ್ತು. ಒಟ್ಟಾರೆಯಾಗಿ ಈ ಕಂಪೆನಿಯು 50 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ನ್ನು ಖರೀದಿಸಿತ್ತು.

ಆಶಿಶ್ ಫೈನಾನ್ಸ್ ಪ್ರೈ.ಲಿಮಿಟೆಡ್

ಇದು ಕೂಡ ಕೋಲ್ಕತ್ತಾದಲ್ಲಿ ನೋಂದಾಯಿತ ಕಂಪೆನಿಯಾಗಿದೆ. ಆಶಿಶ್ ಫೈನಾನ್ಸ್ ಪ್ರೈ.ಲಿಮಿಟೆಡ್ ಜನವರಿ 4 ರಂದು 250 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಆಟಮ್ ಇನ್ವೆಸ್ಟ್ಮೆಂಟ್ & ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್

ಆಟಮ್ ಇನ್ವೆಸ್ಟ್ಮೆಂಟ್ & ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಮುಂಬೈ-ನೋಂದಾಯಿತ ಕಂಪೆನಿಯಾಗಿದೆ. ಇದು ಏಪ್ರಿಲ್ 7, 2022 ರಂದು 10 ಕೋಟಿ ರೂ.ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ. ಏಪ್ರಿಲ್ 2022ರ ನಂತರ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ಮತ್ತು ಉಪ ಚುನಾವಣೆಗಳು ನಡೆದಿವೆ. ಇದಲ್ಲದೆ ಜನವರಿ 24, 2023ರಂದು ಅದು ಮತ್ತೆ 15 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ. 2022-23ರ ನಡುವೆ ಕಂಪೆನಿಯು ಒಟ್ಟು 25 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಬನ್ಸಾಲ್ ಬಿಸಿನೆಸ್ ಪ್ರೈ. ಲಿಮಿಟೆಡ್

ಬನ್ಸಾಲ್ ಬಿಸಿನೆಸ್ ಪ್ರೈ. ಲಿಮಿಟೆಡ್ ಮತ್ತೊಂದು ಕೋಲ್ಕತ್ತಾ ಮೂಲದ ಕಂಪೆನಿ. ಈ ಕಂಪೆನಿ ಗೋವಾ, ಉತ್ತರಾಖಂಡ್, ಪಂಜಾಬ್, ಮಣಿಪುರ ಮತ್ತು ಉತ್ತರಪ್ರದೇಶ ರಾಜ್ಯಗಳ ಅಸೆಂಬ್ಲಿ ಚುನಾವಣೆಗೆ ಮುನ್ನ, ಅಂದರೆ ಜನವರಿ 3, 2022ರಂದು 40 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಏಪ್ರಿಲ್ 10, 2023ರಂದು ಅದು ಮತ್ತೆ 50 ಕೋಟಿ ರೂ.ಮೌಲ್ಯದ ಚುನಾವಣೆ ಬಾಂಡ್‌ಗಳನ್ನು ಖರೀದಿಸಿದೆ. ಒಟ್ಟು ಈ ಸಂಸ್ಥೆ 90 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಕ್ಲಿಕ್ಸ್ ಸೆಕ್ಯುರಿಟೀಸ್ ಪ್ರೈ. ಲಿಮಿಟೆಡ್

ಕ್ಲಿಕ್ಸ್ ಸೆಕ್ಯುರಿಟೀಸ್ ಪ್ರೈ. ಲಿಮಿಟೆಡ್ ಕೋಲ್ಕತ್ತಾ-ನೋಂದಾಯಿತ ಕಂಪೆನಿ. ಇದು ಜನವರಿ 3, 2022ರಂದು 35 ಕೋಟಿ ರೂ. ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

ಕ್ರೋಚೆಟ್ ಟ್ರೇಡ್ ಅಂಡ್ ಇನ್ವೆಸ್ಟ್ಮೆಂಟ್ ಲಿ.

ಕೋಲ್ಕತ್ತಾದ ಲಾಲ್ ಬಜಾರ್ ಪ್ರದೇಶದಲ್ಲಿ ನೋಂದಾಯಿತ ಕ್ರೋಚೆಟ್ ಟ್ರೇಡ್ ಅಂಡ್ ಇನ್ವೆಸ್ಟ್‌ಮೆಂಟ್ ಲಿಮಿಟೆಡ್ ಗಮನಾರ್ಹವಾಗಿ ಅಕ್ಟೋಬರ್ 8, 2021 ರಂದು 200 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಜುಲೈ 7, 2023 ರಂದು ಮತ್ತೆ 150 ಕೋಟಿ.ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಒಟ್ಟಾರೆಯಾಗಿ ಕಂಪೆನಿಯು 350 ಕೋಟಿ.ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಜುಪಿಟರ್ ಮರ್ಚಂಟೈಲ್ ಪ್ರೈ. ಲಿಮಿಟೆಡ್

ಕೋಲ್ಕತ್ತಾ ಮೂಲದ ಜುಪಿಟರ್ ಮರ್ಚಂಟೈಲ್ ಪ್ರೈ. ಲಿಮಿಟೆಡ್ ಕಂಪೆನಿ ಏಪ್ರಿಲ್ 17, 2019ರಂದು 25 ಕೋಟಿ ರೂ.ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಲೈಫ್‌ಲೈನ್ ಮಾರ್ಕೆಟಿಂಗ್ ಪ್ರೈ. ಲಿಮಿಟೆಡ್

ಲೈಫ್‌ಲೈನ್ ಮಾರ್ಕೆಟಿಂಗ್ ಪ್ರೈ.ಲಿಮಿಟೆಡ್ ಕೋಲ್ಕತ್ತಾ ಮೂಲದ ಕಂಪೆನಿ, ಇದು ಅಕ್ಟೋಬರ್ 7, 2021ರಂದು 200ಕೋಟಿ ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಮನು ವ್ಯಾಪಾರ್ ಪ್ರೈ. ಲಿಮಿಟೆಡ್

ಮನು ವ್ಯಾಪಾರ್ ಪ್ರೈ.ಲಿಮಿಟೆಡ್ ಕೋಲ್ಕತ್ತಾದಲ್ಲಿ ನೋಂದಾಯಿಸಲಾದ ಕಂಪೆನಿಯಾಗಿದೆ, ಈ ಕಂಪೆನಿಯು ಚುನಾವಣಾ ಬಾಂಡ್‌ಗಳನ್ನು ಜನವರಿ 24, 2023ರಂದು 300 ಕೋಟಿ ರೂ. ಮತ್ತು  ಜನವರಿ 11, 2024 ರಂದು 200 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಅಂದರೆ ಒಟ್ಟಾರೆ 500 ಕೋಟಿ.ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ಪ್ಲುಟೊ ಫೈನಾನ್ಸ್ ಪ್ರೈ. ಲಿಮಿಟೆಡ್

ಪ್ಲುಟೊ ಫೈನಾನ್ಸ್ ಪ್ರೈ. ಲಿಮಿಟೆಡ್ ಕೂಡ ಕೋಲ್ಕತ್ತಾ ಮೂಲದ ಕಂಪನಿ. ಜುಲೈ 6, 2021ರಂದು 22 ಕೋಟಿ ರೂ.ಮೌಲ್ಯದ ಬಾಂಡ್‌ಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (ಎಸ್‌ಬಿಐ) ಈ ಕಂಪೆನಿ ಖರೀದಿಸಿದೆ.

ಜನವರಿ 4, 2024ರಂದು, 25 ಕೋಟಿ.ರೂ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಆ ಬಳಿಕ 50 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. ಒಟ್ಟಾರೆಯಾಗಿ ಈ ಕಂಪೆನಿ  97 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ನ್ನು ಖರೀದಿಸಿದೆ.

ರಾಮೋಲಿ ಡೀಲರ್ ಪ್ರೈ. ಲಿ.

ರಾಮೋಲಿ ಡೀಲರ್ಸ್ ಕೂಡ ಕೋಲ್ಕತ್ತಾ ನೋಂದಾಯಿತ ಕಂಪನಿಯಾಗಿದೆ. ಇದು ಜನವರಿ 3, 2022ರಂದು 25 ಕೋಟಿ ರೂ.ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ.

ರಾಣಿ ಸತಿ ಮರ್ಕೆಂಟೈಲ್ ಪ್ರೈ. ಲಿಮಿಟೆಡ್

ರಾಣಿ ಸತಿ ಮರ್ಕೆಂಟೈಲ್ ಪ್ರೈ.ಲಿಮಿಟೆಡ್ ಕೋಲ್ಕತ್ತಾ ಮೂಲದ ಕಂಪನಿ, ಅಕ್ಟೋಬರ್ 5, 2021ರಂದು 30 ಕೋಟಿ ರೂ. ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಮತ್ತು ಜನವರಿ 6, 2024 ರಂದು 75 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದೆ.

ರೈಟ್ ಏಡ್ ಕನ್ಸಲ್ಟೆಂಟ್ಸ್ ಪ್ರೈ.ಲಿಮಿಟೆಡ್

ಕೋಲ್ಕತ್ತಾ ಲಾಲ್ ಬಜಾರ್ ಮೂಲದ ಈ ಕಂಪನಿಯು ಅಕ್ಟೋಬರ್ 8, 2021ರಂದು 150 ಕೋಟಿ ರೂ. ಮೌಲ್ಯದ ಮತ್ತು ಜುಲೈ 10, 2023 ರಂದು 150 ಕೋಟಿ ರೂ. ಮೌಲ್ಯದ ಹೆಚ್ಚಿನ ಬಾಂಡ್‌ಗಳನ್ನು ಖರೀದಿಸಿದೆ.

ಸಿಲ್ವರ್ಟೋನ್ ಸೆಕ್ಯುರಿಟೀಸ್ ಪ್ರೈ. ಲಿಮಿಟೆಡ್

ಇದು ಕೂಡ ಕೋಲ್ಕತ್ತಾದ ಲಾಲ್ ಬಜಾರ್‌ನಲ್ಲಿ ನೋಂದಾಯಿತ ಕಂಪನಿಯಾಗಿದೆ. ಅಕ್ಟೋಬರ್ 2021ರಂದು 200 ಕೋಟಿ ರೂ. ಮೌಲ್ಯದ ಮತ್ತು ಜುಲೈ 10, 2023 ರಂದು 150 ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಶ್ರೀನಾಥ್ ಫಿನ್ವೆಸ್ಟ್ ಪ್ರೈ. ಲಿಮಿಟೆಡ್

ಇದು ಕೂಡ ಕೋಲ್ಕತ್ತಾ ಮೂಲದ ಕಂಪನಿ. ಇದು ಜುಲೈ 7, 2021ರಂದು 10 ಕೋಟಿ ರೂ.ಮೌಲ್ಯದ ಮತ್ತು ಜನವರಿ 7, 2022 ರಂದು 20 ಕೋಟಿ ಮೌಲ್ಯದ ಬಾಂಡ್‌ಗಳನ್ನು ಖರೀದಿಸಿದೆ.

ಸುಧಾ ಕಮರ್ಷಿಯಲ್ ಕಂಪನಿ ಲಿ.

ಇದು ಕೋಲ್ಕತ್ತಾ-ನೋಂದಾಯಿತ ಕಂಪೆನಿ, ಏಪ್ರಿಲ್ 20, 2019ರಂದು 30 ಕೋಟಿ ರೂ. ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

ಶ್ವೇತಾ ಎಸ್ಟೇಟ್ಸ್ ಪ್ರೈ. ಲಿಮಿಟೆಡ್

ದೆಹಲಿಯ ಏರೋ ಸಿಟಿಯಲ್ಲಿ ನೋಂದಣಿಯಾಗಿರುವ ಈ ಕಂಪನಿಯು ಏಪ್ರಿಲ್ 16, 2019ರಂದು 200 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದೆ.

ಇದನ್ನು ಓದಿ: ಚುನಾವಣಾ ಬಾಂಡ್ ಮೂಲಕ ಅತಿ ಹೆಚ್ಚು ದೇಣಿಗೆ ಪಡೆದ ಬಿಜೆಪಿ: ಚು.ಆಯೋಗದಿಂದ ಹೊಸ ಮಾಹಿತಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...