Homeಮುಖಪುಟಭಾರತದ ಭೂಭಾಗ ಚೀನಾ ಆಕ್ರಮಿಸಿಕೊಂಡಿಲ್ವ? ನೆಲದ ವಾಸ್ತವ ಬಿಚ್ಚಿಡಲು ಗಡಿಯುದ್ದಕ್ಕೂ 10,000 ಜನರಿಂದ ಮೆರವಣಿಗೆ

ಭಾರತದ ಭೂಭಾಗ ಚೀನಾ ಆಕ್ರಮಿಸಿಕೊಂಡಿಲ್ವ? ನೆಲದ ವಾಸ್ತವ ಬಿಚ್ಚಿಡಲು ಗಡಿಯುದ್ದಕ್ಕೂ 10,000 ಜನರಿಂದ ಮೆರವಣಿಗೆ

- Advertisement -
- Advertisement -

ಚೀನಾ ದೇಶವು ನೆರೆಯ ಭಾರತ ದೇಶದಿಂದ ಎಷ್ಟು ಭೂಮಿ ವಶಪಡಿಸಿಕೊಂಡಿದೆ ಎಂಬುದನ್ನು ಬಹಿರಂಗಪಡಿಸಲು ಲಡಾಕ್‌ನಿಂದ ಸುಮಾರು 10,000 ಜನರು ಈ ತಿಂಗಳು ಚೀನಾದ ಗಡಿ ಉದ್ದಕ್ಕೂ  ಮೆರವಣಿಗೆ ನಡೆಸಲಿದ್ದಾರೆ ಎಂದು ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ಸುಧಾರಕ ಸೋನಮ್ ವಾಂಗ್‌ಚುಕ್ ಹೇಳಿದ್ದಾರೆ.

ವಾಂಗ್ಚುಕ್ ಅವರು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೆ ಆರನೇ ಶೆಡ್ಯೂಲ್ ಅಡಿಯಲ್ಲಿ ರಾಜ್ಯತ್ವ ಮತ್ತು ಸಾಂವಿಧಾನಿಕ ರಕ್ಷಣೆಗಳ ಬೇಡಿಕೆಯ ಮುಂದಿಟ್ಟು ಕಳೆದ 14 ದಿನಗಳಿಂದ ಲೇಹ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ವಾಂಗ್ಚುಕ್ ಉಪ್ಪು ನೀರು ಕುಡಿದು ಲೇಹ್‌ನಲ್ಲಿ ಶೂನ್ಯ ತಾಪಮಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ನಾವು ಯಾವಾಗಲೂ ಹೋಗುತ್ತಿದ್ದ ಸ್ಥಳಗಳಿಗೆ ಹೋಗಲು ಈಗ ನಮಗೆ ಅನುಮತಿಸಲಾಗುತ್ತಿಲ್ಲ. ನಿರ್ದಿಷ್ಟ ಪ್ರದೇಶಗಳಲ್ಲಿ,ನಾವು ಹಿಂದೆ ಹೋಗುತ್ತಿದ್ದ ಸ್ಥಳ ತಲುಪುವ ಕಿಲೋಮೀಟರ್‌ಗಳ ಮೊದಲು ನಮ್ಮನ್ನು ತಡೆಯಲಾಗುತ್ತಿದೆ. ನಾವು ಅಲ್ಲಿಗೆ ಹೋಗಿ ಭೂಮಿ ನಮ್ಮಿಂದ ಕಳೆದುಹೋಗಿದೆಯೇ ಅಥವಾ ಇಲ್ಲವೇ ಎಂಬುದನ್ನು ತೋರಿಸುತ್ತೇವೆ ಎಂದು ವಾಂಗ್ಚುಕ್ ಹೇಳಿದ್ದಾರೆ.

ಇತರ ಪ್ರತಿಭಟನಾಕಾರರೊಂದಿಗೆ ನೆಲದ ವಾಸ್ತವವನ್ನು ಹೊರಗಿನ ಪ್ರಪಂಚಕ್ಕೆ ಎತ್ತಿ ತೋರಿಸಲು ಶೀಘ್ರದಲ್ಲೇ ಗಡಿಗೆ ಮೆರವಣಿಗೆಯನ್ನು ಆಯೋಜಿಸುತ್ತೇವೆ, ನಮ್ಮ ಅಲೆಮಾರಿಗಳು ದಕ್ಷಿಣಕ್ಕೆ ಬೃಹತ್ ಭಾರತೀಯ ಕೈಗಾರಿಕಾ ಸ್ಥಾವರಗಳಿಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತು ಉತ್ತರಕ್ಕೆ ಚೀನಾದ ಅತಿಕ್ರಮಣದಿಂದ ಪ್ರಧಾನ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಸ್ಥಾವರಗಳಿಂದ ಅಲೆಮಾರಿಗಳು 1,50,000 ಚದರ ಕಿಲೋಮೀಟರ್ ಅವಿಭಾಜ್ಯ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಮತ್ತೊಂದೆಡೆ ಅವರು ಉತ್ತರದಿಂದ ಚೀನಾ ಅತಿಕ್ರಮಣದಿಂದ ಹುಲ್ಲುಗಾವಲು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ, ಚೀನೀಯರು ಕಳೆದ ಕೆಲವು ವರ್ಷಗಳಲ್ಲಿ ದೊಡ್ಡ ಪ್ರಮಾಣದ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ. ಈ ನೆಲದ ವಾಸ್ತವತೆಯನ್ನು ತೋರಿಸಲು ನಾವು ಶೀಘ್ರದಲ್ಲೇ ರೈತರು ಸೇರಿದಂತೆ 10,000 ಜನರು ಗಡಿಗೆ ಮೆರವಣಿಗೆ ತೆರಳಲಿದ್ದೇವೆ. ಡೆಮ್‌ಚೋಕ್, ಚುಶುಲ್ ಸೇರಿದಂತೆ ಚೀನಾದೊಂದಿಗಿನ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಯಲ್ಲಿ ಮೆರವಣಿಗೆಯನ್ನು ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.

ಜೂನ್ 15, 2020ರಂದು ಗಾಲ್ವಾನ್‌ನಲ್ಲಿ ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ ಘಟನೆಯ ನಂತರ ಎರಡು ಸೇನೆಗಳ ನಡುವೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿವೆ ಮತ್ತು ಬಫರ್ ವಲಯಗಳು ಅಥವಾ ನಿಷೇಧಿತ ಪ್ರದೇಶಗಳ ರಚನೆಗೆ ಕಾರಣವಾಗಿವೆ.

ಮಾರ್ಚ್ 4ರಂದು ಲಡಾಖ್ ನಾಗರಿಕ ಸಮಾಜದ ಮುಖಂಡರು ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನಡುವಿನ ಮಾತುಕತೆಯ ವಿಫಲತೆಯ ನಂತರ ಸ್ಥಳೀಯರು ವಾಂಗ್ಚುಕ್ ಅವರ ಪ್ರತಿಭಟನೆಗೆ ಭಾರೀ ಬೆಂಬಲವನ್ನು ಸೂಚಿಸಿದ್ದಾರೆ. ಲಡಾಖ್‌ನಲ್ಲಿ ಬೌದ್ಧ ಬಹುಸಂಖ್ಯಾತ ಮತ್ತು ಶಿಯಾ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳನ್ನು ಪ್ರತಿನಿಧಿಸುವ ಲೇಹ್ ಅಪೆಕ್ಸ್ ಬಾಡಿ (LAB) ಮತ್ತು ಕಾರ್ಗಿಲ್ ಡೆಮಾಕ್ರಟಿಕ್ ಅಲಯನ್ಸ್ (ಕೆಡಿಎ) ಸದಸ್ಯರು ಜಂಟಿಯಾಗಿ ಲಡಾಖ್‌ಗೆ ರಾಜ್ಯ ಸ್ಥಾನಕ್ಕಾಗಿ ಪ್ರತಿಭಟಿಸುತ್ತಿದ್ದಾರೆ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪ್ರಕಾಶ್ ಅಂಬೇಡ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...