Homeಮುಖಪುಟನಮಾಝ್‌ ಮಾಡುತ್ತಿದ್ದವರ ಮೇಲೆ ಬೂಟು ಕಾಲಿನಿಂದ ಒದ್ದ ಪೊಲೀಸ್‌: ವರದಿ ಕೇಳಿದ ಕೋರ್ಟ್

ನಮಾಝ್‌ ಮಾಡುತ್ತಿದ್ದವರ ಮೇಲೆ ಬೂಟು ಕಾಲಿನಿಂದ ಒದ್ದ ಪೊಲೀಸ್‌: ವರದಿ ಕೇಳಿದ ಕೋರ್ಟ್

- Advertisement -
- Advertisement -

ಕಳೆದ ಶುಕ್ರವಾರ ದೆಹಲಿಯ ಇಂದರ್‌ಲೋಕ್ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡುತ್ತಿದ್ದ ಮುಸ್ಲಿಮರ ಮೇಲೆ ಬೂಟು ಕಾಲಿನಿಂದ ಒದ್ದು ಪೊಲೀಸ್‌ ಅಧಿಕಾರಿ ದೌರ್ಜನ್ಯ ನಡೆಸಿರುವ ಘಟನೆಯ ಬಗ್ಗೆ ದೆಹಲಿ ನ್ಯಾಯಾಲಯವು ಡಿಸಿಪಿಯಿಂದ ವರದಿಯನ್ನು ಕೇಳಿದೆ.

ಭಾರೀ ಕೋಲಾಹಲ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿ ತೀಸ್ ಹಜಾರಿಯಲ್ಲಿರುವ ನ್ಯಾಯಾಲಯವು ಮುಂದಿನ ವಿಚಾರಣೆಯ ಮೇ 1ರೊಳಗೆ ತೆಗೆದುಕೊಂಡ ಕ್ರಮಗಳ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ. ಸಬ್ ಇನ್ಸ್‌ಪೆಕ್ಟರ್ ಮನೋಜ್ ತೋಮರ್ ದೆಹಲಿಯ ಮಕ್ಕಿ ಜಮಾ ಮಸೀದಿ ಬಳಿಯ ಇಂದರ್‌ಲೋಕ್ ಪ್ರದೇಶದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವವರಿಗೆ ಬೂಟು ಕಾಲಿನಿಂದ ಒದ್ದ ಅಮಾನವೀಯ ಘಟನೆಯ ವಿಡಿಯೋ ವೈರಲ್‌ ಆಗಿತ್ತು. ಪೊಲೀಸ್‌ ಅಧಿಕಾರಿಯ ಕೃತ್ಯಕ್ಕೆ ವ್ಯಾಪಕವಾದ ಖಂಡನೆ ವ್ಯಕ್ತವಾಗಿತ್ತು. ಘಟನೆಗೆ ಸಂಬಂಧಿಸಿ ಮಾ.8ರಂದು ಆರೋಪಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ದೆಹಲಿಯ ರಸ್ತೆಯಲ್ಲಿ ಶುಕ್ರವಾರದ ನಮಾಝ್‌ ಮಾಡುತ್ತಿದ್ದ ಮುಸ್ಲಿಮ್‌ ಸಮುದಾಯದ ಜನರ ಮೇಲೆ ಒದ್ದು ದುಷ್ಕೃತ್ಯವನ್ನು ಮೆರದ ಪೊಲೀಸರ ವರ್ತನೆ ಬಗ್ಗೆ ವ್ಯಾಪಕವಾದ ಖಂಡನೆ ವ್ಯಕ್ತವಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಮುಸ್ಲಿಮರು ನಮಾಜ್ ಮಾಡುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರು ಘಟನೆಯ ಬಗ್ಗೆ ಜಗತ್ತಿಗೆ ವಿವರಿಸಬೇಕಾಗಿದೆ ಎಂದು ಹೇಳಿದ್ದರು.

ನೀವು ನಮ್ಮ ಮೇಲೆ ಒದ್ದರೆ ಅಥವಾ ಗುಂಡು ಹಾರಿಸಿದರೆ, ನಾವು ನಮಾಝ್‌ ನಿಲ್ಲಿಸುವುದಿಲ್ಲ. ಶುಕ್ರವಾರದ ಘಟನೆಯು ಮುಸ್ಲಿಮರ ವಿರುದ್ಧ ಜನರ ಮನಸ್ಸು ಎಷ್ಟು ಭ್ರಷ್ಟಗೊಂಡಿದೆ ಎಂಬುವುದನ್ನು ಎತ್ತಿ ತೋರಿಸುತ್ತಿದೆ. ಶುಕ್ರವಾರದಂದು ದೆಹಲಿಯ ರಸ್ತೆಗಳಲ್ಲಿ ಜನರು ಸೇರುವುದು ಮತ್ತು ನಮಾಝ್‌ನಲ್ಲಿ ಪಾಲ್ಗೊಳ್ಳುವುದು ಸಾಮಾನ್ಯವಾಗಿದೆ. ಹಿಂದಿನ ದೆಹಲಿ ಗಲಭೆಗಳಲ್ಲಿ ಮುಸ್ಲಿಮರನ್ನು ಪೊಲೀಸರು ಗುರಿಯಾಗಿಸಿಕೊಂಡ ಬಗೆಗೆ ದೆಹಲಿ ಪೊಲೀಸರು ಕಲಿಯಬೇಕು. ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ, ಮುಸ್ಲಿಮರಿಗೆ ಎಷ್ಟು ಘನತೆ ಮತ್ತು ಗೌರವವಿದೆ ಎಂಬುವುದನ್ನು ಇದು ಹೇಳುತ್ತದೆ. ನಾನು ಪ್ರಧಾನಿ, ಬಿಜೆಪಿಯವರನ್ನು ಕೇಳಲು ಬಯಸುತ್ತೇನೆ ಅವಮಾನಕ್ಕೊಳಗಾದ ವ್ಯಕ್ತಿ ಯಾವ ಕುಟುಂಬಕ್ಕೆ ಸೇರಿದವನು? ಎಂದು ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದರು.

ಘಟನೆಯ ಬಗ್ಗೆ ಕಾಂಗ್ರೆಸ್‌ನ ದೆಹಲಿ ಘಟಕವು ದೆಹಲಿ ಪೊಲೀಸರನ್ನು ನಿನ್ನೆ ತರಾಟೆಗೆ ತೆಗೆದುಕೊಂಡಿತ್ತು. ಇದು ತುಂಬಾ ನಾಚಿಕೆಗೇಡಿನ ಸಂಗತಿ! ರಸ್ತೆಯಲ್ಲಿ ನಮಾಝ್‌ ಮಾಡುವವರನ್ನು ಒದೆಯುತ್ತಿರುವ ದಿಲ್ಲಿ ಪೊಲೀಸ್ ಜವಾನ, ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಏನಿದೆ…? ಎಂದು ಪ್ರಶ್ನಿಸಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: ‘ಹೈ ರಿಸ್ಕ್‌’ ಟು ‘ಸೇಫ್‌’-19 ಕಂಪೆನಿಗಳ ಡಿಟೇಲ್ಸ್‌… ‘

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...