Homeಕರ್ನಾಟಕಹಲ್ಲೆ ಪ್ರಕರಣವನ್ನು ದೊಡ್ಡದಾಗಿಸುವ ಅಗತ್ಯ ಇರಲಿಲ್ಲ: ಬಿಜೆಪಿ ಶಾಸಕ ಗರುಡಾಚಾರ್‌

ಹಲ್ಲೆ ಪ್ರಕರಣವನ್ನು ದೊಡ್ಡದಾಗಿಸುವ ಅಗತ್ಯ ಇರಲಿಲ್ಲ: ಬಿಜೆಪಿ ಶಾಸಕ ಗರುಡಾಚಾರ್‌

- Advertisement -
- Advertisement -

ಬೆಂಗಳೂರಿನ ನಗರ್ತ ಪೇಟೆಯ ಟೆಲಿಕಾಂ ಅಂಗಡಿಯೊಂದರಲ್ಲಿ ಲೌಡ್ ಸ್ಪೀಕರ್ ವಿಚಾರವಾಗಿ ಅಂಗಡಿ ಮಾಲಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌ ಪ್ರತಿಕ್ರಿಯಿಸಿದ್ದಾರೆ. ಇದು ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ನಡೆದ ಗಲಾಟೆಯಲ್ಲ, ಇದನ್ನು ಇಷ್ಟೊಂದು ದೊಡ್ಡದಾಗಿ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಹೇಳಿದ್ದು, ಈ ವಿಚಾರದಲ್ಲಿ ರಾಜಕೀಯ ಮಾಡಿದ್ದ ಬಿಜೆಪಿಗೆ ದೊಡ್ಡ ಮುಜುಗರವಾಗಿದೆ.

ಈ ಕುರಿತು ಮಾದ್ಯಮಗಳ ಜೊತೆ ಮಾತನಾಡಿದ ಶಾಸಕ ಉದಯ್‌ ಗರುಡಾಚಾರ್‌, ಅದು ನನ್ನದೇ ಕ್ಷೇತ್ರ, ನಾನು ಘಟನೆ ಬಗ್ಗೆ ಎಲ್ಲಾ ತಿಳ್ಕೊಂಡಿದ್ದೇನೆ, ಇದನ್ನು ಇಷ್ಟು ದೊಡ್ಡ ಮಾಡುವ ಅಗತ್ಯ ಇರಲಿಲ್ಲ. ಈಗ ಚುನಾವಣೆ ಸಮಯ ಎಲ್ಲಾ ಉದ್ರೇಕದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ನನಗೆ ತಿಳಿದಿದೆ. ಅನ್ಯ ಕೋಮಿನ ಜನರು ಹಲ್ಲೆ ಮಾಡಿದ್ದಾರೆ ಎಂದು ನಾನು ಯಾವತ್ತೂ ಹೇಳಲ್ಲ, ನಾನು ಸೆಕ್ಯೂಲರ್‌ ವ್ಯಕ್ತಿ ಎಲ್ಲಾ ಜನಾಂಗದವರು ಚೆನ್ನಾಗಿ ಇರಬೇಕು ಎಂದು ಹೇಳುವವನು. ನನ್ನ ಕ್ಷೇತ್ರದಲ್ಲಿ ಎಲ್ಲವೂ ನಿಯಂತ್ರಣದಲ್ಲಿದೆ. ಇದುವರೆಗೆ ನಮ್ಮಲ್ಲಿ ಯಾವುದೇ ಸಮಸ್ಯೆಯಾಗಿಲ್ಲ, ಕ್ಷೇತ್ರದಲ್ಲಿ ವ್ಯಾಪರಸ್ಥರು ಸೇರಿದಂತೆ ಎಲ್ಲರೂ ಸುಲಲಿತವಾಗಿ ಜೀವನವನ್ನು ನಡೆಸುತ್ತಿದ್ದಾರೆ. ಕಾನೂನು ನಂತರದ ಕ್ರಮ ಕೈಗೊಳ್ಳಲಿದೆ. ಈ ಬಗ್ಗೆ ತೇಜಸ್ವಿ ಸೂರ್ಯ ನನ್ನಲ್ಲಿ ಮಾತನಾಡಿದ್ದಾರೆ, ಈ ವೇಳೆ ನಾನು ಸೂರ್ಯ ಅವರಲ್ಲಿ ಆರೋಪಿಗಳ ಬಂಧನವಾಗಿದೆ. ಇನ್ನು ಕಾನೂನು ಅದರ ಕೆಲಸವನ್ನು ಮಾಡುತ್ತದೆ ಎಂದು ಹೇಳಿದ್ದೇನೆ ಎಂದು ಹೇಳಿದ್ದಾರೆ.

ಈ ಕುರಿತು ಕಾಂಗ್ರೆಸ್‌ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಬಿಜೆಪಿ ಶಾಸಕ ಉದಯ್ ಗರುಡಾಚಾರ್ ಅವರು ಕರ್ನಾಟಕದ ಬಿಜೆಪಿಗರಿಗೆ ತಪರಾಕಿ ನೀಡಿದ್ದಾರೆ, ಇದು ಬಿಜೆಪಿಯವರು ಚುನಾವಣೆಗಾಗಿ ಹಚ್ಚಿದ ಕೋಮು ಬೆಂಕಿ ಎನ್ನುವುದಕ್ಕೆ ಪುಷ್ಟಿ ನೀಡಿದ್ದಾರೆ.

ತೇಜಸ್ವಿ ಸೂರ್ಯ ಎಂಬ ಅವಿವೇಕಿ ಶಿಶುವಿಗೆ ಈ ಗಲಾಟೆಯ ವಿಷಯದಲ್ಲಿ ರಾಜಕೀಯ ಬೇಳೆ ಬೇಯಿಸಬೇಡ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದರೂ ಕೋಮು ಸಂಘರ್ಷ ಉಂಟುಮಾಡಲು ಮುಂದಾಗಿದ್ದಾರೆ. ಇಷ್ಟು ದಿನ ಕಣ್ಮರೆಯಾಗಿದ್ದ ತೇಜಸ್ವಿ ಸೂರ್ಯನಿಗೆ ತನ್ನ ಸಾಧನೆ ಹೇಳಿ ಮತ ಕೇಳುವ ಯೋಗ್ಯತೆ ಅರ್ಹತೆ ಇಲ್ಲದಿರುವುದೇ ಈ ಎಲ್ಲಾ ನಾಟಕಗಳ ಮೂಲ ಕಾರಣ! ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.
ಏನಿದು ಘಟನೆ:

ಬೆಂಗಳೂರು ನಗರದ ಸಿದ್ದಣ್ಣ ಗಲ್ಲಿಯ ನಗರ್ತಪೇಟೆಯಲ್ಲಿ ಮೊಬೈಲ್‌ ಅಂಗಡಿ ಬಳಿ ಬಂದು ಅಂಗಡಿ ಮಾಲಕ ಮುಖೇಶ್ ಮೇಲೆ ಹಲ್ಲೆ ಮಾಡಲಾಗಿತ್ತು. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದೆ. ವಿಡಿಯೋದಲ್ಲಿ ಮುಖೇಶ್ ಅಂಗಡಿಗೆ ಬಂದ ಯುವಕರ ಗುಂಪಿನ ಜೊತೆ ಮಾತಿನ ಚಕಮಕಿಯಲ್ಲಿ ತೊಡಗಿರುವುದು, ಮಾತಿಗೆ ಮಾತು ಬೆಳೆದು ಗುಂಪಿನಲ್ಲಿದ್ದ ಯುವಕನೊಬ್ಬ ಮುಖೇಶ್‍ ಮೇಲೆ ಹಲ್ಲೆ ಮಾಡುವುದು. ಈ ವೇಳೆ ಅಂಗಡಿಯಿಂದ ಹೊರ ಬರುವ ಮುಖೇಶ್ ಯುವಕರ ಮೇಲೆ ಪ್ರತಿ ಹಲ್ಲೆ ನಡೆಸುವುದು ಸೆರೆಯಾಗಿದೆ.

ಆದರೆ ಈ ಬಗ್ಗೆ ಸುಳ್ಳು ಆಯಾಮಗಳನ್ನು ನೀಡಿ ಕನ್ನಡ ಮಾದ್ಯಮಗಳು ಮತ್ತು ಬಿಜೆಪಿ ಪ್ರಚಾರವನ್ನು ಮಾಡಿತ್ತು. ಸಂಜೆ ನಮಾಜ್ ಟೈಂನಲ್ಲಿ ಹನುಮಾನ್‌ ಚಾಲೀಸ್ ಹಾಕ್ತಿಯಾ ಎಂದು ಯುವಕನಿಗೆ ಥಳಿಸಲಾಗಿದೆ ಎಂದು ಸುಳ್ಳು ಸುದ್ದಿಯನ್ನು ಬಿತ್ತಲಾಗಿತ್ತು. ದೂರುದಾರ ನೀಡಿದ ದೂರಿನಲ್ಲಿಯೂ ಆಝಾನ್, ಹನುಮಾನ್ ಚಾಲಿಸಾದ ಬಗ್ಗೆ ಯಾವುದೇ ಉಲ್ಲೇಖವಿರಲಿಲ್ಲ. ಆದರೆ ಬಿಜೆಪಿ ಚುನಾವಣೆ ಹೊಸ್ತಿಲಲ್ಲ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿ ರಾಜಕೀಯ ಲಾಭವನ್ನು ಪಡೆಯಲು ಮುಂದಾಗಿರುವುದು ವಿಪರ್ಯಾಸವಾಗಿದೆ. ಇದಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಎಫ್‍ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿತ್ತು. ಆದರೆ ಇದು ಸುಳ್ಳು ಆರೋಪ ಎನ್ನುವುದು ಆ ಬಳಿಕ ಬಯಲಾಗಿತ್ತು.

ಮುಖೇಶ್ ತನ್ನ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಭಜನೆ ಹಾಡುಗಳನ್ನು ಹಾಕಿದ್ದನ್ನು ಆಕ್ಷೇಪಿಸಿ ಅವರ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಹಾಗೂ ಸಂಘ ಪರಿವಾರದ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದ್ದರು.

ಇದನ್ನು ಓದಿ: ಏಪ್ರಿಲ್‌ನ್ನು”ದಲಿತ ಇತಿಹಾಸದ ತಿಂಗಳು” ಎಂದು ಘೋಷಿಸಿದ ಕೆನಡಾದ ಬರ್ಲಿಂಗ್ಟನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...