Homeಮುಖಪುಟ'ಮಕ್ಕಳಾಟ ಆಡುವವರನ್ನು ಮನೆಗೆ ಕಳಿಸುವುದು ನಿಶ್ಚಿತ..'; ತೇಜಸ್ವಿ ಸೂರ್ಯನನ್ನು 'ಎಳೆಕೂಸು' ಎಂದ ಕಾಂಗ್ರೆಸ್

‘ಮಕ್ಕಳಾಟ ಆಡುವವರನ್ನು ಮನೆಗೆ ಕಳಿಸುವುದು ನಿಶ್ಚಿತ..’; ತೇಜಸ್ವಿ ಸೂರ್ಯನನ್ನು ‘ಎಳೆಕೂಸು’ ಎಂದ ಕಾಂಗ್ರೆಸ್

- Advertisement -
- Advertisement -

ನಗರ್ತಪೇಟೆ ಅಂಗಡಿ ಗಲಾಟೆ ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ಎಳೆ ಕೂಸು ಎಂದು ಬಿಜೆಪಿ ಸಂಸದ್ನ್ನು ಲೇವಡಿ ಮಾಡಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್, ‘ಈ ತೇಜಥೆಸ್ವಿ ಸೂರ್ಯ ಎಂಬ ಎಳೆ ಕೂಸಿನಂತಹ ಸಂಸದ, ಕೋವಿಡ್ ಬಂದಾಗ ಫುಟ್ಬಾಲ್ ಆಡೋಕೆ ಹೋಗಿದ್ದರು! ನೆರೆ ಬಂದಾಗ ದೋಸೆ ತಿನ್ನೋಕೆ ಹೋಗಿದ್ದರು, ಕನ್ನಡಿಗರಿಗೆ ಅನ್ಯಾಯವಾದಾಗ ಎಮರ್ಜೆನ್ಸಿ ಎಕ್ಸಿಟ್ ನಲ್ಲಿ ಹಾರೋಕೆ ಹೋಗಿದ್ದರು, ಕನ್ನಡಿಗ ಯುವಕರು ಉದ್ಯೋಗ ಕೇಳುತ್ತಿದ್ದಾಗ ನಾಪತ್ತೆಯಾಗಿದ್ದರು. ಆದರೆ, ಈಗ ಬೀದಿ ಜಗಳದ ವಿಷಯಕ್ಕೆ ಮಾತ್ರ ಓಡೋಡಿ ಬಂದಿದ್ದಾರೆ. ಸಂಸದನಾಗಿ ತನ್ನ ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರನ್ನು ಈ ಬಾರಿ ಜನತೆ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ’ ಎಂದು ಕಿಡಿ ಕಾರಿದೆ.

‘ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನಗರ್ತಪೇಟೆಯ ಶಾಸಕರು ಬಿಜೆಪಿಯವರೇ, ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರು ಬಿಜೆಪಿಯ ಪ್ರಾಪಗಾಂಡಾಗಳಿಗೆ ತಪರಾಕಿ ನೀಡಿದ್ದಾರೆ. ಇದು ಬಿಜೆಪಿಯವರು ಚುನಾವಣೆಗಾಗಿ ಹಚ್ಚಿದ ಕೋಮು ಬೆಂಕಿ ಎನ್ನುವುದಕ್ಕೆ ಪುಷ್ಟಿ ನೀಡಿದ್ದಾರೆ. ತೇಜಸ್ವಿ ಸೂರ್ಯ ಎಂಬ ಅವಿವೇಕಿ ಶಿಶುವಿಗೆ ಈ ಗಲಾಟೆಯ ವಿಷಯದಲ್ಲಿ ರಾಜಕೀಯ ಬೇಳೆ ಬೇಯಿಸಬೇಡ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದರೂ ಕೋಮು ಸಂಘರ್ಷ ಉಂಟುಮಾಡಲು ಮುಂದಾಗಿದ್ದಾರೆ. ಇಷ್ಟು ದಿನ ಕಣ್ಮರೆಯಾಗಿದ್ದ ತೇಜಸ್ವಿ ಸೂರ್ಯನಿಗೆ ತನ್ನ ಸಾಧನೆ ಹೇಳಿ ಮತ ಕೇಳುವ ಯೋಗ್ಯತೆ ಅರ್ಹತೆ ಇಲ್ಲದಿರುವುದೇ ಈ ಎಲ್ಲಾ ನಾಟಕಗಳ ಮೂಲ ಕಾರಣ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

‘ವಯಕ್ತಿಕ ಕಾರಣಗಳಿಗಾಗಿ ನಡೆದ ಗಲಾಟೆಯನ್ನು ಹಿಡಿದುಕೊಂಡು ಕೋಮು ಸಂಘರ್ಷ ಉಂಟುಮಾಡಲು ಹವಣಿಸಿದ ತೇಜಸ್ವಿ ಸೂರ್ಯ ಚುನಾವಣಾ ನೀತಿ ಸಂಹಿತೆಯ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಕರ್ನಾಟಕ ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕು,
ಈತನ ಉಮೇದುವಾರಿಕೆಯನ್ನು ಮಾನ್ಯ ಮಾಡಬಾರದು ಹಾಗೂ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸಬೇಕು. ನಿಸ್ಪಕ್ಷಪಾತ ಹಾಗೂ ಪಾರದರ್ಶಕ ಚುನಾವಣೆಗಾಗಿ ಚುನಾವಣಾ ಆಯೋಗ ಈ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭಾವಿಸಿದ್ದೇವೆ’ ಎಂದು ಕಾಂಗ್ರೆಸ್ ಹೇಳಿದೆ.

 

ಇದನ್ನೂ ಒದಿ; “ತಮಿಳುನಾಡಿನಿಂದ ಬಂದು ಬಾಂಬ್ ಹಾಕ್ತಾರೆ” ಎಂದ ಶೋಭಾ ಕರಂದ್ಲಾಜೆ: ತೀವ್ರ ಆಕ್ರೋಶದ ಬಳಿಕ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...