Homeಮುಖಪುಟಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ...

ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

- Advertisement -
- Advertisement -

ಚುನಾವಣಾ ಬಾಂಡ್‌ ಕುರಿತು ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಯಾವ ಯಾವ ಕಂಪೆನಿಗಳು ಚುನಾವಣಾ ಬಾಂಡ್‌ ಮೂಲಕ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿದೆ ಎಂಬ ಬಗ್ಗೆ ಒಂದೊಂದಾಗಿ ಮಾಹಿತಿಗಳು ಬಯಲಾಗುತ್ತಿದೆ. ಇದೀಗ ಬಿಜೆಪಿ ರಾಜ್ಯಸಭಾ ಸಂಸದ ಚಿಂತಕುಂಟಾ ಮುನುಸ್ವಾಮಿ ರಮೇಶ್ ಮಾಲಕತ್ವದ ಆಂಧ್ರಪ್ರದೇಶ ಮೂಲದ ಮೂಲಸೌಕರ್ಯ ಕಂಪನಿಯು ಹಿಮಾಚಲ ಪ್ರದೇಶದ ಪ್ರಮುಖ ಯೋಜನೆಗೆ ಟೆಂಡರ್‌ ಪಡೆದ ಮೂರೇ ತಿಂಗಳಲ್ಲಿ 45 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದೆ ಎನ್ನುವುದು ಬಯಲಾಗಿದೆ.

ಹೈದರಾಬಾದ್-ಪ್ರಧಾನ ಕಛೇರಿಯ ರಿತ್ವಿಕ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್‌ಗೆ ಹಿಮಾಚಲ ಪ್ರದೇಶದಲ್ಲಿ ಸುನ್ನಿ ಜಲವಿದ್ಯುತ್ ಯೋಜನೆಯ ಒಪ್ಪಂದದ ಪತ್ರವನ್ನು ಜನವರಿ 14, 2023ರಂದು ನೀಡಲಾಗಿದೆ. ಜನವರಿ 27, 2023ರಂದು ಈ ಕಂಪೆನಿ 5 ಕೋಟಿ ರೂಪಾಯಿ ಮೌಲ್ಯದ ಎಲೆಕ್ಟೋರಲ್ ಬಾಂಡ್‌ಗಳನ್ನು ಖರೀದಿಸಿದೆ.

ಮಾರ್ಚ್ 22 2023ರಂದು, ಸರಕಾರದ ಅಧೀನದ SVJN ಲಿಮಿಟೆಡ್, 1,098 ಕೋಟಿ ಮೌಲ್ಯದ ಯೋಜನೆಗೆ ರಿತ್ವಿಕ್ ಪ್ರಾಜೆಕ್ಟ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತ್ತು. ಇದಾದ ಮೂರೇ ವಾರಗಳಲ್ಲಿ ಅಂದರೆ ಏಪ್ರಿಲ್ 11, 2023ರಂದು, ರಿಥ್ವಿಕ್ ಪ್ರಾಜೆಕ್ಟ್ಸ್ ಮತ್ತೆ 40 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ನ್ನು ಖರೀದಿಸಿದೆ. SBI ಸಂಪೂರ್ಣ ಡೇಟಾವನ್ನು ಬಿಡುಗಡೆ ಮಾಡಿದಾಗ ಮಾತ್ರ ರಿತ್ವಿಕ್ ಪ್ರಾಜೆಕ್ಟ್‌ಗಳು ಯಾವ ಪಕ್ಷಕ್ಕೆ ದೇಣಿಗೆ ನೀಡಿವೆ ಎಂಬುದು ಸ್ಪಷ್ಟವಾಗುತ್ತದೆ, ಸಧ್ಯ ರಿತ್ವಿಕ್‌ ಯಾವ ಪಕ್ಷಕ್ಕೆ ಈ ದೇಣಿಗೆ ನೀಡಿದ್ದಾರೆ ಎನ್ನವುದು ಇನ್ನೂ ಸ್ಪಷ್ಟವಾಗಿಲ್ಲ.

ರಿಥ್ವಿಕ್ ಪ್ರಾಜೆಕ್ಟ್ಸ್ ಮುಖ್ಯಸ್ಥರೂ ಆಗಿರುವ ಸಂಸದ ಚಿಂತಕುಂಟಾ ಮುನುಸ್ವಾಮಿ ರಮೇಶ್, 2018ರಲ್ಲಿ 74 ಕೋಟಿ ರೂಪಾಯಿಗಳ ಅವ್ಯವಹಾರದ ಬಗ್ಗೆ ಆದಾಯ ತೆರಿಗೆ ಇಲಾಖೆ ಆಪಾದಿಸಿದ ಕೆಲವೇ ತಿಂಗಳ ನಂತರ, ಟಿಡಿಪಿಯಿಂದ ಬಿಜೆಪಿಗೆ ಸೇರಿದ್ದರು.

ರಿಥ್ವಿಕ್ ಪ್ರಾಜೆಕ್ಟ್ಸ್ ಗಣಿಗಾರಿಕೆ ಮತ್ತು ನೀರಾವರಿಯಿಂದ ಹೆದ್ದಾರಿಗಳು ಮತ್ತು ಮೂಲಸೌಕರ್ಯಗಳವರೆಗಿನ ಪ್ರಾಜೆಕ್ಟ್‌ಗಳನ್ನು ಮಾಡುತ್ತದೆ. ಕಂಪನಿಯು ಜಮ್ಮುವಿನ ಜಗ್ತಿ ನಗ್ರೋಟಾದಲ್ಲಿ ಕಾಶ್ಮೀರಿ ವಲಸಿಗರಿಗೆ ಮಿನಿ ಟೌನ್‌ಶಿಪ್ ಮತ್ತು ಆಂಧ್ರಪ್ರದೇಶದ ಪಲೇರು ಅಣೆಕಟ್ಟಿನಂತಹ ಯೋಜನೆಗಳ ಟೆಂಡರ್‌ ಕೂಡ ಪಡೆದಿದೆ.

2012ರಿಂದ ರಿತ್ವಿಕ್ ಪ್ರಾಜೆಕ್ಟ್‌ಗಳ ವ್ಯವಹಾರಗಳಲ್ಲಿ ಯಾವುದೇ ಭಾಗಿಯಾಗಿಲ್ಲ ಎಂದು ರಮೇಶ್ ಹೇಳಿಕೊಂಡಿದ್ದಾರೆ. ಆದರೆ, ಅವರ ಸಹೋದರ ಇನ್ನೂ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ ಮತ್ತು ಅವರ ಮಗ ರಿತ್ವಿಕ್ ಸಂಸ್ಥೆಯ ಎಲ್ಲಾ ಚಟುವಟಿಕೆಗಳ ಮೇಲೆ ನಿಗಾ ವಹಿಸುತ್ತಿದ್ದಾರೆ. ಆದಾಯ ತೆರಿಗೆ ಇಲಾಖೆಯು 2018ರಲ್ಲಿ ರಿಥ್ವಿಕ್ ಪ್ರಾಜೆಕ್ಟ್‌ಗಳು 74 ಕೋಟಿ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿ ಸಂಸ್ಥೆಯ ಮೇಲೆ ದಾಳಿ ಮಾಡಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಕಳೆದ ವರ್ಷ, ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಯು ಆಂಧ್ರಪ್ರದೇಶದಲ್ಲಿ ಅತಿ ಹೆಚ್ಚು ಘೋಷಿತ ಸಂಪತ್ತು ಹೊಂದಿರುವ ಸಂಸದರಲ್ಲಿ ಅವರ ಹೆಸರನ್ನು ಉಲ್ಲೇಖಿಸಿತ್ತು. ರಮೇಶ್ ಅವರು 258 ಕೋಟಿ ರೂಪಾಯಿ ಆಸ್ತಿ ಘೋಷಿಸಿದ್ದರು.

ಇದನ್ನು ಓದಿ: ಚುನಾವಣಾ ಬಾಂಡ್‌: ತೆಲಂಗಾಣ ಮೂಲದ ಕಂಪೆನಿಯಿಂದ ಅತಿ ಹೆಚ್ಚು ದೇಣಿಗೆ ಪಡೆದಿದ್ದ ಜೆಡಿಎಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...