Homeಕರ್ನಾಟಕಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

ಚುನಾವಣಾ ಬಾಂಡ್‌ ಅತಿ ದೊಡ್ಡ ಹಗರಣ: ಪ್ರಕಾಶ್‌ ರಾಜ್‌

- Advertisement -
- Advertisement -

ಚುನಾವಣಾ ಬಾಂಡ್‌ ಇಡೀ ಪ್ರಪಂಚದಲ್ಲೇ ಅತಿ ದೊಡ್ಡ ಹಗರಣವಾಗಿದೆ ಎಂದು ಬಹುಭಾ‍‍ಷಾ ನಟ, ಪ್ರಕಾಶ್‌ ರಾಜ್‌ ಹೇಳಿದ್ದು, ಈ ಕುರಿತು ಅಮಿತ್‌ ಶಾ ಸುಳ್ಳು ಹೇಳಿಕೆ ನೀಡಿದ್ದಾರೆ ಮತ್ತು ಮೋದಿ ಮೌನ ವಹಿಸಿದ್ದಾರೆ ಎಂದು ವಾಗ್ಧಾಳಿಯನ್ನು ನಡೆಸಿದ್ದಾರೆ.

ಮಂಗಳೂರಿನಲ್ಲಿ ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಪ್ರಕಾಶ್‌ ರಾಜ್‌, ಗೃಹ ಸಚಿವರು ನಾವು 6000 ಕೋಟಿ ತೆಗೆದುಕೊಂಡಿದ್ದೇವೆ, ಆದರೆ 330 ಸಂಸದರು ಇದ್ದಾರೆ. ಅದನ್ನು ಹಂಚಿಕೊಂಡರೆ ಕಡಿಮೆಯಾಗುತ್ತದೆ ಎಂದು ಹೇಳುತ್ತಾರೆ. 500 ಕೋಟಿ ಲಂಚ ಕೊಡ್ತಿದ್ದಾನೆ ಎಂದರೆ ಅವರಿಗೆ 1,500ಕೋಟಿ, 2,000ಕೋಟಿ ಕಾಂಟ್ರೆಕ್ಟ್‌ ನೀವು ಕೊಡುತ್ತಿದ್ದೀರಿ ಎಂದರೆ ಅದು ನಮ್ಮ ಹಣ ಅಲ್ವ, ಚುನಾವಣೆಗೆ ಹಣ ಬೇಕಂತ ದೇಶವನ್ನು ಕೆಡಿಸಿರುವುದು ನೀವಲ್ವ? ಎಂಎಲ್ಎ, ಎಂಪಿಗಳನ್ನು ಇದೇ ದುಡ್ಡಿನಲ್ಲಿ ನೀವು ಕೊಂಡುಕೊಳ್ಳುತ್ತಿದ್ದೀರಾ? ಪ್ರಧಾನಿ‌ ಮೋದಿ ಅವರು ಮನ್ ಕಿ ಬಾತ್‌ನಲ್ಲಿ ಈ ಬಗ್ಗೆ ಹೇಳಿ, ದೇಶವನ್ನು ಉದ್ದಾರ ಮಾಡಲಿಕ್ಕೆ ತೆಗೆದುಕೊಂಡ್ರಾ? ನೀವು ದೇಶದ ಜನರಿಗೆ ಕೆಲಸ ಕೊಟ್ಟಿದ್ದೀರೋ ಇಲ್ವೋ, ಆದರೆ ನಿಮ್ಮ ಮನೆ ಟೈಲರಿಗೆ ದಿನಕ್ಕೊಂದು ಬಟ್ಟೆ ಹೊಲಿಯಲು ಕೆಲಸ ಕೊಟ್ಟಿದ್ದೀರಿ ಎಂದು ಮೋದಿ ವಿರುದ್ಧ ಪ್ರಕಾಶ್‌ ರಾಜ್ ವಾಗ್ಧಾಳಿ ನಡೆಸಿದ್ದಾರೆ.

ಡಿಎಂಕೆಯವರು ಲಾಟರಿ ಏಜೆಂಟ್ ಮಾರ್ಟಿನ್ ಅವರಿಂದ ಚುನಾವಣಾ ಬಾಂಡ್ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಬಿಜೆಪಿಯವರು ಯಾಕೆ ಯಾರಿಂದ ಪಡೆದಿದ್ದಾಗಿ ಹೇಳುತ್ತಿಲ್ಲ. ಬಿಜೆಪಿ ಪಡೆದಿರುವ ಬಾಂಡ್ ಹಣವೆಲ್ಲಾ ದಾಳಿಯ ಬಳಿಕ ಸಂಗ್ರಹಿಸಿದ್ದಾಗಿದೆ. ಇಡಿ ರೈಡ್‌ ಮಾಡಿದ ಕಂಪೆನಿಗಳು ಮರು ದಿನ ಬಾಂಡ್‌ ನೀಡಿದ್ದಾರೆ. ಅವರು ಕಳ್ಳರು ಎಂದು ಗೊತ್ತಿದ್ದೂ ಯಾಕೆ ಬಾಂಡ್ ಪಡೆದಿದ್ದೀರಿ? ಇಡಿ ರೈಡ್ ಆದ ಮೇಲೆ ನಿಮಗೆ ಹಣ ಕೊಟ್ಟರೆ ಸರಿನಾ? ಈಗ ಅಂಥವರಿಂದ ಹಣ ತೆಗೆದುಕೊಂಡ ನಿಮ್ಮ ಮೇಲೆ ಯಾಕೆ ರೈಡ್ ಆಗುವುದಿಲ್ಲ? ಈ ರೀತಿ ದುಡ್ಡು ಪಡೆದು ನೀವು ದೇಶ ಮಾರ್ತಾ ಇಲ್ವಾ? ಅದು ಪಾಪದ ಹಣ ಅಂತ ಗೊತ್ತಿಲ್ವಾ ನಿಮಗೆ? ಮನ್ ಕಿ ಬಾತ್‌ನಲ್ಲಿ ಅದನ್ನೂ ಹೇಳಿ ಎಂದು ಮೋದಿಗೆ ಪ್ರಕಾಶ್‌ ರಾಜ್‌ ಆಗ್ರಹಿಸಿದ್ದಾರೆ.

ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಒಂದು ಸಲ ಏನು ಅಂತ ನೋಡಿ ಆಯ್ತು, ಸಾಮಾನ್ಯ ಜನರ ಪರವಾಗಿ ನಾನು ಧ್ವನಿಯನ್ನು ಎತ್ತುತ್ತೇನೆ, ನಾನು ರಾಜಕಾರಣದಲ್ಲಿ ಇದ್ದೇನೆ, ರಾಜಕೀಯವಾಗಿ ಪ್ರಶ್ನಿಸುತ್ತೇನೆ, ಪ್ರಶ್ನೆಗಳನ್ನು ಮಂಡಿಸುತ್ತೇನೆ, ನೀವ್ಯಾರು ಪ್ರಶ್ನೆ ಕೇಳುವುದಕ್ಕೆ ಎಂದು ಕೇಳುವಂತಿಲ್ಲ. ದಯವಿಟ್ಟು ಪಕ್ಷಗಳನ್ನು ನೋಡಬೇಡಿ, ನಿಮ್ಮ ಮತವನ್ನು ಚಲಾಯಿಸುವಾಗ ಪ್ರಶ್ನೆ ಮಾಡಿ ಎಂದು ಹೇಳಿದ್ದಾರೆ.

6,000ಕೋಟಿಯಲ್ಲಿ ಒಂದು ಸ್ಮಾರ್ಟ್‌ ಸಿಟಿ ಮಾಡಿದ್ರಾ? ಏನು ಮಾಡಿದ್ರಿ ಆ ಹಣ? ಯಾವ ನಾಚಿಕೆ ಮಾನ ಇಲ್ಲದೆ ಅವನು ತೆಗೆದುಕೊಂಡನಲ್ಲ ಎನ್ನುವುದು ಎಷ್ಟು ಸರಿ, ಪ್ರಧಾನಿ ಅವರ ಪರಿವಾರ ಏನು ಅಂತ ಈಗಾಗಲೇ ಬಯಲಾಗಿದೆ. ಲಾಟರಿ ಮಾಡುವ ಕಂಪೆನಿ ಪರಿವಾರ, ಫಾರ್ಮಾ ಕಂಪೆನಿ, ಅದಾನಿ ಪರಿವಾರ, ರೇಪ್ ಪ್ರಕರಣದ ಆರೋಪಿ ಬ್ರಿಜ್ ಭೂಷಣ್ ಕೂಡಾ ಅವರದ್ದೇ ಪರಿವಾರ. ಸಾವಿರಾರು ಕೋಟಿ ರೂ. ಸಂಗ್ರಹಿರುವುದು ಯಾಕಾಗಿ? ಒಂದು ಪಕ್ಷಕ್ಕೆ ಅಷ್ಟು ದುಡ್ಡು ಬೇಕಾ? ಆಡಳಿತ ನಡೆಸುತ್ತಿರುವವರು ಬಿಜೆಪಿಯವರು, ಅಷ್ಟು ಬೃಹತ್ ದುಡ್ಡು ತಗೆದುಕೊಂಡು ಅದನ್ನೂ ಗೌಪ್ಯವಾಗಿಟ್ಟುಕೊಂಡಿದ್ದು ಯಾಕೆ? ಈಗ ಬೆತ್ತಲಾಗ್ತಾ ಇದ್ದೀರಿ, ಹಾಗಿದ್ದರೂ ಸುಳ್ಳು ಹೇಳಿಕೊಂಡೇ ಓಡಾಡೋದು ತಪ್ಪಲ್ವಾ? ಜನರಿಗೆ ನೀವು ಮೋಸ ಮಾಡಬೇಡಿ ಎಂದು ಹೇಳಿದ್ದಾರೆ.

ಪತ್ರಿಕೋದ್ಯಮ ಅಥವಾ ಜನರು ನಿರಂತರವಾಗಿ ವಿರೋಧ ಪಕ್ಷವಾಗಿರಬೇಕು, ಉಪವಾಸ ಮಾಡಿಕೊಂಡು ದೇವಸ್ಥಾನ ಸುತ್ತುತ್ತಿದ್ದೀರಿ ಯಾಕೆ? ಮಣಿಪುರದ ಬಗ್ಗೆ, ಎಲೆಕ್ಟ್ರಾಲ್ ಬಾಂಡ್‌ ಬಗ್ಗೆ ಒಂದು ಬಾರಿ ಮಾತನಾಡುತ್ತಿಲ್ಲ, ಸುಳ್ಳು ಹೇಳಿ ಯಾರನ್ನು ಮೋಸ ಮಾಡುತ್ತೀರಿ, ಪ್ರಜಾಪ್ರಭುತ್ವದಲ್ಲಿ ಅಧಿಕಾರ ಕೊಟ್ಟ ಜನರಿಗೆ ಇರುವುದು ಅಧಿಕಾರ, ಅಧಿಕಾರ ನಡೆಸುವವರಿಗಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಸ್ಸಾಂ ಎನ್‌ಆರ್‌ಸಿ: ಪೌರತ್ವ ನೋಂದಣಿಯಿಂದ ಹೊರಗುಳಿದ 7ಲಕ್ಷ ಮುಸ್ಲಿಮರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...