Homeಮುಖಪುಟಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ದೇವಾಲಯ ಹಾಗೂ ಟ್ರಸ್ಟ್‌ಗಳು ಹೈಕೋರ್ಟ್‌ ಮೊರೆ ಹೋಗಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

ಠಾಕೂರ್ ರಂಗ್ಜಿ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಟ್ರಸ್ಟ್ ಯೋಗಿ ಸರ್ಕಾರದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆದಿದೆ. ಈ ವೇಳೆ, ದೇವಾಲಯಗಳು ಮತ್ತು ಟ್ರಸ್ಟ್‌ಗಳು ಬಾಕಿ ಹಣ ಬಿಡುಗಡೆ ಕೋರಿ ನ್ಯಾಯಾಲಯದ ಮೊರೆ ಹೋಗುವಂತಾಗಿರುವ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ತೀವ್ರ ಬೇಸರ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್‌ವಾಲ್‌ ಅವರು ಇದೇ ವೇಳೆ ಸೂಚಿಸಿದ್ದಾರೆ.

ಕೇವಲ ಒಂದೆರಡು ವರ್ಷದ ಪ್ರಶ್ನೆಯಲ್ಲ, ಕಳೆದ ನಾಲ್ಕು ವರ್ಷಗಳಿಂದ ಕನಿಷ್ಠ ಒಂಬತ್ತು ವೃಂದಾವನದ ದೇವಾಲಯಗಳಿಗೆ ಪಾವತಿಯಾಗಬೇಕಿದ್ದ ಹಣ ತಲುಪದೇ ಇರುವುದನ್ನು ನ್ಯಾಯಾಲಯ ಗಮನಿಸಿದೆ. ಹೀಗಾಗಿ ಕಳೆದ ನಾಲ್ಕು ವರ್ಷಗಳಿಂದ ವೃಂದಾವನದ ಕನಿಷ್ಠ ಒಂಬತ್ತು ದೇವಾಲಯಗಳಿಗೆ ವಾರ್ಷಿಕ ಅನುದಾನ ಪಾವತಿಸದ ಬಗ್ಗೆ ವಿವರಣೆ ನೀಡುವಂತೆ ಉತ್ತರ ಪ್ರದೇಶದ ಕಂದಾಯ ಮಂಡಳಿಯ ಕಾರ್ಯದರ್ಶಿಗೆ ಸಮನ್ಸ್ ಜಾರಿ ಮಾಡಿದೆ.

ಸರ್ಕಾರಿ ಅಧಿಕಾರಿಗಳಿಂದ ಬಾಕಿ ಮೊತ್ತ ಪಡೆಯಲು ದೇವಾಲಯದ ಅಧಿಕಾರಿಗಳು ಅಲೆದಾಡುತ್ತಿರುವುದು ವಿಚಿತ್ರವಾಗಿದೆ ಎಂದು ನ್ಯಾಯಾಲಯ ಹೇಳಿದೆ.

“ರಾಜ್ಯ ಸರ್ಕಾರದಿಂದ ಬಾಕಿ ಮೊತ್ತ ಪಡೆಯುವುದಕ್ಕಾಗಿ ದೇವಾಲಯಗಳು ಮತ್ತು ಟ್ರಸ್ಟ್‌ಗಳು ನ್ಯಾಯಾಲಯದ ಬಾಗಿಲು ತಟ್ಟಬೇಕಿರುವುದು ನ್ಯಾಯಾಲಯಕ್ಕೆ ನೋವುಂಟು ಮಾಡಿದೆ. ರಾಜ್ಯದ ಖಜಾನೆಯಿಂದ ದೇವಾಲಯದ ಖಾತೆಗೆ ಈ ಹಣ ಸ್ವಯಂಚಾಲಿತವಾಗಿ ಸಂದಾಯವಾಗಬೇಕಿತ್ತು”ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.

ತಂತ್ರಜ್ಞಾನದ ಈ ಆಧುನಿಕ ಯುಗದಲ್ಲಿ ಹಣಕಾಸು ವರ್ಷ ಪ್ರಾರಂಭವಾದ ಕೂಡಲೇ ಸರ್ಕಾರ ಸ್ವಯಂಚಾಲಿತವಾಗಿ ಹಣವನ್ನು ದೇವಾಲಯಗಳಿಗೆ ವರ್ಗಾಯಿಸಬೇಕು ಎಂದು ಅದು ನಿರ್ದೇಶನ ನೀಡಿದೆ.

ಉತ್ತರ ಪ್ರದೇಶ ಜಮೀನ್ದಾರಿ ಪದ್ದತಿ ನಿರ್ಮೂಲನೆ ಮತ್ತು ಭೂ ಸುಧಾರಣಾ ಕಾಯಿದೆಯ ಸೆಕ್ಷನ್ 99ರ ಅನ್ವಯ ಮಥುರಾದ ಜಿಲ್ಲಾಧಿಕಾರಿ ಮತ್ತು ಅದರ ಹಿರಿಯ ಖಜಾನೆ ಅಧಿಕಾರಿ ವರ್ಷಾಶನ ಪಾವತಿಸಲು ನಿರ್ದೇಶಿಸುವಂತೆ ಕೋರಿ ಠಾಕೂರ್ ರಂಗ್‌ಜೀ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ಒಂಭತ್ತು ದೇವಸ್ಥಾನಗಳಿಗೆ ಬಿಡುಗಡೆಯಾಗಬೇಕಾದ ₹9,125,07ವಾರ್ಷಿಕ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಅರ್ಜಿದಾರರು ಮನವಿ ಮಾಡಿದರು. ಇದಕ್ಕೆ ಕಂದಾಯ ಮಂಡಳಿಯು ಅನುಮತಿ ನೀಡದಿರುವುದೇ ಕಾರಣ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರವು ತಾನು ₹2,23,199 ಹಣ ಸಂದಾಯ ಮಾಡಿದ್ದು, ಬಾಕಿ ₹6,89,308 ಹಣ ಸಂದಾಯ ಮಾಡಬೇಕಿದೆ ಎಂದು ಹೇಳಿದೆ.

ಇದೇ ವೇಳೆ, ನ್ಯಾಯಾಲಯವು ಅರ್ಜಿದಾರರ ವಿಷಯದಲ್ಲಿ 2020ರಿಂದ 2023ರ ಅವಧಿಯಲ್ಲಿ ಬಿಡುಗಡೆ ಮಾಡಬೇಕಾದ ₹3,52,080 ಹಣವನ್ನು ಬಿಡುಗಡೆ ಮಾಡದೆ ಇರುವುದನ್ನು ಗಮನಿಸಿತು. ಹಣಕಾಸಿನ ಅಲಭ್ಯತೆಯ ಕಾರಣದಿಂದಾಗಿ ಹಣ ಬಿಡುಗಡೆ ಸಾಧ್ಯವಾಗಿಲ್ಲ ಎನ್ನುವ ಕಂದಾಯ ಮಂಡಳಿಯ ಉತ್ತರ ಬಗ್ಗೆ ನ್ಯಾಯಾಲಯ ಇದೇ ವೇಳೆ ಆಶ್ಚರ್ಯ ವ್ಯಕ್ತಪಡಿಸಿತು.

ಹೀಗಾಗಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ನ್ಯಾಯಾಲಯ ಪ್ರಕರಣವನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ವರ್ಗಾಯಿಸಿತು. ಪ್ರಕರಣದ ವಿಚಾರಣೆಯು ಮಾರ್ಚ್ 20ರಂದು ನಡೆಯಲಿದೆ.

ಇದನ್ನೂ ಓದಿ : ‘ಕೆಫೆ ಸ್ಫೋಟದ ಹಿಂದೆ ತಮಿಳರು’ ಹೇಳಿಕೆ: ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು, ಮಧುರೈನಲ್ಲಿ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...