Homeಕರ್ನಾಟಕಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಬಿರುಕು: ಜೆಡಿಎಸ್ ನಾಯಕರಿಂದ ಅಸಮಾಧಾನ ಸ್ಪೋಟ

- Advertisement -
- Advertisement -

ಇಪ್ಪತ್ತು ಲೋಕಸಭೆ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡುವಾಗ ಜೆಡಿಎಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಮತ್ತು ಕೋಲಾರ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಲು ಬಿಜೆಪಿ ವರಿಷ್ಠರು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಜೆಡಿಎಸ್‌ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಕೋರ್ ಕಮಿಟಿ ಸದಸ್ಯರು ಹಾಗೂ ಚುನಾವಣಾ ಉಸ್ತುವಾರಿ, ಸಹ ಉಸ್ತುವಾರಿಗಳ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ ದೇವೆಗೌಡರು ಹಾಗೂ  ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ನಾಯಕರು ಅತೃಪ್ತಿ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಒಬ್ಬೊಬ್ಬರಾಗಿಯೇ ತಮ್ಮ ಅಭಿಪ್ರಾಯವನ್ನು ಹೇಳಿದ ಮುಖಂಡರು;ಆರಂಭದಲ್ಲಿಯೇ ನಮ್ಮನ್ನು, ನಮ್ಮ ಪಕ್ಷವನ್ನು ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ. ಚುನಾವಣಾ ಸಭೆ, ಪ್ರಚಾರವನ್ನು ನಮ್ಮನ್ನು ಬಿಟ್ಟು ಮಾಡುತ್ತಿದೆ. ಯಾವ ಸಭೆಗೂ ನಮ್ಮನ್ನು ಬಿಜೆಪಿಯವರು ಕರೆಯುತ್ತಿಲ್ಲ. ಇಪ್ಪತ್ತು ಕ್ಷೇತ್ರಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಬಿಜೆಪಿ, ಈ ಬಗ್ಗೆ ಜೆಡಿಎಸ್ ವರಿಷ್ಠರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ತಮ್ಮ ಬೇಸರವನ್ನು ತೋಡಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಆರಂಭದಲ್ಲಿಯೇ ಹೀಗಾದರೆ ಮುಂದೇನು?

ಆರಂಭದಲ್ಲಿಯೇ ಹೀಗಾದರೆ ಮುಂದೇನು? ಇದು ಪಕ್ಷಕ್ಕೆ ಮಾರಕ. ರಾಜ್ಯದ 18 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಶಕ್ತಿ ಜೆಡಿಎಸ್ ಪಕ್ಷಕ್ಕೆ ಇದೆ. ಶೇ.3 ರಿಂದ 4ರಷ್ಟು ಜೆಡಿಎಸ್ ಮತಗಳು ಮೈತ್ರಿ ಅಭ್ಯರ್ಥಿಗೆ ಬಂದರೆ 28 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳಲ್ಲಿ ಬಿಜೆಪಿ ನಿರಾಯಾಸವಾಗಿ ಗೆಲ್ಲುತ್ತದೆ ಎಂದು ಅಂಕಿ ಅಂಶ ಇಟ್ಟುಕೊಂಡು ವರಿಷ್ಠರ ಮೇಲೆ ಮುಖಂಡರು ಒತ್ತಡ ಹೇರಿದ್ದಾರೆ.

ರಾಜ್ಯಕ್ಕೆ ಪ್ರಧಾನಿ ಬರುತ್ತಿದ್ದಾರೆ. ಭಾಷಣ ಮಾಡಿಕೊಂಡು ಹೋಗುತ್ತಿದ್ದಾರೆ. ನಮ್ಮ ಪಕ್ಷವನ್ನು ಸ್ಥಳೀಯ ಬಿಜೆಪಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಪ್ರಧಾನಿಗಳ ಸಭೆಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಕರೆಯಬೇಕಲ್ಲವೇ? ಕಲಬುರಗಿ ಸಭೆಗೂ ಜೆಡಿಎಸ್ ಸ್ಥಳೀಯ ಮುಖಂಡರನ್ನು ಕರೆದಿಲ್ಲ, ಅವರೇ ಮಾಡಿಕೊಂಡಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗದ ಜೆಡಿಎಸ್ ಶಾಸಕರು, ಮಾಜಿ ಶಾಸಕರಿಗೆ ಮಾಹಿತಿ ಕೊಟ್ಟಿಲ್ಲ. ಶಿವಮೊಗ್ಗ ಸಭೆಗೂ ದೇವೇಗೌಡರು, ಕುಮಾರಸ್ವಾಮಿ ಅವರನ್ನು ಕರೆಯಬಹುದಿತ್ತು. ಶಿವಮೊಗ್ಗ ಸಭೆಗೂ ನಮ್ಮ ನಾಯಕರನ್ನು ಕರೆದಿಲ್ಲ ಎಂದು ಮುಖಂಡರು ಸಿಟ್ಟು ತೋಡಿಕೊಂಡಿದ್ದಾರೆ.

ಎರಡು ಸೀಟಿಗಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ?

ನಮ್ಮ ಪಕ್ಷವನ್ನು ಒತ್ತೆ ಇಟ್ಟು ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ನಮಗೆ ಮೋದಿಯವರ ಬಗ್ಗೆ ಅಪಾರ ಗೌರವ ಇದೆ. ಆ ಬಗ್ಗೆ ಎರಡನೇ ಮಾತೇ ಇಲ್ಲ. ಬಿಜೆಪಿಯಿಂದ ಇಂಥ ನಡವಳಿಕೆ ನಿರೀಕ್ಷೆ ಮಾಡಿರಲಿಲ್ಲ. ಕೋಲಾರ ಕ್ಷೇತ್ರ ಬಿಟ್ಟುಕೊಡುವ ಬಗ್ಗೆ ಬಿಜೆಪಿ ಮೀನಾಮೇಷ ಎಣಿಸುತ್ತಿದೆ. ಕೇವಲ ಎರಡು ಸೀಟಿಗಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಇವತ್ತೇ ಕೋಲಾರ ಅಭ್ಯರ್ಥಿಯನ್ನು ಘೋಷಣೆ ಮಾಡಿ. ಇಂಥ ಅನಿಶ್ಚಿತತೆಯಿಂದ ಪಕ್ಷಕ್ಕೆ ನಷ್ಟ ಆಗುತ್ತದೆ ಎಂದು ಮುಖಂಡರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ.

ಕೋಲಾರ ಜೆಡಿಎಸ್ ಪಾಲಿನ ಕ್ಷೇತ್ರ ಎಂದು ಮೊದಲಿನಿಂದ ಹೇಳಿದ್ದೀರಿ ನೀವು. ಕೋಲಾರ, ಹಾಸನ, ಮಂಡ್ಯ ಸೇರಿದಂತೆ 5 ಕ್ಷೇತ್ರಗಳು ಜೆಡಿಎಸ್‌ಗೆ ಬರುತ್ತವೆ ಎಂದು ನೀವು ಹೇಳಿದ್ದಿರಿ. ಆದರೆ, ಈಗ ನೋಡಿದರೆ ಬಿಜೆಪಿ ಎರಡು ಸೀಟಿಗೆ ಬಂದು ನಿಂತಿದೆ ಎಂದು ಕುಮಾರಸ್ವಾಮಿ ಅವರನ್ನು ನಾಯಕರು ಪ್ರಶ್ನಿಸಿದ್ದಾರೆ ಎಂದು ಹೇಳಲಾಗ್ತಿದೆ.

ಮುಖಂಡರ ಮಾತುಗಳನ್ನು ಶಾಂತ ಚಿತ್ತದಿಂದ ಆಲಿಸಿದ ದೇವೇಗೌಡರು ಮತ್ತು ಕುಮಾರಸ್ವಾಮಿ ಅಸಮಾಧಾನಿತ ಮುಖಂಡರಿಗೆ ಸಮಾಧಾನ ಹೇಳಿದರು. ಅಮಿತ್ ಶಾ, ನಡ್ಡಾ  ಜೊತೆ ಮಾತನಾಡುವಂತೆ ಕುಮಾರಸ್ವಾಮಿಗೆ ಸೂಚನೆ ನೀಡಿದ ದೇವೇಗೌಡರು; ಇಲ್ಲವಾದರೆ ನಾನೇ ದೆಹಲಿಗೆ ಹೋಗಿ ಬರುತ್ತೇನೆ ಇದೇ ವೇಳೆ ಹೇಳಿದ್ದಾರೆ ಎನ್ನಲಾಗಿದೆ.

ಕೋಲಾರ ಕ್ಷೇತ್ರದ ಒಳ್ಳೆಯ ನಿರ್ಧಾರ ತೆಗೆದುಕೊಳ್ಳೋಣ ಎಂದು ಅಮಿತ್ ಶಾ ಅವರೇ ಹೇಳಿದ್ದಾರೆ ಎಂದು ಸಭೆಗೆ ತಿಳಿಸಿದ ಕುಮಾರಸ್ವಾಮಿ, “ಯಾವುದೇ ಕಾರಣಕ್ಕೂ ಪಕ್ಷದ ಹಿತಕ್ಕೆ ವಿರುದ್ಧವಾಗಿ ಹೆಜ್ಜೆ ಇಡುವುದಿಲ್ಲ. ಇದು ಬಿಜೆಪಿ ನಾಯಕರಿಗೂ ಗೊತ್ತಿದೆ” ಎಂದು ತಿಳಿಸಿದ್ದಾರೆ.

ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಲೀಲಾದೇವಿ ಆರ್ ಪ್ರಸಾದ್, ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಜಿ.ಕೆ.ವೆಂಕಟ ಶಿವಾರೆಡ್ಡಿ, ಬಿ.ಸುರೇಶ್ ಬಾಬು, ಕರೆಮ್ಮ ನಾಯಕ್, ನೇಮಿರಾಜ್ ನಾಯಕ್, ಸ್ವರೂಪ್ ಪ್ರಕಾಶ್, ರಾಜೂಗೌಡ, ಬಿ.ಎಂ. ಫಾರೂಕ್, ಎಂ.ಟಿ.ಕೃಷ್ಣಪ್ಪ, ಕೆ.ಎ.ತಿಪ್ಪೇಸ್ವಾಮಿ, ಟಿ ಎ ಶರವಣ, ಮಂಜೇಗೌಡ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ದೊರೆ, ಕೆಎಂ.ಕೃಷ್ಣಾರೆಡ್ಡಿ, ಡಿ.ನಾಗರಾಜಯ್ಯ, ಡಾ.ಕೆ.ಅನ್ನದಾನಿ, ದೊಡ್ಡನಗೌಡ ಪಾಟೀಲ್, ಸಿ.ಎಸ್.ಪುಟ್ಟರಾಜು, ಸುರೇಶ್ ಗೌಡ, ಶ್ರೀಕಂಠೇಗೌಡ, ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಕೆ.ಪಿ.ಬಚ್ಚೇಗೌಡ, ದೇವಾನಂದ ಚೌಹಾಣ್, ಶಿವಶಂಕರ್, ಚೌಡರೆಡ್ಡಿ ತೂಪಲ್ಲಿ ಸೇರಿದಂತೆ ಪಕ್ಷದ ಹಲವಾರು ಮುಖಂಡರು, ಕೋರ್ ಕಮಿಟಿ ಸದಸ್ಯರು ಹಾಗೂ ಎಲ್ಲಾ ಲೋಕಸಭೆ ಕ್ಷೇತ್ರಗಳ ಚುನಾವಣೆ ಉಸ್ತುವಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಟಿಕೆಟ್ ಹಂಚಿಕೆ: ಬಿಜೆಪಿಗೆ ಬಂಡಾಯದ ಬಿಸಿ, ಜೆಡಿಎಸ್‌ನಲ್ಲಿ ಅತೃಪ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...