Homeಕರ್ನಾಟಕಲೋಕಸಭಾ ಚುನಾವಣೆ-2024 'ಈದಿನ.ಕಾಂ' ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

ಲೋಕಸಭಾ ಚುನಾವಣೆ-2024 ‘ಈದಿನ.ಕಾಂ’ ಸಮೀಕ್ಷೆ; ರಾಜ್ಯದಲ್ಲಿ ಕಾಂಗ್ರೆಸ್ ಮೇಲುಗೈ

- Advertisement -
- Advertisement -

2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಾದ್ಯಂತ ಸಮೀಕ್ಷೆ ನಡೆಸಿ, ಫಲಿತಾಂಶದ ಕುರಿತು ‘ಈದಿನ.ಕಾಂ’ ನಿಖರ ಅಂಕಿಗಳನ್ನು ನೀಡಿತ್ತು. ಇದೀಗ, 2024ರ ಲೋಕಸಭಾ ಚುನಾವಣೆ ಸಮೀಕ್ಷಾ ವರದಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತೊಮ್ಮೆ ಮೇಲುಗೈ ಸಾಧಿಸಲಿದೆ ಎಂದು ಭವಿಷ್ಯ ನುಡಿದಿದೆ.

ಈದಿನ.ಕಾಂ ಸಮೀಕ್ಷೆ ಪ್ರಕಾರ, ರಾಜ್ಯದಲ್ಲಿ ಕಾಂಗ್ರೆಸ್‌ 17 ಸ್ಥಾನಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಅಭ್ಯರ್ಥಿ ಘೋಷಣೆಗೂ ಮುನ್ನ ನಡೆದ ಈ ಸಮೀಕ್ಷೆಯನ್ನು ಫೆಬ್ರವರಿ 15 ರಿಂದ ಮಾರ್ಚ್ 5 ರವರೆಗೆ ನಡೆಸಲಾಗಿದ್ದು, 52,678 ಜನರ ಅಭಿಪ್ರಾಯ ಸಂಗ್ರಹದೊಂದಿಗೆ, 2024ರ ಲೋಕಸಭೆ ಚುನಾವಣೆ ಸಂಬಂಧ ಕರ್ನಾಟಕದಲ್ಲಿ ನಡೆಸಲಾದ ಅತಿ ದೊಡ್ಡ ಚುನಾವಣಾ ಪೂರ್ವ ಸಮೀಕ್ಷೆಯಾಗಿದೆ. ಮತದಾರರ ಇಷ್ಟಗಳನ್ನು ಪತ್ತೆಹಚ್ಚುವ ಪ್ರಯತ್ನದಲ್ಲಿ ನಮ್ಮ ಸಿಬ್ಬಂದಿ ಫೆಬ್ರವರಿ 15, 2024 ರಿಂದ ನಿರಂತರವಾಗಿ ಈ ಸಮೀಕ್ಷೆಗಳನ್ನು ನಡೆಸಿದ್ದಾರೆ ಎಂದು ‘ಈದಿನ.ಕಾಂ’ ಸಮೀಕ್ಷಾ ತಂಡ ಹೇಳಿಕೊಂಡಿದೆ.

ಯಾವ ಪಕ್ಷಕ್ಕೆ ಎಷ್ಟು ಪರ್ಸೆಂಟ್ ಮತ?

ಸಮೀಕ್ಷೆ ಪ್ರಕಾರ, 2024ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.43.77ರಷ್ಟು ಮತ ಪಡೆದುಕೊಂಡರೆ, ಬಿಜೆಪಿ-ಜೆಡಿಎಸ್ ಮೈತ್ರಿಯು 42.35% ಮತವನ್ನು ರಾಜ್ಯದಲ್ಲಿ ತನ್ನದಾಗಿಸಿಕೊಳ್ಳಲಿದೆ. ಕಾಂಗ್ರೆಸ್ ತನ್ನ ವಿಧಾನಸಭಾ ಚುನಾವಣೆಯ ಮತ ಪಾಲನ್ನು ಉಳಿಸಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ತನ್ನ ಮತಗಳ ಪ್ರಮಾಣವನ್ನು ಸ್ವಲ್ಪ ಹೆಚ್ಚಿಸಿಕೊಳ್ಳಲಿದೆ ಎಂದು ಹೇಳಲಾಗಿದೆ.

ಈ ಮತಗಳಿಗೆ ಆಧಾರದಲ್ಲಿ ಮತ್ತು ಕ್ಷೇತ್ರಾವಾರು ಸಮೀಕ್ಷೆ ಪ್ರಕಾರ, ಕಾಂಗ್ರೆಸ್‌ಗೆ 17 ಕ್ಷೇತ್ರಗಳಲ್ಲಿ, ಬಿಜೆಪಿ-ಜೆಡಿಎಸ್ ಮೈತ್ರಿ 11 ಕ್ಷೇತ್ರಗಳಲ್ಲಿ ಸುಲಭ ಜಯ ಸಾಧಿಸಬಹುದು ಎನ್ನಲಾಗಿದ್ದು. ಅದರಲ್ಲಿ 7 ಸ್ಥಾನಗಳಲ್ಲಿ ನೆಕ್ ಟು ನೆಕ್ ಫೈಟ್ ನಡೆಯಲಿದೆ ಎಂದು ಹೇಳಿದೆ.

ಟ್ರೆಂಡ್ ಬದಲಾವಣೆ:

1996 ರಿಂದ ತಮ್ಮ ಮತ ಗಳಿಕೆಯಲ್ಲಿ ಹಂತಹಂತವಾಗಿ ಏರಿಕೆ ಕಂಡಿರುವ ಬಿಜೆಪಿಗೆ, ಈ ಲೋಕಸಭಾ ಚುನಾವಣೆಗಳಲ್ಲಿ ಇಳಿಮುಖವಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಶೇ.51.38ರಷ್ಟು ಮತ ಪಡೆದುಕೊಂಡಿತ್ತು. ಕಾಂಗ್ರೆಸ್ ಶೇ.31.88ರಷ್ಟು ಮತ ಪಡೆದರೆ, ಜೆಡಿಎಸ್ ಶೇ.9.67 ಮಾತ್ರ ವೋಟ್ ತನ್ನದಾಗಿಸಿಕೊಂಡಿತ್ತು.

ಆದರೆ, ವಿಧಾನಸಭೆ ಚುನಾವಣೆ ನಂತರ, 2024 ರ ಲೋಕಸಭೆ ಚುನಾವಣೆಯಲ್ಲಿ ಟ್ರೆಂಡ್ ಬದಲಾಗಿದ್ದು, ಕಾಂಗ್ರೆಸ್ ಮತ ಹಂಚಿಕೆ ಶೇ.43.77ರಷ್ಟು ಹೆಚ್ಚಾಗಲಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯು ಶೇ.42.35ರಷ್ಟು ಮತಗಳನ್ನು ಪಡೆಯಲಿದೆ.

ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ ಎಂದು ಭಾವಿಸುತ್ತಿರುವ ಜನ:

ಈದಿನ.ಕಾಂ ನಡೆಸಿರುವ ಸಮೀಕ್ಷೆಯಲ್ಲಿ ಮೋದಿ ಆಡಳಿತ 10 ವರ್ಷಗಳಲ್ಲಿ, ಸಾಮಾನ್ಯ ಜನರು ಹಲವು ಸಮಸ್ಯೆಗಳು ಅನುಭವಿಸಿದ್ದಾರೆ ಎಂದು ಕಂಡುಬಂದಿದೆ. ಶೇ.76.55 ಜನರು ಪ್ರತಿಕ್ರಿಯಿಸಿ, ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಶೇ.53.18ರಷ್ಟು ಜನರು ಉದ್ಯೋಗಾವಕಾಶಗಳು ಕಡಿಮೆಯಾಗಿದೆ ಎಂದು ಭಾವಿಸುತ್ತಾರೆ. ಶೇ.45.75ರಷ್ಟು ಜನರು ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 42.02ರಷ್ಟು ಜನರು ಶ್ರೀಮಂತರು ಮತ್ತು ಬಡವರ ನಡುವಿನ ಅಂತರ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಶೇ. 37.63ರಷ್ಟು ಜನರು ಕಲ್ಯಾಣ ಯೋಜನೆಗಳು ಕಡಿಮೆಯಾಗಿವೆ ಎಂದು ಹೇಳಿದ್ದಾರೆ.

ಬದಲಾಗುತ್ತಿರುವ ಮತದಾರರ ರಾಜಕೀಯ ಗ್ರಹಿಕೆಗಳು:

ಹತ್ತು ವರ್ಷದ ಮೋದಿ ಆಡಳಿತದ ಬಗ್ಗೆ ಜನರಿಗೆ ಗ್ರಹಿಕೆ ಇದ್ದು, ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ ಮತ್ತು ಖ್ಯಾತಿ ಹೆಚ್ಚಿದೆ ಎಂದು ಶೇ.47.64 ಅಭಿಪ್ರಾಯಪಟ್ಟಿದ್ದಾರೆ ಎಂದು ಸಮೀಕ್ಷೆ ಹೇಳುತ್ತದೆ. ಶೇ.56.14 ಜನರು ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪರವಾಗಿ ಮತ ಚಲಾಯಿಸುತ್ತಾರೆ ಎಂದು ಭಾವಿಸುತ್ತಾರೆ. ಶೇ.59.28% ಮಹಿಳಾ ಮತಪ್ರಮಾಣ ಹೆಚ್ಚಾಗುತ್ತದೆ ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ; ನಗರ್ತಪೇಟೆ ಮೊಬೈಲ್ ಅಂಗಡಿ ಪ್ರಕರಣ: ಕೋಮು ಪ್ರಚೋದನೆ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...