Homeಮುಖಪುಟಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಸಿಜೆಐ

ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಸಿಜೆಐ

- Advertisement -
- Advertisement -

ಸುಪ್ರೀಂ ಕೋರ್ಟ್ ವಕೀಲರ ಸಂಘ(ಎಸ್‌ಸಿಬಿಎ)ದ ಅಧ್ಯಕ್ಷ ಆದಿಶ್ ಅಗರ್ವಾಲ್ ಅವರನ್ನು ಇಂದು ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ತರಾಟೆಗೆ ತೆಗೆದುಕೊಂಡರು.

ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿ, ಬಾಂಡ್‌ ಮಾಹಿತಿಯನ್ನು ಚುನಾವಣಾ ಆಯೋಗಕ್ಕೆ ನೀಡುವಂತೆ ಸೂಚಿಸಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ದ ಆದಿಶ್ ಅಗರ್ವಾಲ್ ರಾಷ್ಟ್ರಪತಿಗೆ ಪತ್ರ ಬರೆದಿದ್ದರು.

ಈ ವಿಚಾರವನ್ನು ಇಂದು ವಿಚಾರಣೆ ವೇಳೆ ಅದಿಶ್ ಅಗರ್ವಾಲ್ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, ಹಿರಿಯ ವಕೀಲರ ಹೊರತಾಗಿ ನೀವು ಎಸ್‌ಸಿಬಿಎ ಅಧ್ಯಕ್ಷರು. ನನ್ನ ಸ್ವಯಂಪ್ರೇರಿತ ಅಧಿಕಾರಗಳ ಕುರಿತಂತೆ ನೀವು ಪತ್ರ ಬರೆದಿದ್ದೀರಿ. ಇವುಗಳೆಲ್ಲಾ ಪ್ರಚಾರ ಉದ್ದೇಶ ಹೊಂದಿವೆ. ನಾನು ಇನ್ನಷ್ಟು ಮಾತಾಡುವಂತೆ ಮಾಡಬೇಡಿ, ಅದು ಚೆನ್ನಾಗಿರದು” ಎಂದು ಖಾರವಾಗಿ ಹೇಳಿದರು.

ಅಗರ್ವಾಲ್ ಅವರ ಪತ್ರಕ್ಕೆ ನಮ್ಮ ಬೆಂಬಲವಿಲ್ಲ ಎಂದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ವಿಚಾರದಿಂದ ದೂರ ಉಳಿದರು.

ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪನ್ನು ಮರು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಸೂಚಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ವಕೀಲರ ಸಂಘದ (ಎಸ್‌ಸಿಬಿಎ) ಅಧ್ಯಕ್ಷ ಆದಿಶ್ ಸಿ. ಅಗರ್ವಾಲ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮಾ.12 ರಂದು ಪತ್ರ ಬರೆದಿದ್ದರು. ಆದರೆ, ವಕೀಲರ ಸಂಘದ ಇತರ ಪದಾಧಿಕಾರಿಗಳು ಆಗರ್ವಾಲ್ ಅವರ ಪತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರ ಪತ್ರಕ್ಕೂ ನಮಗೂ ಸಂಬಂಧವಿಲ್ಲ ಎಂದು ಪತ್ರಿಕಾ ಪ್ರಕಟನೆ ಹೊರಡಿಸಿದ್ದರು.

ಅಧ್ಯಕ್ಷ ಆದಿಶ್ ಅಗರ್ವಾಲ್ ಅವರಿಗೆ ವಕೀಲರ ಸಂಘದ ಹೆಸರಿನಲ್ಲಿ ಪತ್ರ ಬರೆಯಲು ಸಂಘದ ಸದಸ್ಯರು ಅನುಮತಿ ನೀಡಿಲ್ಲ. ಅವರು ಪತ್ರದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯವೂ ಸಂಘದ ಸದಸ್ಯರದ್ದಲ್ಲ. ಆದಿಶ್ ಅಗರ್ವಾಲ್ ಅವರ ಪತ್ರ ಗೌರವಾನ್ವಿತ ಸುಪ್ರೀಂ ಕೋರ್ಟ್ ಆದೇಶವನ್ನು ಮೀರಿದೆ ಮತ್ತು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ಇದನ್ನು ವಕೀಲರ ಸಂಘ ಬಲವಾಗಿ ಖಂಡಿಸುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದರು.

ಸುಪ್ರೀಂ ಕೋರ್ಟ್ ವಕೀಲರ ಸಂಘದ ಲೆಟರ್ ಹೆಡ್‌ನಲ್ಲಿ ಪ್ರಕಟನೆ ಹೊರಡಿಸಿದ್ದ ಸಂಘದ ಗೌರವ ಕಾರ್ಯದರ್ಶಿ ರೋಹಿತ್ ಪಾಂಡೆ, ಆದಿಶ್ ಅಗರ್ವಾಲ್ ಅವರು ಸುಪ್ರೀಂ ಕೋರ್ಟ್ ಆದೇಶದ ವಿರುದ್ದ ರಾಷ್ಟ್ರಪತಿಗೆ ಪತ್ರ ಬರೆದಿರುವುದು ಅವರ ವೈಯುಕ್ತಿಕ ಎಂದು ಸ್ಪಷ್ಟಪಡಿಸಿದ್ದರು. ಅಲ್ಲದೆ, ಸಂಘದ ಇತರ ಸದಸ್ಯರ ಅನುಮತಿ ಇಲ್ಲದೆ ಪತ್ರ ಬರೆದಿರುವ ಆದಿಶ್ ಅಗರ್ವಾಲ್ ಅವರ ನಡೆಯನ್ನು ಖಂಡಿಸಿದ್ದರು.

“ದೇಣಿಗೆ ನೀಡಿದವರ ಹೆಸರು ಮತ್ತು ಅವರು ವಿವಿಧ ರಾಜಕೀಯ ಪಕ್ಷಗಳಿಗೆ ನೀಡಿದ ಮೊತ್ತವನ್ನು ಬಹಿರಂಗಪಡಿಸಿದರೆ, ಅವರಿಂದ ಕಡಿಮೆ ದೇಣಿಗೆ ಪಡೆದ ಪಕ್ಷಗಳು ಕಿರುಕುಳ ನೀಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ದೇಣಿಗೆ ಪಡೆಯುವಾಗ ಹೆಸರು ಬಹಿರಂಗಪಡಿಸುವುದಿಲ್ಲ ಎಂಬ ಮಾತು ಕೊಡಲಾಗಿತ್ತು. ಹೆಸರು ಬಹಿರಂಗಪಡಿಸಿದರೆ ವಚನ ಭಂಗ ಮಾಡಿದಂತೆ ಆಗುತ್ತದೆ” ಎಂದು ಆದಿಶ್ ಅಗರ್ವಾಲ್ ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಇದನ್ನೂ ಓದಿ : ಹಿಮಾಚಲ ಪ್ರದೇಶದ 6 ಕಾಂಗ್ರೆಸ್‌ ಶಾಸಕರ ಅನರ್ಹತೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...