Homeಫ್ಯಾಕ್ಟ್‌ಚೆಕ್Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ...

Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬೆಂಗಳೂರಿನ ನಗರತ್‌ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ‘ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮೊಬೈಲ್ ಅಂಗಡಿ ಮಾಲೀಕನಿಗೆ ಮುಸ್ಲಿಂ ಯುವಕರ ಗುಂಪು ಹಲ್ಲೆ’ ನಡೆಸಿದೆ ಎಂಬ ಸುದ್ದಿ ನಿನ್ನೆ (ಮಾ.18) ಸಂಜೆಯಿಂದ ಹಬ್ಬಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ವೈರಲ್ ಆಗಿದೆ.

ಕನ್ನಡದ ಅನೇಕ ಮುಖ್ಯವಾಹಿನಿ ಮಾಧ್ಯಮಗಳು, ಬಿಜೆಪಿ ಪಕ್ಷ, ಅದರ ನಾಯಕರು ಮತ್ತು ಕೆಲ ಪತ್ರಕರ್ತರು ವಿಡಿಯೋ ಹಂಚಿಕೊಂಡು ಇದೇ ಪ್ರತಿಪಾದನೆಯನ್ನು ಮಾಡಿದ್ದಾರೆ.

ಕನ್ನಡ ಮಾಧ್ಯಮಗಳಾದ ಸುವರ್ಣ ನ್ಯೂಸ್, ವಿಸ್ತಾರ ನ್ಯೂಸ್, ಕನ್ನಡ ಪ್ರಭ, ಕನ್ನಡ ದುನಿಯಾ ಹಾಗೂ ಇತರ ವೆಬ್‌ಸೈಟ್‌ಗಳಲ್ಲಿ ಈ ಸುದ್ದಿ ಪ್ರಕಟಗೊಂಡಿದೆ.

‘ಸಂಜೆ ನಮಾಜ್ ಟೈಂನಲ್ಲಿ ಹನುಮಾನ್‌ ಚಾಲೀಸ್ ಹಾಕ್ತಿಯಾ ಅಂತಾ ಯುವಕನಿಗೆ ಥಳಿತ: ಎಫ್‌ಐಅರ್‌ಗೆ ಪೊಲೀಸರು ಹಿಂದೇಟು? ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಸುವರ್ಣ ನ್ಯೂಸ್‌, “ಭಕ್ತಿಗೀತೆ ಹಾಡುಗಳನ್ನು ಹಾಕಿದ್ದಕ್ಕೆ ಐದಾರು ಮುಸ್ಲಿಂ ಯುವಕರಿಂದ ಯುವಕನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ನಗರತ್ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿ ನಡೆದಿದೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ

‘ನಮಾಜ್‌ ವೇಳೆ ಹನುಮಾನ್‌ ಚಾಲೀಸ ಹಾಕಿದ ಆರೋಪ: ಮೊಬೈಲ್‌ ಅಂಗಡಿ ಮಾಲೀಕನಿಗೆ ಯುವಕರಿಂದ ಥಳಿತ, ಆರ್ ಅಶೋಕ್ ಕಿಡಿ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಕನ್ನಡ ಪ್ರಭ, “ನಮಾಜ್‌ ಮಾಡುವ ಸಮಯದಲ್ಲಿ ಹನುಮಾನ್‌ ಚಾಲೀಸ್‌ ಹಾಕಿದ ಎಂದು ಆರೋಪಿಸಿ ಮೊಬೈಲ್‌ ಅಂಗಡಿ ಮಾಲೀಕನ ಮೇಲೆ ಐವರು ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ 

‘Assault Case : ಮೊಬೈಲ್‌ ಶಾಪ್‌ನಲ್ಲಿ ಭಜನೆ ಹಾಡು ಹಾಕಿದ್ದಕ್ಕೆ ಕಿರಿಕ್‌; ಯುವಕನ ನೆಲಕ್ಕೆ ಕೆಡವಿ ಕಾಲಿನಿಂದ ಒದ್ದ ಪುಂಡರು’ ಎಂಬ ಶೀರ್ಷಿಕೆಯ ಸುದ್ದಿ ಪ್ರಕಟಿಸಿರುವ ವಿಸ್ತಾರ ನ್ಯೂಸ್, “Assault Case : ನಮಾಜ್‌ ಮಾಡುವಾಗ ಭಕ್ತಿಗೀತೆ ಹಾಕ್ತಿಯಾ ಎಂದು ಕಿರಿಕ್‌ ತೆಗೆದ ಕೆಲ ಪುಂಡ ಪೋಕರಿಗಳು ಯುವಕನನ್ನು ಎಳೆದಾಡಿ ಮನಬಂದಂತೆ ಹಲ್ಲೆ ಮಾಡಿದ್ದರು. ಇದೀಗ ಅವರನ್ನೆಲ್ಲ ಪೊಲೀಸರು ಬಂಧಿಸಿದ್ದಾರೆ” ಎಂದು ವರದಿ ಮಾಡಿದೆ.

ಸುದ್ದಿ ಲಿಂಕ್ ಇಲ್ಲಿದೆ

‘ಬೆಂಗಳೂರು: ಮೊಬೈಲ್ ಅಂಗಡಿ ಮಾಲೀಕನಿಗೆ ಮನಸ್ಸೋ ಇಚ್ಚೆ ಥಳಿಸಿದ ಗೂಂಡಾಗಳು’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಿಸಿರುವ ಕನ್ನಡ ದುನಿಯಾ ವೆಬ್‌ಸೈಟ್‌, ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಕಿರಿಕ್ ತೆಗೆದ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ ಎಂದು ಮುಖೇಶ್ ಹೇಳಿದ್ದಾರೆ. ಮೊಬೈಲ್ ಅಂಗಡಿ ಮಾಲೀನ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ’ ಎಂದು ವರದಿ ಮಾಡಿದೆ.


ಸುದ್ದಿ ಲಿಂಕ್ ಇಲ್ಲಿದೆ 

“ಕರ್ನಾಟಕದಲ್ಲಿ ಹನುಮಾನ್ ಚಲೀಸಾ ನಿಷೇಧ ಮಾಡಲಾಗಿದೆಯೇ ಸಿಎಂ ಸಿದ್ದರಾಮಯ್ಯನವರೇ? ಕರ್ನಾಟಕದ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ, ಮಿತಿಮೀರಿದ ಓಲೈಕೆಯಿಂದ ಮೂಲಭೂತವಾದಿ ಮುಸ್ಲಿಮರಿಗೆ ನಾವು ಏನು ಮಾಡಿದರೂ ನಡೆಯುತ್ತೆ ಎನ್ನುವ ಮೊಂಡು ಧೈರ್ಯ ಬಂದಿದ್ದು, ಬೆಂಗಳೂರಿನ ಶಿವಾಜಿನಗರದ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಮುಸ್ಲಿಂ ಯುವಕರ ಗುಂಪೊಂದು ಹಿಂದೂಗಳ ಮೇಲೆ ಹಲ್ಲೆ ನಡೆಸಿದೆ. ರಾಜ್ಯದಲ್ಲಿ, ಅದರಲ್ಲೂ ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಅನ್ನುವುದೇ ಇಲ್ಲದಂತಾಗಿದ್ದು, ಜನಸಾಮಾನ್ಯರು ರಕ್ಷಣೆ ಇಲ್ಲದೆ ಭಯದಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ವಿಡಿಯೋ ಜೊತೆಗೆ ವಿಧಾನಸಭೆಯ ವಿಪಕ್ಷ ನಾಯಕ ಆರ್. ಆಶೋಕ್ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ

“ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಕಾಂಗ್ರೆಸ್‌ನ ಕೈಗೆ ಸಿಕ್ಕು ತಾಲಿಬಾನ್ ಆಗಿ ಬದಲಾಗುತ್ತಿದೆ. ಬೆಂಗಳೂರಿನ ಸಿದ್ದಣ್ಣ ಗಲ್ಲಿ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಮೊಬೈಲ್ ಅಂಗಡಿಗೆ ನುಗ್ಗಿದ ಮತಾಂಧ ಕಿಡಿಗೇಡಿಗಳು ಮುಖೇಶ್ ಎಂಬ ಹಿಂದೂ ಯುವಕನ ಮೇಲೆ ಹಿಗ್ಗಾಮುಗ್ಗ ಹಲ್ಲೆ ನಡೆಸಿ ಓಡಿ ಹೋಗಿದ್ದಾರೆ. ಅಂಗಡಿ ಮಾಲೀಕ ಮುಖೇಶ್ ಸಂಜೆ ಪೂಜೆ ಸಮಯದಲ್ಲಿ ಭಕ್ತಿ ಗೀತೆಗಳನ್ನು ಹಾಕಿದ್ದೇ ಮತಾಂಧ ದುರುಳರು ಹಲ್ಲೆ ಮಾಡಲು ಕಾರಣ‌.

ಹಲ್ಲೆಗೊಳಗಾದ ಮುಖೇಶ್ ಹಲಸೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೂ, ಪೊಲೀಸರು ದೂರು ದಾಖಲಿಸಿಕೊಳ್ಳದೆ ಹಿಂದೇಟು ಹಾಕುತ್ತಿದ್ದಾರೆ ಎಂದರೆ, ಇದರ ಹಿಂದೆ ಮಜಾವಾದಿ ಸಿದ್ದರಾಮಯ್ಯ ಸರ್ಕಾರದ ಕಳಂಕಿತ ಕೈಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ. ಕೂಡಲೇ ಪಾ’ಕೈ’ಸ್ತಾನ್ ಸರ್ಕಾರ ಮತಾಂಧ ಗೂಂಡಾ ಬ್ರದರ್ಸ್‌ಗಳನ್ನು ಬಂಧಿಸಿ ಕ್ರಮಕೈಗೊಳ್ಳದೆ ಹೋದರೆ, ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಚ್ಚರ!” ಎಂದು ಬಿಜೆಪಿ ಕರ್ನಾಟಕ ವಿಡಿಯೋ ಜೊತೆ ಎಕ್ಸ್‌ನಲ್ಲಿ ಬರೆದುಕೊಂಡಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

“ಅಝಾನ್ ಸಮಯದಲ್ಲಿ ಜೋರಾಗಿ ಸಂಗೀತ ಹಾಕಿದ್ದ ಅಂಗಡಿಯವನ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ. ಹಾಗಾದರೆ, ದಿನಕ್ಕೆ 5 ಬಾರಿ ಜೋರಾಗಿ ಆಝಾನ್ ಕೂಗಬಹುದೇ? ಈ ರಂಝಾನ್ ಒಳ್ಳೆಯ ರಂಝಾನ್ ಆಗಲಿ ಎಂದು ನಾನು ಬಯಸುತ್ತೇನೆ. ಸಿದ್ದಣ್ಣ ಲೇಔಟ್ ಬಳಿ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ” ಎಂದು ಇಂಡಿಯಾ ಟುಡೇಯ ನಿರೂಪಕಿ ನಬೀಲಾ ಜಮಾಲ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಗಮನಿಸಿದ ಬಳಿಕ ನಾನುಗೌರಿ.ಕಾಂ ಪ್ರಕರಣದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಿನಾಂಕ 17 ಮಾರ್ಚ್‌ 2024ರಂದು ಎಫ್‌ಐಆರ್ ದಾಖಲಾಗಿದೆ. ಈ ಎಫ್‌ಐಆರ್ ಪ್ರತಿ ನಮಗೆ ಲಭ್ಯವಾಗಿದೆ.

ಎಫ್‌ಐಆರ್ ಪ್ರತಿಯಲ್ಲಿ ಮುಖೇಶ್ ಎಂಬವರು ಹಲ್ಲೆ ಘಟನೆ ಸಂಬಂಧ ದೂರು ನೀಡಿದ್ದು, ನಂ.65 ಕೃಷ್ಣ ಟೆಲಿಕಾಂ ಶಾಪ್ ಜುಮ್ಮಾ ಮಸೀದಿ ರಸ್ತೆ ಸಿದ್ದಣ್ಣಗಲ್ಲಿ ಬೆಂಗಳೂರು ನಗರ ಇಲ್ಲಿ, ಸಂಜೆ 6 ಗಂಟೆಯಿಂದ 6:40ರ ನಡುವೆ ಘಟನೆ ನಡೆದಿದೆ ಎಂದು ಉಲ್ಲೇಖಿಸಲಾಗಿದೆ.
ಎಫ್‌ಐಆರ್‌ ಪ್ರತಿ

ಎಫ್‌ಐಆರ್‌ನಲ್ಲಿ ಹೇಳಿರುವಂತೆ, ‘ದೂರುದಾರ ಮುಖೇಶ್ ಅವರು ದಿನಾಂಕ 17 ಮಾರ್ಚ್ 2024ರಂದು ಸಂಜೆ 6:25ಕ್ಕೆ ಜುಮಾ ಮಸೀದಿ ರಸ್ತೆ ಸಿದ್ದಣ್ಣಗಲ್ಲಿ ನಂ.25 ಕೃಷ್ಣ ಟೆಲಿಕಾಂ ಅಂಗಡಿಯಲ್ಲಿರುವಾಗ ಸುಲೇಮಾನ್, ಶಾನವಾಜ್, ರೋಹಿತ್, ಡ್ಯಾನಿಶ್, ತರುಣಾ ಹಾಗೂ ಇತರರು ಸೇರಿಕೊಂಡು ಅಂಗಡಿಯ ಬಳಿ ಬಂದು “ಜೋರಾಗಿ ಸ್ಪೀಕರ್ ಏಕೆ ಹಾಕಿದ್ದೀಯ? ನಮಗೆ ತೊಂದರೆಯಾಗುತ್ತಿದೆ” ಎಂದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಮಾತಿಗೆ ಮಾತು ಬೆಳೆದು ಏಕಾಏಕಿ ಶಾನವಾಜ್ ಕೈಯಿಂದ ಮುಖೇಶ್ ಅವರ ಮುಖಕ್ಕೆ ಗುದ್ದಿದ್ದಾನೆರ. ನಂತರ ಸುಲೇಮಾನ್ ಕೈಗಳಿಂದ ಹೊಡೆಯಲು ಶುರು ಮಾಡಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ನಂತರ ಮುಖೇಶ್ ಅವರನ್ನು ಅಂಗಡಿಯಿಂದ ಹೊರಗೆ ಎಳೆದು ಕೆಳಗೆ ಬೀಳಿಸಿ ರಕ್ತಸ್ರಾವ ಆಗುವ ರೀತಿಯಲ್ಲಿ ಹೊಡೆದಿದ್ದಾರೆ’ ಎಂದು ತಿಳಿಸಲಾಗಿದೆ.

ಎಫ್‌ಐಆರ್‌ ಪ್ರತಿ

ಮುಖೇಶ್ ಅವರು ಕೈ ಬರಹದಲ್ಲಿ ಕೊಟ್ಟಿರುವ ದೂರಿನಲ್ಲೂ “ಏಕೆ ಸೌಂಡ್ ಜೋರಾಗಿ ಹಾಕಿರುವೆ ನಮಗೆ ತೊಂದೆಯಾಗುತ್ತದೆ ಎಂದು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ” ಎಂದು ಸ್ಪಷ್ಟವಾಗಿ ಬರೆದಿದ್ದಾರೆ.

ಹಲ್ಲೆಗೊಳಗಾದ ಮುಖೇಶ್ ಅವರು ನೀಡಿರುವ ಕೈ ಬರಹದ ದೂರಿನ ಪ್ರತಿ

ನಮಗೆ ಲಭ್ಯವಾದ ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ಕೊಟ್ಟಿರುವ ಕೈ ಬರಹದ ದೂರಿನಲ್ಲಿ ಎಲ್ಲಿಯೂ ನಮಾಝ್ ಅಥವಾ ಆಝಾನ್ ಸಮಯದಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಎಲ್ಲೂ ಉಲ್ಲೇಖಿಸಿಲ್ಲ.

ಅಲ್ಲದೆ, ಮಾಧ್ಯಮಗಳು ಮತ್ತು ಬಿಜೆಪಿ ನಾಯಕರು ಆರೋಪಿಸಿದಂತೆ ಪ್ರಕರಣದ ಆರೋಪಿಗಳಲ್ಲಿ ಮುಸ್ಲಿಮರು ಮಾತ್ರವಿಲ್ಲ. ಎಫ್‌ಐಆರ್ ಪ್ರತಿಯಲ್ಲಿ ಆರು ಆರೋಪಿಗಳನ್ನು ಉಲ್ಲೇಖಿಸಲಾಗಿದ್ದು, ಈ ಪೈಕಿ ಐವರ ಹೆಸರಿದೆ. ಅದರಲ್ಲಿ ಮೂವರು ಮುಸ್ಲಿಮರು ಮತ್ತು ಇಬ್ಬರು ಹಿಂದೂ ಹೆಸರಿನ ಆರೋಪಿಗಳಿದ್ದಾರೆ.

ಎಫ್‌ಐಆರ್ ಪ್ರತಿ ಮತ್ತು ಮುಖೇಶ್ ಅವರು ನೀಡಿರುವ ದೂರಿನ ಪ್ರತಿ ಆಧಾರಲ್ಲಿ ಹೇಳುವುದಾದರೆ ಇದು ಲೌಡ್ ಸ್ಪೀಕರ್ ಇಟ್ಟಿರುವುದಕ್ಕಾಗಿ ನಡೆದ ಹಲ್ಲೆಯೇ ಹೊರತು, ನಮಾಝ್ ವೇಳೆ ಹನುಮಾನ್ ಚಾಲೀಸಾ ಇಟ್ಟಿದ್ದಕ್ಕೆ ಹಿಂದೂ ವ್ಯಕ್ತಿಯ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದಂತೆ ಕಾಣುತ್ತಿಲ್ಲ. ಈ ಬಗ್ಗೆ ಹೆಚ್ಚಿನ ವಿವರಣೆ ಮತ್ತು ಸ್ಪಷ್ಟೀಕರಣವನ್ನು ತನಿಖೆಯ ಬಳಿಕ ಪೊಲೀಸರು ತಿಳಿಸಬೇಕಾಗಿದೆ.

ಇದನ್ನೂ ಓದಿ : Fact Check: ಪಾಕಿಸ್ತಾನದಿಂದ ಕಾಂಗ್ರೆಸ್‌ ₹10 ಕೋಟಿ ದೇಣಿಗೆ ಪಡೆದಿದೆ ಎಂದು ಸುಳ್ಳು ಸುದ್ದಿ ಹರಡಿದ ಟಿವಿ ವಿಕ್ರಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...