Homeಮುಖಪುಟಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

ಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಯಾವ ಯಾವ ಪಕ್ಷಗಳು ಚುನಾವಣಾ ಬಾಂಡ್‌ ಮೂಲಕ ಯಾವ ಕಂಪೆನಿಗಳಿಂದ ಎಷ್ಟು ದೇಣಿಗೆ ಪಡೆದಿದೆ ಎಂಬ ಬಗ್ಗೆ ಒಂದೊಂದಾಗಿ ಮಾಹಿತಿಗಳು ಬಯಲಾಗುತ್ತಿದೆ. ಇದೀಗ ಜೆಡಿಎಸ್‌ ಪಕ್ಷವು ಒಟ್ಟು 89.75 ಕೋಟಿ ಚುನಾವಣಾ ಬಾಂಡ್‌ ಪಡೆದಿದ್ದು, ತೆಲಂಗಾಣ ಮೂಲದ ಕಂಪೆನಿಯಿಂದ ಚುನಾವಣಾ ಬಾಂಡ್‌ ಮೂಲಕ ಅತಿ ಹೆಚ್ಚು ದೇಣಿಗೆಯನ್ನು ಪಡೆದಿದೆ ಎನ್ನುವುದು ಬಯಲಾಗಿದೆ.

ಚುನಾವಣಾ ಆಯೋಗ ನಿನ್ನೆ ರಾಜಕೀಯ ಪಕ್ಷಗಳು 2019ರಿಂದ ಸ್ವೀಕರಿಸಿದ ಚುನಾವಣಾ ಬಾಂಡ್‌ಗಳ ಬಗ್ಗೆ ಹೊಸ ಮಾಹಿತಿಯನ್ನು ಸಾರ್ವಜನಿಕಗೊಳಿಸಿದೆ. ಇದರಲ್ಲಿ ಚುನಾವಣಾ ಬಾಂಡ್‌ಗಳ ಮೂಲಕ ಅತಿ ಹೆಚ್ಚು ದೇಣಿಗೆಗಳನ್ನು ಪಡೆದಿರುವ ಪಕ್ಷಗಳ ಬಗ್ಗೆ ಕೂಡ ಮಾಹಿತಿ ಲಭ್ಯವಾಗಿದೆ. ಚುನಾವಣಾ ಬಾಂಡ್‌ ಪಡೆದ ನಾಲ್ಕು ಪ್ರಾದೇಶಿಕ ಪಕ್ಷಗಳಲ್ಲಿ ಜೆಡಿಎಸ್‌ ಕೂಡ ಸೇರಿದೆ. ಇದಲ್ಲದೆ ತಮಿಳುನಾಡಿನ ಎಐಎಡಿಎಂಕೆ ಮತ್ತು ಡಿಎಂಕೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಪಡೆದಿರುವ ಚುನಾವಣಾ ಬಾಂಡ್‌ ಬಗ್ಗೆ ಕೂಡ ಮಾಹಿತಿ ಈ ಮೂಲಕ ಲಭ್ಯವಾಗಿದೆ.

ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (MEIL) ನಿಂದ ಅತಿ ಹೆಚ್ಚು ದೇಣಿಗೆ ಪಡೆದ ಜೆಡಿಎಸ್

ಜೆಡಿಎಸ್‌ ಪಕ್ಷವು  89.75 ಕೋಟಿರೂ. ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆಯನ್ನು ಪಡೆದಿದ್ದು, ಅದರಲ್ಲಿ ಹೆಚ್ಚಿನ ಅಂದರೆ  50 ಕೋಟಿ ಹೈದರಾಬಾದ್ ಮೂಲದ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (MEIL)ನಿಂದ ಪಡೆದಿದೆ. ಕರ್ನಾಟಕದಲ್ಲಿ ಕಂಪನಿಗಳ ಕೊರತೆಯಿಲ್ಲ, ಆದರೆ ಕರ್ನಾಟಕ ಮೂಲದ ಪ್ರಾದೇಶಿಕ ಪಕ್ಷವು ಹೈದರಾಬಾದ್ ಮೂಲದ ಇನ್ಫ್ರಾ ಮೇಜರ್‌ನಿಂದ ದೇಣಿಗೆ ಪಡೆದಿರುವುದು ಅಚ್ಚರಿಯನ್ನು ಮೂಡಿಸಿದೆ.

ಮೇಘಾ ಇಂಜಿನಿಯರಿಂಗ್ ಮತ್ತು ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ರಾಷ್ಟ್ರೀಯವಾಗಿ ಚುನಾವಣಾ ಬಾಂಡ್‌ಗಳ ಖರೀದಿದಾರರಲ್ಲಿ ಅಗ್ರ ಎರಡನೇ ಸ್ಥಾನದಲ್ಲಿದೆ. ಕಂಪನಿಯು 2019 ಮತ್ತು 2023ರ ನಡುವೆ 966 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ. MEIL ಈಗ TV9 ನೆಟ್‌ವರ್ಕ್‌ನಲ್ಲಿ ಪ್ರಮುಖ ಪಾಲನ್ನು ಹೊಂದಿದೆ.

MEIL ನಿಂದ JD(S) ಗೆ ಮೊದಲ ಬಾಂಡ್‌ನ್ನು ಜನವರಿ 2019ರಲ್ಲಿ ನೀಡಲಾಗಿದೆ. ಉಳಿದ 40 ಕೋಟಿ ರೂ.ಗಳು ಏಪ್ರಿಲ್ 18, 2023ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರದ ಮಧ್ಯದ ವೇಳೆ ಜೆಡಿಎಸ್‌ಗೆ ದೊರೆತಿದೆ. ಏಪ್ರಿಲ್ 21ರಂದು ತೆಲಂಗಾಣದಲ್ಲಿ ಆಡಳಿತ ಪಕ್ಷವಾಗಿದ್ದ ಕೆ. ಚಂದ್ರಶೇಖರ್ ರಾವ್ ಅವರ ಬಿಆರ್‌ಎಸ್‌ ಪಕ್ಷ ಕರ್ನಾಟಕ ಚುನಾವಣೆಯಲ್ಲಿ ಜೆಡಿಎಸ್‌ನ್ನು ಬೆಂಬಲಿಸುವುದಾಗಿ ಸಾರ್ವಜನಿಕವಾಗಿ ಘೋಷಿಸಿತ್ತು ಮತ್ತು ರಾಜ್ಯದಲ್ಲಿ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿತ್ತು. ಅಂತಿಮವಾಗಿ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ್ನು ಸೋಲಿಸಿ ಕಾಂಗ್ರೆಸ್ ಗೆದ್ದಿದೆ. ಆ ಬಳಿಕದ ಬೆಳವಣಿಗೆಯಲ್ಲಿ ಜೆಡಿಎಸ್ ಮೋದಿ ಪಾಳಯದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಮತ್ತು ಈಗ ಎನ್‌ಡಿಎ ಭಾಗವಾಗಿದ್ದಾರೆ. ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ನಿರೀಕ್ಷೆಯಿದೆ.

ಜೆಡಿಎಸ್ ಸಲ್ಲಿಸಿದ ಮಾಹಿತಿ ಪ್ರಕಾರ ಪಕ್ಷವು ಬೈಕಾನ್ ಲಿಮಿಟೆಡ್‌ನಿಂದ 1 ಕೋಟಿ ರೂ. ಪಡೆದಿದೆ ಎಂದು ಹೇಳುತ್ತದೆ. ಆದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಳೆದ ವಾರ ಹೊರಡಿಸಿದ ಬಾಂಡ್-ಖರೀದಿದಾರರ ಪಟ್ಟಿಯಲ್ಲಿ ಈ ಬಗ್ಗೆ ಮಾಹಿತಿ ಕಂಡು ಬಂದಿಲ್ಲ. ಪಕ್ಷವು ಇನ್ಫೋಸಿಸ್, ಎಂಬಸಿ ಗ್ರೂಪ್ ಆಫ್ ಕಂಪನಿಗಳು, ಹೆಲ್ತ್ ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್, ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈ. ಲಿಮಿಟೆಡ್., ಶಂಕರನಾರಾಯಣ ಕನ್ಸ್ಟ್ರಕ್ಷನ್ಸ್ (ಪಿ) ಲಿಮಿಟೆಡ್, JSW ಸ್ಟೀಲ್ ಲಿಮಿಟೆಡ್, ಅಮರ್ ರಾಜ್ ಗ್ರೂಪ್ಸ್ ಮತ್ತು ಆದಿತ್ಯ ಬಿರ್ಲಾ ಗ್ರೂಪ್‌ನಿಂದ ಕೂಡ ದೇಣಿಗೆಯನ್ನು ಪಡೆದುಕೊಂಡಿದೆ.

2018ರಲ್ಲಿ ಜೆಡಿಎಸ್ ತನ್ನ ಹೆಚ್ಚಿನ ಚುನಾವಣಾ ಬಾಂಡ್ ಹಣವನ್ನು ಅಂದರೆ 22 ಕೋಟಿ ರೂ. ಎಂಬಸ್ಸಿ ಗ್ರೂಪ್ ಆಫ್ ಕಂಪೆನೀಸ್ ಪ್ರೈವೇಟ್‌ನಿಂದ ಪಡೆದುಕೊಂಡಿದೆ. ಇದರ ನೋಂದಾಯಿತ ಕಚೇರಿ ಬೆಂಗಳೂರಿನಲ್ಲಿದೆ. ಇದನ್ನು 1993ರಲ್ಲಿ ಸ್ಥಾಪಿಸಲಾಗಿತ್ತು. ಇದು ಭಾರತದ ಅತಿದೊಡ್ಡ ರಿಯಲ್ ಎಸ್ಟೇಟ್ ಸಂಘಟಿತ ಸಂಸ್ಥೆಗಳಲ್ಲಿ ಒಂದಾಗಿದೆ.

ಏಪ್ರಿಲ್ 17, 2018ರಂದು ಹೆಲ್ತ್ ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ ಪ್ರೈವೇಟ್‌ 25 ಲಕ್ಷ ರೂ.ವನ್ನು ಜೆಡಿಎಸ್‌ಗೆ ಚುನಾವಣಾ ಬಾಂಡ್‌ ಮೂಲಕ ನೀಡಿದೆ. ಮೇ 14, 2018ರಂದು ಬೈಕಾನ್ ಲಿಮಿಟೆಡ್ 50 ಲಕ್ಷ ರೂ.ವನ್ನು ಬಾಂಡ್ ಮೂಲಕ ನೀಡಿದೆ. ಮಾರ್ಚ್ 20, 2018ರಂದು ಜೆಡಿಎಸ್‌ ಪಕ್ಷವು ಇನ್ಫೋಸಿಸ್ ಟೆಕ್ನಾಲಜೀಸ್ ಲಿಮಿಟೆಡ್‌ನಿಂದ 1 ಕೋಟಿ ರೂ. ಚುನಾವಣಾ ಬಾಂಡ್‌ ಮೂಲಕ ಪಡೆದುಕೊಂಡಿದೆ.

2019ರ ಸಾರ್ವತ್ರಿಕ ಚುನಾವಣೆಗಳ ಮೊದಲು ಮತ್ತು ಸಮಯದಲ್ಲಿ ಜೆಡಿಎಸ್ ಒಟ್ಟಾರೆಯಾಗಿ 25 ಕೋಟಿ ರೂ. ಚುನಾವಣಾ ಬಾಂಡ್‌ಗಳನ್ನು ಪಡೆದಿದೆ. ಜನವರಿ 9, 2019ರಂದು ಪಕ್ಷವು ,ಶಾಹಿ ಎಕ್ಸ್‌ಪೋರ್ಟ್ಸ್ ಪ್ರೈವೇಟ್‌ ಲಿಮಿಟೆಡ್‌ನಿಂದ 1.5 ಕೋಟಿ ರೂ. ಚುನಾವಣಾ ಬಾಂಡ್‌ ಪಡೆದಿದೆ. ಮೆಘಾ ಇಂಜಿನಿಯರಿಂಗ್ ಮತ್ತು ಕನ್ಸ್ಟ್ರಕ್ಷನ್ಸ್ ಪ್ರೈ.ಲಿ.ಲಿಮಿಟೆಡ್ 10 ಕೋಟಿ ರೂ. ಚುನಾವಣಾ ಬಾಂಡ್‌ ನೀಡಿದೆ. ಮಾರ್ಚ್ 20, 2019ರಂದು ಶಂಕರನಾರಾಯಣ ಕನ್‌ಸ್ಟ್ರಕ್ಷನ್ಸ್ (ಪಿ) ಲಿಮಿಟೆಡ್‌ನಿಂದ 5 ಕೋಟಿ ರೂಪಾಯಿಗಳನ್ನು ಜೆಡಿಎಸ್‌ ಪಡೆದುಕೊಂಡಿದೆ. ಅದೇ ದಿನ ಪಕ್ಷವು ಒದಗಿಸಿದ ಮಾಹಿತಿಯಲ್ಲಿ ಬೈಕಾನ್ ಲಿಮಿಟೆಡ್‌ನಿಂದ ಮತ್ತೆ 1 ಕೋಟಿ ರೂ.ವನ್ನು ಜೆಡಿಎಸ್‌ ಚುನಾವಣಾ ಬಾಂಡ್‌ ಮೂಲಕ ಪಡೆದುಕೊಂಡಿದೆ. ಏಪ್ರಿಲ್ 6, 2019ರಂದು ಜೆಡಿಎಸ್ JSW ಸ್ಟೀಲ್ ಲಿಮಿಟೆಡ್‌ನಿಂದ 3.5 ಕೋಟಿ ರೂ.ವನ್ನು ಚುನಾವಣಾ ಬಾಂಡ್‌ ಮೂಲಕ ಪಡೆದಿದೆ ಎನ್ನುವುದು ಬಯಲಾಗಿದೆ.

ಇದನ್ನು ಓದಿ: ಚುನಾವಣಾ ಬಾಂಡ್‌ ಖರೀದಿ ಬಳಿಕ 18 ಕಂಪೆನಿಗಳು ಸೇಫ್: ‘ಹೈ ರಿಸ್ಕ್‌’ ಟು ‘ಸೇಫ್‌’-19 ಕಂಪೆನಿಗಳ ಡಿಟೇಲ್ಸ್‌… ‘

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...