Homeಮುಖಪುಟಬಿಜೆಪಿಗೆ ಅವಧಿ ಮೀರಿದ ಚುನಾವಣಾ ಬಾಂಡ್‌ ಪಡೆಯಲು ಸಹಕರಿಸುವಂತೆ ಎಸ್‌ಬಿಐ ಮೇಲೆ ಒತ್ತಡ ಹೇರಿದ್ದ ಹಣಕಾಸು...

ಬಿಜೆಪಿಗೆ ಅವಧಿ ಮೀರಿದ ಚುನಾವಣಾ ಬಾಂಡ್‌ ಪಡೆಯಲು ಸಹಕರಿಸುವಂತೆ ಎಸ್‌ಬಿಐ ಮೇಲೆ ಒತ್ತಡ ಹೇರಿದ್ದ ಹಣಕಾಸು ಸಚಿವಾಲಯ

- Advertisement -
- Advertisement -

ಬಿಜೆಪಿಗೆ 10 ಕೋಟಿ ರೂಪಾಯಿ ಮೌಲ್ಯದ ಅವಧಿ ಮೀರಿದ ಚುನಾವಣಾ ಬಾಂಡ್‌ಗಳನ್ನು ನಗದೀಕರಣಕ್ಕೆ ಅನುಮತಿಸುವ ಸಲುವಾಗಿ, 2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಕೇಂದ್ರ ಸರ್ಕಾರ ಅಧಿಕೃತ ನಿಯಮಗಳನ್ನು ಉಲ್ಲಂಘಿಸಿದೆ ಎಂದು ದಿ ರಿಪೋರ್ಟರ್ಸ್ ಕಲೆಕ್ಟಿವ್ ವರದಿ ಮಾಡಿದೆ.

ಭಾರತೀಯ ಚುನಾವಣಾ ಆಯೋಗದ ಹೊಸ ಮಾಹಿತಿಯ ಪ್ರಕಾರ, ದಿವಂಗತ ಅರುಣ್ ಜೇಟ್ಲಿ ನೇತೃತ್ವದ ಹಣಕಾಸು ಸಚಿವಾಲಯವು ಎಸ್‌ಬಿಐಗೆ 10 ಕೋಟಿ ರೂಪಾಯಿಗಳ ಅವಧಿ ಮೀರಿದ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಲು ಒತ್ತಾಯಿಸಿದೆ ಎಂದು ವರದಿ ಉಲ್ಲೇಖಿಸಿದೆ.

2019ರ ಹಿಂದೆ ಪ್ರಕಟವಾದ ವರದಿಯಲ್ಲಿ, ಬಾಂಡ್‌ಗಳನ್ನು ನಗದೀಕರಣ ಮಾಡಲು ಕಾನೂನುಬದ್ಧವಾಗಿ ಕಡ್ಡಾಯಗೊಳಿಸಿದ 15 ದಿನಗಳ ಅವಧಿ ಮುಗಿದ ಎರಡು ದಿನಗಳ ನಂತರ ಎಸ್‌ಬಿಐ ರಾಜಕೀಯ ಪಕ್ಷವೊಂದಕ್ಕೆ 10 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ನಗದೀಕರಣ ಮಾಡಲು ಅವಕಾಶ ಮಾಡಿಕೊಟ್ಟಿದೆ ಎಂದು ರಿಪೋರ್ಟರ್ಸ್ ಕಲೆಕ್ಟಿವ್ ಉಲ್ಲೇಖಿಸಿದೆ. 2019ರಲ್ಲಿ SBIಗೆ ಸಚಿವಾಲಯದ ನಿರ್ದೇಶನದಿಂದ ಯಾವ ರಾಜಕೀಯ ಪಕ್ಷವು ಲಾಭ ಗಳಿಸಿದೆ ಎಂದು ತಿಳಿದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿಯು ಚುನಾವಣಾ ಆಯೋಗಕ್ಕೆ ನೀಡಿದ ಮಾಹಿತಿಯ ಪ್ರಕಾರ, ಹಣಕಾಸು ಸಚಿವಾಲಯವು ನಿಯಮಗಳನ್ನು ಮೀರಿ ಕೇಸರಿ ಪಕ್ಷಕ್ಕೆ 10 ಕೋಟಿ ರೂ. ಮೌಲ್ಯದ ಅವಧಿ ಮೀರಿದ ಬಾಂಡ್‌ಗಳನ್ನು ನಗದೀಕರಣ ಮಾಡಲು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗೆ ಕಾನೂನುಬಾಹಿರ ಆದೇಶವನ್ನು ನೀಡಿದೆ ಎನ್ನುವುದನ್ನು ಬಯಲುಗೊಳಿಸಿದೆ.

ದಿ ರಿಪೋರ್ಟರ್ಸ್ ಕಲೆಕ್ಟಿವ್ ಪ್ರಕಾರ, ಇದು ಚುನಾವಣಾ ಬಾಂಡ್‌ಗಳ ಆದೇಶದ ಉಲ್ಲಂಘನೆಯಾಗಿದೆ.  ಜನವರಿ 2018ರಲ್ಲಿ ಪ್ರಕಟಿಸಲಾದ ನಿಯಮಗಳ ಸ್ಪಷ್ಟ ಉಲ್ಲಂಘನೆಯನ್ನು ಮಾಡಿ ಬಿಜೆಪಿಗೆ ಅವಧಿ ಮೀರಿದ ಚುನಾವಣಾ ಬಾಂಡ್‌ ಪಡೆಯಲು ಅವಕಾಶವನ್ನು ಮಾಡಿಕೊಟ್ಟಿದೆ ಎನ್ನುವುದು ಬಯಲಾಗಿದೆ.

ಬಿಜೆಪಿ ಚುನಾವಣಾ ಬಾಂಡ್‌ ನಿಧಿಯ ಅತಿದೊಡ್ಡ ಫಲಾನುಭವಿಯಾಗಿದೆ. ಈ ಯೋಜನೆಯ ಮೂಲಕ ಪಕ್ಷವು 8,251.8 ಕೋಟಿ ರೂಪಾಯಿಗಳನ್ನು ಪಡೆದಿದ್ದು, ಒಟ್ಟು 16,518 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಮಾರಾಟ ಮಾಡಲಾಗಿದೆ. ಇದರರ್ಥ ಮಾರಾಟವಾದ ಒಟ್ಟು ಬಾಂಡ್‌ಗಳಲ್ಲಿ ಬಿಜೆಪಿ 50% ದಷ್ಟು ದೇಣಿಗೆಯನ್ನು ಪಡೆದಿದೆ. ಚುನಾವಣಾ ಬಾಂಡ್‌ ಮೂಲಕ ದೇಣಿಗೆ ಪಡೆದ ಅಗ್ರ ಪಕ್ಷಗಳ ಪಟ್ಟಿಯಲ್ಲಿ ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿದ್ದು, 1,952 ಕೋಟಿ ರೂ.ದೇಣಿಗೆಯನ್ನು ಪಡೆದಿದೆ. ತೃಣಮೂಲ ಕಾಂಗ್ರೆಸ್ 1,705 ಕೋಟಿ ರೂ.ದೇಣಿಗೆಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...