Homeಮುಖಪುಟಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದ ಸಂಸದ ಡ್ಯಾನಿಶ್ ಅಲೀ ಕಾಂಗ್ರೆಸ್ ಸೇರ್ಪಡೆ

ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದ ಸಂಸದ ಡ್ಯಾನಿಶ್ ಅಲೀ ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)ಯಿಂದ ಉಚ್ಚಾಟನೆಗೊಂಡಿದ್ದ ಲೋಕಸಭೆ ಸಂಸದ ಡ್ಯಾನಿಶ್‌ ಅಲೀ ಬುಧವಾರ ದೆಹಲಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಉತ್ತರ ಪ್ರದೇಶದ ಅಮ್ರೋಹಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅಲೀ, ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಬಿಎಸ್‌ಪಿಯಿಂದ ಉಚ್ಚಾಟನೆಗೊಂಡಿದ್ದರು.

ಮಣಿಪುರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸುವ ಮೂಲಕ ಅಲೀ ಅವರು ಕಾಂಗ್ರೆಸ್ ಸೇರುವ ಮುನ್ಸೂಚನೆ ನೀಡಿದ್ದರು. ಭಾರತ್ ಜೋಡೋ ಯಾತ್ರೆ ವೇಳೆ ತೌಬಲ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ್ದ ಅಲೀ, “ರಾಜಕಾರಣಿಯಾಗಿ ‘ಏಕತೆ ಮತ್ತು ನ್ಯಾಯಕ್ಕಾಗಿ’ ನಡೆಯುತ್ತಿರುವ ಈ ಯಾತ್ರೆಯಲ್ಲಿ ಪಾಲ್ಗೊಳ್ಳುವುದು ನನ್ನ ಕರ್ತವ್ಯ” ಎಂದಿದ್ದರು.

ತನ್ನ ಕ್ಷೇತ್ರದ ಅಮ್ರೋಹದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ಉಸ್ತುವಾರಿಯನ್ನು ಸ್ವತಃ ಅಲೀ ಅವರೇ ವಹಿಸಿದ್ದರು. ಈ ಬೆನ್ನಲ್ಲೇ ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಅವರನ್ನು ಬಿಎಸ್‌ಪಿಯಿಂದ ಉಚ್ಚಾಟಿಸಲಾಗಿತ್ತು.

ಅಲೀ ಅವರು 2018 ರವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದ ಜಾತ್ಯಾತೀತ ಜನತಾದಳದ (ಜೆಡಿಎಸ್) ಜೊತೆ ಗುರುತಿಸಿಕೊಂಡಿದ್ದರು. 2018ರ ಕರ್ನಾಟಕ ಚುನಾವಣೆಯಲ್ಲಿ ಅಲೀ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಿಎಸ್ಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿ ಹಿನ್ನೆಲೆ, ದೇವೇಗೌಡರ ಶಿಫಾರಸಿನ ಮೇರೆಗೆ ಅಲೀ ಅವರನ್ನು ಬಿಎಸ್ಪಿ ಅಮ್ರೋಹಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು.

ಕಳೆದ ವರ್ಷ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಲೋಕಸಭೆಯಿಂದ ಅನರ್ಹಗೊಂಡಾಗ ಇಂಡಿಯಾ ಒಕ್ಕೂಟ ಸಂಸತ್ ಬಳಿ ಪ್ರತಿಭಟನೆ ನಡೆಸಿತ್ತು. ಬಿಎಸ್ಪಿ ಇಂಡಿಯಾ ಒಕ್ಕೂಟ ಸೇರದಿದ್ದರೂ, ಅಂದಿನ ಪ್ರತಿಭಟನೆಯಲ್ಲಿ ಡ್ಯಾನಿಶ್ ಅಲೀ ಪಾಲ್ಗೊಂಡಿದ್ದರು.

ಕಳೆದ ವರ್ಷದ ಸೆಪ್ಟೆಂಬರ್‌ 21ರಂದು ಲೋಕಸಭೆಯಲ್ಲಿ ಚಂದ್ರಯಾನ ಮಿಷನ್‌-3ರ ಯಶಸ್ಸಿನ ಕುರಿತ ಚರ್ಚೆಯ ವೇಳೆ ಬಿಜೆಪಿ ಸಂಸದ ರಮೇಶ್ ಬಿಧುರಿ ಡ್ಯಾನಿಶ್ ಅಲೀ ಅವರನ್ನು ಗುರಿಯಾಗಿಸಿ, ಭದ್ವಾ (ಪಿಂಪ್), ಕತ್ವಾ (ಮುಂಜಿ ಮಾಡಿಸಿಕೊಂಡವರು) ಮುಲ್ಲಾ ಉಗ್ರವಾದಿ (ಮುಸ್ಲಿಂ ಭಯೋತ್ಪಾದಕ), ಅತಂಕವಾದಿ (ಭಯೋತ್ಪಾದಕ) ಇತ್ಯಾದಿ ಅಸಂಸದೀಯ ಪದಗಳನ್ನು ಬಳಸಿ ನಿಂದಿಸಿದ್ದರು. ಕೋಮುವಾದಿ ಭಾಷಣ ಮಾಡಿದ್ದರು. ಇದಕ್ಕೆ ದೇಶದಾದ್ಯಂತ ಭಾರೀ ಖಂಡನೆ ವ್ಯಕ್ತವಾಗಿತ್ತು.

ಬಿಧುರಿ ಹೇಳಿಕೆಗೆ ಲೋಕಸಭೆಯಲ್ಲಿ ಅಂದೇ ವಿಷಾದ ವ್ಯಕ್ತಪಡಿಸಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದರ ಹೇಳಿಕೆಯಿಂದ ಪ್ರತಿಪಕ್ಷದ ಸದಸ್ಯರ ಮನಸ್ಸಿಗೆ ನೋವಾಗಿದ್ದರೆ ಸಂಸದ ಹೇಳಿಕೆಯನ್ನು ಕಡತಗಳಿಂದ ತೆಗೆದು ಹಾಕಲು ನಾನು ಸ್ಪೀಕರ್‌ಗೆ ಆಗ್ರಹಿಸುತ್ತೇನೆ ಎಂದಿದ್ದರು. ಇದಕ್ಕೆ ಪ್ರತಿಪಕ್ಷ ಸದಸ್ಯರು ಮೇಜು ತಟ್ಟಿ ಬೆಂಬಲ ವ್ಯಕ್ತಪಡಿಸಿದ್ದರು.

ಬಳಿಕ ರಮೇಶ್ ಬಿಧುರಿ ಲೋಕಸಭೆಯ ಹಕ್ಕು ಬಾಧ್ಯತಾ ಸಮಿತಿ ಮುಂದೆ ಕ್ಷಮೆ ಯಾಚಿಸಿದ್ದರು. ಅಲ್ಲಿಗೆ ಪ್ರಕರಣ ಇತ್ಯರ್ಥಗೊಂಡಿತ್ತು.

ಇದನ್ನೂ ಓದಿ : ನಿನ್ನೆ ತೆಲಂಗಾಣ ಗವರ್ನರ್ ಸ್ಥಾನಕ್ಕೆ ರಾಜೀನಾಮೆ; ಇಂದು ಪುನಃ ಬಿಜೆಪಿ ಸೇರಿದ ತಮಿಳಿಸೈ ಸೌಂದರರಾಜನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...