Homeಫ್ಯಾಕ್ಟ್‌ಚೆಕ್Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ...

Fact Check: ಚುನಾವಣಾ ಬಾಂಡ್ ಪ್ರಕರಣದ ವಿಚಾರಣೆ ವೇಳೆ ಸಿಜೆಐ ಡಿವೈ ಚಂದ್ರಚೂಡ್ ನ್ಯಾಯಾಲಯದಿಂದ ಹೊರ ನಡೆದ್ರಾ?

- Advertisement -
- Advertisement -

ಚುನಾವಣಾ ಬಾಂಡ್‌ ಪ್ರಕರಣದ ವಿಚಾರಣೆ ವೇಳೆ ಸಾಲಿಸಿಟರ್ ಜನರಲ್ (ಎಸ್‌ಜಿ) ತುಷಾರ್ ಮೆಹ್ತಾ ವಾದ ಮಂಡಿಸುವಾಗ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನ್ಯಾಯಾಲಯದಿಂದ ಹೊರ ನಡೆದಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗ್ತಿದೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ಅಜೀತ್ ಭಾರ್ತಿ ವೈರಲ್ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಆ ವಿಡಿಯೋದ ಕೊನೆಯಲ್ಲಿ ಸಾಲಿಸಿಟರ್ ಜನರಲ್ ಮಾತನಾಡುವಾಗ ಸಿಜೆಐ ಚಂದ್ರಚೂಡ್ ಅವರು ಕುರ್ಚಿಯಿಂದ ಎದ್ದಂತೆ ಕಾಣುತ್ತದೆ. “ವಾವ್! ವಕೀಲರು ಮಾತು ಮುಂದುವರೆಸುತ್ತಿರುವಾಗಲೇ ಚಂದ್ರಚೂಡ್ ಅವರು ಏನೂ ಮಾತನಾಡದೆ ಎದ್ದು ಹೋದರು. ಕೌಟುಂಬಿಕ ಪ್ರತಿಭೆ ಮತ್ತು ನ್ಯಾಯಾಂಗದಲ್ಲಿ ಸರಿಯಾದ ಡಿಎನ್‌ಎ ಅನುಕ್ರಮವನ್ನು ಹೊಂದಿರುವ ನ್ಯಾಯಾಧೀಶರ ದುರಹಂಕಾರವು ಎಷ್ಟು ಉನ್ನತ ಮತ್ತು ಅಶ್ಲೀಲವಾಗಿದೆ ಎಂಬುದನ್ನು ಈ ವಿಡಿಯೋ ತೋರಿಸುತ್ತದೆ. ಇದು ಸುಪ್ರೀಂ ಕೋರ್ಟ್, ಸರ್ವೋಚ್ಚ ನ್ಯಾಯಾಲಯ!”ಎಂದು ಅಜೀತ್ ಭಾರ್ತಿ ವಿಡಿಯೋ ಜೊತೆಗೆ ಬರೆದುಕೊಂಡಿದ್ದಾರೆ. ಬಳಿಕ ಅವರು ಎಕ್ಸ್‌ನಿಂದ ಈ ಪೋಸ್ಟ್ ಡಿಲಿಟ್ ಮಾಡಿದ್ದಾರೆ.

“Boiled Anda'(@AmitLeliSlayer) ಮತ್ತೊಬ್ಬ ಎಕ್ಸ್ ಬಳಕೆದಾರ ಕೂಡ ವೈರಲ್ ವಿಡಿಯೋ ಹಂಚಿಕೊಂಡಿದ್ದು, “ಮುಖ್ಯ ನ್ಯಾಯಮೂರ್ತಿ ಓಡಿ ಹೋದರು” ಎಂದು ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

‘Jayesh Mehta’ ಎಂಬ ಮತ್ತೋರ್ವ ವೆರಿಫೈಡ್ (ಪ್ರಾಮಾಣಿಕೃತ) ಎಕ್ಸ್ ಬಳಕೆದಾರ ಕೂಡ ವೈರಲ್ ಹಂಚಿಕೊಂಡಿದ್ದು, “ಸಿಜೆಐ ಈ ವರ್ತಿಸಲು ಹೇಗೆ ಸಾಧ್ಯ? ಸಾಲಿಸಿಟರ್ ಜನರಲ್ ವಾದ ಮಂಡಿಸುತ್ತಿರುವಾಗ ವಿಚಾರಣೆ ಮುಂದೂಡದೆ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರು ಸುಮ್ಮನೆ ಹೊರ ನಡೆದಿದ್ದಾರೆ. ಇದು ಭಾರತ ಸರ್ಕಾರಕ್ಕೆ ಮಾಡಿದ ಘೋರ ಅವಮಾನ. ಸಿಜೆಐ ಚಂದ್ರಚೂಡ್ ಸೇರಿದಂತೆ ಎಲ್ಲಾ ನ್ಯಾಯಾಧೀಶರಿಂದ ರಾಷ್ಟ್ರಪತಿಗಳು ರಾಜೀನಾಮೆ ಪಡೆಯಬೇಕು. ಸ್ವಲ್ಪವೂ ಸೌಜನ್ಯವಿಲ್ಲದ ದುರಹಾಂಕಾರಿ ವ್ಯಕ್ತಿ ಚಂದ್ರಚೂಡ್. ಅವರು ಮತ್ತು ಇತರ ನ್ಯಾಯಾಧೀಶರು ಭಾರತ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ. ನ್ಯಾಯಾಧೀಶರ ಈ ವರ್ತನೆಯ ಹಿಂದಿನ ಕಾರಣಗಳನ್ನು ಪಟ್ಟಿ ಮಾಡುವ ಥ್ರೆಡ್ ಅನ್ನು ನಾನು ಶೀಘ್ರದಲ್ಲೇ ಪೋಸ್ಟ್ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಫೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಇತರ ನ್ಯಾಯಾಧೀಶರ ಕುರಿತು ವೈರಲ್ ಆಗುತ್ತಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ವೈರಲ್ ವಿಡಿಯೋಗೆ ಸಂಬಂಧಿಸಿದ ವಿಚಾರಣೆಯ ಸಂಪೂರ್ಣ ವಿಡಿಯೋ ಸುಪ್ರೀಂ ಕೋರ್ಟ್ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿದೆ. ಮಾರ್ಚ್ 18ರಂದು ಅಪ್ಲೋಡ್ ಮಾಡಲಾದ 47 ನಿಮಿಷ 45 ಸೆಕೆಂಡ್‌ನ ವಿಡಿಯೋದಲ್ಲಿ 27 ನಿಮಿಷ 6 ಸೆಕೆಂಡ್‌ನಿಂದ ವೈರಲ್ ವಿಡಿಯೋದಲ್ಲಿರುವ ದೃಶ್ಯ ಕಾಣಬಹುದು. ಅಧಿಕೃತ ವಿಡಿಯೋದಲ್ಲಿರುವಂತೆ ಸಿಜೆಐ ಚಂದ್ರಚೂಡ್‌ ಅವರು ತಾವು ಕುಳಿತ ಕುರ್ಚಿಯಿಂದ ಒಮ್ಮೆ ಎದ್ದು ಸರಿಯಾಗಿ ಕುಳಿತಿದ್ದಾರೆಯೇ ಹೊರತು, ಅವರು ಎದ್ದು ಹೊರ ನಡೆದಿರುವುದು ಕಾಣುವುದಿಲ್ಲ.

ಹಾಗಾಗಿ, ವೈರಲ್ ವಿಡಿಯೋವನ್ನು ಎಡಿಟ್ ಮಾಡಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಳ್ಳುತ್ತಿರುವುದು ಖಚಿತವಾಗಿದೆ.

ಇಲ್ಲಿ ಸ್ಪಷ್ಟವಾಗಿ ಗಮನಿಸಬೇಕಾದ ಅಂಶವೆಂದರೆ, ವೈರಲ್ ವಿಡಿಯೋದಲ್ಲಿ ಸಿಜೆಐ ಎದ್ದು ಹೋಗಿದ್ದಾರೆ ಎಂದು ಪ್ರತಿಪಾದಿಸಲಾದ ದೃಶ್ಯ ಕೊನೆಯಲ್ಲಿದೆ. ಅಲ್ಲಿ ಸಿಜೆಐ ಎದ್ದಂತೆ ಕಾಣುತ್ತಿವೆಯೇ ಹೊರತು, ಅವರು ಎದ್ದು ಹೊರ ನಡೆದಿರುವ ದೃಶ್ಯವಿಲ್ಲ. ಸಿಜೆಐ ಎದ್ದು ಸರಿಯಾಗಿ ಕುಳಿತಿರುವುದನ್ನು, ಎದ್ದು ಹೊರ ನಡೆದಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗಿದೆ.

ಸಿಜೆಐ ಅವರು ತಮ್ಮ ಕುರ್ಚಿಯನ್ನು ಸರಿಪಡಿಸಿಕೊಂಡು ಮತ್ತೆ ಕುಳಿತ ನಂತರವೂ 20 ನಿಮಿಷಗಳ ಕಾಲ ವಿಚಾರಣೆಯಲ್ಲಿ ಭಾಗವಹಿಸಿದ್ದಾರೆ.

ಸಿಜೆಐ ವಿರುದ್ದ ಸುಳ್ಳು ಮಾಹಿತಿ ಹಂಚುವ ಅಗತ್ಯವೇನು?

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಭಾರತ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಂದರೆ, ಮೋದಿ ಸರ್ಕಾರದ ಪರ ಅವರು ವಾದ ಮಂಡಿಸುತ್ತಿದ್ದರು. ಇಲ್ಲಿ ತುಷಾರ್ ಮೆಹ್ತಾ ಅವರು ವಾದ ಮಂಡಿಸುವಾಗ ಸಿಜೆಐ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂದು ಬಿಂಬಿಸುವ ಪ್ರಯತ್ನ ಮಾಡಲಾಗಿದೆ. ಮೋದಿ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಸಿಜೆಐ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠ ರದ್ದುಗೊಳಿಸಿತ್ತು. ಇದರಿಂದ ಮೋದಿ ಸರ್ಕಾರ ತೀವ್ರ ಮುಖಭಂಗ ಅನುಭವಿಸಿತ್ತು. ಹಾಗಾಗಿ, ಬಲಪಂಥೀಯ ವ್ಯಕ್ತಿಗಳು ಸಿಜೆಐ ಮೋದಿ ಸರ್ಕಾರದ ವಿರುದ್ದ ಇದ್ದಾರೆ ಎಂಬ ಸುಳ್ಳು ಪ್ರತಿಪಾದನೆ ಮಾಡುತ್ತಿದ್ದಾರೆ.

ಇದನ್ನೂ ಓದಿ : Fact Check: ಬೆಂಗಳೂರಿನಲ್ಲಿ ನಮಾಝ್ ವೇಳೆ ಹನುಮಾನ್ ಚಾಲೀಸಾ ಹಾಕಿದ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...