Homeಮುಖಪುಟಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

ಉ.ಪ್ರದೇಶ| ನಾಲ್ಕು ವರ್ಷದಿಂದ ಹಣ ನೀಡದ ಯೋಗಿ ಸರ್ಕಾರ: ಹೈಕೋರ್ಟ್‌ ಮೊರೆ ಹೋದ ದೇವಾಲಯಗಳು

- Advertisement -
- Advertisement -

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ದೇವಾಲಯ ಹಾಗೂ ಟ್ರಸ್ಟ್‌ಗಳು ಹೈಕೋರ್ಟ್‌ ಮೊರೆ ಹೋಗಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

ಠಾಕೂರ್ ರಂಗ್ಜಿ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಟ್ರಸ್ಟ್ ಯೋಗಿ ಸರ್ಕಾರದ ವಿರುದ್ಧ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ನಡೆದಿದೆ. ಈ ವೇಳೆ, ದೇವಾಲಯಗಳು ಮತ್ತು ಟ್ರಸ್ಟ್‌ಗಳು ಬಾಕಿ ಹಣ ಬಿಡುಗಡೆ ಕೋರಿ ನ್ಯಾಯಾಲಯದ ಮೊರೆ ಹೋಗುವಂತಾಗಿರುವ ಬಗ್ಗೆ ಅಲಹಾಬಾದ್‌ ಹೈಕೋರ್ಟ್‌ ತೀವ್ರ ಬೇಸರ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್‌ವಾಲ್‌ ಅವರು ಇದೇ ವೇಳೆ ಸೂಚಿಸಿದ್ದಾರೆ.

ಕೇವಲ ಒಂದೆರಡು ವರ್ಷದ ಪ್ರಶ್ನೆಯಲ್ಲ, ಕಳೆದ ನಾಲ್ಕು ವರ್ಷಗಳಿಂದ ಕನಿಷ್ಠ ಒಂಬತ್ತು ವೃಂದಾವನದ ದೇವಾಲಯಗಳಿಗೆ ಪಾವತಿಯಾಗಬೇಕಿದ್ದ ಹಣ ತಲುಪದೇ ಇರುವುದನ್ನು ನ್ಯಾಯಾಲಯ ಗಮನಿಸಿದೆ. ಹೀಗಾಗಿ ಕಳೆದ ನಾಲ್ಕು ವರ್ಷಗಳಿಂದ ವೃಂದಾವನದ ಕನಿಷ್ಠ ಒಂಬತ್ತು ದೇವಾಲಯಗಳಿಗೆ ವಾರ್ಷಿಕ ಅನುದಾನ ಪಾವತಿಸದ ಬಗ್ಗೆ ವಿವರಣೆ ನೀಡುವಂತೆ ಉತ್ತರ ಪ್ರದೇಶದ ಕಂದಾಯ ಮಂಡಳಿಯ ಕಾರ್ಯದರ್ಶಿಗೆ ಸಮನ್ಸ್ ಜಾರಿ ಮಾಡಿದೆ.

ಸರ್ಕಾರಿ ಅಧಿಕಾರಿಗಳಿಂದ ಬಾಕಿ ಮೊತ್ತ ಪಡೆಯಲು ದೇವಾಲಯದ ಅಧಿಕಾರಿಗಳು ಅಲೆದಾಡುತ್ತಿರುವುದು ವಿಚಿತ್ರವಾಗಿದೆ ಎಂದು ನ್ಯಾಯಾಲಯ ಹೇಳಿದೆ.

“ರಾಜ್ಯ ಸರ್ಕಾರದಿಂದ ಬಾಕಿ ಮೊತ್ತ ಪಡೆಯುವುದಕ್ಕಾಗಿ ದೇವಾಲಯಗಳು ಮತ್ತು ಟ್ರಸ್ಟ್‌ಗಳು ನ್ಯಾಯಾಲಯದ ಬಾಗಿಲು ತಟ್ಟಬೇಕಿರುವುದು ನ್ಯಾಯಾಲಯಕ್ಕೆ ನೋವುಂಟು ಮಾಡಿದೆ. ರಾಜ್ಯದ ಖಜಾನೆಯಿಂದ ದೇವಾಲಯದ ಖಾತೆಗೆ ಈ ಹಣ ಸ್ವಯಂಚಾಲಿತವಾಗಿ ಸಂದಾಯವಾಗಬೇಕಿತ್ತು”ಎಂದು ನ್ಯಾಯ ಪೀಠ ಅಭಿಪ್ರಾಯಪಟ್ಟಿದೆ.

ತಂತ್ರಜ್ಞಾನದ ಈ ಆಧುನಿಕ ಯುಗದಲ್ಲಿ ಹಣಕಾಸು ವರ್ಷ ಪ್ರಾರಂಭವಾದ ಕೂಡಲೇ ಸರ್ಕಾರ ಸ್ವಯಂಚಾಲಿತವಾಗಿ ಹಣವನ್ನು ದೇವಾಲಯಗಳಿಗೆ ವರ್ಗಾಯಿಸಬೇಕು ಎಂದು ಅದು ನಿರ್ದೇಶನ ನೀಡಿದೆ.

ಉತ್ತರ ಪ್ರದೇಶ ಜಮೀನ್ದಾರಿ ಪದ್ದತಿ ನಿರ್ಮೂಲನೆ ಮತ್ತು ಭೂ ಸುಧಾರಣಾ ಕಾಯಿದೆಯ ಸೆಕ್ಷನ್ 99ರ ಅನ್ವಯ ಮಥುರಾದ ಜಿಲ್ಲಾಧಿಕಾರಿ ಮತ್ತು ಅದರ ಹಿರಿಯ ಖಜಾನೆ ಅಧಿಕಾರಿ ವರ್ಷಾಶನ ಪಾವತಿಸಲು ನಿರ್ದೇಶಿಸುವಂತೆ ಕೋರಿ ಠಾಕೂರ್ ರಂಗ್‌ಜೀ ಮಹಾರಾಜ್ ವಿರಾಜ್‌ಮಾನ್‌ ಮಂದಿರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿದೆ.

ಒಂಭತ್ತು ದೇವಸ್ಥಾನಗಳಿಗೆ ಬಿಡುಗಡೆಯಾಗಬೇಕಾದ ₹9,125,07ವಾರ್ಷಿಕ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ಅರ್ಜಿದಾರರು ಮನವಿ ಮಾಡಿದರು. ಇದಕ್ಕೆ ಕಂದಾಯ ಮಂಡಳಿಯು ಅನುಮತಿ ನೀಡದಿರುವುದೇ ಕಾರಣ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರವು ತಾನು ₹2,23,199 ಹಣ ಸಂದಾಯ ಮಾಡಿದ್ದು, ಬಾಕಿ ₹6,89,308 ಹಣ ಸಂದಾಯ ಮಾಡಬೇಕಿದೆ ಎಂದು ಹೇಳಿದೆ.

ಇದೇ ವೇಳೆ, ನ್ಯಾಯಾಲಯವು ಅರ್ಜಿದಾರರ ವಿಷಯದಲ್ಲಿ 2020ರಿಂದ 2023ರ ಅವಧಿಯಲ್ಲಿ ಬಿಡುಗಡೆ ಮಾಡಬೇಕಾದ ₹3,52,080 ಹಣವನ್ನು ಬಿಡುಗಡೆ ಮಾಡದೆ ಇರುವುದನ್ನು ಗಮನಿಸಿತು. ಹಣಕಾಸಿನ ಅಲಭ್ಯತೆಯ ಕಾರಣದಿಂದಾಗಿ ಹಣ ಬಿಡುಗಡೆ ಸಾಧ್ಯವಾಗಿಲ್ಲ ಎನ್ನುವ ಕಂದಾಯ ಮಂಡಳಿಯ ಉತ್ತರ ಬಗ್ಗೆ ನ್ಯಾಯಾಲಯ ಇದೇ ವೇಳೆ ಆಶ್ಚರ್ಯ ವ್ಯಕ್ತಪಡಿಸಿತು.

ಹೀಗಾಗಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿ ನ್ಯಾಯಾಲಯ ಪ್ರಕರಣವನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ವರ್ಗಾಯಿಸಿತು. ಪ್ರಕರಣದ ವಿಚಾರಣೆಯು ಮಾರ್ಚ್ 20ರಂದು ನಡೆಯಲಿದೆ.

ಇದನ್ನೂ ಓದಿ : ‘ಕೆಫೆ ಸ್ಫೋಟದ ಹಿಂದೆ ತಮಿಳರು’ ಹೇಳಿಕೆ: ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು, ಮಧುರೈನಲ್ಲಿ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...