Homeಕರ್ನಾಟಕಲೋಕಸಭಾ ಚುನಾವಣೆ-2024 'ಈದಿನ.ಕಾಂ' ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

ಲೋಕಸಭಾ ಚುನಾವಣೆ-2024 ‘ಈದಿನ.ಕಾಂ’ ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

- Advertisement -
- Advertisement -

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಾದ್ಯಂತ ಸಮೀಕ್ಷೆ ನಡೆಸಿ, ಫಲಿತಾಂಶದ ಕುರಿತು ‘ಈದಿನ.ಕಾಂ’ ನಿಖರ ಅಂಕಿಗಳನ್ನು ನೀಡಿತ್ತು. ಇದೀಗ, 2024ರ ಲೋಕಸಭಾ ಚುನಾವಣೆ ಸಮೀಕ್ಷಾ ವರದಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಮೇಲುಗೈ ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.

ಈದಿನ.ಕಾಂ ಸಮೀಕ್ಷೆ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್‌ 17 ಸ್ಥಾನಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಅಭ್ಯರ್ಥಿ ಘೋಷಣೆಗೂ ಮುನ್ನ ನಡೆದ ಈ ಸಮೀಕ್ಷೆಯನ್ನು ಫೆಬ್ರವರಿ 15 ರಿಂದ ಮಾರ್ಚ್ 5 ರವರೆಗೆ ನಡೆಸಲಾಗಿದ್ದು, 52,678 ಜನರ ಅಭಿಪ್ರಾಯ ಸಂಗ್ರಹದೊಂದಿಗೆ, 2024ರ ಲೋಕಸಭೆ ಚುನಾವಣೆ ಸಂಬಂಧ ಕರ್ನಾಟಕದಲ್ಲಿ ನಡೆಸಲಾದ ಅತಿ ದೊಡ್ಡ ಚುನಾವಣಾ ಪೂರ್ವ ಸಮೀಕ್ಷೆಯಾಗಿದೆ. ಮತದಾರರ ಇಷ್ಟಗಳನ್ನು ಪತ್ತೆಹಚ್ಚುವ ಪ್ರಯತ್ನದಲ್ಲಿ ನಮ್ಮ ಸಿಬ್ಬಂದಿ ಫೆಬ್ರವರಿ 15, 2024 ರಿಂದ ನಿರಂತರವಾಗಿ ಈ ಸಮೀಕ್ಷೆಗಳನ್ನು ನಡೆಸಿದ್ದಾರೆ ಎಂದು ‘ಈದಿನ.ಕಾಂ’ ಸಮೀಕ್ಷಾ ತಂಡ ಹೇಳಿಕೊಂಡಿದೆ.

ಯಾವ ಪಕ್ಷಕ್ಕೆ ಎಷ್ಟು ಪರ್ಸೆಂಟ್ ಮತ?

ಸಮೀಕ್ಷೆ ಪ್ರಕಾರ, 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.43.77ರಷ್ಟು ಮತ ಪಡೆದುಕೊಂಡರೆ, ಬಿಜೆಪಿ-ಜೆಡಿಎಸ್ ಮೈತ್ರಿಯು 42.35% ಮತವನ್ನು ರಾಜ್ಯದಲ್ಲಿ ತನ್ನದಾಗಿಸಿಕೊಳ್ಳಲಿದೆ. ಕಾಂಗ್ರೆಸ್ ತನ್ನ ವಿಧಾನಸಭಾ ಚುನಾವಣೆಯ ಮತ ಪಾಲನ್ನು ಉಳಿಸಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ತನ್ನ ಮತಗಳ ಪ್ರಮಾಣವನ್ನು ಸ್ವಲ್ಪ ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಲಾಗಿದೆ.

ಈ ಮತಗಳಿಗೆ ಆಧಾರದಲ್ಲಿ ಮತ್ತು ಕ್ಷೇತ್ರಾವಾರು ಸಮೀಕ್ಷೆ ಪ್ರಕಾರ, ಕಾಂಗ್ರೆಸ್‌ಗೆ 17 ಕ್ಷೇತ್ರಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಸುಲಭ ಜಯ ಸಾಧಿಸಬಹುದು ಎನ್ನಲಾಗಿದ್ದು. ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಟ್ರೆಂಡ್ ಬದಲಾವಣೆ:

1996 ರಿಂದ ತಮ್ಮ ಮತ ಗಳಿಕೆಯಲ್ಲಿ ಹಂತಹಂತವಾಗಿ ಏರಿಕೆ ಕಂಡಿರುವ ಬಿಜೆಪಿಗೆ, ಈ ಲೋಕಸಭಾ ಚುನಾವಣೆಗಳಲ್ಲಿ ಇಳಿಮುಖವಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶೇ.51.38ರಷ್ಟು ಮತ ಪಡೆದುಕೊಂಡಿತ್ತು. ಕಾಂಗ್ರೆಸ್ ಶೇ.31.88ರಷ್ಟು ಮತ ಪಡೆದರೆ, ಜೆಡಿಎಸ್ ಶೇ.9.67 ಮಾತ್ರ ವೋಟ್ ತನ್ನದಾಗಿಸಿಕೊಂಡಿತ್ತು.

ಆದರೆ, ವಿಧಾನಸಭೆ ಚುನಾವಣೆ ನಂತರ, 2024 ರ ಲೋಕಸಭೆ ಚುನಾವಣೆಯಲ್ಲಿ ಟ್ರೆಂಡ್ ಬದಲಾಗಿದ್ದು, ಕಾಂಗ್ರೆಸ್ ಮತ ಹಂಚಿಕೆ ಶೇ.43.77ರಷ್ಟು ಹೆಚ್ಚಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು ಶೇ.42.35ರಷ್ಟು ಮತಗಳನ್ನು ಪಡೆಯಲಿದೆ.

ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ ಎಂದು ಭಾವಿಸುತ್ತಿರುವ ಜನ:

ಈದಿನ.ಕಾಂ ನಡೆಸಿರುವ ಸಮೀಕ್ಷೆಯಲ್ಲಿ ಮೋದಿ ಆಡಳಿತ 10 ವರ್ಷಗಳಲ್ಲಿ, ಸಾಮಾನ್ಯ ಜನರು ಹಲವು ಸಮಸ್ಯೆಗಳು ಅನುಭವಿಸಿದ್ದಾರೆ ಎಂದು ಕಂಡುಬಂದಿದೆ. ಶೇ.76.55 ಜನರು ಪ್ರತಿಕ್ರಿಯಿಸಿ, ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಶೇ.53.18ರಷ್ಟು ಜನರು ಉದ್ಯೋಗಾವಕಾಶಗಳು ಕಡಿಮೆಯಾಗಿದೆ ಎಂದು ಭಾವಿಸುತ್ತಾರೆ. ಶೇ.45.75ರಷ್ಟು ಜನರು ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 42.02ರಷ್ಟು ಜನರು ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 37.63ರಷ್ಟು ಜನರು ಕಲ್ಯಾಣ ಯೋಜನೆಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಬದಲಾಗುತ್ತಿರುವ ಮತದಾರರ ರಾಜಕೀಯ ಗ್ರಹಿಕೆಗಳು:

ಹತ್ತು ವರ್ಷದ ಮೋದಿ ಆಡಳಿತದ ಬಗ್ಗೆ ಜನರಿಗೆ ಗ್ರಹಿಕೆ ಇದ್ದು, ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ ಮತ್ತು ಖ್ಯಾತಿ ಹೆಚ್ಚಿದೆ ಎಂದು ಶೇ.47.64 ಅಭಿಪ್ರಾಯಪಟ್ಟಿದ್ದಾರೆ ಎಂದು ಸಮೀಕ್ಷೆ ಹೇಳುತ್ತದೆ. ಶೇ.56.14 ಜನರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರವಾಗಿ ಮತ ಚಲಾಯಿಸುತ್ತಾರೆ ಎಂದು ಭಾವಿಸುತ್ತಾರೆ. ಶೇ.59.28% ಮಹಿಳಾ ಮತಪ್ರಮಾಣ ಹೆಚ್ಚಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ; ನಗರ್ತಪೇಟೆ ಮೊಬೈಲ್ ಅಂಗಡಿ ಪ್ರಕರಣ: ಕೋಮು ಪ್ರಚೋದನೆ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...