Homeಮುಖಪುಟಮುಸ್ಲಿಂ ಯುವಕರ ಮೇಲೆ ಪಾಕ್ ಪರ ಸಂಭ್ರಮಾಚರಣೆ ಆರೋಪ: ಜೈಲು, ದೌರ್ಜನ್ಯದ 6 ವರ್ಷಗಳ ಬಳಿಕ...

ಮುಸ್ಲಿಂ ಯುವಕರ ಮೇಲೆ ಪಾಕ್ ಪರ ಸಂಭ್ರಮಾಚರಣೆ ಆರೋಪ: ಜೈಲು, ದೌರ್ಜನ್ಯದ 6 ವರ್ಷಗಳ ಬಳಿಕ ಕೇಸ್‌ ‘ಕಟ್ಟುಕಥೆ’ ಎಂದು ತೀರ್ಪು ನೀಡಿದ ಕೋರ್ಟ್‌

- Advertisement -
- Advertisement -

ಕ್ರಿಕೆಟ್‌ ಪಂದ್ಯದಲ್ಲಿ ಪಾಕ್‌ ವಿಜಯವನ್ನು ಸಂಭ್ರಮಾಚಣೆ ನಡೆಸಿದ್ದಾರೆ ಎಂದು ಆರೋಪಿಸಿ 17 ಮಂದಿ ಮುಸ್ಲಿಮರ ಮೇಲೆ ಆರೋಪ ಹೊರಿಸಲಾಗಿದ್ದ 6 ವರ್ಷಗಳ ಬಳಿಕ ಮಧ್ಯಪ್ರದೇಶದ ನ್ಯಾಯಾಲಯವು ಇದನ್ನು ಕಟ್ಟುಕಥೆ ಎಂದು ಕರೆದಿದ್ದು, ಈ ಕುರಿತು ಸಾಕ್ಷಿಯನ್ನು ನೀಡಿದ ಹಿಂದೂ ದೂರುದಾರರು ನಮ್ಮನ್ನು ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯಿಸಲಾಗಿತ್ತು ಎಂದು ಹೇಳಿದ್ದಾರೆ.

ಘಟನೆಯಲ್ಲಿ ಬಂಧಿತರು ಅಕ್ಟೋಬರ್ 2023ರಲ್ಲಿ ಬಿಡುಗಡೆಯಾಗಿದ್ದರು , ಪೊಲೀಸ್ ಕಸ್ಟಡಿಯಲ್ಲಿ ತಮ್ಮನ್ನು ಥಳಿಸಲಾಯಿತು ಮತ್ತು ಅವಾಚ್ಯವಾಗಿ ನಿಂದಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಪ್ರಕರಣದ ಓರ್ವ ಆರೋಪಿ ಘಟನೆಯಿಂದ ನೊಂದು 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಧ್ಯಪ್ರದೇಶದ ಮೊಹದ್ ಗ್ರಾಮದ ನಿವಾಸಿಗಳು ಈಗ ಭಾರತ ಮತ್ತು ಪಾಕಿಸ್ತಾನದ ನಡುವೆ ಪಂದ್ಯ ನಡೆಯುತ್ತಿದ್ದರೆ ವೀಕ್ಷಿಸಲು ಹಿಂದೇಟು ಹಾಕುತ್ತಿದ್ದಾರೆ. 18 ಜೂನ್ 2017ರಂದು ಲಂಡನ್‌ನ ಓವಲ್ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನದ ನಡುವಿನ ಪಂದ್ಯದ ವೇಳೆ ನಡೆದ ಕರಾಳ ಘಟನೆ ಅವರ ಜೀವನದಿಂದ ಇಂದು ಕೂಡ ಮಾಸಿ ಹೋಗಿಲ್ಲ. ಭಾರತವು ಚಾಂಪಿಯನ್ ಟ್ರೋಫಿ ಫೈನಲ್‌ನಲ್ಲಿ ಸೋತ ಬಳಿಕ ಗ್ರಾಮದ ನಿವಾಸಿಗಳು ಸಿಹಿ ಹಂಚಿ, ಪಾಕ್ ಪರ ಘೋಷಣೆ ಕೂಗಿ ಸಂಭ್ರಮಾಚರಣೆ ಮಾಡಿದ್ದಾರೆ ಎಂದು ವ್ಯಾಪಕವಾಗಿ ವದಂತಿ ಹಬ್ಬಿತ್ತು. ಇದರ ಮುಂದುವರಿದ ಭಾಗವಾಗಿ 17 ಮಂದಿ ಮತ್ತು ಇಬ್ಬರು ಬಾಲಕರ ಮೇಲೆ ಭಾರತೀಯ ದಂಡ ಸಂಹಿತೆ, 1860ರ ಅಡಿಯಲ್ಲಿ ದೇಶದ್ರೋಹ ಮತ್ತು ಕ್ರಿಮಿನಲ್ ಪಿತೂರಿಯಡಿ ಮೊಕದ್ದಮೆ ದಾಖಲಿಸಲಾಗಿತ್ತು. ಆ ಬಳಿಕ ದೇಶದ್ರೋಹದ ಪ್ರಕರಣವನ್ನು ಕೈಬಿಟ್ಟು, ವಿವಿಧ ಗುಂಪುಗಳ ನಡುವೆ ದ್ವೇಷಕ್ಕೆ ಉತ್ತೇಜನ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

2017ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು, ಹಿಂದೂ ರಾಷ್ಟ್ರೀಯತೆ ಹೆಚ್ಚುತ್ತಿದೆ ಮತ್ತು ರಾಷ್ಟ್ರ ವಿರೋಧಿ ಎಂಬ ಪದವನ್ನು ವಿಮರ್ಶಕರ ವಿರುದ್ಧ, ವಿಶೇಷವಾಗಿ ಮುಸ್ಲಿಮರ ವಿರುದ್ಧ ಮುಕ್ತವಾಗಿ ಬಳಸಲಾಗುತ್ತಿತ್ತು. ಮುಖ್ಯವಾಹಿನಿಯ ಮಾಧ್ಯಮವು ಇಸ್ಲಾಮೋಫೋಬಿಯಾವನ್ನು ಹರಡುತ್ತಿತ್ತು. ಇದರ ಭಾಗವಾಗಿ  ಸುದ್ದಿ ವಾಹಿನಿಗಳು ಪ್ರಕರಣದ ಆರೋಪಿಗಳನ್ನು ‘ದೇಶದ್ರೋಹಿಗಳು’ ಎಂದು ಕರೆದಿವೆ.

ಆ ಘಟನೆಯು ನಮ್ಮ ಮೇಲೆ ಆಳವಾದ ಪರಿಣಾಮವನ್ನು ಬೀರಿದೆ, ಭಾರತ ಮತ್ತು ಪಾಕಿಸ್ತಾನ ಪಂದ್ಯದ ವೇಳೆ ಹಳ್ಳಿಗರು ಕ್ರಿಕೆಟ್ ಆಡುವುದಿಲ್ಲ ಅಥವಾ ಟಿವಿ ನೋಡುವುದಿಲ್ಲ ಎಂದು ಗ್ರಾಮದ ಮುಖ್ಯಸ್ಥ ರಫೀಕ್ ತದ್ವಿ ಹೇಳಿದ್ದಾರೆ. 17 ಮಂದಿಯನ್ನು ಬಂಧಿಸಿ, ಜೈಲಿಗೆ ತಳ್ಳಿ, ಥಳಿಸಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ, ಕೋರ್ಟ್‌ಗಳಿಗೆ ಅಲೆದಾಡಿಸಿದ 6 ವರ್ಷಗಳ ಬಳಿಕ 16 ಮಂದಿಯನ್ನು ಮ್ಯಾಜಿಸ್ಟ್ರೇಟ್ ದೇವಂದರ್ ಶರ್ಮಾ ಅವರ ಪೀಠ ಖುಲಾಸೆಗೊಳಿಸಿದೆ. ತಮ್ಮಲ್ಲಿ ಸುಳ್ಳು ಆರೋಪಗಳನ್ನು ಮಾಡುವಂತೆ ಒತ್ತಾಯಿಸಲಾಯಿತು ಎಂದು ದೂರುದಾರರು ಮತ್ತು ಸಾಕ್ಷಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಎಲ್ಲಾ ಪುರಾವೆಗಳು, ವಾದಗಳು ಮತ್ತು ಪ್ರತ್ಯಕ್ಷದರ್ಶಿಗಳ ಸಾಕ್ಷಿಗಳನ್ನು ಪರಿಶೀಲಿಸಿದ ನಂತರ, ಆರೋಪಿಗಳು ಘೋಷಣೆಗಳನ್ನು ಕೂಗಿದರು ಮತ್ತು ಪಟಾಕಿ ಸುಟ್ಟರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಶರ್ಮಾ ಅವರು 9 ಅಕ್ಟೋಬರ್ 2023ರಂದು ನೀಡಿದ ತೀರ್ಪಿನಲ್ಲಿ ಹೇಳಿದ್ದಾರೆ. ಇದಲ್ಲದೆ ಐಪಿಸಿಯ ಸೆಕ್ಷನ್ 153-ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲು ಪುರಾವೆಗಳನ್ನು ಒದಗಿಸಲು ಪೊಲೀಸರು ವಿಫಲರಾಗಿದ್ದಾರೆ. ಹೀಗಾಗಿ ಎಲ್ಲಾ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿದೆ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಮಾಧ್ಯಮಗಳು ಜೂನ್ 2017ರಲ್ಲಿ ಈ ಘಟನೆಯನ್ನು ವ್ಯಾಪಕವಾಗಿ ಪ್ರಸಾರ ಮಾಡಿದರೂ, ಅವರನ್ನು ದೋಷಮುಕ್ತಗೊಳಿಸಿದ ಅಕ್ಟೋಬರ್ ತೀರ್ಪುನ್ನು ವರದಿ ಮಾಡಿಲ್ಲ. 17 ಅಪರಾಧಿಗಳ ಜೊತೆಗೆ 16 ವರ್ಷ ವಯಸ್ಸಿನ ಇಬ್ಬರು ಅಪ್ರಾಪ್ತರಾದ ಮುಬಾರಿಕ್ ತದ್ವಿ ಮತ್ತು ಜುಬೈರ್ ತದ್ವಿ ಅವರನ್ನು ಜೂನ್ 2022ರಲ್ಲಿ ಬಾಲಾಪರಾಧಿ ನ್ಯಾಯಾಲಯವು ದೋಷಮುಕ್ತಗೊಳಿಸಿದೆ. ಆದರೆ ಆ ಬಳಿಕ ಅವರು ಶಾಲೆಯನ್ನು ಬಿಟ್ಟಿದ್ದಾರೆ. ಈ ಘಟನೆಯಿಂದ ಇಬ್ಬರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ರುಬಾಬ್ ನವಾಬ್(40) ಫೆಬ್ರವರಿ 2019ರಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೋರ್ವರಾದ ಮುಕದ್ದರ್ ತಾದ್ವಿ (60) ಅವರು ತಮ್ಮ ಮಗ ಸಿಕಂದರ್ ತಾದ್ವಿ ಬಂಧನದ ಆಘಾತದಿಂದ ನವೆಂಬರ್ 2021ರಲ್ಲಿ ನಿಧನರಾಗಿದ್ದರು.

ಮಧ್ಯಪ್ರದೇಶ-ಮಹಾರಾಷ್ಟ್ರ ಗಡಿಯಲ್ಲಿರುವ ಮೊಹದ್ ಗ್ರಾಮವು 4,000 ನಿವಾಸಿಗಳಿಗೆ ನೆಲೆಯಾಗಿದೆ, ಬಹುತೇಕವಾಗಿ ಅಂಚಿನಲ್ಲಿರುವ ದಲಿತರು, ಬುಡಕಟ್ಟುಗಳು ಮತ್ತು ಇಸ್ಲಾಂಗೆ ಮತಾಂತರಗೊಂಡ ಭಿಲ್ಲರ ಉಪಜಾತಿಯಾದ ತದ್ವಿ ಭಿಲ್ ಮುಸ್ಲಿಮರು ಇಲ್ಲಿ ವಾಸಿಸುತ್ತಿದ್ದಾರೆ. ಇಲ್ಲಿ ವಾಸಿಸುವ ಬಹುತೇಕ ಎಲ್ಲರೂ ಸಣ್ಣ ರೈತರು ಅಥವಾ ದೈನಂದಿನ ಕೂಲಿ ಕೆಲಸಗಾರರಾಗಿದ್ದಾರೆ.

ಪ್ರಕರಣದಲ್ಲಿ ಆರೋಪಿತ 9 ಮಂದಿ 25ರಿಂದ 60 ವರ್ಷ ವಯಸ್ಸಿನವರು. ಜೂನ್ 2017ರಲ್ಲಿ ಶಹಪುರ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಸಂಜಯ್ ಪಾಠಕ್ ಮತ್ತು ಇತರ ಪೊಲೀಸ್ ಸಿಬ್ಬಂದಿ ನಮ್ಮ ಮೇಲೆ ಒದ್ದು, ನಿಂದಿಸಿ ದೌರ್ಜನ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ತಮ್ಮ ಗಡ್ಡವನ್ನು ಎಳೆದಿದ್ದಾರೆ, ಇದಕ್ಕೆ ವಿರೋಧಿಸಿದರೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದಾರೆ. ಪೊಲೀಸರು ಎರಡು ದಿನ ಆಹಾರ ನೀಡದೆ ದೌರ್ಜನ್ಯ ನಡೆಸಿದ್ದಾರೆ. ಪೊಲೀಸ್ ಠಾಣೆಗೆ ಚಹಾ ನೀಡಲು ಬಂದ ವ್ಯಕ್ತಿ ಕೂಡ ನಮ್ಮನ್ನು ಒದೆಯುತ್ತಿದ್ದರು, ನಮ್ಮನ್ನು ಭಯೋತ್ಪಾದಕರು ಎಂದು ಕರೆಯುತ್ತಿದ್ದರು ಎಂದು 32 ವರ್ಷದ ದೈನಂದಿನ ಕೂಲಿ ಇಮಾಮ್ ತಾದ್ವಿ ಹೇಳಿದ್ದಾರೆ. ನಮಗೆ ಚಿತ್ರಹಿಂಸೆ ನೀಡಲಾಗಿದೆ. ಅವರು ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯುವ ಮೊದಲು ನಮ್ಮನ್ನು ಥಳಿಸಿದಾಗ ಇಡೀ ಗ್ರಾಮ ನೋಡಿದೆ, ನಾವು ಗಂಭೀರವಾಗಿದ್ದೆವು, ನಮಗೆ ಮ್ಯಾಜಿಸ್ಟ್ರೇಟ್ ಮುಂದೆ ಮಾತನಾಡಲು ಕೂಡ ಸಾಧ್ಯವಾಗಲಿಲ್ಲ. ತಮ್ಮನ್ನು ಭಯೋತ್ಪಾದಕರು ಎಂದು ಕರೆಯಲಾಗುತ್ತಿತ್ತು ಮತ್ತು ಜೈಲಿನಲ್ಲಿದ್ದಾಗ ಪ್ರತಿದಿನ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ಮತ್ತು ನೆಲವನ್ನು ಒರೆಸಲು ಹೇಳುತ್ತಿದ್ದರು ಎಂದು ಪೊಲೀಸ್‌ ದೌರ್ಜನ್ಯದ ಬಗ್ಗೆ ಸಂತ್ರಸ್ತರು ನೋವನ್ನು ಹಂಚಿಕೊಂಡಿದ್ದಾರೆ.

ಇದನ್ನು ಓದಿ: ಭಾರತದ ಭೂಭಾಗ ಚೀನಾ ಆಕ್ರಮಿಸಿಕೊಂಡಿಲ್ವ? ನೆಲದ ವಾಸ್ತವ ಬಿಚ್ಚಿಡಲು ಗಡಿಯುದ್ದಕ್ಕೂ 10,000 ಜನರಿಂದ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...