Homeಮುಖಪುಟಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಸಿಜೆಐ

ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಸಿಜೆಐ

- Advertisement -
- Advertisement -

ಸುಪ್ರೀಂ ಕೋರ್ಟ್ ವಕೀಲರ ಸಂಘ(ಎಸ್‌ಸಿಬಿಎ)ದ ಅಧ್ಯಕ್ಷ ಆದಿಶ್ ಅಗರ್ವಾಲ್ ಅವರನ್ನು ಇಂದು ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ತರಾಟೆಗೆ ತೆಗೆದುಕೊಂಡರು.

ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ, ಬಾಂಡ್‌ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸೂಚಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ದ ಆದಿಶ್ ಅಗರ್ವಾಲ್ ರಾಷ್ಟ್ರಪತಿಗೆ ಪತ್ರ ಬರೆದಿದ್ದರು.

ಈ ವಿಚಾರವನ್ನು ಇಂದು ವಿಚಾರಣೆ ವೇಳೆ ಅದಿಶ್ ಅಗರ್ವಾಲ್ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಹಿರಿಯ ವಕೀಲರ ಹೊರತಾಗಿ ನೀವು ಎಸ್‌ಸಿಬಿಎ ಅಧ್ಯಕ್ಷರು. ನನ್ನ ಸ್ವಯಂಪ್ರೇರಿತ ಅಧಿಕಾರಗಳ ಕುರಿತಂತೆ ನೀವು ಪತ್ರ ಬರೆದಿದ್ದೀರಿ. ಇವುಗಳೆಲ್ಲಾ ಪ್ರಚಾರ ಉದ್ದೇಶ ಹೊಂದಿವೆ. ನಾನು ಇನ್ನಷ್ಟು ಮಾತಾಡುವಂತೆ ಮಾಡಬೇಡಿ, ಅದು ಚೆನ್ನಾಗಿರದು” ಎಂದು ಖಾರವಾಗಿ ಹೇಳಿದರು.

ಅಗರ್ವಾಲ್ ಅವರ ಪತ್ರಕ್ಕೆ ನಮ್ಮ ಬೆಂಬಲವಿಲ್ಲ ಎಂದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ವಿಚಾರದಿಂದ ದೂರ ಉಳಿದರು.

ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪನ್ನು ಮರು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಸೂಚಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ವಕೀಲರ ಸಂಘದ (ಎಸ್‌ಸಿಬಿಎ) ಅಧ್ಯಕ್ಷ ಆದಿಶ್ ಸಿ. ಅಗರ್ವಾಲ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಾ.12 ರಂದು ಪತ್ರ ಬರೆದಿದ್ದರು. ಆದರೆ, ವಕೀಲರ ಸಂಘದ ಇತರ ಪದಾಧಿಕಾರಿಗಳು ಆಗರ್ವಾಲ್ ಅವರ ಪತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರ ಪತ್ರಕ್ಕೂ ನಮಗೂ ಸಂಬಂಧವಿಲ್ಲ ಎಂದು ಪತ್ರಿಕಾ ಪ್ರಕಟನೆ ಹೊರಡಿಸಿದ್ದರು.

ಅಧ್ಯಕ್ಷ ಆದಿಶ್ ಅಗರ್ವಾಲ್ ಅವರಿಗೆ ವಕೀಲರ ಸಂಘದ ಹೆಸರಿನಲ್ಲಿ ಪತ್ರ ಬರೆಯಲು ಸಂಘದ ಸದಸ್ಯರು ಅನುಮತಿ ನೀಡಿಲ್ಲ. ಅವರು ಪತ್ರದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯವೂ ಸಂಘದ ಸದಸ್ಯರದ್ದಲ್ಲ. ಆದಿಶ್ ಅಗರ್ವಾಲ್ ಅವರ ಪತ್ರ ಗೌರವಾನ್ವಿತ ಸುಪ್ರೀಂ ಕೋರ್ಟ್ ಆದೇಶವನ್ನು ಮೀರಿದೆ ಮತ್ತು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ಇದನ್ನು ವಕೀಲರ ಸಂಘ ಬಲವಾಗಿ ಖಂಡಿಸುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದರು.

ಸುಪ್ರೀಂ ಕೋರ್ಟ್ ವಕೀಲರ ಸಂಘದ ಲೆಟರ್ ಹೆಡ್‌ನಲ್ಲಿ ಪ್ರಕಟನೆ ಹೊರಡಿಸಿದ್ದ ಸಂಘದ ಗೌರವ ಕಾರ್ಯದರ್ಶಿ ರೋಹಿತ್ ಪಾಂಡೆ, ಆದಿಶ್ ಅಗರ್ವಾಲ್ ಅವರು ಸುಪ್ರೀಂ ಕೋರ್ಟ್ ಆದೇಶದ ವಿರುದ್ದ ರಾಷ್ಟ್ರಪತಿಗೆ ಪತ್ರ ಬರೆದಿರುವುದು ಅವರ ವೈಯುಕ್ತಿಕ ಎಂದು ಸ್ಪಷ್ಟಪಡಿಸಿದ್ದರು. ಅಲ್ಲದೆ, ಸಂಘದ ಇತರ ಸದಸ್ಯರ ಅನುಮತಿ ಇಲ್ಲದೆ ಪತ್ರ ಬರೆದಿರುವ ಆದಿಶ್ ಅಗರ್ವಾಲ್ ಅವರ ನಡೆಯನ್ನು ಖಂಡಿಸಿದ್ದರು.

“ದೇಣಿಗೆ ನೀಡಿದವರ ಹೆಸರು ಮತ್ತು ಅವರು ವಿವಿಧ ರಾಜಕೀಯ ಪಕ್ಷಗಳಿಗೆ ನೀಡಿದ ಮೊತ್ತವನ್ನು ಬಹಿರಂಗಪಡಿಸಿದರೆ, ಅವರಿಂದ ಕಡಿಮೆ ದೇಣಿಗೆ ಪಡೆದ ಪಕ್ಷಗಳು ಕಿರುಕುಳ ನೀಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ದೇಣಿಗೆ ಪಡೆಯುವಾಗ ಹೆಸರು ಬಹಿರಂಗಪಡಿಸುವುದಿಲ್ಲ ಎಂಬ ಮಾತು ಕೊಡಲಾಗಿತ್ತು. ಹೆಸರು ಬಹಿರಂಗಪಡಿಸಿದರೆ ವಚನ ಭಂಗ ಮಾಡಿದಂತೆ ಆಗುತ್ತದೆ” ಎಂದು ಆದಿಶ್ ಅಗರ್ವಾಲ್ ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಇದನ್ನೂ ಓದಿ : ಹಿಮಾಚಲ ಪ್ರದೇಶದ 6 ಕಾಂಗ್ರೆಸ್‌ ಶಾಸಕರ ಅನರ್ಹತೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...