Homeಮುಖಪುಟಭಾರತದ ಭೂಭಾಗ ಚೀನಾ ಆಕ್ರಮಿಸಿಕೊಂಡಿಲ್ವ? ನೆಲದ ವಾಸ್ತವ ಬಿಚ್ಚಿಡಲು ಗಡಿಯುದ್ದಕ್ಕೂ 10,000 ಜನರಿಂದ ಮೆರವಣಿಗೆ

ಭಾರತದ ಭೂಭಾಗ ಚೀನಾ ಆಕ್ರಮಿಸಿಕೊಂಡಿಲ್ವ? ನೆಲದ ವಾಸ್ತವ ಬಿಚ್ಚಿಡಲು ಗಡಿಯುದ್ದಕ್ಕೂ 10,000 ಜನರಿಂದ ಮೆರವಣಿಗೆ

- Advertisement -
- Advertisement -

ಚೀನಾ ದೇಶವು ನೆರೆಯ ಭಾರತ ದೇಶದಿಂದ ಎಷ್ಟು ಭೂಮಿ ವಶಪಡಿಸಿಕೊಂಡಿದೆ ಎಂಬುದನ್ನು ಬಹಿರಂಗಪಡಿಸಲು ಲಡಾಕ್‌ನಿಂದ ಸುಮಾರು 10,000 ಜನರು ಈ ತಿಂಗಳು ಚೀನಾದ ಗಡಿ ಉದ್ದಕ್ಕೂ  ಮೆರವಣಿಗೆ ನಡೆಸಲಿದ್ದಾರೆ ಎಂದು ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್‌ಚುಕ್ ಹೇಳಿದ್ದಾರೆ.

ವಾಂಗ್ಚುಕ್ ಅವರು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೆ ಆರನೇ ಶೆಡ್ಯೂಲ್ ಅಡಿಯಲ್ಲಿ ರಾಜ್ಯತ್ವ ಮತ್ತು ಸಾಂವಿಧಾನಿಕ ರಕ್ಷಣೆಗಳ ಬೇಡಿಕೆಯ ಮುಂದಿಟ್ಟು ಕಳೆದ 14 ದಿನಗಳಿಂದ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವಾಂಗ್ಚುಕ್ ಉಪ್ಪು ನೀರು ಕುಡಿದು ಲೇಹ್‌ನಲ್ಲಿ ಶೂನ್ಯ ತಾಪಮಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನಾವು ಯಾವಾಗಲೂ ಹೋಗುತ್ತಿದ್ದ ಸ್ಥಳಗಳಿಗೆ ಹೋಗಲು ಈಗ ನಮಗೆ ಅನುಮತಿಸಲಾಗುತ್ತಿಲ್ಲ. ನಿರ್ದಿಷ್ಟ ಪ್ರದೇಶಗಳಲ್ಲಿ,ನಾವು ಹಿಂದೆ ಹೋಗುತ್ತಿದ್ದ ಸ್ಥಳ ತಲುಪುವ ಕಿಲೋಮೀಟರ್‌ಗಳ ಮೊದಲು ನಮ್ಮನ್ನು ತಡೆಯಲಾಗುತ್ತಿದೆ. ನಾವು ಅಲ್ಲಿಗೆ ಹೋಗಿ ಭೂಮಿ ನಮ್ಮಿಂದ ಕಳೆದುಹೋಗಿದೆಯೇ ಅಥವಾ ಇಲ್ಲವೇ ಎಂಬುದನ್ನು ತೋರಿಸುತ್ತೇವೆ ಎಂದು ವಾಂಗ್ಚುಕ್ ಹೇಳಿದ್ದಾರೆ.

ಇತರ ಪ್ರತಿಭಟನಾಕಾರರೊಂದಿಗೆ ನೆಲದ ವಾಸ್ತವವನ್ನು ಹೊರಗಿನ ಪ್ರಪಂಚಕ್ಕೆ ಎತ್ತಿ ತೋರಿಸಲು ಶೀಘ್ರದಲ್ಲೇ ಗಡಿಗೆ ಮೆರವಣಿಗೆಯನ್ನು ಆಯೋಜಿಸುತ್ತೇವೆ, ನಮ್ಮ ಅಲೆಮಾರಿಗಳು ದಕ್ಷಿಣಕ್ಕೆ ಬೃಹತ್ ಭಾರತೀಯ ಕೈಗಾರಿಕಾ ಸ್ಥಾವರಗಳಿಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತು ಉತ್ತರಕ್ಕೆ ಚೀನಾದ ಅತಿಕ್ರಮಣದಿಂದ ಪ್ರಧಾನ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಸ್ಥಾವರಗಳಿಂದ ಅಲೆಮಾರಿಗಳು 1,50,000 ಚದರ ಕಿಲೋಮೀಟರ್ ಅವಿಭಾಜ್ಯ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತೊಂದೆಡೆ ಅವರು ಉತ್ತರದಿಂದ ಚೀನಾ ಅತಿಕ್ರಮಣದಿಂದ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ, ಚೀನೀಯರು ಕಳೆದ ಕೆಲವು ವರ್ಷಗಳಲ್ಲಿ ದೊಡ್ಡ ಪ್ರಮಾಣದ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ. ಈ ನೆಲದ ವಾಸ್ತವತೆಯನ್ನು ತೋರಿಸಲು ನಾವು ಶೀಘ್ರದಲ್ಲೇ ರೈತರು ಸೇರಿದಂತೆ 10,000 ಜನರು ಗಡಿಗೆ ಮೆರವಣಿಗೆ ತೆರಳಲಿದ್ದೇವೆ. ಡೆಮ್‌ಚೋಕ್, ಚುಶುಲ್ ಸೇರಿದಂತೆ ಚೀನಾದೊಂದಿಗಿನ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಯಲ್ಲಿ ಮೆರವಣಿಗೆಯನ್ನು ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.

ಜೂನ್ 15, 2020ರಂದು ಗಾಲ್ವಾನ್‌ನಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಘಟನೆಯ ನಂತರ ಎರಡು ಸೇನೆಗಳ ನಡುವೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿವೆ ಮತ್ತು ಬಫರ್ ವಲಯಗಳು ಅಥವಾ ನಿಷೇಧಿತ ಪ್ರದೇಶಗಳ ರಚನೆಗೆ ಕಾರಣವಾಗಿವೆ.

ಮಾರ್ಚ್ 4ರಂದು ಲಡಾಖ್ ನಾಗರಿಕ ಸಮಾಜದ ಮುಖಂಡರು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಮಾತುಕತೆಯ ವಿಫಲತೆಯ ನಂತರ ಸ್ಥಳೀಯರು ವಾಂಗ್ಚುಕ್ ಅವರ ಪ್ರತಿಭಟನೆಗೆ ಭಾರೀ ಬೆಂಬಲವನ್ನು ಸೂಚಿಸಿದ್ದಾರೆ. ಲಡಾಖ್‌ನಲ್ಲಿ ಬೌದ್ಧ ಬಹುಸಂಖ್ಯಾತ ಮತ್ತು ಶಿಯಾ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳನ್ನು ಪ್ರತಿನಿಧಿಸುವ ಲೇಹ್ ಅಪೆಕ್ಸ್ ಬಾಡಿ (LAB) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಸದಸ್ಯರು ಜಂಟಿಯಾಗಿ ಲಡಾಖ್‌ಗೆ ರಾಜ್ಯ ಸ್ಥಾನಕ್ಕಾಗಿ ಪ್ರತಿಭಟಿಸುತ್ತಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪ್ರಕಾಶ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...